Homeಕರ್ನಾಟಕಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

"ವಿಜ್ಞಾನ ಮೊದಲು" ಎಂಬುದು ಬಿಎಂಸಿ 92 ತಂಡದ ಘೋಷವಾಕ್ಯ. ವೈಜ್ಞಾನಿಕ ಸಂಗತಿಗಳನ್ನು ಚರ್ಚಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಇವರ ಗುರಿ.

- Advertisement -
- Advertisement -

ತಾವು ಮಾಡುವ ಚಿಕ್ಕ ಚಿಕ್ಕ ಸಹಾಯವನ್ನೂ ಕೂಡ ಪ್ರಚಾರಕ್ಕೆ ಬಳಸಿಕೊಳ್ಳುವ, ಪಿಆರ್‌ಒಗಳನ್ನು ನೇಮಿಸಿಕೊಂಡು ಹೆಸರು ಗಳಿಸುವ ಜನರ ಮಧ್ಯೆ ಸದ್ದಿಲ್ಲದೇ ಕೊರೊನಾ ಸಂಕಷ್ಟದಲ್ಲಿ ಜನರ ಸಹಾಯಕ್ಕೆ ನಿಂತಿದೆ ಬಿಎಂಸಿ-92 ವೈದ್ಯರ ತಂಡ.

ಬೆಂಗಳೂರು ವೈದ್ಯಕೀಯ ಕಾಲೇಜಿನ 1992 ಬ್ಯಾಚ್‌ನ (ಬಿಎಂಸಿ- 92)ನ ಹಲವಾರು ವೈದ್ಯರು ಈಗ ಪ್ರಪಂಚದ ವಿವಿದೆಡೆ ಕೆಲಸ ಮಾಡುತ್ತಿದ್ದಾರೆ. ಆದರೆ ಕೋವಿಡ್‌ ಎರಡನೇ ಅಲೆ ಅವರನ್ನು ಮತ್ತೆ ಒಗ್ಗೂಡುವಂತೆ ಮಾಡಿದೆ. ಈ ಮಾನವೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಎಲ್ಲರೂ ಜನರ ಜೀವ ಉಳಿಸಲು ಒಂದು ತಂಡವಾಗಿ ತಮ್ಮ ಶಕ್ತಿ ಮೀರಿ ಕೆಲಸ ಮಾಡಲು ಮುಂದಾಗಿದ್ದಾರೆ.

ಕೋವಿಡ್ ಎರಡನೇ ಅಲೆಗೆ ಅತಿ ಹೆಚ್ಚು ತುತ್ತಾಗಿರುವ ನಮ್ಮ ರಾಜ್ಯದಲ್ಲಿ ಬೆಡ್‌ ಕೊರತೆ, ಆಕ್ಸಿಜನ್, ಔಷಧಿ ಅಲಭ್ಯತೆಯಿಂದ ಜನ ಗೋಳಾಡುತ್ತಿದ್ದಾರೆ. ಅಪಾರ ಸಾವು ನೋವುಗಳು ಸಂಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಕೊರೊನಾ ಉಲ್ಬಣವಾಗದಂತೆ ತಡೆಯಲು ಅಂದರೆ ಜನರಿಗೆ ಬೆಡ್‌, ಐಸಿಯು, ವೆಂಟಿಲೇಟರ್ ಬೇಕಾಗುವಂತ ಪರಿಸ್ಥಿತಿ ಬರುವ ಮೊದಲೇ ಅವರನ್ನು ಗುಣಪಡಿಸುವುದು ಮತ್ತು ಆಸ್ಪತ್ರೆಗಳ ಮೇಲಿನ ಭಾರ ತಗ್ಗಿಸುವುದು ಬಿಎಂಸಿ- 92 ವೈದ್ಯರ ಗುರಿಯಾಗಿದೆ.

ಇದನ್ನೂ ಓದಿ: ರಾಜ್ಯದ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್‌

ಬಹಳಷ್ಟು ಜನರಿಗೆ ಕೊರೊನಾ ಬಂದಾಗ ಏನು ಮಾಡಬೇಕು? ಉಸಿರಾಟದ ಸಮಸ್ಯೆಯುಂಟಾದರೆ ಏನು ಮಾಡಬೇಕು ಎಂಬುದು ತಿಳಿದಿಲ್ಲ. ಆ ಸಂದರ್ಭದಲ್ಲಿ ಬೆಡ್, ಔಷಧಿ ಸಿಗುತ್ತಿಲ್ಲವೆಂಬ ಭಯಕ್ಕೆ ಅವರು ಎದೆಗುಂದಿ ಮತ್ತಷ್ಟು ರೋಗಕ್ಕೆ ತುತ್ತಾಗುತ್ತಾರೆ. ನಮ್ಮ ರಾಜ್ಯದ ಆರೋಗ್ಯ ವ್ಯವಸ್ಥೆ ಅದನ್ನು ನಿಭಾಯಿಸುವ ಸ್ಥಿತಿಯಲ್ಲಿ ಇಲ್ಲ. ಹಾಗಾಗಿ ವೈದ್ಯರು ಆರಂಭದಿಂದಲೇ ಸೋಂಕಿತರಿಗೆ ಫೋನಿನಲ್ಲಿ/ಆಪ್ ಮೂಲಕ ಹೇಳಿದ ಸಲಹೆಗಳನ್ನು ಪಾಲಿಸುವಂತೆ ಮಾಡಿ ಆಕ್ಸಿಜನ್ ಬೆಡ್‌ಗಾಗಿ ಹುಡುಕುವ ಪರಿಸ್ಥಿತಿಗೆ ಹೋಗದಂತೆ ಮಾಡಲು, ಕೊರೊನಾ ಉಲ್ಭಣಿಸಿದಂತೆ ತಡೆಯಲು ಮುಂದಾಗಿದೆ ಇದಕ್ಕೆ ಕರ್ನಾಟಕ ಕೋವಿಡ್ ವಾಲಂಟೀಯರ್ಸ್ ಟೀಮ್‌ (ಕೆಸಿವಿಟಿ) ರಚನೆಯಾಗಿ, ಈಗಾಗಲೇ ರಾಜ್ಯದಲ್ಲಿ ಕಾರ್ಯನಿರತವಾಗಿದೆ. ಅದರಲ್ಲಿ ಈ ತಂಡ ಸಕ್ರಿಯವಾಗಿ ತೊಡಗಿಸಿಕೊಂಡಿದೆ.

“ವಿಜ್ಞಾನ ಮೊದಲು” ಎಂಬುದು ಬಿಎಂಸಿ 92 ತಂಡದ ಘೋಷವಾಕ್ಯ. ಇಂದು ಕೋವಿಡ್ ಕುರಿತು ನೂರಾರು ಜನ ನೂರಾರು ರೀತಿಯ ಅಭಿಪ್ರಾಯ ಹೊಂದಿದ್ದು, ನೂರಾರು ಸಲಹೆಗಳನ್ನು ನೀಡುತ್ತಿದ್ದಾರೆ. ಹಾಗಾಗಿ ತಪ್ಪು ಗ್ರಹಿಕೆಗಳು, ಮೂಡನಂಬಿಕೆಗಳಿಗೆ ಜನರು ಬಲಿಯಾಗುವುದನ್ನು ತಡೆಯಲು ಈ ತಂಡ ವೈಜ್ಞಾನಿಕ ಸಂಗತಿಗಳನ್ನು ಚರ್ಚಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಲ್ಲಿ ನಿರತವಾಗಿದೆ. ಜನರಿಗೆ ಉಚಿತ ಚಿಕಿತ್ಸೆಯ ಜೊತೆಗೆ ಕೊರೊನಾ ಕುರಿತ ವಿಚಾರ ಸಂಕಿರಣಗಳು, ಮುನ್ನೆಚ್ಚರಿಕೆಗಳು, ಚಿಕಿತ್ಸಾ ವಿಧಾನಗಳ ಮಾಹಿತಿ ಸೇರಿದಂತೆ ವೈದ್ಯಕೀಯ ವಿಜ್ಞಾನದ ಹಲವು ವಿಚಾರಗಳನ್ನು ಸರಳಿಕರಿಸಿ ಅದನ್ನು ಜನರಿಗೆ ತಲುಪಿಸುವ ಕೆಲಸಕ್ಕೆ ಈ ತಂಡ ಕೈ ಹಾಕಿದೆ.

ಈಗಾಗಲೇ ರಾಜ್ಯದಲ್ಲಿಯೂ ಬ್ಲಾಕ್ ಫಂಗಸ್ ಕಾಯಿಲೆ ಸುಮಾರು 100 ಮಂದಿಯಲ್ಲಿ ಕಾಣಿಸಿಕೊಂಡಿದೆ. ಈ ಸೋಂಕಿನ ಬಗ್ಗೆಯೂ ವೈದ್ಯವೃಂದಲ್ಲಿ ಸಮರ್ಪಕ ಅರಿವು ಮೂಡಿಸಲು ಬಿಎಂಸಿ ವೈದ್ಯರು ಮುಂದಾಗಿದ್ದು, ಮೇ 20 ರಂದು “ಕೋವಿಡ್ ನಂತರದ ಬ್ಲಾಕ್ ಫಂಗಸ್: ಹಿನ್ನೆಲೆ ಮತ್ತು ಮುಂದಿರುವ ದಾರಿ” ವಿಚಾರದ ಕುರಿತು ವೆಬಿನಾರ್‌ ಆಯೋಜಿಸಲಾಗಿದೆ.

ಇದನ್ನೂ ಓದಿ: ‘ಬ್ಲಾಕ್‌ ಫಂಗಸ್‌‌’ಗೆ ಉಚಿತ ಚಿಕಿತ್ಸೆ ನೀಡಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಈ ವೆಬಿನಾರ್‌ನಲ್ಲಿ ದೇಶದ ಮತ್ತು ವಿದೇಶದ ವೈದ್ಯರು ಭಾಗವಹಿಸಲಿದ್ದಾರೆ. ಪ್ಯಾನೆಲ್‌ನಲ್ಲಿ ಅಮೆರಿಕಾದ  ಮೆಡಿಕಲ್ ಸಿಟಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಸಾಂಕ್ರಾಮಿಕ ರೋಗಗಳ ತಜ್ಞೆ ಡಾ. ಹರಿಕಾ ಯಲಮಂಚಿಲಿ, ಪಾಂಡಿಚೇರಿಯ ಸರ್ಜನ್ ಡಾ. ಅರುಣ್ ಅಲೆಕ್ಸಾಂಡರ್, ಬೆಂಗಳೂರಿನ ನೇತ್ರತಜ್ಞ ಡಾ. ಕೃಷ್ಣ ಆರ್ ಮೂರ್ತಿ ಮತ್ತು ಬೆಂಗಳೂರಿನ ಆರ್.ವಿ ಆಸ್ಟರ್ ಆಸ್ಪತ್ರೆಯ ನರಶಸ್ತ್ರ ಚಿಕಿತ್ಸಕ ಡಾ.ಧನಂಜಯ್ ಭಟ್ ಭಾಗವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಇಂತಹ ಸರಣಿ ವೈಜ್ಞಾನಿಕ ಕಾರ್ಯಕ್ರಮಗಳನ್ನು ಯೋಜಿಸಲಾಗಿದೆ.

ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಈ ತಂಡ ಸದಸ್ಯರಾದ ಪತ್ರಕರ್ತ ಡಾವೆಂಕಿ, “ಜನರಿಗೆ ಸರಳವಾದ ಭಾಷೆಯಲ್ಲಿ ವಿಡಿಯೋಗಳ ಮೂಲಕ ಜನರಿಗೆ ಸೋಂಕಿನ ಬಗ್ಗೆ ಮಾಹಿತಿ ನೀಡುವುದು ಮತ್ತು ಅವರಲ್ಲಿ ಅರಿವು ಮೂಡಿಸುವುದು ನಮ್ಮ ಉದ್ದೇಶ” ಎನ್ನುತ್ತಾರೆ.

“ಜನರಿಗೆ ಕೆಲವೊಂದು ವೈದ್ಯಕೀಯ ವಿಷಯಗಳು ಸರಿಯಾಗಿ ತಿಳಿಯುವುದಿಲ್ಲ. ಅದನ್ನು ಅರ್ಧ ತಿಳಿದು ಸುಮ್ಮನಾಗುತ್ತಾರೆ. ಇದು ತುಂಬಾ ತಪ್ಪು. ಹಾಗಾಗಿ ವಿಡಿಯೊಗಳನ್ನು ಮಾಡಿಸುವ ಕೆಲಸವನ್ನು ನಾನು ಮೆಲ್ವಿಚಾರಣೆ ಮಾಡುತ್ತೇನೆ. ವಿದೇಶಗಳ ವೈದ್ಯರು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಇಂಗ್ಲಿಷ್ನಲ್ಲಿರುವ ವಿಷಯಗಳನ್ನು ಭಾಷಾಂತರಿಸಿ ಸರಳವಾಗಿ ತಿಳಿಸಲಾಗುತ್ತದೆ” ಎನ್ನುತ್ತಾರೆ.

ಇದನ್ನೂ ಓದಿ: ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

“ಉತ್ತಮ ಜೀವನ ನಡೆಸುತ್ತಿರುವ ಇವರೆಲ್ಲರೂ ತಮ್ಮ ಪಾಡಿಗೆ ತಾವು ಆರಾಮಾವಾಗಿ ಇರಬಹುದಿತ್ತು. ಆದರೆ, ಈ ಸಂಕಷ್ಟದ ಸಮಯದಲ್ಲಿ ಜನರ ನೆರವಿಗೆ ನಿಂತಿದ್ದಾರೆ. ಅಂದು ಕಾಲೇಜಿನ ದಿನಗಳಲ್ಲಿ ನಾವು ಒಟ್ಟುಗೂಡಿ ಮಾಡುತ್ತಿದ್ದ ಕೆಲಸಗಳು ಇಂದು ಇಂತಹ ಪ್ರಬುದ್ಧ ಕಾರ್ಯಕ್ಕೆ ಕೈಹಾಕುವಂತೆ ಮಾಡಿದೆ. ಇವರೆಲ್ಲರ ಬಗ್ಗೆ ನನಗೆ ಹೆಮ್ಮೆಯಿದೆ. ಸಣ್ಣ ಸಣ್ಣ ಕೆಲಸಗಳಿಗೆ, ಮಾಡುವ ಪುಟ್ಟ ಕೆಲಸಕ್ಕೆ ಮಾಧ್ಯಮಗಳಲ್ಲಿ ಪ್ರಚಾರ ಪಡೆಯುವ ದಿನಗಳಲ್ಲಿ ಇವರು ಯಾವುದನ್ನೂ ಬಯಸದೇ, ನೇಪತ್ಯದಲ್ಲೇ ಉಳಿದು ಕೆಲಸ ಮಾಡುತ್ತಿದ್ದಾರೆ” ಎಂದು ಡಾವೆಂಕಿ ಹೇಳುತ್ತಾರೆ.

“ಜನರ ಜೀವವುಳಿಸುವ ವೈದ್ಯರ ಜೊತೆಗೆ ಪರೋಕ್ಷವಾಗಿ ಲಜೀಶ್, ಸುರೇಂದ್ರ, ಹರ್ಷವರ್ಧನ್ ಸುಳ್ಯ, ಸುಧಾಕರ್‌ ದರ್ಬೆ ಸೇರಿದಂತೆ ಹಲವು ಜನ ಕೆಲಸ ಮಾಡುತ್ತಿದ್ದಾರೆ. ಹಳ್ಳಿಗಳಲ್ಲಿ, ದೂರದ ಗ್ರಾಮಗಳಲ್ಲಿ ಸರ್ಕಾರ ಕೆಲವೊಮ್ಮೆ ಎಡವಬಹುದು ಅಂತಹ ಸಮಯದಲ್ಲಿ ಈ ತಂಡ ಪರ್ಯಾಯವಾಗಿ ಕಾರ್ಯ ನಿರ್ವಹಿಸುತ್ತದೆ” ಎಂಬ ವಿಶ್ವಾಸದ ಮಾತನಾಡುತ್ತಾರೆ ಡಾವೆಂಕಿ.

ಈ ತಂಡದಲ್ಲಿ ಅಮೆರಿಕಾದ ಡಾ.ಸೀಮಾ ಶಂಕರ್‌, ಡಾ.ಆನಂದ್‌ ರೆಡ್ಡಿ, ಇಂಗ್ಲೆಂಡಿನಲ್ಲಿರುವ ಡಾ.ರವಿ, ಡಾ.ನಾಗವೆಂಕಟೇಶ್ ಗುಪ್ತಾ, ಬೆಂಗಳೂರಿನ ವಿಕ್ರಮ್‌ ಆಸ್ಪತ್ರೆಯ ಡಾ.ಉಮೇಶ್‌, ಬೆಂಗಳೂರಿನ ಡಾ.ಭಾಗ್ಯಶ್ರೀ, ಡಾ.ರಾಜೀವ್, ಡಾ.ಪ್ರವೀಣ್, ಡಾ.ಎಚ್.ವಿ ವಾಸು ಹೀಗೆ ಹಲವರು ಆಸಕ್ತಿಯಿಂದ ಕ್ರಿಯಾಶೀಲರಾಗಿದ್ದಾರೆ.

ಈ ಚಿಕಿತ್ಸೆಗಳಿಗೆ ಅನುಕೂಲವಾಗಲೆಂದು ವಿದೇಶಗಳಲ್ಲಿ ನೆಲೆಸಿರುವ ಬೆಂಗಳೂರು ಮೆಡಿಕಲ್ ಕಾಲೇಜಿನ 1992ರ ಸಾಲಿನ ವೈದ್ಯರೆಲ್ಲರೂ ಸೇರಿ ಕೋಟ್ಯಂತರ ರೂ ವೆಚ್ಚದಲ್ಲಿ 110 ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಕಳಿಸಿದ್ದಾರೆ. ಡಾ.ಸುಜಾತ ಮತ್ತು ಡಾ.ಸಾಯಿಪ್ರಕಾಶ್ ಮತ್ತಿತರರು ಇವುಗಳನ್ನು ಕಳಿಸಲು ಶ್ರಮವಹಿಸಿದ್ದಾರೆ. ಇನ್ನೂ 300 5ಲೀ ಮತ್ತು 10 ಲೀ ಸಾಮರ್ಥ್ಯದ ಆಕ್ಸಿಜನ್ ಕಾನ್ಸನ್ಟ್ರೇಟರ್‌ಗಳನ್ನು ಇನ್ನು ಕೆಲವೇ ದಿನಗಳಲ್ಲಿ ಕಳಿಸುವುದಾಗಿ ಅವರು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಉಲ್ಬಣವಾಗದಂತೆ ತಡೆಯಲು ಸಜ್ಜುಗೊಂಡ ಕೆಸಿವಿಟಿ ಜನಸಹಾಯ – ಬಿಎಂಸಿ 92 ಡಾಕ್ಟರ್ಸ್‌ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...