Homeಕರ್ನಾಟಕಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಈ ದೇಶದ ಸಂವಿಧಾನವನ್ನೆ ಒಪ್ಪದ ಮನುವ್ಯಾಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

- Advertisement -
| ಗೌರಿ | ಬೆಂಗಳೂರು.
ನಮ್ಮ ಸಮಾಜದ 90% ಜನವರ್ಗಗಳ ಬೆಳಕಾಗಿ ಸಂವಿಧಾನ ರಚನೆಗೊಂಡಿದೆ. ಈ ಸಂವಿಧಾನ ಜಾರಿಗೊಂಡ ದಿನದಿಂದಲೂ ಸಂಘಪರಿವಾರದ ‘ಬ್ರಾಹ್ಮಣ್ಯ’ವಾದಿಗಳು ಒಂದಲ್ಲಾ ಒಂದು ರೀತಿಯಲ್ಲಿ ಅಪಸ್ವರವನ್ನು ಎತ್ತುತ್ತಾ ಬರುತ್ತಿದ್ದಾರೆ. ಈಗ ಬ್ರಾಹ್ಮಣ್ಯವಾದಿಗಳು ಅಧಿಕಾರದ ಚುಕ್ಕಾಣಿ ಹಿಡಿದಿರುವುದರಿಂದ ಸಂವಿಧಾನವನ್ನು ಸುಡುವ ಮಾತುಗಳನ್ನು ಬಹಿರಂಗವಾಗಿಯೇ ಆಡಲಾಗುತ್ತಿದೆಯಲ್ಲದೇ, ಬದಲಾವಣೆ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದಾರೆ. ಆಡಳಿತದಲ್ಲೂ ಸಂವಿಧಾನದ ಆಶಯಗಳಿಗೆ ಧಕ್ಕೆ ತರಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್‍ರವರ ಪ್ರಜಾತಾಂತ್ರಿಕ ಚಿಂತನೆಗೆ ಮಸಿ ಬಳಿಯುವ, ಬುಡಮೇಲು ಮಾಡುವ ಕೃತ್ಯಕ್ಕೇ ಕೈ ಹಾಕಲಾಗುತ್ತಿದೆ. ಇದಕ್ಕೆ ಬೇಕಾದ ಚಿಂತನಾ ತಳಹದಿಯನ್ನು ರೂಪಿಸುವ ಕೆಲಸವನ್ನು ಭೈರಪ್ಪರಂಥವರು ಮಾಡುತ್ತಿದ್ದಾರೆ.
ಇತ್ತೀಚೆಗೆ ಈ ತಲೆಕೆಟ್ಟ ಭೈರಪ್ಪ ತನ್ನ ನಾಲಿಗೆಯನ್ನು ಹರಿಬಿಟ್ಟು ‘ಮಹಿಳೆಯರಿಗೆ ಸ್ವಾತಂತ್ರ ಜಾಸ್ತಿಯಾಯಿತು, ಈ ಸಂವಿಧಾನದಿಂದಲೇ ಮಹಿಳೆಯರಿಗೆ ಈ ರೀತಿಯ ಅವಕಾಶಗಳು ಸಿಗುತ್ತಿವೆ, ಸಂವಿಧಾನ ಮನುವಿನ ಕಾಲದ ಪರಂಪರೆಯನ್ನು ಒಳಗೊಂಡಿಲ್ಲ’ವೆಂದು ತನ್ನ ಬ್ರಾಹ್ಮಣ್ಯ ಮನಸ್ಥಿತಿಯನ್ನು ಹೊರಹಾಕಿದ್ದಾನೆ. ಇವರ ದೃಷ್ಟಿಯಲ್ಲಿ ಹೆಣ್ಣೆಂದರೆ ಭೋಗದ ವಸ್ತು, ಗಂಡಸರ ಸೇವೆಗಾಗಿಯೇ ಇರುವ ಪ್ರಾಣಿಯ ಇನ್ನೊಂದು ರೂಪ, ಮಕ್ಕಳನ್ನು ಹೆರುವ ಯಂತ್ರ,  ಮನೆಗೆಲಸಕ್ಕೆಂದೇ ಇರುವ ಆಳುಗಳು ಬೇಕೆಂದಾಗ ಬಳಸಿ, ಬೇಡವೆಂದಾಗ ಬಿಸಾಡುವ ವಸ್ತು. ಮನೆಯ ಹೊಸ್ತಿಲ ಗೆರೆ ದಾಟಬಾರದ, ಓದಿನಲ್ಲಿ, ಉನ್ನತ ಹುದ್ದೆಯನ್ನು ಪಡೆಯಲು ಅನರ್ಹಳು. ಇದನ್ನೇ ಮನುಧರ್ಮಶಾಸ್ತ್ರ ಹೇಳುತ್ತದೆ. ಇದು ಅವರ ದೃಷ್ಟಿಯಲ್ಲಿ ಹಿಂದೂ ಪರಂಪರೆ, ಸಂಸ್ಕೃತಿ.
ಈ ದೇಶದ ಜಾತಿಯಾಧಾರಿತ ಶೋಷಿತ ಸಮುದಾಯಗಳೂ ಸಹ ಹಿಂದೂ ಧರ್ಮದ ಪ್ರಕಾರ ಪ್ರಾಣಿಗಳಿಗಿಂತ ಕಡೆ. ಬೈರಪ್ಪನವರ ಪರಂಪರೆಯಲ್ಲಿ ಜಾತಿಯೇ ಶ್ರೇಷ್ಠ, ಮಾನವೀಯತೆಯಲ್ಲ. ಮೇಲ್ಜಾತಿಗಳಿಗೆ ಕೆಳ ಜಾತಿಗಳು ಅಧೀನವಾಗಿರಬೇಕು. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಮನುಷ್ಯನ ರೀತಿ ನೋಡದೇ ಇರುವುದೇ ಅವರ ಹಿಂದೂ ಧರ್ಮ. ಇಂಥಹ ಧರ್ಮವು ಅವರಿಗೆ ಶ್ರೇಷ್ಠ ಹೇಗಾಗುತ್ತದೆಂದು ಸಂವಿಧಾನ ಪ್ರಶ್ನೆ ಮಾಡುತ್ತದೆ, ಮಹಿಳೆಯು ಪುರುಷನಷ್ಟೇ ಸಮಾನಳು ಎಂದು ಪ್ರತಿಪಾದಿಸುತ್ತದೆ, ಸಂವಿಧಾನ ಈ ದೇಶದ ಎಲ್ಲಾ ಜಾತಿಯವರಿಗೂ ಸಮಾನತೆಯನ್ನು ಹೇಳುವುದಲ್ಲದೆ, ಪರಸ್ಪರ ಗೌರವದಿಂದ ಬದುಕಬೇಕೆಂದು ಪ್ರತಿಪಾದಿಸುತ್ತದೆ. ಹಿಂದೂ ಧರ್ಮ, ಮನುಧರ್ಮಶಾಸ್ತ್ರದ ಕಲ್ಮಶವನ್ನು  ತಲೆಯಲ್ಲಿಟ್ಟುಕೊಂಡಿರುವವರಿಗೆ ಈ ಮಾನವೀಯ ನೆಲೆಯ ಸಂವಿಧಾನವನ್ನು ಒಪ್ಪಲು ಸಾದ್ಯವಿಲ್ಲ. ದೇಶ ಧರ್ಮದ ಆಧಾರದಲ್ಲಿ ನಡೆಯಬಾರದೆಂದು ಪ್ರತಿಪಾದಿಸಿದ್ದ ಅಂಬೇಡ್ಕರ್ ಇದನ್ನು ಅರ್ಥ ಮಾಡಿಕೊಂಡು ಸಂವಿಧಾನದಲ್ಲಿ  ಕಡಿವಾಣ ಹಾಕುವ ಪ್ರಯತ್ನ ಮಾಡಿದ್ದಾರೆ. ಹಾಗಾಗಿಯೇ ಈ ಸಂವಿಧಾನವನ್ನು ಅವರು ಒಪ್ಪಲು ಸಾಧ್ಯವಿಲ್ಲ.
ಈ ಸಂವಿಧಾನ ರಚನೆಯೇ ಮನುವಾದಿಗಳಿಗೆ ಮೊದಲ ಸೋಲಾಗಿದೆ. ಸಂವಿಧಾನ ರಚನೆಗೆ ಮುಂಚೆಯೇ ಅದರ ವಿರುದ್ದ ಅಪಸ್ವರ ಎತ್ತಿದ್ದಲ್ಲದೆ, ದೇಶದ 79 ಕಡೆ ಪ್ರತಿಭಟನೆಯನ್ನು ಸಹ ಮಾಡಿದ್ದರು. ಹಿಂದೆ ಬುದ್ದ, ಬಸವಣ್ಣನ ಕಾಲದಲ್ಲಿ ಸೋಲುಂಡವರು, ಪುನಃ ಸಂವಿಧಾನದ ಮೂಲಕ ನಿಯಂತ್ರಣದಲ್ಲಿದ್ದಾರೆ. ಒಂದು ವೇಳೆ ಇದರಲ್ಲಿ ಸಂವಿಧಾನ ಸೋತರೆ ಈ ದೇಶದ ಸಮಸ್ತ ಶೋಷಿತ ಸಮುದಾಯಗಳ, ಮೇಲ್ಜಾತಿ ಮಹಿಳೆಯರೂ ಒಳಗೊಂಡಂತೆ ಎಲ್ಲಾ ಮಹಿಳೆಯರ ಸೋಲಾಗುತ್ತದೆ. ಸ್ವಾತಂತ್ರ್ಯ, ಸಮಾನತೆಯ ಸೋಲಾಗುತ್ತದೆ. ಸಂವಿಧಾನವನ್ನು ಉಳಿಸಿ-ಪೋಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...