Homeಮುಖಪುಟಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

- Advertisement -
- Advertisement -

ಇತ್ತೀಚೆಗೆ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಒಕ್ಕೂಟ ಭರ್ಜರಿ ವಿಜಯ ಸಾಧಿಸಿದೆ. ಇದೀಗ ರಾಜ್ಯದಲ್ಲಿ ಎಡಪಂಥೀಯವ ಸರ್ಕಾರ ಸತತವಾಗಿ ಎರಡನೆ ಬಾರಿಗೆ ಅಧಿಕಾರಕ್ಕೆ ಹಿಡಿಯುತ್ತಿದೆ. ಪಿಣರಾಯಿ ವಿಜಯನ್ ಅವರ ಎರಡನೇ ಅವಧಿಯ ಸರ್ಕಾರವು ದೇವಸ್ವಂ ಇಲಾಖೆ (ಮುಜರಾಯಿ ಇಲಾಖೆ)ಗೆ ಚೆಲಕ್ಕರ ಕ್ಷೇತ್ರದ ಶಾಸಕರಾಗಿರುವ ದಲಿತ ನಾಯಕ ಕೆ. ರಾಧಾಕೃಷ್ಣನ್ ಅವರನ್ನು ಸಚಿವರನ್ನಾಗಿ ನೇಮಿಸುವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ.

1996 ರಲ್ಲಿ ಇ.ಕೆ.ನಯನಾರ್ ಅವರ ಸಂಪುಟದಲ್ಲಿ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಪರಿಶಿಷ್ಟ ಜಾತಿಗೆ ಸೇರಿರುವ ಕೆ. ರಾಧಾಕೃಷ್ಣನ್ ಅವರು ಪ್ರಸ್ತುತ ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿದ್ದು, ದಲಿತ ಶೋಷನ್ ಮುಕ್ತಿ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ.

ಇದನ್ನೂಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

2001, 2006 ಮತ್ತು 2011 ರಲ್ಲಿ ಚೆಲಕ್ಕರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಕೆ. ರಾಧಾಕೃಷ್ಣ 2001 ರಲ್ಲಿ ಮುಖ್ಯ ವಿಪ್ ಮತ್ತು 2006 ರಲ್ಲಿ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.

2016 ರ ಚುನಾವಣೆಯಲ್ಲಿ ಅವರು ಸ್ಪರ್ಧಿಸಿರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಪಕ್ಷವು ಅವರನ್ನು ಚೆಲಕ್ಕರ ಕ್ಷೇತ್ರದಿಂದ ಮತ್ತೇ ಕಣಕ್ಕಿಳಿಸಿತ್ತು. ಪ್ರಸ್ತುತ ಸಚಿವ ಸಂಪುಟದಲ್ಲಿ ಅವರಿಗೆ ದೇವಸ್ವಂ, ಸಂಸದೀಯ ವ್ಯವಹಾರಗಳು, ಎಸ್‌ಸಿ / ಎಸ್‌ಟಿ ಅಭಿವೃದ್ಧಿ ಖಾತೆಗಳನ್ನು ನೀಡಲಾಗಿದೆ.

21 ಸದಸ್ಯರಿರುವ ಕೇರಳ ಸಚಿವ ಸಂಪುಟವು ಮೇ 20 ರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ. ಬೇಪುರ್‌‌ ಕ್ಷೇತ್ರದಿಂದ ಮೊದಲ ಆಯ್ಕೆಯಾಗಿರುವ ಡಿವೈಎಫ್‌ಐ ರಾಷ್ಟ್ರಾಧ್ಯಕ್ಷ ಪಿ.ಎ. ಮೊಹಮ್ಮದ್ ರಿಯಾಜ್ ಲೋಕೋಪಯೋಗಿ ಇಲಾಖೆ ಸಚಿವರಾಗಿ ಆಯ್ಕೆಯಾಗಿದ್ದು, ಕೆ.ಎನ್. ಬಾಲಗೋಪಾಲ್ ಅವರು ಹೊಸ ಹಣಕಾಸು ಸಚಿವರಾಗಲಿದ್ದಾರೆ.

ಮತ್ತೊಬ್ಬ ಮಹಿಳಾ ಶಾಸಕಿ ಆರ್. ಬಿಂದು ಅವರು ಕೇರಳದ ಹೊಸ ಉನ್ನತ ಶಿಕ್ಷಣ ಸಚಿವರಾಗಲಿದ್ದಾರೆ. ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ಕೇರಳದ ಎಡ ಪಕ್ಷಗಳು ಹೊಸಬರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ್ದವು. ಹಲವಾರು ಕಡೆ ಮಹಿಳೆಯರಿಗೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಅಥವಾ ಮೇಯರ್ ಸ್ಥಾನ ನೀಡಿದ್ದವು.

ಇದನ್ನೂಓದಿ: ಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ಆರೋಗ್ಯ ಸಚಿವರಾಗಿ ಶೈಲಜಾ ಅವರೇ ಮುಂದುವರೆಯಬೇಕಿತ್ತು ಎಂಬ ವಾದಗಳ ನಡುವೆ, ಅರಣ್ಮುಲ ಕ್ಷೇತ್ರದ ಶಾಸಕಿ ವೀಣಾ ಜಾರ್ಜ್ ಅವರನ್ನು ಆರೋಗ್ಯ ಸಚಿವರಾಗಿ ಆಯ್ಕೆ ಮಾಡಲಾಗಿದೆ.

ಉಳಿದಂತೆ ಸಚಿವರ ಪಟ್ಟಿ ಕೆಳಗಿನಂತಿದೆ.

  1. ಪಿಣರಾಯಿ ವಿಜಯನ್ – ಸಾರ್ವಜನಿಕ ಆಡಳಿತ, ಗೃಹ, ವಿಜಿಲೆನ್ಸ್‌, ಐಟಿ, ಪರಿಸರ
  2. ಕೆ.ಎನ್. ಬಾಲಗೋಪಾಲ್ – ಹಣಕಾಸು
  3. ವೀಣಾ ಜಾರ್ಜ್ – ಆರೋಗ್ಯ
  4. ವಿ ಶಿವಂಕುಟ್ಟಿ – ಶಿಕ್ಷಣ, ಕಾರ್ಮಿಕ
  5. ಪಿ ರಾಜೀವ್ – ಕೈಗಾರಿಕೆ
  6. ಕೆ ರಾಧಾಕೃಷ್ಣನ್ – ದೇವಸ್ವಂ, ಸಂಸದೀಯ ವ್ಯವಹಾರಗಳು, ಎಸ್‌ಸಿ / ಎಸ್‌ಟಿ ಅಭಿವೃದ್ಧಿ
  7. ಆರ್ ಬಿಂದು – ಉನ್ನತ ಶಿಕ್ಷಣ
  8. ಆಂಟನಿ ರಾಜು – ಸಾರಿಗೆ
  9. ಎಂ.ವಿ.ಗೋವಿಂದನ್ – ಸ್ಥಳೀಯ ಸ್ಥಂಸ್ಥಗಳು, ಅಬಕಾರಿ
  10. ಪಿಎ ಮೊಹಮ್ಮದ್ ರಿಯಾಸ್ – ಪಿಡಬ್ಲ್ಯೂಡಿ, ಪ್ರವಾಸೋದ್ಯಮ
  11. ವಿ.ಎನ್.ವಾಸವನ್ – ಸಹಕಾರ, ನೋಂದಣಿ
  12. ಕೆ. ಕೃಷ್ಣನ್‌ಕುಟ್ಟಿ – ವಿದ್ಯುತ್
  13. ಅಹಮದ್ ದೇವರ್‌‌ಕೋವಿಲ್ – ಬಂದರು
  14. ಸಾಜಿ ಚೆರಿಯನ್ – ಮೀನುಗಾರಿಕೆ, ಸಂಸ್ಕೃತಿ
  15. ವಿ. ಅಬ್ದುರಹಿಮನ್ – ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಎನ್‌ಆರ್‌ಐ
  16. ಜೆ. ಚಿಂಚು ರಾಣಿ – ಪಶುಸಂಗೋಪನೆ, ಡೈರಿ
  17. ಎ.ಕೆ. ಸಸೀಂದ್ರನ್- ಅರಣ್ಯ
  18. ಪಿ. ಪ್ರಸಾದ್- ಕೃಷಿ
  19. ರೋಶಿ ಅಗಸ್ಟೀನ್ – ಜಲ ಸಂಪನ್ಮೂಲಗಳು
  20. ಕೆ. ರಾಜನ್ – ಕಂದಾಯ
  21. ಜಿ. ಆರ್. ಅನಿಲ್- ನಾಗರಿಕ ಸರಬರಾಜು

ಇದನ್ನೂಓದಿ: ಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...