Homeಕರೋನಾ ತಲ್ಲಣ‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

‘ದೇವರೇ ಕಾಪಾಡಬೇಕು’: ಉತ್ತರಪ್ರದೇಶದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಕುರಿತು ಹೈಕೋರ್ಟ್ ಕಳವಳ

- Advertisement -
- Advertisement -

ಅಲಹಾಬಾದ್ ಹೈಕೋರ್ಟ್ ಸೋಮವಾರ ಪ್ರಸಿದ್ಧ ಹಿಂದಿ ಮಾತಾದ “ರಾಮ್ ಭರೋಸೆ’ (ದೇವರೇ ಗತಿ) ಬಳಸುವ ಮೂಲಕ ಉತ್ತರ ಪ್ರದೇಶದ ಗ್ರಾಮೀಣ ಮತ್ತು ಸಣ್ಣ ನಗರಗಳ ಆರೋಗ್ಯ ವ್ಯವಸ್ಥೆಯ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿದೆ.

ಉತ್ತರಪ್ರದೇಶದಲ್ಲಿ ಕೋವಿಡ್ ಎರಡನೇ ಅಲೆ ತೀವ್ರವಾಗುತ್ತಿರುವ ಸಂದರ್ಭದಲ್ಲಿ ಅಲ್ಲಿನ ಹಳ್ಳಿಗಳು ಮತ್ತು ಸಣ್ಣ ನಗರಗಳಲ್ಲಿನ ಆರೋಗ್ಯ ಮೂಲಸೌಕರ್ಯಗಳ ಕೊರತೆ ಬಗ್ಗೆ ಚರ್ಚೆ ನಡೆಯುವ ಸಂದರ್ಭದಲ್ಲಿ ಮೇಲಿನಂತೆ ಕಳವಳ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ವರ್ಮಾ ಮತ್ತು ಅಜಿತ್ ಕುಮಾರ್ ಅವರಿದ್ದ ನ್ಯಾಯಪೀಠವು, ರಾಜ್ಯದ ಕೋವಿಡ್ ರೋಗಿಗಳಿಗೆ ಉತ್ತಮ ಆರೈಕೆ ನೀಡುವಂತೆ ಕೋರಿ ನಡೆಯುತ್ತಿರುವ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಕೋರ್ಟ್‌ಗೆ ಲಭ್ಯವಾದ ಅಂಕಿಅಂಶ, ಮಾಹಿತಿಯನ್ನು ಆಧರಿಸಿ ಮಾತನಾಡಿದ ನ್ಯಾಯಾಧೀಶರು, ಉತ್ತರಪ್ರದೇಶದ ಸಣ್ಣ ನಗರಗಳು ಮತ್ತು ಹಳ್ಳಿಗಳಿಗೆ ಸಂಬಂಧಿಸಿದ ಸಂಪೂರ್ಣ ವೈದ್ಯಕೀಯ ವ್ಯವಸ್ಥೆ ‘ರಾಮ್ ಭರೋಸೆ (ದೇವರ ಕರುಣೆ) ಮೇಲೆ ನಿಂತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್‌ನಲ್ಲಿ ಪಶ್ಚಿಮ ಉತ್ತರ ಪ್ರದೇಶದ ಮೀರತ್ ಪಟ್ಟಣದ ಜಿಲ್ಲಾ ಆಸ್ಪತ್ರೆಯಿಂದ ಕೋವಿಡ್ ರೋಗಿಯೊಬ್ಬರು ನಾಪತ್ತೆಯಾಗಿದ್ದಾರೆ ಎಂಬ ದೂರನ್ನು ಪರಿಶೀಲಿಸಿದ ಮೂವರು ಸದಸ್ಯರ ಸಮಿತಿಯ ಸಲ್ಲಿಕೆಗಳನ್ನು ಗಮನಿಸಿದ ನ್ಯಾಯಾಲಯ ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ.

ನ್ಯಾಯಾಲಯ ಗಮನಿಸಿದಂತೆ, ರೋಗಿ ಸಂತೋಷ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೆಸ್ಟ್ ರೂಂನಲ್ಲಿ ಅವರು ಕುಸಿದು ಬಿದ್ದ ನಂತರ ಅವರನ್ನು ಸ್ಟ್ರೆಚರ್ ಮೇಲೆ ತಂದು ಜೀವ ಉಳಿಸಲು ಪ್ರಯತ್ನಿಸಲಾಗಿತು. ಆದರೆ ರೋಗಿ ಬದುಕಿ ಉಳಿಯಲ್ಲಿಲ್ಲ. ಅವರ ದೇಹವನ್ನು “ಗುರುತಿಸಲಾಗದ” ವ್ಯಕ್ತಿಯಂತೆ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ವಿಲೇವಾರಿ ಮಾಡಿದ್ದಾರೆ ಎಂದೂ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

“ಅಂದು ರಾತ್ರಿ ಕರ್ತವ್ಯದಲ್ಲಿದ್ದ ವೈದ್ಯರ ಕಡೆಯಿಂದ ತೀವ್ರ ನಿರ್ಲಕ್ಷತೆ, ಕರ್ತವ್ಯಲೋಪ ನಡೆದಿದೆ ಎಂದು ಕೋರ್ಟ್ ಒತ್ತಿ ಹೇಳಿದೆ.

ಉತ್ತರಪ್ರದೇಶದ ವೈದ್ಯಕೀಯ ಆರೈಕೆಯ ಸ್ಥಿತಿಯ ಬಗ್ಗೆ ಅವಲೋಕನಗಳನ್ನು ಮಾಡಿದ ನ್ಯಾಯಾಲಯವು, “ಸದ್ಯದ ಆರೋಗ್ಯ ವ್ಯವಸ್ಥೆ ತುಂಬ ದುರ್ಬಲವಾಗಿದೆ. ಇದು ‘ಕಳವಳಕಾರಿ ಸಂಗತಿ’ ಎಂದಿದೆ.

“ಸಾಮಾನ್ಯ ಸಮಯದಲ್ಲಿಯೇ ನಮ್ಮ ಜನರ ವೈದ್ಯಕೀಯ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗದ ಪರಿಸ್ಥಿತಿ ಇದೆ. ಅದು ಪ್ರಸ್ತುತ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ತೀವ್ರವಾಗಿ ಕುಸಿದು ಬಿದ್ದಿದೆ’ ಎಂದು ಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ.

ತನ್ನ ವಿಚಾರಣೆಯಲ್ಲಿ, ನ್ಯಾಯಾಲಯವು ಪಶ್ಚಿಮ ಯುಪಿಯ ಬಿಜ್ನೋರ್ ಜಿಲ್ಲೆಯ ಒಂದು ಉದಾಹರಣೆಯನ್ನು ಸಹ ಪ್ರಸ್ತಾಪಿಸಿದೆ. ರಾಜ್ಯ ಸರ್ಕಾರದ ಸಲ್ಲಿಕೆಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯವು ಹೀಗೆ ಹೇಳಿದೆ: “ಬಿಜ್ನೋರ್‌ನಲ್ಲಿ ಯಾವುದೇ ಒಳ್ಳೆಯ ಆಸ್ಪತ್ರೆ ಇಲ್ಲ. ಮೂರು ಸರ್ಕಾರಿ ಆಸ್ಪತ್ರೆಗಳಲ್ಲಿ ಕೇವಲ 150 ಹಾಸಿಗೆಗಳಿವೆ. ಉಳಿದ ವೈದ್ಯಕೀಯ ಸಲಕರಣೆಗಳ ತೀವ್ರ ಕೊರತೆಯಿದೆ’ ಎಂದು ಕೋರ್ಟ್ ಹೇಳಿದೆ.

‘ಗ್ರಾಮೀಣ ಪ್ರದೇಶದ ಜನಸಂಖ್ಯೆಯನ್ನು 32 ಲಕ್ಷ ಎಂದು ಪರಿಗಣಿಸಿದರೆ, ಒಂದು ಆರೋಗ್ಯ ಕೇಂದ್ರದಲ್ಲಿ 3 ಲಕ್ಷ ಜನರ ಹೊರೆ ಇದೆ ಮತ್ತು 3 ಲಕ್ಷ ಜನರಿಗೆ ಕೇವಲ 30 ಹಾಸಿಗೆಗಳಿವೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯಗಳ ಕೊರತೆ ತೀವ್ರವಾಗಿದೆ’ ಎಂದು ನ್ಯಾಯಾಲಯ ಹೇಳಿದೆ.

ಉತ್ತರ ಪ್ರದೇಶವು 16.19 ಲಕ್ಷ ಕೊರೋನಾ ವೈರಸ್ ಪ್ರಕರಣಗಳನ್ನು ದಾಖಲಿಸಿದೆ. ಕಳೆದ ತಿಂಗಳಿನಿಂದ ದೈನಂದಿನ ಸೋಂಕುಗಳು 20,000 ಕ್ಕಿಂತ ಹೆಚ್ಚಾಗಿದೆ. ವೈದ್ಯಕೀಯ ಆಮ್ಲಜನಕ ಅಥವಾ ಇತರ ಸಂಪನ್ಮೂಲಗಳ ಕೊರತೆಯಿಲ್ಲ ಎಂದು ರಾಜ್ಯ ಸರ್ಕಾರ ಹೇಳುತಿದ್ದರೂ, ಸರಿಯಾದ ಆರೋಗ್ಯ ಸೌಲಭ್ಯಗಳ ಕೊರತೆಯಿಂದಾಗಿ ರೋಗಿಗಳು ಕಷ್ಟಪಡುತ್ತಿದ್ದಾರೆ ಎಂದು ಮಾಧ್ಯಮಗಳು ತೊರಿಸುತ್ತಿವೆ.

ಕಳೆದ ಕೆಲವು ದಿನಗಳಿಂದ, ಗಂಗಾ ನದಿಯ ದಡದ ಸಮೀಪವಿರುವ ಹಳ್ಳಿಗಳಲ್ಲಿ ಕಂಡುಬರುವ ಶಂಕಿತ ಕೋವಿಡ್ ರೋಗಿಗಳ ಶವಗಳ ಚಿತ್ರಗಳ ಕುರಿತು ಪ್ರಸ್ತಾಪಿಸಿದ ಕೋರ್ಟ್, ಇಂತಹ ಘಟನೆಗಳನ್ನು ತಡೆಯಲು ಕೇಂದ್ರ, ಯುಪಿ ಸರ್ಕಾರ ಮತ್ತು ನೆರೆಯ ಬಿಹಾರ ಸರ್ಕಾರಕ್ಕೆ ತಿಳಿಸಿದೆ.


ಇದನ್ನೂ ಓದಿ; ಕೋವಿಡ್ ದುರಂತದ ಮೂಲ ಮೋದಿಯವರ ನೋಟು ಅಮಾನ್ಯೀಕರಣದಲ್ಲಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...