Homeಮುಖಪುಟಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ....

ಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ….

- Advertisement -
- Advertisement -

ಕೇರಳದ ಹೊಸ ಸಚಿವ ಸಂಪುಟದಲ್ಲಿ ಆರೋಗ್ಯ ಖಾತೆ ಮತ್ತೆ ಮಹಿಳೆಯ ಕೈಗೇ ಬಂದಿದೆ. ಈ ಸಲ ಟೀಚರ್ ಜಾಗದಲ್ಲಿ ಪತ್ರಕರ್ತೆ ಇದ್ದಾರೆ. ಟೀಚರ್ ಅವರಷ್ಟೇ ಇವರೂ ತುಂಬ ಕ್ರಿಯಾಶೀಲರು ಎನ್ನಲಾಗಿದೆ.

ಅರಣ್ಮುಲ ಕ್ಷೇತ್ರದ ಶಾಸಕಿ ವೀಣಾ ಜಾರ್ಜ್ ಅವರನ್ನು ಆರೋಗ್ಯ ಸಚಿವರಾಗಿ ಆಯ್ಕೆ ಮಾಡಲಾಗಿದೆ. ಹೊಸ ಹುದ್ದೆಯ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ವೀಣಾ ಜಾರ್ಜ್, ಪಕ್ಷವು ವಹಿಸಿದ ಕರ್ತವ್ಯಗಳನ್ನು ಪೂರೈಸಲು ತನ್ನ ಅತ್ಯುತ್ತಮ ಪ್ರಯತ್ನ ಮಾಡುತ್ತೇನೆ ಎಂದು ಕೇರಳದ ಮಾತೃಭೂಮಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಮೇ 18 ರಂದು, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂ) ನಾಯಕ ಪಿಣರಾಯಿ ವಿಜಯನ್ ತಮ್ಮ ಸಂಪುಟವನ್ನು ಆಯ್ಕೆ ಮಾಡಿದರು. ಆದರೆ ಆರೋಗ್ಯ ಸಚಿವರಾಗಿದ್ದ ಅವಧಿಯಲ್ಲಿ ನಿಪಾ ಮತ್ತು ಕೋವಿಡ್ ವಿರುದ್ಧ ಕೇರಳದ ಹೋರಾಟದ ಮುಖವಾದ ಶೈಲಜಾ ‘ಟೀಚರ್’ ಅವರನ್ನು ಕೈಬಿಟ್ಟರು. ಬದಲಾಗಿ, ಅವರನ್ನು ಪಕ್ಷದ ವಿಪ್ ಆಗಿ ನೇಮಿಸಲಾಗುತ್ತಿದೆ.

ಶೈಲಜಾರೇ ಆರೋಗ್ಯ ಸಚಿವೆಯಾಗಿ ಮುಂದುವರೆಯಬೇಕಿತ್ತು ಎಂಬ ವಾದಗಳ ನಡುವೆಯೇ, ಪಿಣರಾಯಿ ಅವರನ್ನು ಹೊರತುಪಡಿಸಿ ಎಲ್ಲ ಹೊಸಮುಖಗಳಿಗೆ ಸಚಿವ ಸ್ಥಾನ ನೀಡಿರುವ ಎಲ್‌ಡಿಎಫ್ ಆರೋಗ್ಯ ಖಾತೆಗೆ ಶಾಸಕಿ ವೀಣಾ ಜಾರ್ಜ್ ಅವರನ್ನು ಆಯ್ಕೆ ಮಾಡಿದೆ.
ವೀಣಾ ಜಾರ್ಜ್ ಶಾಸಕಿಯಾಗುವ ಮೊದಲು ವಿವಿಧ ಮಲಯಾಳಂ ಮಾಧ್ಯಮಗಳಲ್ಲಿ ಪತ್ರಕರ್ತೆಯಾಗಿ ಮತ್ತು ಸುದ್ದಿ ನಿರೂಪಕರಾಗಿ ಕೆಲಸ ಮಾಡಿದ್ದಾರೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

21 ಸದಸ್ಯರ ಕೇರಳ ಕ್ಯಾಬಿನೆಟ್ ಮೇ 20 ರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ.
ಬೇಪುರ ಸ್ಥಾನದಿಂದ ಮೊದಲ ಬಾರಿಗೆ ಶಾಸಕರಾಗಿರುವ ಸಿ.ಎಂ ವಿಜಯನ್ ಅವರ ಅಳಿಯ ಪಿ.ಎ. ಮೊಹಮ್ಮದ್ ರಿಯಾಜ್ ಲೋಕೋಪಯೋಗಿ ಇಲಾಖೆ ಸಚಿವರಾಗಲಿದ್ದರೆ, ಕೆ.ಎನ್. ಬಾಲಗೋಪಾಲ್ ಅವರು ಹೊಸ ಹಣಕಾಸು ಸಚಿವರಾಗಲಿದ್ದಾರೆ.

ಮತ್ತೊಬ್ಬ ಮಹಿಳಾ ಶಾಸಕಿ ಆರ್. ಬಿಂದು ಕೇರಳದ ಹೊಸ ಉನ್ನತ ಶಿಕ್ಷಣ ಸಚಿವರಾಗಲಿದ್ದಾರೆ.
ಪಕ್ಷದ ತೀರ್ಮಾನಗಳಿಗೆ ಆದ್ಯತೆ ನೀಡುವ ಎಡಪಕ್ಷಗಳಲ್ಲಿ ಶೈಲಜಾ ಟೀಚರ್ ಸೇರಿದಂತೆ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ಕೇರಳದ ಎಡ ಪಕ್ಷಗಳು ಹೊಸಬರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ್ದವು ಮತ್ತು ಹಲವಾರು ಕಡೆ ಮಹಿಳೆಯರಿಗೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಅಥವಾ ಮೇಯರ್ ಸ್ಥಾನ ನೀಡಿದ್ದವು.
ಈಗ ಶೈಲಜಾ ಟೀಚರ್ ಜಾಗಕ್ಕೆ ವೀಣಾ ಜರ್ನಲಿಸ್ಟ್ ಬಂದಿದ್ದಾರೆ. ಅದು ಸಿಪಿಎಂ ಪಕ್ಷದ ನೀತಿಯೂ ಆಗಿದೆ. ಟೀಚರ್ ಈಗ ಚೀಫ್ ವಿಪ್ ಆಗಲಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ; ಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...