Homeಕರೋನಾ ತಲ್ಲಣಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

ಇದು ದುಡಿಯುವ ಜನರನ್ನು ಅವಮಾನಿಸುವ ಪ್ಯಾಕೇಜ್: ಜನಾಗ್ರಹ ಆಂದೋಲನ ಖಂಡನೆ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರು ಘೋಷಿಸಿರುವ ಪ್ಯಾಕೇಜ್ ದುಡಿಯುವ ಜನರನ್ನು
ನಿರಾಶೆಗೊಳಿಸಿರುವುದು ಮಾತ್ರವಲ್ಲ, ಅವಮಾನಿಸುವ ಪ್ಯಾಕೇಜ್ ಆಗಿದೆ ಎಂದು ಜನಾಗ್ರಹ ಆಂದೋಲನ ಆಕ್ರೋಶ ವ್ಯಕ್ತಪಡಿಸಿದೆ.

ಮಾನವ ಬಿಕ್ಕಟ್ಟನಿ ಈ ಸಂದರ್ಭದಲ್ಲಿ ಜನರಿಗೆ ಬದುಕುಳಿಯಲು ಆಸರೆಯಾಗಿರುವ ಪ್ಯಾಕೇಜ್‌ಗಾಗಿ ಜನಾಗ್ರಹವನ್ನೂ ಒಳಗೊಂಡಂತೆ ಬಹುತೇಕ ಜನಪರ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಒತ್ತಾಯಿಸುತ್ತಾ ಬರುತ್ತಿವೆ. ನೆರೆಹೊರೆಯ ರಾಜ್ಯಗಳು ಅನೇಕ ಜನಪರ ಕ್ರಮಗಳನ್ನು ಕಣ್ಣೆದುರಿಗೇ ತೆಗೆದುಕೊಳ್ಳುತ್ತಿದ್ದರೂ ರಾಜ್ಯ ಸರ್ಕಾರ ಕಿಮ್ಮೆನ್ನದೆ ಕೂತಿತ್ತು. ಜನರ ಹಾಗೂ ಜನರ ಸಂಘಟನೆಗಳ ಒತ್ತಡಕ್ಕೆ ಮಣಿದು ಕೊನೆಗೆ ಇಂದು ಮುಖ್ಯಮಂತ್ರಿಯವರು ಪ್ಯಾಕೇಜ್ ಒಂದನ್ನು ಘೋಷಿಸಿದ್ದಾರೆ. ಆದರೆ ಈ ಪ್ಯಾಕೇಜ್ ತೀವ್ರ ನಿರಾಶೆ ಮೂಡಿಸಿರುವುದು ಮಾತ್ರವಲ್ಲ, ದುಡಿಯುವ ಜನರನ್ನು ಅವಮಾನಿಸುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಅಸಂಘಟಿತ, ಸ್ವಯಂ ಉದ್ಯೋಗಿ ಮುಂತಾದ ಶ್ರಮಿಕ ಕುಟುಂಬಗಳಿಗೆ ಕೇವಲ 2,000 ಮತ್ತು 3,000 ರೂಪಾಯಿಗಳ ನೆರವನ್ನು ಮಾತ್ರ ಘೋಷಿಸಿದೆ. ಇಂಥ ದುಷ್ಕಾಲವನ್ನು ಎದುರಿಸಲು 2000 ಏತಕ್ಕೆ ಸಾಲುತ್ತಿದೆ ಎಂಬುದನ್ನು ಸರ್ಕಾರವೇ ಹೇಳಬೇಕಿದೆ. ಅದೂ ಸಹ ನೊಂದಣಿಯಾಗಿರುವ ಶ್ರಮಿಕರಿಗೆ ಎಂದು ಹೇಳಿರುವುದರಿಂದ ಅದು ಎಲ್ಲರಿಗೂ ತಲುಪುವುದು ಸಾಧ್ಯವೇ ಇಲ್ಲ. ಉದಾಹರಣೆಗೆ ನೇಕಾರ ಕಾರ್ಮಿಕರಿಗೆ ಗುರುತಿನ ಚೀಟಿಯನ್ನೂ ಸರ್ಕಾರ ಇದುವರೆಗೆ ನೀಡಿಲ್ಲ. ಮನೆಕೆಲಸದವರಿಗೂ ಯಾವ ನೊಂದಣಿಯೂ ಇಲ್ಲ ಎಂದು ಆತಂಕ ವ್ಯಕ್ತಪಡಿಸಿದೆ.

ಅಪಾರ ನಷ್ಟ ಹೊಂದಿರುವ ಹೂವು ಮತ್ತು ತರಕಾರಿ ಬೆಳೆಯುವ ರೈತರಿಗೆ ಮಾತ್ರ 10,000 ರೂಗಳ ನೆರವನ್ನು ಘೋಷಿಸಿದೆ. ಅವರಿಗಾಗಿರುವ ನಷ್ಟದ ಮುಂದೆ ಈ ಹಣ ಏತಕ್ಕೂ ಸಾಲುವುದಿಲ್ಲ. ಅಲ್ಲದೆ ವಿಶಾಲ ರೈತಾಪಿಗಾಗಲೀ, ಕೃಷಿ ಕೂಲಿಗಳಿಗಾಗಲೀ ಯಾವುದೇ ನೆರವನ್ನು ಸರ್ಕಾರ ಘೋಷಿಸಿಲ್ಲ. ಕೆಲಸ ಕಳೆದುಕೊಂಡಿರುವ ಖಾಸಗೀ ಶಾಲೆ ಮತ್ತು ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ನೆರವಾಗುವ ಯಾವ ಅಂಶವೂ ಇದರಲ್ಲಿಲ್ಲ. ಇದು ನೆರವಿನ ಪ್ಯಾಕೇಜ್ ಎಂದು ಕರೆಯಲಿಕ್ಕೇ ಅನರ್ಹವಾಗಿದೆ ಎಂದು ಜನಾಗ್ರಹ ಆಂದೋಲನ ಆರೋಪಿಸಿದೆ.

ಸರ್ಕಾರ ನಿಜವಾಗಲೂ ಜನಹಿತವನ್ನು ಬಯಸುತ್ತಿದ್ದಲ್ಲಿ ಕೋವಿಡ್ ರೋಗಕ್ಕೆ ತುತ್ತಾಗಿರುವ ಎಲ್ಲಾ ಜನರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಎಲ್ಲಾ ಜನರಿಗೂ ಉಚಿತವಾಗಿ ವ್ಯಾಕ್ಸಿನ್ ಒದಗಿಸಲು ತುರ್ತ ಕ್ರಮ ಕೈಗೊಳ್ಳಬೇಕು. ಎಲ್ಲಾ ಬಿಪಿಎಲ್ ಜನರಿಗೂ ಸಮಗ್ರ ದಿನಸಿ ಮತ್ತು ಮಾಸಿಕ 5000 ರೂಗಳ ನೆರವು ಧನ ನೀಡಬೇಕು. ಕೋವಿಡ್‌ನಿಂದ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡಿರುವ ಕುಟುಂಬಗಳಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ಆಂದೋಲನ ಒತ್ತಾಯಿಸಿದೆ.

ಅಲ್ಲದೆ ಬೆಳೆ ನಷ್ಟ ಅನುಭವಿಸಿರುವ ಹೂವು, ತರಕಾರಿ ರೈತರಿಗೆ ಎಕರೆಗೆ ಕನಿಷ್ಟ 25 ಸಾವಿರ ಪರಿಹಾರ ನೀಡಬೇಕು. ಇತರೆಲ್ಲಾ ಸಣ್ಣ ರೈತರಿಗೆ ಎಕರೆಗೆ 10,000 ನೆರವು ಧನ ನೀಡಬೇಕು. ಮೂರು ತಿಂಗಳ ಸಾಲ ಮರುಪಾವತಿ ಮುಂದೂಡುವುದು ಮಾತ್ರವಲ್ಲ,  ಮೈಕ್ರೋ ಫೈನಾನ್ಸಿನ ಸಾಲವನ್ನೂ ಒಳಗೊಂಡಂತೆ ಎಲ್ಲಾ ಸಾಲದ ಕೋರಾನಾ ಕಾಲಾವಧಿಯ ಕಂತುಗಳನ್ನು ಸರ್ಕರವೇ ಭರಿಸಿ, ಕಂತು ಮನ್ನಾ ಮಾಡಬೇಕಿದೆ. ಶಾಲಾ ಕಾಲೇಜುಗಳು ಮುಚ್ಚಿರುವುದರಿಂದ ಖಾಸಗೀ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಉಪನ್ಯಾಸಕರೂ ಸಂಕಷ್ಟದಲ್ಲಿದ್ದು ಅವರ ನೆರವಿಗೂ ಸರ್ಕಾರ ಧಾವಿಸಬೇಕಿದೆ ಎಂದು ಒತ್ತಾಯಿಸಲಾಗಿದೆ.

ಇದಕ್ಕಾಗಿ ಎಲ್ಲಾ ಕೋಟ್ಯಾಧೀಷ ರಾಜಕಾರಣಿಗಳು ಮತ್ತು ಉದ್ದಿಮೆಪತಿಗಳ ಆದಾಯದ ಮೇಲೆ ಶೇ. 5ರ ಸುಂಕವನ್ನು ವಿಧಿಸಿ ಮತ್ತು ಕಾರ್ಪೊರೇಟ್ ವಹಿವಾಟಿನ ಮೇಲೆ ಶೇ. 2ರ ಕೋರೋನಾ ಸೆಸ್ ವಿಧಿಸಿ ಸಂಪನ್ಮೂಲವನ್ನು ಕ್ರೂಢೀಕರಿಸಿ, ನಿಜವಾದ ಅರ್ಥದ ಪ್ಯಾಕೇಜಿನ ಮೂಲಕ ಜನರ ಕೈಗೆ ತಲುಪುವಂತೆ ಸರ್ಕಾರ ಮಾಡಬೇಕಿದೆ ಎಂದು ಒತ್ತಾಯಿಸಲಾಗಿದೆ.

ಈ ಕ್ರಮಗಳಿಗೆ ಸರ್ಕಾರ ಮುಂದಾಗದಿದ್ದರೆ ಕೋವಿಡ್ ಇದ್ದರೂ ಜನ ದಿಟ್ಟ ಹೋರಾಟಗಳಿಗಿಳಿಯುವು ಅನಿವಾರ್ಯವಾಗಲಿದೆ. ಜನಾಗ್ರಹ ಆಂದೋಲನ ನಿನ್ನೆ ಕರೆದಿದ್ದ ಸರ್ವ ಪಕ್ಷ ಹಾಗೂ ಸರ್ವ ಸಂಘಟನೆಗಳ ತುರ್ತು ಸಭೆಯಲ್ಲಿ ಸರ್ಕಾರ ಜನಪರ ಕ್ರಮಗಳಿಗೆ ಮುಂದಾಗದಿದ್ದರೆ ಒಗ್ಗೂಡಿ ಪ್ರತಿಭಟಿಸುವ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಶೀಘ್ರವೇ ಸಮಾಲೋಚನಾ ಮಂಡಳಿಯು ಸಭೆ ಸೇರಿ ಹೋರಾಟದ ರೂಪರೇಷೆಯನ್ನು ಅಂತಿಮಗೊಳಿಸಲಿದೆ ಎಂದು ಜನಾಗ್ರಹ ಆಂದೋಲನದ ಪರವಾಗಿ ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಶಸಿಕಾಂತ್ ಸೆಂದಿಲ್, ಚಾಮರಸ ಮಾಲಿ ಮಾಟೀಲ್, ಯೂಸೂಫ್ ಕನ್ನಿ, ಹೆಚ್. ಆರ್. ಬಸವಾರಾಜಪ್ಪ, ಯಾಸೀನ್ ಮಲ್ಪೆ ಮತ್ತು ನೂರ್ ಶ್ರೀಧರ್ ತಿಳಿಸಿದ್ದಾರೆ.


ಇದನ್ನೂ ಓದಿ: ಧರೆಹತ್ತಿ ಉರಿದಿದೆ: ಮಿಷನ್ ಸೇವ್ ಲೈಫ್‌ಗೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಿಂದ ಚಾಲನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...