Homeಕರ್ನಾಟಕಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

ಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

- Advertisement -
- Advertisement -

ಕೊರೊನಾ ಎರಡನೆ ಅಲೆಗೆ ಸಿಲುಕಿ ನಿರುದ್ಯೋಗಿಗಳಾಗಿರುವ ರಾಜ್ಯದ ನೋಂದಾಯಿತ ಹಾಗೂ ವಲಸೆ ಕಾರ್ಮಿಕರ ‌ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಪ್ರತಿ ತಿಂಗಳಿಗೆ 10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಮೇ 15 ರಿಂದ ತೀವ್ರ ಹೋರಾಟ ನಡೆಸುತ್ತಿದ್ದಾರೆ.

ಈಗಾಗಲೆ ಮೇ 15 ರಿಂದ ಕೇಂದ್ರ ಕಾರ್ಮಿಕ ಸಂಘಟನೆಗಳ ಅಡಿಯಲ್ಲಿ ಸಂಯೋಜನೆಗೊಂಡಿರುವ ‘ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ನೇತೃತ್ವದಲ್ಲಿ ಸುಮಾರು ‌ಹತ್ತು ಸಾವಿರಕ್ಕೂ ಅಧಿಕ ನಿರ್ಮಾಣ ವಲಯದ ಕಾರ್ಮಿಕರು ತಮ್ಮ ಕುಟುಂಬ ಸಹಿತ ಮನೆ ಮನೆಗಳ ಮುಂದೆ ಭಿತ್ತಿಪತ್ರಗಳನ್ನು ಹಿಡಿದು ಯಶಸ್ವಿ ಪ್ರಚಾರ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ರೈತರು, ಕಾರ್ಮಿಕರು ಮತ್ತು ಪ್ರಜಾಪ್ರಭುತ್ವವನ್ನು ಉಳಿಸಿ: ವಿರೋಧ ಪಕ್ಷಗಳಿಂದ ಮೌನ ಪ್ರತಿಭಟನೆ

ಇದೀಗ‌ ಮೇ 17 ರಿಂದ 21 ರವರೆಗೂ ಕಟ್ಟಡ ಕಾರ್ಮಿಕರು ಹತ್ತು ಪ್ರಮುಖ ಬೇಡಿಕೆಗಳಿಗಾಗಿ ಅನ್‌ಲೈನ್ ಪ್ರಚಾರ ಸಭೆಗಳನ್ನು ಹಮ್ಮಿಕೊಂಡಿದ್ದು, ಸರಕಾರದ ಗಮನ ಸೆಳೆಯುತ್ತಿದೆ.‌ ಕಲ್ಯಾಣ ಮಂಡಳಿ ಮತ್ತು ಸರ್ಕಾರ ಕೂಡಲೆ‌ ಪರಿಹಾರ ಪ್ಯಾಕೇಜ್ ಘೋಷಿಸದಿದ್ದರೆ ಮೇ 21 ರಂದು ರಾಜ್ಯದ ಕಾರ್ಮಿಕ ನಿರೀಕ್ಷಕರ ಕಚೇರಿಗಳು ಮತ್ತು ಜಿಲ್ಲಾ ಕಾರ್ಮಿಕಾಧಿಕಾರಿಗಳ ಕಚೇರಿ ಹಾಗೂ ಬೆಂಗಳೂರಿನ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿ ‌ಮುಂದೆ ದೈಹಿಕ‌ ಅಂತರ ಕಾಪಾಡಿಕೊಂಡು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಈ ಪ್ರತಿಭಟನೆಗೆ ಕಾರ್ಮಿಕರ ಸಂಘಟನೆಗಳಾದ CITU, INTUC, NCL, AITUC, HMS, AICCTU, AIUTUC, TUCC ಬೆಂಬಲ ನೀಡಿದ್ದು, ‘ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ’ಯ ಅಡಿಯಲ್ಲಿ ಒಂದಾಗಿವೆ.

ಕಟ್ಟಡ ಕಾರ್ಮಿಕರ ಪ್ರಮುಖ ಬೇಡಿಕೆಗಳಿವು

  • ಕೂಡಲೇ ಮಂಡಳಿಯಲ್ಲಿ ನೋಂದಾಯಿತವಾದ ಎಲ್ಲಾ ಕಾರ್ಮಿಕರಿಗೂ ಕೊರೊನಾ ಎರಡನೇ ‌ಅಲೆಯ ಪರಿಹಾರವೆಂದು ತಿಂಗಳಿಗೆ‌ ರೂ 10 ಸಾವಿರ ಹಣವನ್ನು ಮುಂದಿನ ಕನಿಷ್ಟ ಮೂರು ತಿಂಗಳು ಹಾಲಿ ಮಂಡಳಿಯಲ್ಲಿ ನೋಂದಾವಣೆಯಾಗಿರುವ ಮತ್ತು ನೋಂದಾವಣೆಗಾಗಿ  ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲ ಕಾರ್ಮಿಕರ ಬ್ಯಾಂಕ್ ‌ಖಾತೆಗೆ ಮೇ 1 ರಿಂದಲೇ ಅನ್ವಯವಾಗುವಂತೆ ಹಣ ವರ್ಗಾವಣೆಮಾಡಬೇಕು.
  • ಕಳೆದ ವರ್ಷ ಘೋಷಿಸಲಾದ ಕೊರೊನಾ ಪರಿಹಾರ ರೂ. 5000 ಹಣ ಬಾಕಿ ಇರುವ 1 ಲಕ್ಷ ಕಾರ್ಮಿಕರಿಗೆ ಕೂಡಲೇ ಹಣ ವರ್ಗಾವಣೆಮಾಡಬೇಕು.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದೊಂದಿಗೆ ಕೈಜೋಡಿಸಿದ ದೊಡ್ಡ ಸಂಖ್ಯೆಯ ಕೃಷಿ ಕಾರ್ಮಿಕರು!

  • ಕೊರೊನಾ ಸಮಯದಲ್ಲಿ ಶೈಕ್ಷಣಿಕ ಮತ್ತು ಪಿಂಚಣಿ, ಮದುವೆ, ವೈದ್ಯಕೀಯ ಮೊದಲಾದ  ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಮೇ 30 ರವರೆಗೆ ವಿಸ್ತರಿಸಲಾದ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಿ ಆದೇಶ‌ ಮಾಡಬೇಕು.
  • ಅರ್ಜಿ ಸಲ್ಲಿಸಿ ಇತ್ಯರ್ಥವಾಗದೇ ಉಳಿದಿರುವ ಎಲ್ಲಾ ಫಲಾನುಭವಿಗಳ ಸೌಲಭ್ಯಗಳ ಅರ್ಜಿಗಳನ್ನು‌ಕೂಡಲೇ ಇತ್ಯರ್ಥಪಡಿಸಿ‌ ಅವರ‌ ಖಾತೆಗೆ ಹಣ ಜಮಾ‌ ಮಾಡಬೇಕು.
  • ಕೊರೊನಾ ಎರಡನೆ ಅಲೆಯಿಂದ ಮತ್ತೆ ಸಂಕಷ್ಟಕ್ಕೆ ಸಿಲುಕಿರುವ ಅಂತರ ರಾಜ್ಯ ಮತ್ತು‌ ಅಂತರ ಜಿಲ್ಲೆಗಳ ಬಹುತೇಕ ಎಲ್ಲ ವಲಸೆ ಕಾರ್ಮಿಕರು ಈಗಾಗಲೇ ಜೀವ ಭಯದಿಂದ ಬೆಂಗಳೂರು ಮತ್ತು ಕರ್ನಾಟಕವನ್ನು ತೊರೆದು ಹೋಗಿದ್ದಾರೆ. ಆದಾಗ್ಯೂ ಇನ್ನೂ ಯಾರಾದರೂ ಇಲ್ಲಿ ಉಳಿದಿದ್ದರೆ ಅಂತಹ ಕಾರ್ಮಿಕರಿಗೆ ಮತ್ತು ಅವರ ಕುಟುಂಬಕ್ಕೆ ಉಚಿತ ಊಟ, ವಸತಿ‌ ಮತ್ತು ಅವರು ತಮ್ಮ ಊರುಗಳಿಗೆ ತೆರಳಲು ಬಯಸಿದರೆ ಅಂತಹವರಿಗೆ ಉಚಿತ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ರಾಜ್ಯದ ಬಿಲ್ಡಡ್‌ ಅಸೋಸಿಯೇಷನ್ (ಕ್ರೇಡಾಯಿ) ಅವರ ಜೊತೆ ಮಾತುಕತೆ ನಡೆಸಿ ವ್ಯವಸ್ಥೆ ಮಾಡಬೇಕು.
  • ಕಲ್ಯಾಣ ಮಂಡಳಿಯು ವಲಸೆ ಕಾರ್ಮಿಕರಿಗೆ ರೇಷನ್ ಕಿಟ್ ನೀಡಲು ಉದ್ದೇಶಿಸಿದ್ದು, ಅದರ ಬದಲಾಗಿ ಕಾರ್ಮಿಕರ ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾವಣೆ ಮಾಡಬೇಕು. ಇದು ಕೊರೊನಾ ಹರಡದೆ ಇರಲು ಸಹಾಯ ಮಾಡುತ್ತದೆ.
  • ಕೊರೊನಾ ಎರಡನೇ ಅಲೆಯು ತೀವ್ರ ಸ್ವರೂಪ ಪಡೆದುಕೊಂಡಿದೆ ಮತ್ತು ಮೂರನೇ ಮತ್ತು ನಾಲ್ಕನೇ ಅಲೆಯು ಇದೇ ಅಕ್ಟೋಬರ್ ತಿಂಗಳಿಂದ ತೀವ್ರಗೊಳ್ಳಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಟ್ಟಡ ನಿರ್ಮಾಣ ವಲಯದ ಕಾರ್ಮಿಕರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಉಚಿತವಾದ ಲಸಿಕೆಯನ್ನು ಒಂದು ಕಾಲ ಮಿತಿಯಲ್ಲಿ ಹಾಕಲು ಕ್ರಮವಹಿಸಬೇಕು.
  • ಸೋಂಕಿನಿಂದ ಮೃತಪಡುವ ನೋಂದಾಯಿತ ಪ್ರತಿ ಕಟ್ಟಡ ಕಾರ್ಮಿಕ ಅಥವಾ ಸಾವಿಗೀಡಾಗುವ ಕುಟುಂಬದ ಸದಸ್ಯರಿಗೆ ಕನಿಷ್ಟ 10 ಲಕ್ಷ ರೂ. ಗಳ ವಿಶೇಷ ಪರಿಹಾರ ಧನವನ್ನು ಪ್ರಕಟಿಸಬೇಕು. ನೋಂದಾಯಿತರಲ್ಲದ ಕಾರ್ಮಿಕರಿಗೆ ಮತ್ತು ಅವರ ಕುಟುಂಬದ ಸದಸ್ಯರಿಗೆ ಕನಿಷ್ಟ 5 ಲಕ್ಷ ಪರಿಹಾರ ನೀಡಬೇಕು ಮತ್ತು ಕೊರೊನಾ ಸೋಂಕಿಗೊಳಗಾಗಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುವ ಕಟ್ಡಡ ಕಾರ್ಮಿಕರ ಮತ್ತು ಅವರ ಕುಟುಂಬದವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಮಂಡಳಿಯೇ ಭರಿಸಬೇಕು.

ಇದನ್ನೂ ಓದಿ: ಸಾಲ ಕೊಡಲು ಹಿಂದೇಟು: ಬ್ಯಾಂಕ್‌ಗಳ ಮುಂದೆ ಕಸ ಸುರಿದ ಪೌರ ಕಾರ್ಮಿಕರು!

  • ಕೊರೊನಾ ಎರಡನೆ ಅಲೆ‌ ವ್ಯಾಪಕವಾಗಿದೆ. ಇದರಿಂದ ಕಟ್ಟಡ ನಿರ್ಮಾಣ ವಲಯ ಮತ್ತು ಅಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೂಡಲೇ ಕಲ್ಯಾಣ ಮಂಡಳಿ ಸಭೆ ಮತ್ತು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ನಾಯಕರ ಆನ್‌‌ಲೈನ್‌ ಸಭೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಕೂಡಲೇ ಕರೆದು ಚರ್ಚಿಸಬೇಕು.
  • ಕೊರೊನಾ ಮೊದಲನೇ ಅಲೆ ಸಂದರ್ಭದಲ್ಲಿ ವಿತರಿಸಲಾದ ರೇಷನ್ ಕಿಟ್‌ಗಳು ನೈಜ ಕಟ್ಟಡ ಮತ್ತು ವಲಸೆ ಕಾರ್ಮಿಕರಿಗೆ ದೊರೆಯದಿರುವ ಬಗ್ಗೆ ನಾವು ಹಿಂದಯೇ ದೂರುಗಳನ್ನು ನೀಡಿದ್ದೇವು ಅಲ್ಲದೆ ವಿತರಣೆ ಮಾಡಿದ್ದು ಕಳಪೆ ಪದಾರ್ಥಗಳಿಂದ ಕೂಡಿದ್ದವು. ಟೂಲ್‌ಕಿಟ್ ವಿತರಣೆ‌ಯು ಕಳಪೆ ಗುಣಮಟ್ಟದಿಂದ ಕೂಡಿದ್ದ ಬಳಕೆಗೆ ಯೋಗ್ಯವಾಗಿಲ್ಲ. ಈ ಎಲ್ಲ ಖರೀದಿಗಳಲ್ಲಿ ಸಾಕಷ್ಟು ಅವ್ಯವಹಾರ ನಡೆಸಿರುವ ಬಗ್ಗೆ ಅನುಮಾನಗಳಿವೆ ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು.
  • ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯವು ಕಲ್ಯಾಣ ಮಂಡಳಿ ವಸ್ತುಗಳ ರೂಪದಲ್ಲಿ ವಿತರಣೆ ಮಾಡುವುದನ್ನು ನಿರ್ಬಂಧಿಸಿದ್ದರೂ ಮಂಡಳಿಯು ಟೂಲ್‌ಕಿಟ್ ಗಳ ವಿತರಣೆಗೆ ಟೆಂಡರ್ ಕರೆದಿರುವುದು ಸರಿಯಲ್ಲ ಈ ಬಗ್ಗೆ ನಾವು ಆಕ್ಷೇಪ ವ್ಯಕ್ತಪಡಿಸಿ ಮನವಿ ಸಲ್ಲಿಸಿದರೂ‌ ಈ ಬಗ್ಗೆ ಕ್ರಮವಹಿಸದಿರುವುದು ಉತ್ತಮ ನಡೆಯಲ್ಲ ಕೂಡಲೇ ಅ ಪ್ರಕ್ರಿಯೆ ನಿಲ್ಲಿಸಬೇಕು.

ಇದನ್ನೂ ಓದಿ: ಖಾಸಗೀಕರಣ ವಿರೋಧಿ ದಿನಕ್ಕೆ ರೈತರು, ಕಾರ್ಮಿಕರು ಒಂದಾಗಿದ್ದಾರೆ- ಸಂಯುಕ್ತ ಕಿಸಾನ್ ಮೋರ್ಚಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...