Homeಕರೋನಾ ತಲ್ಲಣಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

- Advertisement -
- Advertisement -

`ಧರೆಹತ್ತಿ ಉರಿದೊಡೆ’ ಎಂದು ಬಸವಣ್ಣನವರು ಹೇಳಿದ್ದ ಮಾತು ಇಂದು ನಿಜವಾಗಿದೆ. ಅದನ್ನು “ಈ ಕಾಲಘಟ್ಟಕ್ಕೆ ಹೋಲಿಸಿ ನೋಡುವುದಾದರೆ ಇಂದು ವಿಶ್ವಕ್ಕೆ ಬೆಂಕಿ ಬಿದ್ದಿದಂತಿದೆ. ಈ ಸಂದರ್ಭವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಬೇಕಿದ್ದ ಸರ್ಕಾರಗಳೆಲ್ಲವೂ ಕೈಚೆಲ್ಲಿ ಧರೆ ಹತ್ತಿ ಉರಿಯುವಂತೆ ಮಾಡಿವೆ” ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದರು.

ಜನಾಗ್ರಹ ಆಂದೋಲನ ಸಂಘಟನೆ ವತಿಯಿಂದ ಪ್ರತಿ ಪಕ್ಷಗಳ ಮತ್ತು ಸರ್ವ ಸಂಘಟನೆಗಳ ತುರ್ತು ಸಮಾಲೋಚನಾ ಸಭೆಯಲ್ಲಿ ‘ಮಿಷನ್ ಸೇವ್ ಲೈಫ್’ ಯೋಜನೆಯನ್ನು ಆನ್‌ಲೈನ್ ಮೂಲಕ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. “ಸಮಾಜದ ಕಟ್ಟಕಡೆಯ ಜನರಿಗೆ ಆಹಾರದ ಕಿಟ್, ಮೆಡಿಕಲ್ ಕಿಟ್ ಮತ್ತು ವೈದ್ಯಕೀಯ ನೆರವನ್ನು ಒದಗಿಸುವುದು ‘ಮಿಷನ್ ಸೇವ್ ಲೈಫ್’ನ  ಆಶಯವಾಗಿದೆ” ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಾತನಾಡಿ “ನಮಗೂ ಸುಮ್ಮನೆ ಕೂರಲು ಆಗುತ್ತಿಲ್ಲ. ನಮ್ಮಿಂದ ಸಾಧ್ಯವಿರುವ ಸಹಾಯವನ್ನು ಜನತೆಗೆ ನೀಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ಸಾಲುತ್ತಿಲ್ಲ. ಸರ್ಕಾರ ಯಾರ ಮಾತನ್ನೂ ಕೇಳಲು ಸಿದ್ಧವಿಲ್ಲ. ನಿಸ್ವಾರ್ಥವಾಗಿ ಸಾಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿರುವ ನೀವೆಲ್ಲಾ ಜೊತೆಗೂಡಿಸಿರುವುದು ಸಂತಸದ ವಿಚಾರ. ನಮ್ಮ ಪಕ್ಷ ನಿಮ್ಮ ಜೊತೆಗಿದೆ. ನೀವು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಸಂಪೂರ್ಣ ಸಹಕರಿಸಿ ಜೊತೆಗೂಡುತ್ತೇವೆ” ಎಂದರು.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಸಮಾರೋಪದ ಮಾತುಗಳನ್ನಾಡಿ “ಆಸ್ಪತ್ರೆಯಲ್ಲಿ ಬೆಡ್ಡಿಲ್ಲ, ಸ್ಮಶಾನದಲ್ಲಿ ಜಾಗವಿಲ್ಲ” ಎಂಬ ಪರಿಸ್ಥಿತಿ ಏರ್ಪಟ್ಟಿದೆ. ಇಂತಹ ಹೊತ್ತಿನಲ್ಲಿ ಈ ಸಭೆಗೆ ವಿಶೇಷ ಮಹತ್ವವಿದೆ. ಸಮಾಲೋಚನಾ ಮಂಡಳಿಯನ್ನು ವಿಸ್ತರಿಸಿ, ಕೂಲಂಕೂಷ ಚರ್ಚೆ ನಡೆಸಿ ಮುಂದಿನ ಹೋರಾಟದ ಹೆಜ್ಜೆಗಳ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

ನಿವೃತ್ತ ಐಎಎಸ್ ಅಧಿಕಾರಿ ಶಸಿಕಾಂತ್ ಸೆಂದಿಲ್, ಆಮ್ ಆದ್ಮಿ ಪಕ್ಷದ ವರಿಷ್ಟ ಪೃಥ್ವಿರೆಡ್ಡಿ, ಸ್ವರಾಜ್ ಇಂಡಿಯಾದ ಚಾಮರಾಸ ಮಾಲಿ ಪಾಟೀಲ್, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ರೈತ ಚಳವಳಿಯ ಮುಖಂಡರುಗಳಾದ ಬಡಗಲಪುರ ನಾಗೇಂದ್ರ, ಹೆಚ್. ಸಿ. ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಾದ ಡಿ.ಜಿ. ಸಾಗರ್, ನಾಗಾವರ, ಅಲ್ಪಸಂಖ್ಯಾತ ಸಮುದಾದ ಮುಖಂಡರುಗಳಾದ ಯೂಸೂಫ್ ಕನಿ, ಅಫ್ಸರ್ ಕೊಡ್ಲಿಪೇಟೆ, ತಾಹೀರ್ ಹುಸೈನ್ ಮುಂತಾದವರು ಅಭಿಪ್ರಾಯ ಹಂಚಿಕೊಂಡರು.  ಸಲಹೆ ಮಾಡಿದರು. ಸಭೆಯಲ್ಲಿ 60ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದರು.

ಸಭೆಯಲ್ಲಿ ಈ ಕೆಳಕಂಡ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

  • ಕೋವಿಡ್ ಸಂಬಂಧಿತ ಎಲ್ಲಾ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ದುಡಿಯುವ ವ್ಯಕ್ತಿ ಮಡಿದ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು. ಚಾಮರಾಜನಗರದಲ್ಲಿ ಸರ್ಕಾರಿ ವೈಫಲ್ಯದಿಂದಾಗಿ ಮೃತರಾದ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಬೇಕು.
  • ಎಲ್ಲಾ ವಯಸ್ಕರಿಗೂ ಸರ್ಕಾರ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು.
  • ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಸಮಗ್ರ ಪಡಿತರ ಕಿಟ್ ಅನ್ನು ಸರ್ಕಾರ ವಿತರಿಸಬೇಕು.
  • ಲಾಕ್ ಡೌನಿನಿಂದ ಕೆಲಸ ಇಲ್ಲದಾಗಿರುವ ಎಲ್ಲಾ ಶ್ರಮಜೀವಿ ಕುಟುಂಬಗಳಿಗೆ ಕೂಡಲೇ 5000 ನಗದು ವರ್ಗಾವಣೆ ಮಾಡಬೇಕು.
  • ಮೂರನೇ ಅಲೆಗೆ ತಯಾರಿಯನ್ನೂ ಮಾಡಿಕೊಳ್ಳಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೆಡ್ ಮತ್ತು ಆಕ್ಸಿಜನ್ ಲಭ್ಯತೆಯನ್ನು ತೀವ್ರಗತಿಯಲ್ಲಿ ಹೆಚ್ಚಿಸಬೇಕು. ಗ್ರಾಮ ಮಟ್ಟದಲ್ಲಿ ಕೋವಿಡ್ ನಿರ್ವಹಣಾ ಸಮಿತಿಗಳನ್ನು ರಚಿಸಿ ಶಕ್ತಿಯುತಗೊಳಿಸಬೇಕು.
  • ಮುಂಗಾರು ಕೃಷಿ ಪ್ರಾರಂಭವಾಗುತ್ತಿದ್ದು ಈ ಸಂದರ್ಭದಲ್ಲಿ ಸರ್ಕಾರ ಗೊಬ್ಬರದ ಬೆಲೆಯನ್ನು ಏರಿಸಿರುವುದು ಖಂಡನಾರ್ಹ. ಕೂಡಲೇ ಗೊಬ್ಬರ, ಬೀಜ ಮತ್ತು ಕೃಷಿ ಪರಿಕರಗಳ ಬೆಲೆಯನ್ನು ತಗ್ಗಿಸಬೇಕು ಮತ್ತು ಸಬ್ಸಿಡಿಯನ್ನು ಹೆಚ್ಚಿಸಬೇಕು.

ಸಭೆಗೆ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯ ಸ್ವರ್ಣ ಭಟ್ ಅವರು ಸ್ವಾಗತ ಬಯಸಿದರು. ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಮು ಸೌಹಾರ್ದ ವೇದಿಕೆಯ ಕೆ.ಎಲ್. ಅಶೋಕ್ ಸಭೆಯನ್ನು ನಿರೂಪಣೆ ಮಾಡಿದರು. ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್ ಶ್ರೀಧರ್ ಸಭೆಯ ನಿರ್ಣಯಗಳನ್ನು ಮಂಡಿಸಿದರು.


ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...