Homeಮುಖಪುಟ‘ಹೊಸ ಗೌಪ್ಯತಾ ನೀತಿ’ - ಒಪ್ಪದ ಖಾತೆಗಳ ಡಿಲೀಟ್‌ ಮಾಡಲಿರುವ ವಾಟ್ಸಾಪ್!

‘ಹೊಸ ಗೌಪ್ಯತಾ ನೀತಿ’ – ಒಪ್ಪದ ಖಾತೆಗಳ ಡಿಲೀಟ್‌ ಮಾಡಲಿರುವ ವಾಟ್ಸಾಪ್!

- Advertisement -
- Advertisement -

ಫೇಸ್‌ಬುಕ್‌‌‌‌ ಒಡೆತನದ ವಾಟ್ಸಾಪ್ ಭಾರತದಲ್ಲಿ ತನ್ನ ವಿವಾದಾತ್ಮಕ ಹೊಸ ನಿಯಮಗಳು ಮತ್ತು ಷರತ್ತುಗಳನ್ನು ಸ್ವೀಕರಿಸದ ಬಳಕೆದಾರರ ಖಾತೆಗಳನ್ನು ಕ್ರಮೇಣ ಅಳಿಸಲಿದೆ ಎಂದು ಹೇಳಿದೆ. ಹೊಸ ಗೌಪ್ಯತೆಯ ನೀತಿಯ ಯಾವುದೇ ಮುಂದೂಡಿಕೆ ಇಲ್ಲ ಎಂದು ವಾಟ್ಸಾಪ್ ಪರ ವಕೀಲರಾದ ಅರವಿಂದ ದತಾರ್ ಮತ್ತು ಕಪಿಲ್ ಸಿಬಲ್ ಸೋಮವಾರ ದೆಹಲಿ ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಬಳಕೆದಾರರನ್ನು ಮನವೊಲಿಸುವ ಮೂಲಕ ತಮ್ಮ ನೀತಿಯನ್ನು ಒಪ್ಪಲು ವಾಟ್ಸಪ್‌ ಪ್ರಯತ್ನಿಸುತ್ತಿದೆ. ಅಂತಿಮವಾಗಿ ಹೊಸ ನಿಯಮಗಳನ್ನು ಪಾಲಿಸದ ಬಳಕೆದಾರರ ಖಾತೆಗಳನ್ನು ವಾಟ್ಸಪ್‌ ಅಳಿಸಬಹುದು ಎಂದು ಅವರು ಹೇಳಿದ್ದಾರೆ. ನಿಯಮಗಳಿಗೆ ಒಪ್ಪದ ಖಾತೆಗಳನ್ನು ಈಗಿನಿಂದಲೇ ಅಳಿಸಲಾಗದಿದ್ದರೂ, ಮಾರ್ಗಸೂಚಿಗಳನ್ನು ಸ್ವೀಕರಿಸದಿದ್ದರೆ ಅವುಗಳನ್ನು ಅಂತಿಮವಾಗಿ ತೆಗೆದುಹಾಕಲಾಗುತ್ತದೆ ಎಂದು ಕಪಿಲ್‌ ಸಿಬಲ್ ಹೇಳಿದ್ದಾರೆ.

ಈ ಹಿಂದೆ ವಾಟ್ಸಪ್‌ ಭಾರತದಲ್ಲಿ ತನ್ನ ಗೌಪ್ಯತೆ ನೀತಿಯಯನ್ನು ರದ್ದುಗೊಳಿಸಿದೆ ಅಥವಾ ಮುಂದೂಡಿದೆ ಎಂದು ವರದಿಯಾಗಿದ್ದವು, ಆದರೆ ಕಂಪೆನಿಯು ಅದನ್ನು ರದ್ದು ಮಾಡಿಲ್ಲ ಎಂದು ಈಗಿನ ಬೆಳವಣಿಗೆಯಿಂದ ತಿಳಿಯುತ್ತಿದೆ.

ಇದನ್ನೂ ಓದಿ: ಮೂಡಿಗೆರೆ ದಲಿತ ಯುವಕನ ಮೇಲೆ ಪಿಎಸ್‌ಐ ದೌರ್ಜನ್ಯ ಆರೋಪ: ಹಿರಿಯ ಅಧಿಕಾರಿಗಳಿಗೆ ದೂರು

ವಾಟ್ಸಪ್‌ನ ಹೊಸ ನಿಯಮವು ಚಾಟ್ ಮಾಹಿತಿ ಮತ್ತು ಬ್ಯುಸಿನೆಸ್‌ ಖಾತೆಗಳ ಬಳಕೆಗೆ ಇರುವ ಹೊಸ ನಿಯಮವಾಗಿದೆ. ಇದು ಬಳಕೆದಾರರ ಗೌಪ್ಯತೆಯನ್ನು ಉಲ್ಲಂಘಿಸುತ್ತದೆ ಎಂದು ದೇಶಾದ್ಯಂತ ವ್ಯಾಪಕ ಟೀಕೆಗಳನ್ನು ಹುಟ್ಟುಹಾಕಿದೆ. ಆದಾಗ್ಯೂ, ಮುಂದಿನ ವಾರಗಳಲ್ಲಿ ಗೌಪ್ಯತೆ ನೀತಿ ನವೀಕರಣದ ಕುರಿತು ಜ್ಞಾಪನೆಗಳನ್ನು ಕಂಪೆನಿಯು ಬಳಕೆದಾರರಿಗೆ ಕಳುಹಿಸಲಿದೆ. ಜೊತೆಗೆ ಇದರಿಂದಾಗಿ ವಾಟ್ಸಪ್‌ ಬಳಕೆದಾರರ ಗೌಪ್ಯತೆಯ ಉಲ್ಲಂಘನೆ ಆಗುವುದಿಲ್ಲ ಎಂದು ಕಂಪೆನಿ ಹೇಳಿದೆ.

ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಚೇತನ್ ಶರ್ಮಾ, ‘ವಾಟ್ಸಾಪ್‌ನ ಹೊಸ ಗೌಪ್ಯತೆ ನೀತಿಯು ದೇಶದ ಮಾಹಿತಿ ತಂತ್ರಜ್ಞಾನ ಕಾಯ್ದೆ 2020 ಅನ್ನು ಉಲ್ಲಂಘಿಸಿದೆ ಮತ್ತು ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರಿಂದ ಉತ್ತರವನ್ನು ಕೋರಲಾಗಿದೆ’ ಎಂದು ದೆಹಲಿ ಹೈಕೋರ್ಟ್‌ಗೆ ಹೇಳಿದರು. ಹೊಸ ನೀತಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಲು ಕೇಂದ್ರವು ಪ್ರಯತ್ನಿಸಿತಾದರೂ, ವಾಟ್ಸಾಪ್ ಅದನ್ನು ವಿರೋಧಿಸಿದೆ.

ಡೇಟಾ ಅನಾಲಿಟಿಕ್ಸ್ ಸಂಸ್ಥೆ ಸೆನ್ಸರ್ ಟವರ್ ಪ್ರಕಾರ, ಜನವರಿ-ಏಪ್ರಿಲ್ ಅವಧಿಯಲ್ಲಿ ವಾಟ್ಸಪ್‌ ತನ್ನ ಹೊಸ ಗೌಪ್ಯತೆ ನೀತಿಯಲ್ಲಿ ಬದಲಾವಣೆಗಳನ್ನು ಘೋಷಿಸಿದ ನಂತರ ಜಾಗತಿಕವಾಗಿ ವಾಟ್ಸಾಪ್ ಡೌನ್‌ಲೋಡ್ 43% ದಷ್ಟು ಕುಸಿದು ಜಾಗತಿಕವಾಗಿ 172.3 ಮಿಲಿಯನ್‌ಗೆ ತಲುಪಿದೆ. ಪ್ರತಿಸ್ಪರ್ಧಿ ಮೆಸೇಜಿಂಗ್ ಅಪ್ಲಿಕೇಶನ್‌ಗಳಾದ ಸಿಗ್ನಲ್ ಮತ್ತು ಟೆಲಿಗ್ರಾಮ್ ಈ ಅವಧಿಯಲ್ಲಿ ಹೊಸ ಬಳಕೆದಾರರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡಿದೆ. ಇವುಗಳ ಡೌನ್‌ಲೋಡ್‌ಗಳು ಕ್ರಮವಾಗಿ 64.4 ಮಿಲಿಯನ್ (1,192%) ಮತ್ತು 161 ಮಿಲಿಯನ್ (98%) ಏರಿಕೆಯಾಗಿದೆ.

ಇದನ್ನೂ ಓದಿ: ‘ಎಚ್ಚರಿಕೆ; ಬೇಕಾಬಿಟ್ಟಿ ಬಿಸಿ ನೀರಿನ ಆವಿ (ಸ್ಟೀಮ್‌) ಪಡೆಯದಿರಿ’-ತಮಿಳುನಾಡು ವೈದ್ಯಕೀಯ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...