Homeಕರ್ನಾಟಕಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

"ವಿಜ್ಞಾನ ಮೊದಲು" ಎಂಬುದು ಬಿಎಂಸಿ 92 ತಂಡದ ಘೋಷವಾಕ್ಯ. ವೈಜ್ಞಾನಿಕ ಸಂಗತಿಗಳನ್ನು ಚರ್ಚಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಇವರ ಗುರಿ.

- Advertisement -
- Advertisement -

ತಾವು ಮಾಡುವ ಚಿಕ್ಕ ಚಿಕ್ಕ ಸಹಾಯವನ್ನೂ ಕೂಡ ಪ್ರಚಾರಕ್ಕೆ ಬಳಸಿಕೊಳ್ಳುವ, ಪಿಆರ್‌ಒಗಳನ್ನು ನೇಮಿಸಿಕೊಂಡು ಹೆಸರು ಗಳಿಸುವ ಜನರ ಮಧ್ಯೆ ಸದ್ದಿಲ್ಲದೇ ಕೊರೊನಾ ಸಂಕಷ್ಟದಲ್ಲಿ ಜನರ ಸಹಾಯಕ್ಕೆ ನಿಂತಿದೆ ಬಿಎಂಸಿ-92 ವೈದ್ಯರ ತಂಡ.

ಬೆಂಗಳೂರು ವೈದ್ಯಕೀಯ ಕಾಲೇಜಿನ 1992 ಬ್ಯಾಚ್‌ನ (ಬಿಎಂಸಿ- 92)ನ ಹಲವಾರು ವೈದ್ಯರು ಈಗ ಪ್ರಪಂಚದ ವಿವಿದೆಡೆ ಕೆಲಸ ಮಾಡುತ್ತಿದ್ದಾರೆ. ಆದರೆ ಕೋವಿಡ್‌ ಎರಡನೇ ಅಲೆ ಅವರನ್ನು ಮತ್ತೆ ಒಗ್ಗೂಡುವಂತೆ ಮಾಡಿದೆ. ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲರೂ ಜನರ ಜೀವ ಉಳಿಸಲು ಒಂದು ತಂಡವಾಗಿ ತಮ್ಮ ಶಕ್ತಿ ಮೀರಿ ಕೆಲಸ ಮಾಡಲು ಮುಂದಾಗಿದ್ದಾರೆ.

ಕೋವಿಡ್ ಎರಡನೇ ಅಲೆಗೆ ಅತಿ ಹೆಚ್ಚು ತುತ್ತಾಗಿರುವ ನಮ್ಮ ರಾಜ್ಯದಲ್ಲಿ ಬೆಡ್‌ ಕೊರತೆ, ಆಕ್ಸಿಜನ್, ಔಷಧಿ ಅಲಭ್ಯತೆಯಿಂದ ಜನ ಗೋಳಾಡುತ್ತಿದ್ದಾರೆ. ಅಪಾರ ಸಾವು ನೋವುಗಳು ಸಂಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಕೊರೊನಾ ಉಲ್ಬಣವಾಗದಂತೆ ತಡೆಯಲು ಅಂದರೆ ಜನರಿಗೆ ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದು ಮತ್ತು ಆಸ್ಪತ್ರೆಗಳ ಮೇಲಿನ ಭಾರ ತಗ್ಗಿಸುವುದು ಬಿಎಂಸಿ- 92 ವೈದ್ಯರ ಗುರಿಯಾಗಿದೆ.

ಇದನ್ನೂ ಓದಿ: ರಾಜ್ಯದ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ಬಹಳಷ್ಟು ಜನರಿಗೆ ಕೊರೊನಾ ಬಂದಾಗ ಏನು ಮಾಡಬೇಕು? ಉಸಿರಾಟದ ಸಮಸ್ಯೆಯುಂಟಾದರೆ ಏನು ಮಾಡಬೇಕು ಎಂಬುದು ತಿಳಿದಿಲ್ಲ. ಆ ಸಂದರ್ಭದಲ್ಲಿ ಬೆಡ್, ಔಷಧಿ ಸಿಗುತ್ತಿಲ್ಲವೆಂಬ ಭಯಕ್ಕೆ ಅವರು ಎದೆಗುಂದಿ ಮತ್ತಷ್ಟು ರೋಗಕ್ಕೆ ತುತ್ತಾಗುತ್ತಾರೆ. ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೆ ಅದನ್ನು ನಿಭಾಯಿಸುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ವೈದ್ಯರು ಆರಂಭದಿಂದಲೇ ಸೋಂಕಿತರಿಗೆ ಫೋನಿನಲ್ಲಿ/ಆಪ್ ಮೂಲಕ ಹೇಳಿದ ಸಲಹೆಗಳನ್ನು ಪಾಲಿಸುವಂತೆ ಮಾಡಿ ಆಕ್ಸಿಜನ್ ಬೆಡ್‌ಗಾಗಿ ಹುಡುಕುವ ಪರಿಸ್ಥಿತಿಗೆ ಹೋಗದಂತೆ ಮಾಡಲು, ಕೊರೊನಾ ಉಲ್ಭಣಿಸಿದಂತೆ ತಡೆಯಲು ಮುಂದಾಗಿದೆ ಇದಕ್ಕೆ ಕರ್ನಾಟಕ ಕೋವಿಡ್ ವಾಲಂಟೀಯರ್ಸ್ ಟೀಮ್‌ (ಕೆಸಿವಿಟಿ) ರಚನೆಯಾಗಿ, ಈಗಾಗಲೇ ರಾಜ್ಯದಲ್ಲಿ ಕಾರ್ಯನಿರತವಾಗಿದೆ. ಅದರಲ್ಲಿ ಈ ತಂಡ ಸಕ್ರಿಯವಾಗಿ ತೊಡಗಿಸಿಕೊಂಡಿದೆ.

“ವಿಜ್ಞಾನ ಮೊದಲು” ಎಂಬುದು ಬಿಎಂಸಿ 92 ತಂಡದ ಘೋಷವಾಕ್ಯ. ಇಂದು ಕೋವಿಡ್ ಕುರಿತು ನೂರಾರು ಜನ ನೂರಾರು ರೀತಿಯ ಅಭಿಪ್ರಾಯ ಹೊಂದಿದ್ದು, ನೂರಾರು ಸಲಹೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ತಪ್ಪು ಗ್ರಹಿಕೆಗಳು, ಮೂಡನಂಬಿಕೆಗಳಿಗೆ ಜನರು ಬಲಿಯಾಗುವುದನ್ನು ತಡೆಯಲು ಈ ತಂಡ ವೈಜ್ಞಾನಿಕ ಸಂಗತಿಗಳನ್ನು ಚರ್ಚಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಲ್ಲಿ ನಿರತವಾಗಿದೆ. ಜನರಿಗೆ ಉಚಿತ ಚಿಕಿತ್ಸೆಯ ಜೊತೆಗೆ ಕೊರೊನಾ ಕುರಿತ ವಿಚಾರ ಸಂಕಿರಣಗಳು, ಮುನ್ನೆಚ್ಚರಿಕೆಗಳು, ಚಿಕಿತ್ಸಾ ವಿಧಾನಗಳ ಮಾಹಿತಿ ಸೇರಿದಂತೆ ವೈದ್ಯಕೀಯ ವಿಜ್ಞಾನದ ಹಲವು ವಿಚಾರಗಳನ್ನು ಸರಳಿಕರಿಸಿ ಅದನ್ನು ಜನರಿಗೆ ತಲುಪಿಸುವ ಕೆಲಸಕ್ಕೆ ಈ ತಂಡ ಕೈ ಹಾಕಿದೆ.

ಈಗಾಗಲೇ ರಾಜ್ಯದಲ್ಲಿಯೂ ಬ್ಲಾಕ್ ಫಂಗಸ್ ಕಾಯಿಲೆ ಸುಮಾರು 100 ಮಂದಿಯಲ್ಲಿ ಕಾಣಿಸಿಕೊಂಡಿದೆ. ಈ ಸೋಂಕಿನ ಬಗ್ಗೆಯೂ ವೈದ್ಯವೃಂದಲ್ಲಿ ಸಮರ್ಪಕ ಅರಿವು ಮೂಡಿಸಲು ಬಿಎಂಸಿ ವೈದ್ಯರು ಮುಂದಾಗಿದ್ದು, ಮೇ 20 ರಂದು “ಕೋವಿಡ್ ನಂತರದ ಬ್ಲಾಕ್ ಫಂಗಸ್: ಹಿನ್ನೆಲೆ ಮತ್ತು ಮುಂದಿರುವ ದಾರಿ” ವಿಚಾರದ ಕುರಿತು ವೆಬಿನಾರ್‌ ಆಯೋಜಿಸಲಾಗಿದೆ.

ಇದನ್ನೂ ಓದಿ: ‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಈ ವೆಬಿನಾರ್‌ನಲ್ಲಿ ದೇಶದ ಮತ್ತು ವಿದೇಶದ ವೈದ್ಯರು ಭಾಗವಹಿಸಲಿದ್ದಾರೆ. ಪ್ಯಾನೆಲ್‌ನಲ್ಲಿ ಅಮೆರಿಕಾದ  ಮೆಡಿಕಲ್ ಸಿಟಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಸಾಂಕ್ರಾಮಿಕ ರೋಗಗಳ ತಜ್ಞೆ ಡಾ. ಹರಿಕಾ ಯಲಮಂಚಿಲಿ, ಪಾಂಡಿಚೇರಿಯ ಸರ್ಜನ್ ಡಾ. ಅರುಣ್ ಅಲೆಕ್ಸಾಂಡರ್, ಬೆಂಗಳೂರಿನ ನೇತ್ರತಜ್ಞ ಡಾ. ಕೃಷ್ಣ ಆರ್ ಮೂರ್ತಿ ಮತ್ತು ಬೆಂಗಳೂರಿನ ಆರ್.ವಿ ಆಸ್ಟರ್ ಆಸ್ಪತ್ರೆಯ ನರಶಸ್ತ್ರ ಚಿಕಿತ್ಸಕ ಡಾ.ಧನಂಜಯ್ ಭಟ್ ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಸರಣಿ ವೈಜ್ಞಾನಿಕ ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಈ ತಂಡ ಸದಸ್ಯರಾದ ಪತ್ರಕರ್ತ ಡಾವೆಂಕಿ, “ಜನರಿಗೆ ಸರಳವಾದ ಭಾಷೆಯಲ್ಲಿ ವಿಡಿಯೋಗಳ ಮೂಲಕ ಜನರಿಗೆ ಸೋಂಕಿನ ಬಗ್ಗೆ ಮಾಹಿತಿ ನೀಡುವುದು ಮತ್ತು ಅವರಲ್ಲಿ ಅರಿವು ಮೂಡಿಸುವುದು ನಮ್ಮ ಉದ್ದೇಶ” ಎನ್ನುತ್ತಾರೆ.

“ಜನರಿಗೆ ಕೆಲವೊಂದು ವೈದ್ಯಕೀಯ ವಿಷಯಗಳು ಸರಿಯಾಗಿ ತಿಳಿಯುವುದಿಲ್ಲ. ಅದನ್ನು ಅರ್ಧ ತಿಳಿದು ಸುಮ್ಮನಾಗುತ್ತಾರೆ. ಇದು ತುಂಬಾ ತಪ್ಪು. ಹಾಗಾಗಿ ವಿಡಿಯೊಗಳನ್ನು ಮಾಡಿಸುವ ಕೆಲಸವನ್ನು ನಾನು ಮೆಲ್ವಿಚಾರಣೆ ಮಾಡುತ್ತೇನೆ. ವಿದೇಶಗಳ ವೈದ್ಯರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಇಂಗ್ಲಿಷ್ನಲ್ಲಿರುವ ವಿಷಯಗಳನ್ನು ಭಾಷಾಂತರಿಸಿ ಸರಳವಾಗಿ ತಿಳಿಸಲಾಗುತ್ತದೆ” ಎನ್ನುತ್ತಾರೆ.

ಇದನ್ನೂ ಓದಿ: ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

“ಉತ್ತಮ ಜೀವನ ನಡೆಸುತ್ತಿರುವ ಇವರೆಲ್ಲರೂ ತಮ್ಮ ಪಾಡಿಗೆ ತಾವು ಆರಾಮಾವಾಗಿ ಇರಬಹುದಿತ್ತು. ಆದರೆ, ಈ ಸಂಕಷ್ಟದ ಸಮಯದಲ್ಲಿ ಜನರ ನೆರವಿಗೆ ನಿಂತಿದ್ದಾರೆ. ಅಂದು ಕಾಲೇಜಿನ ದಿನಗಳಲ್ಲಿ ನಾವು ಒಟ್ಟುಗೂಡಿ ಮಾಡುತ್ತಿದ್ದ ಕೆಲಸಗಳು ಇಂದು ಇಂತಹ ಪ್ರಬುದ್ಧ ಕಾರ್ಯಕ್ಕೆ ಕೈಹಾಕುವಂತೆ ಮಾಡಿದೆ. ಇವರೆಲ್ಲರ ಬಗ್ಗೆ ನನಗೆ ಹೆಮ್ಮೆಯಿದೆ. ಸಣ್ಣ ಸಣ್ಣ ಕೆಲಸಗಳಿಗೆ, ಮಾಡುವ ಪುಟ್ಟ ಕೆಲಸಕ್ಕೆ ಮಾಧ್ಯಮಗಳಲ್ಲಿ ಪ್ರಚಾರ ಪಡೆಯುವ ದಿನಗಳಲ್ಲಿ ಇವರು ಯಾವುದನ್ನೂ ಬಯಸದೇ, ನೇಪತ್ಯದಲ್ಲೇ ಉಳಿದು ಕೆಲಸ ಮಾಡುತ್ತಿದ್ದಾರೆ” ಎಂದು ಡಾವೆಂಕಿ ಹೇಳುತ್ತಾರೆ.

“ಜನರ ಜೀವವುಳಿಸುವ ವೈದ್ಯರ ಜೊತೆಗೆ ಪರೋಕ್ಷವಾಗಿ ಲಜೀಶ್, ಸುರೇಂದ್ರ, ಹರ್ಷವರ್ಧನ್ ಸುಳ್ಯ, ಸುಧಾಕರ್‌ ದರ್ಬೆ ಸೇರಿದಂತೆ ಹಲವು ಜನ ಕೆಲಸ ಮಾಡುತ್ತಿದ್ದಾರೆ. ಹಳ್ಳಿಗಳಲ್ಲಿ, ದೂರದ ಗ್ರಾಮಗಳಲ್ಲಿ ಸರ್ಕಾರ ಕೆಲವೊಮ್ಮೆ ಎಡವಬಹುದು ಅಂತಹ ಸಮಯದಲ್ಲಿ ಈ ತಂಡ ಪರ್ಯಾಯವಾಗಿ ಕಾರ್ಯ ನಿರ್ವಹಿಸುತ್ತದೆ” ಎಂಬ ವಿಶ್ವಾಸದ ಮಾತನಾಡುತ್ತಾರೆ ಡಾವೆಂಕಿ.

ಈ ತಂಡದಲ್ಲಿ ಅಮೆರಿಕಾದ ಡಾ.ಸೀಮಾ ಶಂಕರ್‌, ಡಾ.ಆನಂದ್‌ ರೆಡ್ಡಿ, ಇಂಗ್ಲೆಂಡಿನಲ್ಲಿರುವ ಡಾ.ರವಿ, ಡಾ.ನಾಗವೆಂಕಟೇಶ್ ಗುಪ್ತಾ, ಬೆಂಗಳೂರಿನ ವಿಕ್ರಮ್‌ ಆಸ್ಪತ್ರೆಯ ಡಾ.ಉಮೇಶ್‌, ಬೆಂಗಳೂರಿನ ಡಾ.ಭಾಗ್ಯಶ್ರೀ, ಡಾ.ರಾಜೀವ್, ಡಾ.ಪ್ರವೀಣ್, ಡಾ.ಎಚ್.ವಿ ವಾಸು ಹೀಗೆ ಹಲವರು ಆಸಕ್ತಿಯಿಂದ ಕ್ರಿಯಾಶೀಲರಾಗಿದ್ದಾರೆ.

ಈ ಚಿಕಿತ್ಸೆಗಳಿಗೆ ಅನುಕೂಲವಾಗಲೆಂದು ವಿದೇಶಗಳಲ್ಲಿ ನೆಲೆಸಿರುವ ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರೆಲ್ಲರೂ ಸೇರಿ ಕೋಟ್ಯಂತರ ರೂ ವೆಚ್ಚದಲ್ಲಿ 110 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಕಳಿಸಿದ್ದಾರೆ. ಡಾ.ಸುಜಾತ ಮತ್ತು ಡಾ.ಸಾಯಿಪ್ರಕಾಶ್ ಮತ್ತಿತರರು ಇವುಗಳನ್ನು ಕಳಿಸಲು ಶ್ರಮವಹಿಸಿದ್ದಾರೆ. ಇನ್ನೂ 300 5ಲೀ ಮತ್ತು 10 ಲೀ ಸಾಮರ್ಥ್ಯದ ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಇನ್ನು ಕೆಲವೇ ದಿನಗಳಲ್ಲಿ ಕಳಿಸುವುದಾಗಿ ಅವರು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...