Homeಕರೋನಾ ತಲ್ಲಣಕೋವಿಡ್‌ನಿಂದ ಯುಪಿ ಸಚಿವ ನಿಧನ: 2ನೆ ಅಲೆಗೆ ಯುಪಿ ಬಿಜೆಪಿಯ 5 ಶಾಸಕರು ಬಲಿ

ಕೋವಿಡ್‌ನಿಂದ ಯುಪಿ ಸಚಿವ ನಿಧನ: 2ನೆ ಅಲೆಗೆ ಯುಪಿ ಬಿಜೆಪಿಯ 5 ಶಾಸಕರು ಬಲಿ

- Advertisement -
- Advertisement -

ಉತ್ತರ ಪ್ರದೇಶದ ಕಂದಾಯ ಸಚಿವ ವಿಜಯ್ ಕಶ್ಯಪ್ ಮಂಗಳವಾರ ಗುರಗಾಂವ್ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ನಿಧನರಾದರು.

ಮುಜಫರ್‌ನಗರ ಜಿಲ್ಲೆಯ ಚಾರ್ತವಾಲ್ ಕ್ಷೇತ್ರದ ಶಾಸಕರಾಗಿದ್ದ ಕಶ್ಯಪ್ (56) ಗುರಗಾಂವ್‌ನ ಮೆದಾಂತ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ವೈರಸ್‌ಗೆ ಬಲಿಯಾದ ಮೂರನೇ ಯುಪಿ ಸಚಿವರು. ಕಳೆದ ವರ್ಷ ಉತ್ತರ ಪ್ರದೇಶದ ಮಂತ್ರಿಗಳಾದ ಕಮಲ್ ರಾಣಿ ವರುಣ್ ಮತ್ತು ಚೇತನ್ ಚೌಹಾನ್ ಸೋಂಕಿನಿಂದ ಸಾವನ್ನಪ್ಪಿದ್ದರು. ಕೋವಿಡ್‌ ಎರಡನೇ ಅಲೆಯಲ್ಲಿ ಉತ್ತರಪ್ರದೇಶದ ಬಿಜೆಪಿಯ ಐವರು ಶಾಸಕರು (ಕಶ್ಯಪ್ ಸೇರಿ) ಬಲಿಯಾಗಿದ್ದಾರೆ.

ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ. ಕಶ್ಯಪ್ ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳಿಗೆ ಬದುಕನ್ನು ಮೀಸಲಿಟ್ಟಿದ್ದರು ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶ ಸರ್ಕಾರದಲ್ಲಿ ಬಿಜೆಪಿ ಮುಖಂಡ ಮತ್ತು ಸಚಿವರಾದ ವಿಜಯ್ ಕಶ್ಯಪ್ ಅವರ ನಿಧನ ತುಂಬಾ ದುಃಖಕರವಾಗಿದೆ. ಅವರು ತಳಮಟ್ಟದ ಸಂಪರ್ಕ ಹೊಂದಿದ್ದ ನಾಯಕರಾಗಿದ್ದರು ಮತ್ತು ಯಾವಾಗಲೂ ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳಿಗೆ ಜೀವನವನ್ನು ಮೀಸಲಿಟ್ಟಿದ್ದರು. ಈ ದುಃಖದ ಕ್ಷಣದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ. ಓಂ ಶಾಂತಿ!” ಎಂದು ಪ್ರಧಾನಿ ಪಿಎಂ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಕಶ್ಯಪ್ ನಿಧನದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

“ಚಾರ್ತವಾಲ್‌ನ ಶಾಸಕರಾದ ಕಶ್ಯಪ್ ಅವರು ಮಂತ್ರಿಯಾಗಿ ತಮ್ಮ ಕರ್ತವ್ಯವನ್ನು ಶ್ರದ್ಧೆಯಿಂದ ನಿರ್ವಹಿಸಿದ ಜನಪ್ರಿಯ ನಾಯಕರಾಗಿದ್ದರು. ಅವರ ಸಾವಿನಲ್ಲಿ ಜನರು ತಮ್ಮ ನಿಜವಾದ ಹಿತೈಷಿಯನ್ನು ಕಳೆದುಕೊಂಡಿದ್ದಾರೆ” ಎಂದು ಯೋಗಿ ಆದಿತ್ಯನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವರ ನಿಧನಕ್ಕೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಧಾ ಮೋಹನ್ ಸಿಂಗ್ ಮತ್ತು ಇತರ ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಎರಡನೇ ಕೊರೋನಾ ವೈರಸ್ ಅಲೆಯಲ್ಲಿ ಮೃತಪಟ್ಟ ಐದನೇ ಉತ್ತರಪ್ರದೇಶದ ಬಿಜೆಪಿ ಶಾಸಕ ಕಶ್ಯಪ್.

ಇದಕ್ಕೂ ಮುನ್ನ ಸಾಲೋನ್ ಕ್ಷೇತ್ರದ ಶಾಸಕ ದಾಲ್ ಬಹದ್ದೂರ್ ಕೋರಿ, ಕೇಸರ್ ಸಿಂಗ್ ಗಂಗ್ವಾರ್ (ನವಾಬ್‌ಗಂಜ್), ರಮೇಶ್ ದಿವಾಕರ್ (ಔರಿಯಾ) ಮತ್ತು ಸುರೇಶ್ ಕುಮಾರ್ ಶ್ರೀವಾಸ್ತವ (ಲಕ್ನೋ ವೆಸ್ಟ್) ಸೋಂಕಿಗೆ ಬಲಿಯಾಗಿದ್ದರು.


ಇದನ್ನೂ ಓದಿ: ಹೆಚ್ಚು ಮಾತನಾಡಿದರೇ ನನ್ನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಬಹುದು: ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...