Homeಮುಖಪುಟಉತ್ತರ ಪ್ರದೇಶದ ಕೊರೊನಾ ನಿರ್ವಹಣೆ ಬಗ್ಗೆ ಸಿಎಂ ಆದಿತ್ಯನಾಥ್‌ಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ

ಉತ್ತರ ಪ್ರದೇಶದ ಕೊರೊನಾ ನಿರ್ವಹಣೆ ಬಗ್ಗೆ ಸಿಎಂ ಆದಿತ್ಯನಾಥ್‌ಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ಪರಿಣಾಮದಿಂದ ‘ಮಧ್ಯಮ ವರ್ಗ’ ಸಂಕಷ್ಟಕ್ಕೆ ಈಡಾಗುತ್ತಿದೆ. ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ಶುಲ್ಕ ವಿಧಿಸುತ್ತಿವೆ ಇವುಗಳನ್ನು ನಿವಾರಿಸಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬರೆದ ಪತ್ರದಲ್ಲಿ, “ಸಾಂಕ್ರಾಮಿಕ ರೋಗದ ಎರಡನೇ ಅಲೆಯು ಜನಸಾಮಾನ್ಯರ ಮೇಲೆ ತೀವ್ರ ಪರಿಣಾಮ ಬೀರಿದೆ. ಆಡಳಿತದ ಅಸಮರ್ಥತೆ ಮತ್ತು ಸಿದ್ಧತೆಯ ಕೊರತೆಯಿಂದಾಗಿ ಜನರು ಅಸಹನೀಯ ನೋವು ಅನುಭವಿಸಬೇಕಾಯಿತು” ಎಂದರು.

“ಏಪ್ರಿಲ್-ಮೇ ತಿಂಗಳಲ್ಲಿನ ಕೊರೊನಾ ಅಪಾಯದ ಬಗ್ಗೆ ಸರ್ಕಾರಕ್ಕೆ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಅನೇಕ ಅನಗತ್ಯ ನಿಯಮಗಳು ಜನರಿಗೆ ಸಮಸ್ಯೆಗಳನ್ನು ತಂದಿಟ್ಟಿದೆ” ಎಂದು ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

’ಒಂದು ಕಡೆ ಸಾಂಕ್ರಾಮಿಕ ರೋಗವು ನಮ್ಮನ್ನು ಕಾಡುತ್ತಿದೆ, ಮತ್ತೊಂದೆಡೆ ಇದು ಜನರ ಜೀವನೋಪಾಯ, ಉದ್ಯೋಗ ಮತ್ತು ವ್ಯವಹಾರದ ವಿಷಯದಲ್ಲಿ ಭಾರಿ ತೊಂದರೆಗಳನ್ನು ಸೃಷ್ಟಿಸಿದೆ’ ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

“ಇಂದು, ಕೋಟ್ಯಾಂತರ ಜನರು ತಮ್ಮ ಭವಿಷ್ಯದ ಬಗ್ಗೆ ಭಯಭೀತರಾಗಿದ್ದಾರೆ, ಅವರ ಉದ್ಯೋಗ, ಸಂಪಾದನೆಯ ದಾರಿ ಕಡಿಮೆಯಾಗಿವೆ. ಇತ್ತ ಹಣದುಬ್ಬರ ಹೆಚ್ಚಾಗಿದ್ದು, ವಿಶೇಷವಾಗಿ ಮಧ್ಯಮ ವರ್ಗವನ್ನು ತೊಂದರೆಗೆ ಸಿಲುಕಿಸಿದೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಪತ್ರದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜ್ಯದ ಜನರಿಗೆ ಪರಿಹಾರ ಒದಗಿಸಲು ಯೋಗಿ ಆದಿತ್ಯನಾಥ್ ಅವರಿಗೆ ಐದು ಸಲಹೆಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!

ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ನಿವಾರಣೆಯಲ್ಲಿ ಖಾಸಗಿ ವಲಯದ ಆಸ್ಪತ್ರೆಗಳು ದೊಡ್ಡ ಪಾತ್ರವಹಿಸಿವೆ, ಆದರೆ ಖಾಸಗಿ ಆಸ್ಪತ್ರೆಗಳು ಜನರಿಗೆ ಕೊರೊನಾ ಚಿಕಿತ್ಸೆಗಾಗಿ ಭಾರಿ ಮೊತ್ತವನ್ನು ವಿಧಿಸುತ್ತಿವೆ. ಆದರಿಂದ ವೈದ್ಯಕೀಯ ಸೌಲಭ್ಯಗಳಿಗೆ ಅನುಗುಣವಾಗಿ ಜನರಿಗೆ ಅನುಕೂಲಕರ ಬೆಲೆಗಳನ್ನು ನಿಗದಿಪಡಿಸಲು ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಬೇಕು ಎಂದು ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಣವನ್ನು ವಸೂಲಿ ಮಾಡಿದವರಿಗೆ ರಾಜ್ಯ ಸರ್ಕಾರವು ಪರಿಹಾರವನ್ನು ನೀಡಬೇಕು ಎಂದು ಹೇಳಿದ್ದಾರೆ.

ಲಾಕ್‌ಡೌನ್ ಸಮಯದಲ್ಲಿ ಜನರಿಗೆ ತೊಂದರೆಯಾಗದಂತೆ, ಹಣದುಬ್ಬರವನ್ನು ನಿಯಂತ್ರಿಸಬೇಕು ಮತ್ತು ಅಗತ್ಯ ವಸ್ತುಗಳಾದ ಖಾದ್ಯ ತೈಲಗಳು, ತರಕಾರಿಗಳು ಮತ್ತು ಹಣ್ಣುಗಳ ಬೆಲೆ ದರ ನಿಗದಿಪಡಿಸುವಂತೆ ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.

ಈಗಿರುವ ಸಮಸ್ಯೆಗಳ ನಡುವೆಯೇ ಹೆಚ್ಚಿನ ವಿದ್ಯುತ್ ಬಿಲ್‌ಗಳಿಂದಾಗಿ ಜನರ ಸಮಸ್ಯೆಗಳು ಹೆಚ್ಚಾಗಿದೆ. ಹೀಗಾಗಿ   ಬಿಲ್ ಪಾವತಿಗೆ ಪರಿಹಾರ ನೀಡಬೇಕು ಮತ್ತು ವಿದ್ಯುತ್ ಬೆಲೆಯನ್ನು ಮತ್ತಷ್ಟು ಹೆಚ್ಚಿಸಬಾರದು ಎಂದಿದ್ದಾರೆ.

“ಶಾಲೆಗಳು ಮುಚ್ಚಲ್ಪಟ್ಟಿವೆ ಆದರೆ ಪ್ರತಿ ತಿಂಗಳು ಶುಲ್ಕವನ್ನು ಕಟ್ಟುವಂತೆ ಶಾಲೆಗಳು ಒತ್ತಾಯಿಸುತ್ತಿದ್ದು, ಪೋಷಕರು ಒತ್ತಡದಲ್ಲಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಪತ್ರದಲ್ಲಿ ಬರೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು, ಸಾವುಗಳ ಸಂಖ್ಯೆ ಹೆಚ್ಚಿದ್ದರೂ ಸರ್ಕಾರ ಮಾಹಿತಿಯನ್ನು ಮುಚ್ಚಿಡುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತರು, ವಿಪಕ್ಷಗಳು ಆರೋಪಿಸಿವೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...