Homeಕರೋನಾ ತಲ್ಲಣಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ಇಡೀ ಜಗತ್ತನ್ನೆ ತಲ್ಲಣಗೊಳಿಸಿದೆ. ಕೋಟ್ಯಾಂತರ ಜನರಿಗೆ ಹರಡಿದ ಈ ಸೋಂಕು ಲಕ್ಷಾಂತರ ಜನರ ಪ್ರಾಣ ತೆಗೆದುಕೊಂಡಿದೆ. ಈ ಒಂದೂವರೆ ವರ್ಷದಲ್ಲಿ ಈ ಸಾಂಕ್ರಾಮಿಕ ಪಿಡುಗನ್ನು ನಿರ್ವಹಿಸಲು ಹಲವಾರು ನಾಯಕರು ಹೆಣಗಾಡಿದ್ದಾರೆ. ಕೋವಿಡ್‌ ಅನ್ನು ನಿಗ್ರಹಿಸುವುದು ಬಹು ಕಷ್ಟದ ಕೆಲಸ. ಆದರೂ ಕೆಲವು ನಾಯಕರು ರೋಗ ತೀವ್ರತೆಯನ್ನು ಕಡಿಮೆ ಮಾಡಲು ಯತ್ನಿಸಿದ್ದಾರೆ. ಅದೇ ವೇಳೆಯಲ್ಲಿ ಕೆಲವು ನಾಯಕರು ಅತ್ಯಂತ ಕಳಪೆ ನಿರ್ವಹಣೆಯಿಂದ ಕೋವಿಡ್ ಮತ್ತಷ್ಟು ಉಲ್ಬಣಿಸಲು, ಅಪಾರ ಸಾವು ನೋವುಗಳುಂಟಾಗಲು ಕಾರಣರಾಗಿದ್ದಾರೆ.

ವೈಜ್ಞಾನಿಕ ಮಾಹಿತಿಗಳನ್ನು, ತಜ್ಞರ ವರದಿಗಳನ್ನು ಕಡೆಗಣಿಸುವ ಮೂಲಕ, ಮೂಡನಂಬಿಕೆಗಳನ್ನು ಪ್ರೋತ್ಸಾಹಿಸುವ ಮೂಲಕ, ಮಾಸ್ಕ್, ಸಾಮಾಜಿಕ ಅಂತರದ ನಿಯಮಗಳನ್ನು ಗಾಳಿಗೆ ತೂರುವ ಮೂಲಕ, ಸಮರ್ಪಕ ವೈದ್ಯಕೀಯ ವ್ಯವಸ್ಥೆ ಮಾಡದಿರುವುದರ ಮೂಲಕ ಅತಿ ಕೆಟ್ಟ ಕೋವಿಡ್‌ ನಿರ್ವಹಣೆಗೆ ಇವರು ಕಾರಣರಾಗಿದ್ದಾರೆ. ಅಮೆರಿಕ ಮೂಲಕ The Conversation ಎಂಬ ಎನ್‌ಜಿಓ ಒಂದು ‘ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು’ ಎಂದು ಐದು ದೇಶದ ಪ್ರಧಾನಿ/ಅಧ್ಯಕ್ಷರ ಪಟ್ಟಿ ಮಾಡಿದೆ. ಅವರಲ್ಲಿ ಅತಿ ಕೆಟ್ಟ ಕೋವಿಡ್ ನಿರ್ವಹಣೆ ಮಾಡಿದವರು ಯಾರು ಎಂಬ ಟ್ವಿಟರ್ ಪೋಲ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಶೇ.90 ರಷ್ಟು ಮತಗಳನ್ನು ಪಡೆಯುವ ಮೂಲಕ ಅಗ್ರ ಸ್ಥಾನ ಪಡೆದಿದ್ದಾರೆ.

ವಿಶ್ವದ ಕೆಟ್ಟ ಸಾಂಕ್ರಾಮಿಕ ನಾಯಕರು ಎಂದು ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ, ಭಾರತದ ಪ್ರಧಾನ ನರೇಂದ್ರ ಮೋದಿ, ಮೆಕ್ಸಿಕೋದ ಆಮ್ಲೊ, ಅಮೆರಿಕದ ಡೋನಾಲ್ಡ್ ಟ್ರಂಪ್ ಮತ್ತು ಬೆಲಾರಸ್‌ನ ಲುಕಾಶೆಂಕೊರವರನ್ನು ಗುರುತಿಸಿದೆ. ಟ್ವಿಟರ್ ಪೋಲ್‌ನಲ್ಲಿ ಒಟ್ಟು 75,450 ಮತ ಚಲಾವಣೆಯಾಗಿದ್ದು, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶೇ.90 ರಷ್ಟು ಮತಗಳನ್ನು ಪಡೆದು ಕೆಟ್ಟ ಸಾಂಕ್ರಾಮಿಕ ನಾಯಕರಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಅಮೆರಿಕದ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ 5% ಮತಗಳೊಂದಿಗೆ ಎರಡನೇ ಸ್ಥಾನ ಪಡೆದರೆ, 3.7% ಮತಗಳೊಂದಿಗೆ ಬ್ರೆಜಿಲ್‌ನ ಜೈರ್ ಬೋಲ್ಸೊನಾರೊ ತೃತೀಯ ಸ್ಥಾನದಲ್ಲಿದ್ದಾರೆ. ಮೆಕ್ಸಿಕೋದ ಆಮ್ಲೊ 1.3% ಮತಗಳನ್ನು ಪಡೆದರು. ಟ್ವಿಟರ್ ಪೋಲ್‌ಗೆ ಕೇವಲ ನಾಲ್ಕು ಆಯ್ಕೆಗಳು ಇದ್ದ ಕಾರಣ ಬೆಲಾರಸ್‌ನ ಲುಕಾಶೆಂಕೊರವರಿಗೆ ಮತ ಹಾಕಬೇಕಾದರೆ ಕಮೆಂಟ್ ಮಾಡಲು ಸೂಚಿಸಲಾಗಿತ್ತು. ಆದರೆ ಕಮೆಂಟ್ ಸೆಕ್ಷನ್‌ನಲ್ಲಿ ನರೇಂದ್ರ ಮೋದಿ ಹೆಸರುಗಳೆ ತುಂಬಿಹೋಗಿವೆ.

ಭಾರತದ ಇಂದಿನ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸಿದ್ದು ಅವರು, ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ.

ತಜ್ಞರು ಎರಡನೇ ಅಲೆಯ ಬಗ್ಗೆ ಸಾಕಷ್ಟು ಹೆಚ್ಚರಿಸಿದ್ದರೂ ಸಹ ನರೇಂದ್ರ ಮೋದಿಯವರು 2021ರ ಜನವರಿಯಲ್ಲಿ “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸುವ ಮೂಲಕ ಮಾನವೀಯತೆಯನ್ನು ಉಳಿಸಿದೆ, ವಿಶ್ವಕ್ಕೆ ಮಾದರಿಯಾಗಿದೆ” ಎಂದು ಜಾಗತಿಕ ವೇದಿಕೆಯಲ್ಲಿ ಘೋಷಿಸಿದರು. ಮಾರ್ಚ್ ನಲ್ಲಿ “ನಾವು ಕೋವಿಡ್‌ ಅಂತ್ಯಕಾಲದಲ್ಲಿದ್ದೇವೆ” ಎಂದು ಭಾರತದ ಆರೋಗ್ಯ ಸಚಿವ ಹರ್ಷವರ್ಧನ್ ಘೋಷಿಸಿದರು. ಅಂದರೆ ಕೊರೊನಾ ಬಲಪಡೆಯುತ್ತಿರುವ ಸಮಯದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕಿದ್ದ ಭಾರತ ತೀವ್ರ ನಿರ್ಲಕ್ಷ್ಯ ವಹಿಸಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಏಪ್ರಿಲ್‌ನಲ್ಲಿ ದೊಡ್ಡ ದೊಡ್ಡ ಚುನಾವಣಾ ರ್ಯಾಲಿಗಳಲ್ಲಿ ಮೋದಿ ಮತ್ತು ಇತರ ರಾಜಕೀಯ ನಾಯಕರು ಪಾಲ್ಗೊಂಡರು. ಆರೋಗ್ಯ ತಜ್ಞರ ಎಚ್ಚರಿಕೆಯ ಹೊರತಾಗಿಯೂ ಲಕ್ಷಾಂತರ ಜನರು ಸೇರುವ ಕುಂಭಮೇಳಕ್ಕೆ ಅವಕಾಶ ನೀಡಲಾಯಿತು. ಇದು ಕೋವಿಡ್ ಎರಡನೇ ಅಲೆಯ ತೀವ್ರವಾಗಿ ಹರಡಿ ಹಾನಿಮಾಡಲು ಕಾರಣವಾಯಿತು ಎಂದು ವರದಿ ತಿಳಿಸಿದೆ.

“ವೈದ್ಯಕೀಯ ಸಮೂಹವು ಜನರಿಗೆ ಕಡ್ಡಾಯವಾದ ಕೋವಿಡ್ ಮಾನದಂಡಗಳನ್ನು ಅರ್ಥ ಮಾಡಿಸಲು ಶ್ರಮಿಸುತ್ತಿದ್ದರೆ, ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಯಲ್ಲಿ ತೂರುವ ದೊಡ್ಡ ರಾಜಕೀಯ ರ‍್ಯಾಲಿಗಳನ್ನು ನಡೆಸಲು ಪ್ರಧಾನಿ ಮೋದಿ ಹಿಂಜರಿಯಲಿಲ್ಲ” ಎಂದು ಇದೇ ಸಮಯದಲ್ಲಿ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಷ್ಟ್ರೀಯ ಉಪಾಧ್ಯಕ್ಷ ಡಾ.ನವಜೋತ್ ದಹಿಯಾ ಆರೋಪಿಸಿದ್ದರು.

ಲಸಿಕೆ ವಿಚಾರದಲ್ಲಿಯೂ ಮೋದಿ ಸಂಪೂರ್ಣವಾಗಿ ಎಡವಿದರು. ಭಾರತದಲ್ಲಿ ಲಸಿಕೆ ಕೊರತೆಯಿದ್ದರೂ ವಿದೇಶಗಳಿಗೆ ರಫ್ತು ಮಾಡಲಾಯಿತು. ಈಗ ಭಾರತದಲ್ಲಿ ಲಸಿಕೆಗೆ ಹಾಹಾಕಾರವೆದ್ದಿದೆ ಎಂದು ವರದಿ ಟೀಕಿಸಿದೆ.


ಇದನ್ನೂ ಓದಿ: ‘ಮೋದಿಯೇ ಕೊರೋನಾ ಸೂಪರ್ ಸ್ಪ್ರೆಡರ್, 2ನೆ ಅಲೆಗೆ ಅವರೇ ಕಾರಣ’: ಭಾರತೀಯ ವೈದ್ಯಕೀಯ ಸಂಘದ ಉಪಾಧ್ಯಕ್ಷರ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...