Homeಕರ್ನಾಟಕನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ನಿಗಮಗಳಿಗೆ ನೂರಾರು ಕೋಟಿಯಿದೆ; ಕೊರೊನಾ ಪರಿಹಾರಕ್ಕೆ ಹಣವಿಲ್ಲವೆ: ಕುಮಾರಸ್ವಾಮಿ ಪ್ರಶ್ನೆ

ಕೇರಳದಲ್ಲಿ 20,000 ಕೋಟಿ ಪ್ಯಾಕೇಜ್‌‌ ಘೋಷಿಸಲಾಗಿದೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ 1200 ಕೋಟಿ ಪರಿಹಾರ ಸಾಕೆ ಎಂದು ಅವರು ಕೇಳಿದ್ದಾರೆ.

- Advertisement -
- Advertisement -

ಜನಹಿತದ ಲಾಕ್‌ಡೌನ್‌ ಘೋಷಿಸಬೇಕು, ಅದರಲ್ಲಿ ಜನರಿಗೆ ಉಪಯೋಗವಾಗುವ ಪ್ಯಾಕೇಜ್‌ ಇರಬೇಕು ಎಂಬ ಜೆಡಿಎಸ್‌ನ ಆಗ್ರಹದ ನಂತರ ರಾಜ್ಯ ಸರ್ಕಾರ ಪ್ಯಾಕೇಜ್‌ ಘೋಷಿಸಿದೆ. ಆದರೆ, 6.5 ಕೋಟಿ ಜನಸಂಖ್ಯೆ ಇರುವ, ದೇಶಕ್ಕಾಗಿ ಅಪಾರ ಅರ್ಥಿಕ ಕೊಡುಗೆ ನೀಡುವ ಕರ್ನಾಟಕದಂತ ದೊಡ್ಡ ರಾಜ್ಯಕ್ಕೆ ಈ ಪ್ಯಾಕೇಜ್‌ ಅತ್ಯಂತ ಕಡಿಮೆ. ಇದು ಅವೈಜ್ಞಾನಿ, ಅಸಮರ್ಪಕ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌. ಡಿ. ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ಯಾಕೇಜ್ ಘೋಷಿಸಿದ ಬೆನ್ನಲ್ಲೇ ಟ್ವೀಟ್ ಮಾಡಿರುವ ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ಟ್ವೀಟ್‌ನಲ್ಲಿ “ಲಾಕ್‌ಡೌನ್‌ ಮಾಡಿ ಎಂದು ನಾನು ಮಾರ್ಚ್‌ನಲ್ಲೇ ಹೇಳಿದ್ದೆ. ಆದರೆ, ಘೋಷಿಸಲಿಲ್ಲ. ನೆರೆಯ ಕೇರಳದಲ್ಲಿ ಮಾರ್ಚ್‌ನಲ್ಲೇ ಲಾಕ್‌ಡೌನ್‌ ಜಾರಿಯಾಯಿತು. 20,000 ಕೋಟಿ ಪ್ಯಾಕೇಜ್‌ ಅನ್ನೂ ಘೋಷಿಸಲಾಯಿತು. ಕರ್ನಾಕಟದ ಎದುರು ಕೇರಳ ಎಲ್ಲ ದೃಷ್ಟಿಯಿಂದಲೂ ಸಣ್ಣ ರಾಜ್ಯ. ಆದರೆ, ಅವರಿಗಿಂತ ದೊಡ್ಡ ರಾಜ್ಯವಾದ ಕರ್ನಾಟಕಕ್ಕೆ ಈ 1200 ಕೋಟಿ ಪರಿಹಾರ ಸಾಕೆ?” ಎಂದು ಪ್ರಶ್ನಿಸಿದ್ದಾರೆ.

“ಆರ್ಥಿಕ ಸಂಕಷ್ಟದ ಮಧ್ಯೆ ಪ್ಯಾಕೇಜ್‌ ನೀಡುತ್ತಿರುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ನನ್ನಿಂದ ಅಧಿಕಾರ ಕಸಿದಾಗ ಇದೇ ಬಿಎಸ್‌ವೈ ಅವರು ರಾಜ್ಯದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದಿದ್ದರು. 2 ವರ್ಷದಲ್ಲಿ ಆರ್ಥಿಕ ದುಸ್ಥಿತಿ ಬಂದಿದ್ದು ಹೇಗೆ? ರಾಜಕೀಯಕ್ಕಾಗಿ ಮಾಡಿಕೊಂಡ ನಿಗಮಗಳಿಗೆ ನೂರಾರು ಕೋಟಿ ಹಣವಿರುವಾಗ ಜನರ ಪರಿಹಾರಕ್ಕಿಲ್ಲವೇ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಸೋಂಕಿನಿಂದ ಸಾವು ಹೆಚ್ಚುತ್ತಿದೆ; ಕೇಂದ್ರ ಜನರ ಗಮನ ಬೇರೆಡೆ ಸೆಳೆಯುತ್ತಿದೆ: ರಾಹುಲ್ ಗಾಂಧಿ ಆಕ್ರೋಶ

“ಸರ್ಕಾರ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಯಡಿಯೂರಪ್ಪ ಮಾತು ಒಪ್ಪೋಣ. ಆದರೆ, ನಿಗಮ-ಮಂಡಳಿಗಳಿಗೆ ಅನಗತ್ಯವಾಗಿ ತುಂಬಲಾಗಿರುವ ಬಿಜೆಪಿ ಕಾರ್ಯಕರ್ತರಿಗೆ ಹಣ ನೀಡಲು ಆರ್ಥಿಕ ಸಂಕಷ್ಟ ಇಲ್ಲವೇ? ಜನರೇ ನೀಡಿದ ಹಣವನ್ನು ಜನರಿಗೆ ನೀಡಲು ಮಾತ್ರ ಸಂಕಷ್ಟ ಎದುರಾಗಿದೆಯೇ? ನಿಮ್ಮ ಕಾರ್ಯಕರ್ತರಿಗೆ ನಿಗಮ-ಮಂಡಳಿ ನೆಪದಲ್ಲಿ ನೀಡುತ್ತಿರುವುದು ಜನರ ಹಣವಲ್ಲವೇ?” ಎಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಪ್ಯಾಕೇಜ್‌ನಲ್ಲಿ ಕೃಷಿ ರಂಗವನ್ನು ಹೂ ಬೆಳೆಗಾರರು, ಹಣ್ಣ-ತರಕಾರಿ ಬೆಳೆಗಾರರೆಂದು ಪ್ರತ್ಯೇಕಿಸಲಾಗಿದೆ. ಅತ್ಯಂತ ಅವೈಜ್ಞಾನಿಕ ಕ್ರಮವಿದು. ಒಟ್ಟು ಕೃಷಿ ಕ್ಷೇತ್ರ, ಒಟ್ಟು ರೈತ ಸಮುದಾಯ ಎಂಬ ಪರಿಕಲ್ಪನೆಯೇ ಇಲ್ಲಿಲ್ಲ. ಕೃಷಿ ಕ್ಷೇತ್ರದ ಇತರೆ ಕಸುಬುದಾರರನ್ನು ಪ್ಯಾಕೇಜ್‌ನಿಂದ ಹೊರಗಿಟ್ಟಿದ್ದು ಯಾಕೆ? ಪ್ಯಾಕೇಜ್‌ ಹಿಗ್ಗುತ್ತದೆ ಎಂಬ ಭಯವೇ?” ಅವರು ರಾಜ್ಯ ಸರ್ಕಾರಕ್ಕೆ ಪಶ್ನಿಸಿದ್ದಾರೆ.

“2.10 ಲಕ್ಷ ಚಾಲಕ ವರ್ಗಕ್ಕೆ ₹3000 ಪರಿಹಾರ ನೀಡುವುದಾಗಿ ಹೇಳಲಾಗಿದೆ. ಕಳೆದ ಬಾರಿಯ ಲಾಕ್‌ಡೌನ್‌ನಲ್ಲಿ 7.50 ಲಕ್ಷ ಇದ್ದ ಚಾಲಕರ ಸಂಖ್ಯೆ ಈ ಬಾರಿ 2.10 ಲಕ್ಷಕ್ಕೆ ಇಳಿದಿದೆ. ಚಾಲಕರಿಗೆ ಈಗ ಪರಿಹಾರಕ್ಕಿಂತಲೂ ಮುಖ್ಯವಾಗಿ, ಆರ್‌ಟಿಒ ಶುಲ್ಕಗಳು, ತೆರಿಗೆಯಿಂದ ವಿನಾಯಿತಿ ಸಿಗಬೇಕಿತ್ತು. ಈಗಿನ ಪರಿಹಾರದಿಂದ ಅವರ ಕುಟುಂಬ ನಡೆಯಲು ಸಾಧ್ಯವೇ?” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

“ಕೂಲಿ ಕಾರ್ಮಿಕರು ಸದ್ಯ ನಗರ ತೊರೆದು ಹಳ್ಳಿ ಸೇರಿದ್ದಾರೆ. ಅವರ ಅದಾಯ ವೃದ್ಧಿಗಾಗಿ ನರೇಗಾವನ್ನು ಬಳಸಿಕೊಳ್ಳಲು ಸರ್ಕಾರಕ್ಕೆ ಅವಕಾಶವಿತ್ತು. ನರೇಗಾಕ್ಕೆ ಹೆಚ್ಚಿನ ಅನುದಾನ ಒದಗಿಸಿ, ಗ್ರಾಮೀಣ ಮೂಲಸೌಕರ್ಯ ಹೆಚ್ಚಿಸಿ, ಕೂಲಿ ಕಾರ್ಮಿಕರ ಆದಾಯ ವೃದ್ಧಿಸಲು ಇದ್ದ ಅವಕಾಶವನ್ನು ಸರ್ಕಾರ ಕಳೆದುಕೊಂಡಿದೆ. ಈ ಸರ್ಕಾರಕ್ಕೆ ದೂರಾಲೋಚನೆಗಳೇ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ಈಗ ನಿಗದಿ ಮಾಡಿರುವ 3 ತಿಂಗಳ ಅವಧಿಯ ಸಾಲ ಮರುಪಾವತಿಯ ಹೊಣೆಯನ್ನು ಸರ್ಕಾರವೇ ಹೊತ್ತುಕೊಳ್ಳಬೇಕಾಗಿತ್ತು. ಮೂರು ತಿಂಗಳಿಗೆ ಸರ್ಕಾರವೇ ಸಾಲ ಮರು ಪಾವತಿ ಮಾಡಬೇಕಾಗಿತ್ತು ಅಥವಾ ಮರುಪಾವತಿಯನ್ನು ಮನ್ನಾ ಮಾಡಬೇಕಾಗಿತ್ತು. ನಾನು ರೈತರ ಸಾಲ ಮನ್ನಾ ಮಾಡಿ ಸರ್ಕಾರದಿಂದ ಹೊರ ಬಂದಿದ್ದೆ. ಹೀಗಾಗಿ ರೈತರ ಸಾಲದ ಹೊರೆ ದೊಡ್ಡದೇನೂ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

“ನಿತ್ಯ 6 ಲಕ್ಷ ಮಂದಿ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪಡೆಯುತ್ತಿರುವುದಾಗಿ ಹೇಳಲಾಗಿದೆ. ಇಂದಿರಾ ಕ್ಯಾಂಟೀನ್‌ಗಳ ಎದುರು ಜನರೇ ಇಲ್ಲ. ಆದರೆ, ಪ್ರತಿ ದಿನ 6 ಲಕ್ಷ ಜನರ ಲೆಕ್ಕ ಕೊಟ್ಟು ಸರ್ಕಾರ ಯಾವ ಕಂಟ್ರಾಕ್ಟರ್‌ ಅನ್ನು ಉದ್ದಾರ ಮಾಡುತ್ತಿದೆ. ಕ್ಯಾಂಟೀನ್‌ಗಳ ಎದುರು ಇರುವ ಜನಸಂದಣಿಯನ್ನು ಸರ್ಕಾರ ವಿಡಿಯೊ ಮಾಡಿ ಬಿಡುಗಡೆ ಮಾಡಬಲ್ಲದೇ?” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ ಉಪ ಚುನಾವಣೆಯಲ್ಲಿ ಕೋವಿಡ್‌ಗೆ ಏಳು ನಾಯಕರು ಬಲಿ: ಸರ್ಕಾರದ ವಿರುದ್ಧ ಮೃತರ ಕುಟುಂಬಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...