Homeಮುಖಪುಟನಾರದ ಪ್ರಕರಣದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಸರು ಉಲ್ಲೇಖಿಸಿದ ಸಿಬಿಐ

ನಾರದ ಪ್ರಕರಣದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೆಸರು ಉಲ್ಲೇಖಿಸಿದ ಸಿಬಿಐ

- Advertisement -
- Advertisement -

2016 ರ ನಾರದ ಲಂಚ ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅವರ ಕಾನೂನು ಸಚಿವ ಮೊಲೊಯ್ ಘಟಕ್ ಮತ್ತು ಪಕ್ಷದ ಮುಖಂಡ ಕಲ್ಯಾಣ್ ಬ್ಯಾನರ್ಜಿ ಅವರ ಹೆಸರನ್ನು ಕೇಂದ್ರ ತನಿಖಾ ದಳ (ಸಿಬಿಐ) ತನ್ನ ಅರ್ಜಿಯಲ್ಲಿ ಸೇರಿಸಿದೆ.

ಕಲ್ಕತ್ತಾ ಹೈಕೋರ್ಟ್‌ನಲ್ಲಿ ಬುಧವಾರ ನಡೆದ ವಿಚಾರಣೆಯ ವೇಳೆ, ಈ ಪ್ರಕರಣವನ್ನು ರಾಜ್ಯದಿಂದ ವರ್ಗಾವಣೆ ಮಾಡಲು ಕೋರಿರುವ ಸಂಸ್ಥೆ, ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮತ್ತು ಈಗ ಜೈಲಿನಲ್ಲಿರುವ ನಾಲ್ವರು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದೆ.

‘ನಾರದಾ’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್‌ ಶಾಸಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಮ್ ಮತ್ತು ಮದನ್ ಮಿತ್ರಾ ಮತ್ತು ಮಾಜಿ ಟಿಎಂಸಿ, ಬಿಜೆಪಿ ನಾಯಕ ಸೋವನ್ ಚಟರ್ಜಿ ಅವರನ್ನು ಸೋಮವಾರ ಸಿಬಿಐ ಬಂಧಿಸಿದೆ.

ಇವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಿಬಿಐ ಕೋರಿಕೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅನುಮೋದಿಸಿದ ಕೆಲವೇ ದಿನಗಳಲ್ಲಿ ಈ ಬಂಧನ ನಡೆದಿದೆ.

ಇದನ್ನೂ ಓದಿ: ‘ನಾರದ’: ಸುವೆಂಧು ಅಧಿಕಾರಿ ಬಂಧನ ಯಾಕಿಲ್ಲ?- ಪ್ರಕರಣದ ದೂರುದಾರ ಮ್ಯಾಥ್ಯೂ ಸ್ಯಾಮ್ಯುಯೆಲ್ ಪ್ರಶ್ನೆ

ಸಚಿವರ ಬಂಧನದ ನಂತರ, ತೃಣಮೂಲ ಕಾರ್ಯಕರ್ತರ ಒಂದು ದೊಡ್ಡ ಗುಂಪು ಸಿಬಿಐನ ಕೋಲ್ಕತಾ ಕಚೇರಿಯ ಹೊರಗೆ ಜಮಾಯಿಸಿತ್ತು. ಅಲ್ಲಿಗೆ ತೆರಳಿದ್ದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಥಳದಲ್ಲಿಯೇ ಧರಣಿ ನಡೆಸಿದ್ದರು. ಮಂತ್ರಿಗಳನ್ನು ಸರಿಯಾದ ಕಾರ್ಯವಿಧಾನವಿಲ್ಲದೆ ಬಂಧಿಸಲಾಗಿದೆ. ಸಿಬಿಐ ನನ್ನನ್ನು ಸಹ ಬಂಧಿಸಬೇಕಾಗುತ್ತದೆ ಎಂದು ವಾದಿಸಿದ್ದರು.

ಸಿಬಿಐ ತನ್ನ ಅರ್ಜಿಯಲ್ಲಿ, “ತನಿಖಾ ಏಜೆನ್ಸಿಯನ್ನು ಭಯಭೀತಗೊಳಿಸುವ ಮತ್ತು ಅದರ ಶಾಸನಬದ್ಧ ಕಾರ್ಯಗಳನ್ನು ಮುಕ್ತವಾಗಿ ಮತ್ತು ನಿರ್ಭಯವಾಗಿ ನಿರ್ವಹಿಸುವುದನ್ನು ತಡೆಯುವ ವಿಚಿತ್ರ ಸನ್ನಿವೇಶ ಇಲ್ಲಿ ಎದುರಾಗಿದೆ” ಎಂದು ತಿಳಿಸಿದೆ.

ಬಂಧಿತ ನಾಲ್ವರು ನಾಯಕರು ಸೋಮವಾರ ಏಳು ಗಂಟೆಗಳ ನಂತರ ಜಾಮೀನು ಪಡೆದಿದ್ದರು ಆದರೆ ಏಜೆನ್ಸಿಯ ಮೇಲ್ಮನವಿಯ ನಂತರ ಅದೇ ದಿನ ಸಂಜೆ ಅದನ್ನು ಕೊಲ್ಕತ್ತಾ ಹೈಕೋರ್ಟ್ ತಡೆಹಿಡಿಯಿತು.

ತೃಣಮೂಲ ಕಾಂಗ್ರೆಸ್ ಈ ಸಮಯದಲ್ಲಿ ಸಿಬಿಐ ಸಚಿವರ ಬಂಧನ ಮಾಡಿರುವುದನ್ನು ಪ್ರಶ್ನಿಸಿದೆ. ದೀದಿ ವರ್ಸಸ್ ಮೋದಿ ಎಂಬಂತಿದ್ದ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಪಕ್ಷ ಜಯಗಳಿಸಿದ ಕೆಲವೇ ದಿನಗಳ ನಂತರ ಸಿಬಿಐ ಈ ಕ್ರಮ ಕೈಗೊಂಡಿದೆ.

ಮಾಜಿ ತೃಣಮೂಲ ಕಾಂಗ್ರೆಸ್ ಸಚಿವರಾದ ಸುವೇಂದು ಅಧಿಕಾರಿ ಈಗ ನಂದಿಗ್ರಾಮದ ಬಿಜೆಪಿ ಶಾಸಕರಾಗಿದ್ದಾರೆ. ಆದರೆ, ಅವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ದೂರುದಾರರು ಪ್ರಶ್ನಿಸಿದ್ದಾರೆ. ಜೊತೆಗೆ ಬಿಜೆಪಿಗೆ ಸೇರ್ಪಡೆಯಾದ ಮುಕುಲ್ ರಾಯ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಯಾಕೆ ಅನುಮತಿ ನೀಡಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಪಕ್ಷ ಪ್ರಶ್ನಿಸಿದೆ.


ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...