Homeಕರೋನಾ ತಲ್ಲಣಕೋವಿಡ್‌ನಿಂದ ಯುಪಿ ಸಚಿವ ನಿಧನ: 2ನೆ ಅಲೆಗೆ ಯುಪಿ ಬಿಜೆಪಿಯ 5 ಶಾಸಕರು ಬಲಿ

ಕೋವಿಡ್‌ನಿಂದ ಯುಪಿ ಸಚಿವ ನಿಧನ: 2ನೆ ಅಲೆಗೆ ಯುಪಿ ಬಿಜೆಪಿಯ 5 ಶಾಸಕರು ಬಲಿ

- Advertisement -
- Advertisement -

ಉತ್ತರ ಪ್ರದೇಶದ ಕಂದಾಯ ಸಚಿವ ವಿಜಯ್ ಕಶ್ಯಪ್ ಮಂಗಳವಾರ ಗುರಗಾಂವ್ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ನಿಧನರಾದರು.

ಮುಜಫರ್‌ನಗರ ಜಿಲ್ಲೆಯ ಚಾರ್ತವಾಲ್ ಕ್ಷೇತ್ರದ ಶಾಸಕರಾಗಿದ್ದ ಕಶ್ಯಪ್ (56) ಗುರಗಾಂವ್‌ನ ಮೆದಾಂತ ಆಸ್ಪತ್ರೆಯಲ್ಲಿ ನಿಧನರಾದರು.

ಅವರು ವೈರಸ್‌ಗೆ ಬಲಿಯಾದ ಮೂರನೇ ಯುಪಿ ಸಚಿವರು. ಕಳೆದ ವರ್ಷ ಉತ್ತರ ಪ್ರದೇಶದ ಮಂತ್ರಿಗಳಾದ ಕಮಲ್ ರಾಣಿ ವರುಣ್ ಮತ್ತು ಚೇತನ್ ಚೌಹಾನ್ ಸೋಂಕಿನಿಂದ ಸಾವನ್ನಪ್ಪಿದ್ದರು. ಕೋವಿಡ್‌ ಎರಡನೇ ಅಲೆಯಲ್ಲಿ ಉತ್ತರಪ್ರದೇಶದ ಬಿಜೆಪಿಯ ಐವರು ಶಾಸಕರು (ಕಶ್ಯಪ್ ಸೇರಿ) ಬಲಿಯಾಗಿದ್ದಾರೆ.

ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ. ಕಶ್ಯಪ್ ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳಿಗೆ ಬದುಕನ್ನು ಮೀಸಲಿಟ್ಟಿದ್ದರು ಎಂದು ಹೇಳಿದ್ದಾರೆ.

“ಉತ್ತರ ಪ್ರದೇಶ ಸರ್ಕಾರದಲ್ಲಿ ಬಿಜೆಪಿ ಮುಖಂಡ ಮತ್ತು ಸಚಿವರಾದ ವಿಜಯ್ ಕಶ್ಯಪ್ ಅವರ ನಿಧನ ತುಂಬಾ ದುಃಖಕರವಾಗಿದೆ. ಅವರು ತಳಮಟ್ಟದ ಸಂಪರ್ಕ ಹೊಂದಿದ್ದ ನಾಯಕರಾಗಿದ್ದರು ಮತ್ತು ಯಾವಾಗಲೂ ಸಾರ್ವಜನಿಕ ಹಿತಾಸಕ್ತಿ ಕಾರ್ಯಗಳಿಗೆ ಜೀವನವನ್ನು ಮೀಸಲಿಟ್ಟಿದ್ದರು. ಈ ದುಃಖದ ಕ್ಷಣದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರಿಗೆ ನನ್ನ ಸಂತಾಪ. ಓಂ ಶಾಂತಿ!” ಎಂದು ಪ್ರಧಾನಿ ಪಿಎಂ ಮೋದಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಕಶ್ಯಪ್ ನಿಧನದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

“ಚಾರ್ತವಾಲ್‌ನ ಶಾಸಕರಾದ ಕಶ್ಯಪ್ ಅವರು ಮಂತ್ರಿಯಾಗಿ ತಮ್ಮ ಕರ್ತವ್ಯವನ್ನು ಶ್ರದ್ಧೆಯಿಂದ ನಿರ್ವಹಿಸಿದ ಜನಪ್ರಿಯ ನಾಯಕರಾಗಿದ್ದರು. ಅವರ ಸಾವಿನಲ್ಲಿ ಜನರು ತಮ್ಮ ನಿಜವಾದ ಹಿತೈಷಿಯನ್ನು ಕಳೆದುಕೊಂಡಿದ್ದಾರೆ” ಎಂದು ಯೋಗಿ ಆದಿತ್ಯನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅವರ ನಿಧನಕ್ಕೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಧಾ ಮೋಹನ್ ಸಿಂಗ್ ಮತ್ತು ಇತರ ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಎರಡನೇ ಕೊರೋನಾ ವೈರಸ್ ಅಲೆಯಲ್ಲಿ ಮೃತಪಟ್ಟ ಐದನೇ ಉತ್ತರಪ್ರದೇಶದ ಬಿಜೆಪಿ ಶಾಸಕ ಕಶ್ಯಪ್.

ಇದಕ್ಕೂ ಮುನ್ನ ಸಾಲೋನ್ ಕ್ಷೇತ್ರದ ಶಾಸಕ ದಾಲ್ ಬಹದ್ದೂರ್ ಕೋರಿ, ಕೇಸರ್ ಸಿಂಗ್ ಗಂಗ್ವಾರ್ (ನವಾಬ್‌ಗಂಜ್), ರಮೇಶ್ ದಿವಾಕರ್ (ಔರಿಯಾ) ಮತ್ತು ಸುರೇಶ್ ಕುಮಾರ್ ಶ್ರೀವಾಸ್ತವ (ಲಕ್ನೋ ವೆಸ್ಟ್) ಸೋಂಕಿಗೆ ಬಲಿಯಾಗಿದ್ದರು.


ಇದನ್ನೂ ಓದಿ: ಹೆಚ್ಚು ಮಾತನಾಡಿದರೇ ನನ್ನ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಬಹುದು: ಬಿಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...