Homeಕರ್ನಾಟಕಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

ಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಕೊರೊನಾ ಎರಡನೆ ಅಲೆಗೆ ಸಿಲುಕಿ ನಿರುದ್ಯೋಗಿಗಳಾಗಿರುವ ರಾಜ್ಯದ ನೋಂದಾಯಿತ ಹಾಗೂ ವಲಸೆ ಕಾರ್ಮಿಕರ ‌ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಪ್ರತಿ ತಿಂಗಳಿಗೆ 10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದಾರೆ.

ಈಗಾಗಲೆ ಮೇ 15 ರಿಂದ ಕೇಂದ್ರ ಕಾರ್ಮಿಕ ಸಂಘಟನೆಗಳ ಅಡಿಯಲ್ಲಿ ಸಂಯೋಜನೆಗೊಂಡಿರುವ ‘ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ನೇತೃತ್ವದಲ್ಲಿ ಸುಮಾರು ‌ಹತ್ತು ಸಾವಿರಕ್ಕೂ ಅಧಿಕ ನಿರ್ಮಾಣ ವಲಯದ ಕಾರ್ಮಿಕರು ತಮ್ಮ ಕುಟುಂಬ ಸಹಿತ ಮನೆ ಮನೆಗಳ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ಯಶಸ್ವಿ ಪ್ರಚಾರ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಇದೀಗ‌ ಮೇ 17 ರಿಂದ 21 ರವರೆಗೂ ಕಟ್ಟಡ ಕಾರ್ಮಿಕರು ಹತ್ತು ಪ್ರಮುಖ ಬೇಡಿಕೆಗಳಿಗಾಗಿ ಅನ್‌ಲೈನ್ ಪ್ರಚಾರ ಸಭೆಗಳನ್ನು ಹಮ್ಮಿಕೊಂಡಿದ್ದು, ಸರಕಾರದ ಗಮನ ಸೆಳೆಯುತ್ತಿದೆ.‌ ಕಲ್ಯಾಣ ಮಂಡಳಿ ಮತ್ತು ಸರ್ಕಾರ ಕೂಡಲೆ‌ ಪರಿಹಾರ ಪ್ಯಾಕೇಜ್ ಘೋಷಿಸದಿದ್ದರೆ ಮೇ 21 ರಂದು ರಾಜ್ಯದ ಕಾರ್ಮಿಕ ನಿರೀಕ್ಷಕರ ಕಚೇರಿಗಳು ಮತ್ತು ಜಿಲ್ಲಾ ಕಾರ್ಮಿಕಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರಿನ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ‌ಮುಂದೆ ದೈಹಿಕ‌ ಅಂತರ ಕಾಪಾಡಿಕೊಂಡು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಈ ಪ್ರತಿಭಟನೆಗೆ ಕಾರ್ಮಿಕರ ಸಂಘಟನೆಗಳಾದ CITU, INTUC, NCL, AITUC, HMS, AICCTU, AIUTUC, TUCC ಬೆಂಬಲ ನೀಡಿದ್ದು, ‘ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ಅಡಿಯಲ್ಲಿ ಒಂದಾಗಿವೆ.

ಕಟ್ಟಡ ಕಾರ್ಮಿಕರ ಪ್ರಮುಖ ಬೇಡಿಕೆಗಳಿವು

  • ಕೂಡಲೇ ಮಂಡಳಿಯಲ್ಲಿ ನೋಂದಾಯಿತವಾದ ಎಲ್ಲಾ ಕಾರ್ಮಿಕರಿಗೂ ಕೊರೊನಾ ಎರಡನೇ ‌ಅಲೆಯ ಪರಿಹಾರವೆಂದು ತಿಂಗಳಿಗೆ‌ ರೂ 10 ಸಾವಿರ ಹಣವನ್ನು ಮುಂದಿನ ಕನಿಷ್ಟ ಮೂರು ತಿಂಗಳು ಹಾಲಿ ಮಂಡಳಿಯಲ್ಲಿ ನೋಂದಾವಣೆಯಾಗಿರುವ ಮತ್ತು ನೋಂದಾವಣೆಗಾಗಿ  ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲ ಕಾರ್ಮಿಕರ ಬ್ಯಾಂಕ್ ‌ಖಾತೆಗೆ ಮೇ 1 ರಿಂದಲೇ ಅನ್ವಯವಾಗುವಂತೆ ಹಣ ವರ್ಗಾವಣೆಮಾಡಬೇಕು.
  • ಕಳೆದ ವರ್ಷ ಘೋಷಿಸಲಾದ ಕೊರೊನಾ ಪರಿಹಾರ ರೂ. 5000 ಹಣ ಬಾಕಿ ಇರುವ 1 ಲಕ್ಷ ಕಾರ್ಮಿಕರಿಗೆ ಕೂಡಲೇ ಹಣ ವರ್ಗಾವಣೆಮಾಡಬೇಕು.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

  • ಕೊರೊನಾ ಸಮಯದಲ್ಲಿ ಶೈಕ್ಷಣಿಕ ಮತ್ತು ಪಿಂಚಣಿ, ಮದುವೆ, ವೈದ್ಯಕೀಯ ಮೊದಲಾದ  ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಮೇ 30 ರವರೆಗೆ ವಿಸ್ತರಿಸಲಾದ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಿ ಆದೇಶ‌ ಮಾಡಬೇಕು.
  • ಅರ್ಜಿ ಸಲ್ಲಿಸಿ ಇತ್ಯರ್ಥವಾಗದೇ ಉಳಿದಿರುವ ಎಲ್ಲಾ ಫಲಾನುಭವಿಗಳ ಸೌಲಭ್ಯಗಳ ಅರ್ಜಿಗಳನ್ನು‌ಕೂಡಲೇ ಇತ್ಯರ್ಥಪಡಿಸಿ‌ ಅವರ‌ ಖಾತೆಗೆ ಹಣ ಜಮಾ‌ ಮಾಡಬೇಕು.
  • ಕೊರೊನಾ ಎರಡನೆ ಅಲೆಯಿಂದ ಮತ್ತೆ ಸಂಕಷ್ಟಕ್ಕೆ ಸಿಲುಕಿರುವ ಅಂತರ ರಾಜ್ಯ ಮತ್ತು‌ ಅಂತರ ಜಿಲ್ಲೆಗಳ ಬಹುತೇಕ ಎಲ್ಲ ವಲಸೆ ಕಾರ್ಮಿಕರು ಈಗಾಗಲೇ ಜೀವ ಭಯದಿಂದ ಬೆಂಗಳೂರು ಮತ್ತು ಕರ್ನಾಟಕವನ್ನು ತೊರೆದು ಹೋಗಿದ್ದಾರೆ. ಆದಾಗ್ಯೂ ಇನ್ನೂ ಯಾರಾದರೂ ಇಲ್ಲಿ ಉಳಿದಿದ್ದರೆ ಅಂತಹ ಕಾರ್ಮಿಕರಿಗೆ ಮತ್ತು ಅವರ ಕುಟುಂಬಕ್ಕೆ ಉಚಿತ ಊಟ, ವಸತಿ‌ ಮತ್ತು ಅವರು ತಮ್ಮ ಊರುಗಳಿಗೆ ತೆರಳಲು ಬಯಸಿದರೆ ಅಂತಹವರಿಗೆ ಉಚಿತ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ರಾಜ್ಯದ ಬಿಲ್ಡಡ್‌ ಅಸೋಸಿಯೇಷನ್ (ಕ್ರೇಡಾಯಿ) ಅವರ ಜೊತೆ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕು.
  • ಕಲ್ಯಾಣ ಮಂಡಳಿಯು ವಲಸೆ ಕಾರ್ಮಿಕರಿಗೆ ರೇಷನ್ ಕಿಟ್ ನೀಡಲು ಉದ್ದೇಶಿಸಿದ್ದು, ಅದರ ಬದಲಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾವಣೆ ಮಾಡಬೇಕು. ಇದು ಕೊರೊನಾ ಹರಡದೆ ಇರಲು ಸಹಾಯ ಮಾಡುತ್ತದೆ.
  • ಕೊರೊನಾ ಎರಡನೇ ಅಲೆಯು ತೀವ್ರ ಸ್ವರೂಪ ಪಡೆದುಕೊಂಡಿದೆ ಮತ್ತು ಮೂರನೇ ಮತ್ತು ನಾಲ್ಕನೇ ಅಲೆಯು ಇದೇ ಅಕ್ಟೋಬರ್ ತಿಂಗಳಿಂದ ತೀವ್ರಗೊಳ್ಳಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಉಚಿತವಾದ ಲಸಿಕೆಯನ್ನು ಒಂದು ಕಾಲ ಮಿತಿಯಲ್ಲಿ ಹಾಕಲು ಕ್ರಮವಹಿಸಬೇಕು.
  • ಸೋಂಕಿನಿಂದ ಮೃತಪಡುವ ನೋಂದಾಯಿತ ಪ್ರತಿ ಕಟ್ಟಡ ಕಾರ್ಮಿಕ ಅಥವಾ ಸಾವಿಗೀಡಾಗುವ ಕುಟುಂಬದ ಸದಸ್ಯರಿಗೆ ಕನಿಷ್ಟ 10 ಲಕ್ಷ ರೂ. ಗಳ ವಿಶೇಷ ಪರಿಹಾರ ಧನವನ್ನು ಪ್ರಕಟಿಸಬೇಕು. ನೋಂದಾಯಿತರಲ್ಲದ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಕನಿಷ್ಟ 5 ಲಕ್ಷ ಪರಿಹಾರ ನೀಡಬೇಕು ಮತ್ತು ಕೊರೊನಾ ಸೋಂಕಿಗೊಳಗಾಗಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುವ ಕಟ್ಡಡ ಕಾರ್ಮಿಕರ ಮತ್ತು ಅವರ ಕುಟುಂಬದವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಮಂಡಳಿಯೇ ಭರಿಸಬೇಕು.

ಇದನ್ನೂ ಓದಿ: ಸಾಲ ಕೊಡಲು ಹಿಂದೇಟು: ಬ್ಯಾಂಕ್‌ಗಳ ಮುಂದೆ ಕಸ ಸುರಿದ ಪೌರ ಕಾರ್ಮಿಕರು!

  • ಕೊರೊನಾ ಎರಡನೆ ಅಲೆ‌ ವ್ಯಾಪಕವಾಗಿದೆ. ಇದರಿಂದ ಕಟ್ಟಡ ನಿರ್ಮಾಣ ವಲಯ ಮತ್ತು ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೂಡಲೇ ಕಲ್ಯಾಣ ಮಂಡಳಿ ಸಭೆ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನಾಯಕರ ಆನ್‌‌ಲೈನ್‌ ಸಭೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಕೂಡಲೇ ಕರೆದು ಚರ್ಚಿಸಬೇಕು.
  • ಕೊರೊನಾ ಮೊದಲನೇ ಅಲೆ ಸಂದರ್ಭದಲ್ಲಿ ವಿತರಿಸಲಾದ ರೇಷನ್ ಕಿಟ್‌ಗಳು ನೈಜ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ದೊರೆಯದಿರುವ ಬಗ್ಗೆ ನಾವು ಹಿಂದಯೇ ದೂರುಗಳನ್ನು ನೀಡಿದ್ದೇವು ಅಲ್ಲದೆ ವಿತರಣೆ ಮಾಡಿದ್ದು ಕಳಪೆ ಪದಾರ್ಥಗಳಿಂದ ಕೂಡಿದ್ದವು. ಟೂಲ್‌ಕಿಟ್ ವಿತರಣೆ‌ಯು ಕಳಪೆ ಗುಣಮಟ್ಟದಿಂದ ಕೂಡಿದ್ದ ಬಳಕೆಗೆ ಯೋಗ್ಯವಾಗಿಲ್ಲ. ಈ ಎಲ್ಲ ಖರೀದಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆಸಿರುವ ಬಗ್ಗೆ ಅನುಮಾನಗಳಿವೆ ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು.
  • ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಕಲ್ಯಾಣ ಮಂಡಳಿ ವಸ್ತುಗಳ ರೂಪದಲ್ಲಿ ವಿತರಣೆ ಮಾಡುವುದನ್ನು ನಿರ್ಬಂಧಿಸಿದ್ದರೂ ಮಂಡಳಿಯು ಟೂಲ್‌ಕಿಟ್ ಗಳ ವಿತರಣೆಗೆ ಟೆಂಡರ್ ಕರೆದಿರುವುದು ಸರಿಯಲ್ಲ ಈ ಬಗ್ಗೆ ನಾವು ಆಕ್ಷೇಪ ವ್ಯಕ್ತಪಡಿಸಿ ಮನವಿ ಸಲ್ಲಿಸಿದರೂ‌ ಈ ಬಗ್ಗೆ ಕ್ರಮವಹಿಸದಿರುವುದು ಉತ್ತಮ ನಡೆಯಲ್ಲ ಕೂಡಲೇ ಅ ಪ್ರಕ್ರಿಯೆ ನಿಲ್ಲಿಸಬೇಕು.

ಇದನ್ನೂ ಓದಿ: ಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...