Homeಕರೋನಾ ತಲ್ಲಣಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

ಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಿಸಿರುವ ಪ್ಯಾಕೇಜ್ ದುಡಿಯುವ ಜನರನ್ನು
ನಿರಾಶೆಗೊಳಿಸಿರುವುದು ಮಾತ್ರವಲ್ಲ, ಅವಮಾನಿಸುವ ಪ್ಯಾಕೇಜ್ ಆಗಿದೆ ಎಂದು ಜನಾಗ್ರಹ ಆಂದೋಲನ ಆಕ್ರೋಶ ವ್ಯಕ್ತಪಡಿಸಿದೆ.

ಮಾನವ ಬಿಕ್ಕಟ್ಟನಿ ಈ ಸಂದರ್ಭದಲ್ಲಿ ಜನರಿಗೆ ಬದುಕುಳಿಯಲು ಆಸರೆಯಾಗಿರುವ ಪ್ಯಾಕೇಜ್‌ಗಾಗಿ ಜನಾಗ್ರಹವನ್ನೂ ಒಳಗೊಂಡಂತೆ ಬಹುತೇಕ ಜನಪರ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಒತ್ತಾಯಿಸುತ್ತಾ ಬರುತ್ತಿವೆ. ನೆರೆಹೊರೆಯ ರಾಜ್ಯಗಳು ಅನೇಕ ಜನಪರ ಕ್ರಮಗಳನ್ನು ಕಣ್ಣೆದುರಿಗೇ ತೆಗೆದುಕೊಳ್ಳುತ್ತಿದ್ದರೂ ರಾಜ್ಯ ಸರ್ಕಾರ ಕಿಮ್ಮೆನ್ನದೆ ಕೂತಿತ್ತು. ಜನರ ಹಾಗೂ ಜನರ ಸಂಘಟನೆಗಳ ಒತ್ತಡಕ್ಕೆ ಮಣಿದು ಕೊನೆಗೆ ಇಂದು ಮುಖ್ಯಮಂತ್ರಿಯವರು ಪ್ಯಾಕೇಜ್ ಒಂದನ್ನು ಘೋಷಿಸಿದ್ದಾರೆ. ಆದರೆ ಈ ಪ್ಯಾಕೇಜ್ ತೀವ್ರ ನಿರಾಶೆ ಮೂಡಿಸಿರುವುದು ಮಾತ್ರವಲ್ಲ, ದುಡಿಯುವ ಜನರನ್ನು ಅವಮಾನಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಸಂಘಟಿತ, ಸ್ವಯಂ ಉದ್ಯೋಗಿ ಮುಂತಾದ ಶ್ರಮಿಕ ಕುಟುಂಬಗಳಿಗೆ ಕೇವಲ 2,000 ಮತ್ತು 3,000 ರೂಪಾಯಿಗಳ ನೆರವನ್ನು ಮಾತ್ರ ಘೋಷಿಸಿದೆ. ಇಂಥ ದುಷ್ಕಾಲವನ್ನು ಎದುರಿಸಲು 2000 ಏತಕ್ಕೆ ಸಾಲುತ್ತಿದೆ ಎಂಬುದನ್ನು ಸರ್ಕಾರವೇ ಹೇಳಬೇಕಿದೆ. ಅದೂ ಸಹ ನೊಂದಣಿಯಾಗಿರುವ ಶ್ರಮಿಕರಿಗೆ ಎಂದು ಹೇಳಿರುವುದರಿಂದ ಅದು ಎಲ್ಲರಿಗೂ ತಲುಪುವುದು ಸಾಧ್ಯವೇ ಇಲ್ಲ. ಉದಾಹರಣೆಗೆ ನೇಕಾರ ಕಾರ್ಮಿಕರಿಗೆ ಗುರುತಿನ ಚೀಟಿಯನ್ನೂ ಸರ್ಕಾರ ಇದುವರೆಗೆ ನೀಡಿಲ್ಲ. ಮನೆಕೆಲಸದವರಿಗೂ ಯಾವ ನೊಂದಣಿಯೂ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದೆ.

ಅಪಾರ ನಷ್ಟ ಹೊಂದಿರುವ ಹೂವು ಮತ್ತು ತರಕಾರಿ ಬೆಳೆಯುವ ರೈತರಿಗೆ ಮಾತ್ರ 10,000 ರೂಗಳ ನೆರವನ್ನು ಘೋಷಿಸಿದೆ. ಅವರಿಗಾಗಿರುವ ನಷ್ಟದ ಮುಂದೆ ಈ ಹಣ ಏತಕ್ಕೂ ಸಾಲುವುದಿಲ್ಲ. ಅಲ್ಲದೆ ವಿಶಾಲ ರೈತಾಪಿಗಾಗಲೀ, ಕೃಷಿ ಕೂಲಿಗಳಿಗಾಗಲೀ ಯಾವುದೇ ನೆರವನ್ನು ಸರ್ಕಾರ ಘೋಷಿಸಿಲ್ಲ. ಕೆಲಸ ಕಳೆದುಕೊಂಡಿರುವ ಖಾಸಗೀ ಶಾಲೆ ಮತ್ತು ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ನೆರವಾಗುವ ಯಾವ ಅಂಶವೂ ಇದರಲ್ಲಿಲ್ಲ. ಇದು ನೆರವಿನ ಪ್ಯಾಕೇಜ್ ಎಂದು ಕರೆಯಲಿಕ್ಕೇ ಅನರ್ಹವಾಗಿದೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಸರ್ಕಾರ ನಿಜವಾಗಲೂ ಜನಹಿತವನ್ನು ಬಯಸುತ್ತಿದ್ದಲ್ಲಿ ಕೋವಿಡ್ ರೋಗಕ್ಕೆ ತುತ್ತಾಗಿರುವ ಎಲ್ಲಾ ಜನರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಎಲ್ಲಾ ಜನರಿಗೂ ಉಚಿತವಾಗಿ ವ್ಯಾಕ್ಸಿನ್ ಒದಗಿಸಲು ತುರ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಬಿಪಿಎಲ್ ಜನರಿಗೂ ಸಮಗ್ರ ದಿನಸಿ ಮತ್ತು ಮಾಸಿಕ 5000 ರೂಗಳ ನೆರವು ಧನ ನೀಡಬೇಕು. ಕೋವಿಡ್‌ನಿಂದ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ಆಂದೋಲನ ಒತ್ತಾಯಿಸಿದೆ.

ಅಲ್ಲದೆ ಬೆಳೆ ನಷ್ಟ ಅನುಭವಿಸಿರುವ ಹೂವು, ತರಕಾರಿ ರೈತರಿಗೆ ಎಕರೆಗೆ ಕನಿಷ್ಟ 25 ಸಾವಿರ ಪರಿಹಾರ ನೀಡಬೇಕು. ಇತರೆಲ್ಲಾ ಸಣ್ಣ ರೈತರಿಗೆ ಎಕರೆಗೆ 10,000 ನೆರವು ಧನ ನೀಡಬೇಕು. ಮೂರು ತಿಂಗಳ ಸಾಲ ಮರುಪಾವತಿ ಮುಂದೂಡುವುದು ಮಾತ್ರವಲ್ಲ,  ಮೈಕ್ರೋ ಫೈನಾನ್ಸಿನ ಸಾಲವನ್ನೂ ಒಳಗೊಂಡಂತೆ ಎಲ್ಲಾ ಸಾಲದ ಕೋರಾನಾ ಕಾಲಾವಧಿಯ ಕಂತುಗಳನ್ನು ಸರ್ಕರವೇ ಭರಿಸಿ, ಕಂತು ಮನ್ನಾ ಮಾಡಬೇಕಿದೆ. ಶಾಲಾ ಕಾಲೇಜುಗಳು ಮುಚ್ಚಿರುವುದರಿಂದ ಖಾಸಗೀ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಉಪನ್ಯಾಸಕರೂ ಸಂಕಷ್ಟದಲ್ಲಿದ್ದು ಅವರ ನೆರವಿಗೂ ಸರ್ಕಾರ ಧಾವಿಸಬೇಕಿದೆ ಎಂದು ಒತ್ತಾಯಿಸಲಾಗಿದೆ.

ಇದಕ್ಕಾಗಿ ಎಲ್ಲಾ ಕೋಟ್ಯಾಧೀಷ ರಾಜಕಾರಣಿಗಳು ಮತ್ತು ಉದ್ದಿಮೆಪತಿಗಳ ಆದಾಯದ ಮೇಲೆ ಶೇ. 5ರ ಸುಂಕವನ್ನು ವಿಧಿಸಿ ಮತ್ತು ಕಾರ್ಪೊರೇಟ್ ವಹಿವಾಟಿನ ಮೇಲೆ ಶೇ. 2ರ ಕೋರೋನಾ ಸೆಸ್ ವಿಧಿಸಿ ಸಂಪನ್ಮೂಲವನ್ನು ಕ್ರೂಢೀಕರಿಸಿ, ನಿಜವಾದ ಅರ್ಥದ ಪ್ಯಾಕೇಜಿನ ಮೂಲಕ ಜನರ ಕೈಗೆ ತಲುಪುವಂತೆ ಸರ್ಕಾರ ಮಾಡಬೇಕಿದೆ ಎಂದು ಒತ್ತಾಯಿಸಲಾಗಿದೆ.

ಈ ಕ್ರಮಗಳಿಗೆ ಸರ್ಕಾರ ಮುಂದಾಗದಿದ್ದರೆ ಕೋವಿಡ್ ಇದ್ದರೂ ಜನ ದಿಟ್ಟ ಹೋರಾಟಗಳಿಗಿಳಿಯುವು ಅನಿವಾರ್ಯವಾಗಲಿದೆ. ಜನಾಗ್ರಹ ಆಂದೋಲನ ನಿನ್ನೆ ಕರೆದಿದ್ದ ಸರ್ವ ಪಕ್ಷ ಹಾಗೂ ಸರ್ವ ಸಂಘಟನೆಗಳ ತುರ್ತು ಸಭೆಯಲ್ಲಿ ಸರ್ಕಾರ ಜನಪರ ಕ್ರಮಗಳಿಗೆ ಮುಂದಾಗದಿದ್ದರೆ ಒಗ್ಗೂಡಿ ಪ್ರತಿಭಟಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಶೀಘ್ರವೇ ಸಮಾಲೋಚನಾ ಮಂಡಳಿಯು ಸಭೆ ಸೇರಿ ಹೋರಾಟದ ರೂಪರೇಷೆಯನ್ನು ಅಂತಿಮಗೊಳಿಸಲಿದೆ ಎಂದು ಜನಾಗ್ರಹ ಆಂದೋಲನದ ಪರವಾಗಿ ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಶಸಿಕಾಂತ್ ಸೆಂದಿಲ್, ಚಾಮರಸ ಮಾಲಿ ಮಾಟೀಲ್, ಯೂಸೂಫ್ ಕನ್ನಿ, ಹೆಚ್. ಆರ್. ಬಸವಾರಾಜಪ್ಪ, ಯಾಸೀನ್ ಮಲ್ಪೆ ಮತ್ತು ನೂರ್ ಶ್ರೀಧರ್ ತಿಳಿಸಿದ್ದಾರೆ.


ಇದನ್ನೂ ಓದಿ: ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...