Homeಕರೋನಾ ತಲ್ಲಣಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

- Advertisement -
- Advertisement -

`ಧರೆಹತ್ತಿ ಉರಿದೊಡೆ’ ಎಂದು ಬಸವಣ್ಣನವರು ಹೇಳಿದ್ದ ಮಾತು ಇಂದು ನಿಜವಾಗಿದೆ. ಅದನ್ನು “ಈ ಕಾಲಘಟ್ಟಕ್ಕೆ ಹೋಲಿಸಿ ನೋಡುವುದಾದರೆ ಇಂದು ವಿಶ್ವಕ್ಕೆ ಬೆಂಕಿ ಬಿದ್ದಿದಂತಿದೆ. ಈ ಸಂದರ್ಭವನ್ನು ಸೂಕ್ತ ರೀತಿಯಲ್ಲಿ ನಿಭಾಯಿಸಬೇಕಿದ್ದ ಸರ್ಕಾರಗಳೆಲ್ಲವೂ ಕೈಚೆಲ್ಲಿ ಧರೆ ಹತ್ತಿ ಉರಿಯುವಂತೆ ಮಾಡಿವೆ” ಎಂದು ಸಾಣೆಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳು ವಿಷಾದ ವ್ಯಕ್ತಪಡಿಸಿದರು.

ಜನಾಗ್ರಹ ಆಂದೋಲನ ಸಂಘಟನೆ ವತಿಯಿಂದ ಪ್ರತಿ ಪಕ್ಷಗಳ ಮತ್ತು ಸರ್ವ ಸಂಘಟನೆಗಳ ತುರ್ತು ಸಮಾಲೋಚನಾ ಸಭೆಯಲ್ಲಿ ‘ಮಿಷನ್ ಸೇವ್ ಲೈಫ್’ ಯೋಜನೆಯನ್ನು ಆನ್‌ಲೈನ್ ಮೂಲಕ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. “ಸಮಾಜದ ಕಟ್ಟಕಡೆಯ ಜನರಿಗೆ ಆಹಾರದ ಕಿಟ್, ಮೆಡಿಕಲ್ ಕಿಟ್ ಮತ್ತು ವೈದ್ಯಕೀಯ ನೆರವನ್ನು ಒದಗಿಸುವುದು ‘ಮಿಷನ್ ಸೇವ್ ಲೈಫ್’ನ  ಆಶಯವಾಗಿದೆ” ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಮಾತನಾಡಿ “ನಮಗೂ ಸುಮ್ಮನೆ ಕೂರಲು ಆಗುತ್ತಿಲ್ಲ. ನಮ್ಮಿಂದ ಸಾಧ್ಯವಿರುವ ಸಹಾಯವನ್ನು ಜನತೆಗೆ ನೀಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ಸಾಲುತ್ತಿಲ್ಲ. ಸರ್ಕಾರ ಯಾರ ಮಾತನ್ನೂ ಕೇಳಲು ಸಿದ್ಧವಿಲ್ಲ. ನಿಸ್ವಾರ್ಥವಾಗಿ ಸಾಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿರುವ ನೀವೆಲ್ಲಾ ಜೊತೆಗೂಡಿಸಿರುವುದು ಸಂತಸದ ವಿಚಾರ. ನಮ್ಮ ಪಕ್ಷ ನಿಮ್ಮ ಜೊತೆಗಿದೆ. ನೀವು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಸಂಪೂರ್ಣ ಸಹಕರಿಸಿ ಜೊತೆಗೂಡುತ್ತೇವೆ” ಎಂದರು.

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಸಮಾರೋಪದ ಮಾತುಗಳನ್ನಾಡಿ “ಆಸ್ಪತ್ರೆಯಲ್ಲಿ ಬೆಡ್ಡಿಲ್ಲ, ಸ್ಮಶಾನದಲ್ಲಿ ಜಾಗವಿಲ್ಲ” ಎಂಬ ಪರಿಸ್ಥಿತಿ ಏರ್ಪಟ್ಟಿದೆ. ಇಂತಹ ಹೊತ್ತಿನಲ್ಲಿ ಈ ಸಭೆಗೆ ವಿಶೇಷ ಮಹತ್ವವಿದೆ. ಸಮಾಲೋಚನಾ ಮಂಡಳಿಯನ್ನು ವಿಸ್ತರಿಸಿ, ಕೂಲಂಕೂಷ ಚರ್ಚೆ ನಡೆಸಿ ಮುಂದಿನ ಹೋರಾಟದ ಹೆಜ್ಜೆಗಳ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದರು.

ಸಂಕಟಕಾಲವನ್ನು ಜೊತೆಗೂಡಿ ಎದುರಿಸೋಣ, ಜನಪರ ಕ್ರಮಗಳಿಗಾಗಿ ಒಗ್ಗೂಡಿ ಹೋರಾಡೋಣ ಎಂದು ಸರ್ವ ಪಕ್ಷ ಮತ್ತು ಸರ್ವ ಸಂಘಟನೆಗಳ ಸಭೆ ನಿರ್ಣಯ ಮಂಡಿಸಿತು.

ನಿವೃತ್ತ ಐಎಎಸ್ ಅಧಿಕಾರಿ ಶಸಿಕಾಂತ್ ಸೆಂದಿಲ್, ಆಮ್ ಆದ್ಮಿ ಪಕ್ಷದ ವರಿಷ್ಟ ಪೃಥ್ವಿರೆಡ್ಡಿ, ಸ್ವರಾಜ್ ಇಂಡಿಯಾದ ಚಾಮರಾಸ ಮಾಲಿ ಪಾಟೀಲ್, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ರೈತ ಚಳವಳಿಯ ಮುಖಂಡರುಗಳಾದ ಬಡಗಲಪುರ ನಾಗೇಂದ್ರ, ಹೆಚ್. ಸಿ. ಬಸವರಾಜಪ್ಪ, ದಲಿತ ಸಂಘರ್ಷ ಸಮಿತಿಯ ಮುಂದಾಳುಗಳಾದ ಡಿ.ಜಿ. ಸಾಗರ್, ನಾಗಾವರ, ಅಲ್ಪಸಂಖ್ಯಾತ ಸಮುದಾದ ಮುಖಂಡರುಗಳಾದ ಯೂಸೂಫ್ ಕನಿ, ಅಫ್ಸರ್ ಕೊಡ್ಲಿಪೇಟೆ, ತಾಹೀರ್ ಹುಸೈನ್ ಮುಂತಾದವರು ಅಭಿಪ್ರಾಯ ಹಂಚಿಕೊಂಡರು.  ಸಲಹೆ ಮಾಡಿದರು. ಸಭೆಯಲ್ಲಿ 60ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದರು.

ಸಭೆಯಲ್ಲಿ ಈ ಕೆಳಕಂಡ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

  • ಕೋವಿಡ್ ಸಂಬಂಧಿತ ಎಲ್ಲಾ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ದುಡಿಯುವ ವ್ಯಕ್ತಿ ಮಡಿದ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕು. ಚಾಮರಾಜನಗರದಲ್ಲಿ ಸರ್ಕಾರಿ ವೈಫಲ್ಯದಿಂದಾಗಿ ಮೃತರಾದ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಬೇಕು.
  • ಎಲ್ಲಾ ವಯಸ್ಕರಿಗೂ ಸರ್ಕಾರ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು.
  • ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ಸಮಗ್ರ ಪಡಿತರ ಕಿಟ್ ಅನ್ನು ಸರ್ಕಾರ ವಿತರಿಸಬೇಕು.
  • ಲಾಕ್ ಡೌನಿನಿಂದ ಕೆಲಸ ಇಲ್ಲದಾಗಿರುವ ಎಲ್ಲಾ ಶ್ರಮಜೀವಿ ಕುಟುಂಬಗಳಿಗೆ ಕೂಡಲೇ 5000 ನಗದು ವರ್ಗಾವಣೆ ಮಾಡಬೇಕು.
  • ಮೂರನೇ ಅಲೆಗೆ ತಯಾರಿಯನ್ನೂ ಮಾಡಿಕೊಳ್ಳಬೇಕು. ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಬೆಡ್ ಮತ್ತು ಆಕ್ಸಿಜನ್ ಲಭ್ಯತೆಯನ್ನು ತೀವ್ರಗತಿಯಲ್ಲಿ ಹೆಚ್ಚಿಸಬೇಕು. ಗ್ರಾಮ ಮಟ್ಟದಲ್ಲಿ ಕೋವಿಡ್ ನಿರ್ವಹಣಾ ಸಮಿತಿಗಳನ್ನು ರಚಿಸಿ ಶಕ್ತಿಯುತಗೊಳಿಸಬೇಕು.
  • ಮುಂಗಾರು ಕೃಷಿ ಪ್ರಾರಂಭವಾಗುತ್ತಿದ್ದು ಈ ಸಂದರ್ಭದಲ್ಲಿ ಸರ್ಕಾರ ಗೊಬ್ಬರದ ಬೆಲೆಯನ್ನು ಏರಿಸಿರುವುದು ಖಂಡನಾರ್ಹ. ಕೂಡಲೇ ಗೊಬ್ಬರ, ಬೀಜ ಮತ್ತು ಕೃಷಿ ಪರಿಕರಗಳ ಬೆಲೆಯನ್ನು ತಗ್ಗಿಸಬೇಕು ಮತ್ತು ಸಬ್ಸಿಡಿಯನ್ನು ಹೆಚ್ಚಿಸಬೇಕು.

ಸಭೆಗೆ ಗ್ರಾಮೀಣ ಕೂಲಿ ಕಾರ್ಮಿಕ ಸಂಘಟನೆಯ ಸ್ವರ್ಣ ಭಟ್ ಅವರು ಸ್ವಾಗತ ಬಯಸಿದರು. ಹಿರಿಯ ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕೋಮು ಸೌಹಾರ್ದ ವೇದಿಕೆಯ ಕೆ.ಎಲ್. ಅಶೋಕ್ ಸಭೆಯನ್ನು ನಿರೂಪಣೆ ಮಾಡಿದರು. ಕರ್ನಾಟಕ ಜನಶಕ್ತಿಯ ಅಧ್ಯಕ್ಷರಾದ ನೂರ್ ಶ್ರೀಧರ್ ಸಭೆಯ ನಿರ್ಣಯಗಳನ್ನು ಮಂಡಿಸಿದರು.


ಇದನ್ನೂ ಓದಿ: ಪ್ರಚಾರ ಬಯಸದೆ ಸದ್ದಿಲ್ಲದೆ ಜನಸೇವೆಯಲ್ಲಿ ತೊಡಗಿದ ಬಿಎಂಸಿ-92 ವೈದ್ಯರ ತಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...