Homeಕರ್ನಾಟಕಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

- Advertisement -
| ಗೌರಿ | ಬೆಂಗಳೂರು.
ನಮ್ಮ ಸಮಾಜದ 90% ಜನವರ್ಗಗಳ ಬೆಳಕಾಗಿ ಸಂವಿಧಾನ ರಚನೆಗೊಂಡಿದೆ. ಈ ಸಂವಿಧಾನ ಜಾರಿಗೊಂಡ ದಿನದಿಂದಲೂ ಸಂಘಪರಿವಾರದ ‘ಬ್ರಾಹ್ಮಣ್ಯ’ವಾದಿಗಳು ಒಂದಲ್ಲಾ ಒಂದು ರೀತಿಯಲ್ಲಿ ಅಪಸ್ವರವನ್ನು ಎತ್ತುತ್ತಾ ಬರುತ್ತಿದ್ದಾರೆ. ಈಗ ಬ್ರಾಹ್ಮಣ್ಯವಾದಿಗಳು ಅಧಿಕಾರದ ಚುಕ್ಕಾಣಿ ಹಿಡಿದಿರುವುದರಿಂದ ಸಂವಿಧಾನವನ್ನು ಸುಡುವ ಮಾತುಗಳನ್ನು ಬಹಿರಂಗವಾಗಿಯೇ ಆಡಲಾಗುತ್ತಿದೆಯಲ್ಲದೇ, ಬದಲಾವಣೆ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದಾರೆ. ಆಡಳಿತದಲ್ಲೂ ಸಂವಿಧಾನದ ಆಶಯಗಳಿಗೆ ಧಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್‍ರವರ ಪ್ರಜಾತಾಂತ್ರಿಕ ಚಿಂತನೆಗೆ ಮಸಿ ಬಳಿಯುವ, ಬುಡಮೇಲು ಮಾಡುವ ಕೃತ್ಯಕ್ಕೇ ಕೈ ಹಾಕಲಾಗುತ್ತಿದೆ. ಇದಕ್ಕೆ ಬೇಕಾದ ಚಿಂತನಾ ತಳಹದಿಯನ್ನು ರೂಪಿಸುವ ಕೆಲಸವನ್ನು ಭೈರಪ್ಪರಂಥವರು ಮಾಡುತ್ತಿದ್ದಾರೆ.
ಇತ್ತೀಚೆಗೆ ಈ ತಲೆಕೆಟ್ಟ ಭೈರಪ್ಪ ತನ್ನ ನಾಲಿಗೆಯನ್ನು ಹರಿಬಿಟ್ಟು ‘ಮಹಿಳೆಯರಿಗೆ ಸ್ವಾತಂತ್ರ ಜಾಸ್ತಿಯಾಯಿತು, ಈ ಸಂವಿಧಾನದಿಂದಲೇ ಮಹಿಳೆಯರಿಗೆ ಈ ರೀತಿಯ ಅವಕಾಶಗಳು ಸಿಗುತ್ತಿವೆ, ಸಂವಿಧಾನ ಮನುವಿನ ಕಾಲದ ಪರಂಪರೆಯನ್ನು ಒಳಗೊಂಡಿಲ್ಲ’ವೆಂದು ತನ್ನ ಬ್ರಾಹ್ಮಣ್ಯ ಮನಸ್ಥಿತಿಯನ್ನು ಹೊರಹಾಕಿದ್ದಾನೆ. ಇವರ ದೃಷ್ಟಿಯಲ್ಲಿ ಹೆಣ್ಣೆಂದರೆ ಭೋಗದ ವಸ್ತು, ಗಂಡಸರ ಸೇವೆಗಾಗಿಯೇ ಇರುವ ಪ್ರಾಣಿಯ ಇನ್ನೊಂದು ರೂಪ, ಮಕ್ಕಳನ್ನು ಹೆರುವ ಯಂತ್ರ,  ಮನೆಗೆಲಸಕ್ಕೆಂದೇ ಇರುವ ಆಳುಗಳು ಬೇಕೆಂದಾಗ ಬಳಸಿ, ಬೇಡವೆಂದಾಗ ಬಿಸಾಡುವ ವಸ್ತು. ಮನೆಯ ಹೊಸ್ತಿಲ ಗೆರೆ ದಾಟಬಾರದ, ಓದಿನಲ್ಲಿ, ಉನ್ನತ ಹುದ್ದೆಯನ್ನು ಪಡೆಯಲು ಅನರ್ಹಳು. ಇದನ್ನೇ ಮನುಧರ್ಮಶಾಸ್ತ್ರ ಹೇಳುತ್ತದೆ. ಇದು ಅವರ ದೃಷ್ಟಿಯಲ್ಲಿ ಹಿಂದೂ ಪರಂಪರೆ, ಸಂಸ್ಕೃತಿ.
ಈ ದೇಶದ ಜಾತಿಯಾಧಾರಿತ ಶೋಷಿತ ಸಮುದಾಯಗಳೂ ಸಹ ಹಿಂದೂ ಧರ್ಮದ ಪ್ರಕಾರ ಪ್ರಾಣಿಗಳಿಗಿಂತ ಕಡೆ. ಬೈರಪ್ಪನವರ ಪರಂಪರೆಯಲ್ಲಿ ಜಾತಿಯೇ ಶ್ರೇಷ್ಠ, ಮಾನವೀಯತೆಯಲ್ಲ. ಮೇಲ್ಜಾತಿಗಳಿಗೆ ಕೆಳ ಜಾತಿಗಳು ಅಧೀನವಾಗಿರಬೇಕು. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಮನುಷ್ಯನ ರೀತಿ ನೋಡದೇ ಇರುವುದೇ ಅವರ ಹಿಂದೂ ಧರ್ಮ. ಇಂಥಹ ಧರ್ಮವು ಅವರಿಗೆ ಶ್ರೇಷ್ಠ ಹೇಗಾಗುತ್ತದೆಂದು ಸಂವಿಧಾನ ಪ್ರಶ್ನೆ ಮಾಡುತ್ತದೆ, ಮಹಿಳೆಯು ಪುರುಷನಷ್ಟೇ ಸಮಾನಳು ಎಂದು ಪ್ರತಿಪಾದಿಸುತ್ತದೆ, ಸಂವಿಧಾನ ಈ ದೇಶದ ಎಲ್ಲಾ ಜಾತಿಯವರಿಗೂ ಸಮಾನತೆಯನ್ನು ಹೇಳುವುದಲ್ಲದೆ, ಪರಸ್ಪರ ಗೌರವದಿಂದ ಬದುಕಬೇಕೆಂದು ಪ್ರತಿಪಾದಿಸುತ್ತದೆ. ಹಿಂದೂ ಧರ್ಮ, ಮನುಧರ್ಮಶಾಸ್ತ್ರದ ಕಲ್ಮಶವನ್ನು  ತಲೆಯಲ್ಲಿಟ್ಟುಕೊಂಡಿರುವವರಿಗೆ ಈ ಮಾನವೀಯ ನೆಲೆಯ ಸಂವಿಧಾನವನ್ನು ಒಪ್ಪಲು ಸಾದ್ಯವಿಲ್ಲ. ದೇಶ ಧರ್ಮದ ಆಧಾರದಲ್ಲಿ ನಡೆಯಬಾರದೆಂದು ಪ್ರತಿಪಾದಿಸಿದ್ದ ಅಂಬೇಡ್ಕರ್ ಇದನ್ನು ಅರ್ಥ ಮಾಡಿಕೊಂಡು ಸಂವಿಧಾನದಲ್ಲಿ  ಕಡಿವಾಣ ಹಾಕುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿಯೇ ಈ ಸಂವಿಧಾನವನ್ನು ಅವರು ಒಪ್ಪಲು ಸಾಧ್ಯವಿಲ್ಲ.
ಈ ಸಂವಿಧಾನ ರಚನೆಯೇ ಮನುವಾದಿಗಳಿಗೆ ಮೊದಲ ಸೋಲಾಗಿದೆ. ಸಂವಿಧಾನ ರಚನೆಗೆ ಮುಂಚೆಯೇ ಅದರ ವಿರುದ್ದ ಅಪಸ್ವರ ಎತ್ತಿದ್ದಲ್ಲದೆ, ದೇಶದ 79 ಕಡೆ ಪ್ರತಿಭಟನೆಯನ್ನು ಸಹ ಮಾಡಿದ್ದರು. ಹಿಂದೆ ಬುದ್ದ, ಬಸವಣ್ಣನ ಕಾಲದಲ್ಲಿ ಸೋಲುಂಡವರು, ಪುನಃ ಸಂವಿಧಾನದ ಮೂಲಕ ನಿಯಂತ್ರಣದಲ್ಲಿದ್ದಾರೆ. ಒಂದು ವೇಳೆ ಇದರಲ್ಲಿ ಸಂವಿಧಾನ ಸೋತರೆ ಈ ದೇಶದ ಸಮಸ್ತ ಶೋಷಿತ ಸಮುದಾಯಗಳ, ಮೇಲ್ಜಾತಿ ಮಹಿಳೆಯರೂ ಒಳಗೊಂಡಂತೆ ಎಲ್ಲಾ ಮಹಿಳೆಯರ ಸೋಲಾಗುತ್ತದೆ. ಸ್ವಾತಂತ್ರ್ಯ, ಸಮಾನತೆಯ ಸೋಲಾಗುತ್ತದೆ. ಸಂವಿಧಾನವನ್ನು ಉಳಿಸಿ-ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...