Homeಕರೋನಾ ತಲ್ಲಣಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಸಾಂಕ್ರಾಮಿಕ ನಿಯಂತ್ರಿಸಲು ವಿಫಲರಾದ ಈ ಐದು ನಾಯಕರು ಎಡವಿದ್ದೆಲ್ಲಿ?

ಸಾಂಕ್ರಾಮಿಕ ರೋಗದ ದಾಳಿ ಇನ್ನೂ ಮುಗಿದಿಲ್ಲ. ಆದರೆ ಈ ವಿಶ್ವ ನಾಯಕರು ಈಗಾಗಲೇ ಮಾರಣಾಂತಿಕ ಕೊರೋನಾವನ್ನು ಪರಿಣಾಮಕಾರಿಯಾಗಿ ಎದುರಿಸಲು ವಿಫಲವಾದ ಕಾರಣ ಇತಿಹಾಸದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ.

- Advertisement -
- Advertisement -

ಸಾಂಕ್ರಾಮಿಕ ನಿರ್ವಹಣೆಯಲ್ಲಿ ವಿಫಲರಾದ ಐವರು ವಿಶ್ವನಾಯಕರ ಆಡಳಿತ ಶೈಲಿ ಕುರಿತು ಇಲ್ಲಿ ವಿಶ್ಲೇಷಣೆಯಿದೆ. ಭಾರತೀಯರಾದ ಪ್ರೊ. ಸುಮಿತ್ ಗಂಗೂಲಿ ಸೇರಿದಂತೆ ಹಲವು ದೇಶಗಳ ತಜ್ಞರು, ಪ್ರೊಫೆಸ್‌ರ್‌ಗಳು ಮತ್ತು ವೈದ್ಯರ ನಡುವೆ ನಡೆದ ಚರ್ಚೆಯನ್ನು ‘ದಿ ವೈರ್’ ಸಂಗ್ರಹಿಸಿ ಕೊಟ್ಟಿದೆ.

‘ಕೆಲವು ಪ್ರಸ್ತುತ ಮತ್ತು ಮಾಜಿ ವಿಶ್ವ ನಾಯಕರು ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅಲಕ್ಷ್ಯ ಮಾಡುವ ಮೂಲಕ, ವಿಜ್ಞಾನವನ್ನು ಕಡೆಗಣಿಸುವ ಮೂಲಕ, ಸಾಮಾಜಿಕ ದೂರ ಮತ್ತು ಮಾಸ್ಕ್‌ಗಳಂತಹ ಆರೋಗ್ಯದ ಮಧ್ಯಸ್ಥಿಕೆಗಳನ್ನು ನಿರ್ಲಕ್ಷಿಸುವ ಮೂಲಕ ತಮ್ಮ ದೇಶದಲ್ಲಿ ಕೊರೊನಾ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಈ ಪಟ್ಟಿಯಲ್ಲಿರುವ ಐವರೂ ಪುರುಷ ಸಿಂಹಗಳೇ! ಭಾರತದ ನರೇಂದ್ರ ಮೋದಿ ಅದರಲ್ಲಿ ಒಬ್ಬರು ಎನ್ನುತ್ತಾರೆ’ ಇಂಡಿಯಾನಾ ವಿಶ್ವವಿದ್ಯಾಲಯದ ಪ್ರೊ. ಸುಮಿತ್ ಗಂಗೂಲಿ.

ಭಾರತವು ಜಾಗತಿಕ ಸಾಂಕ್ರಾಮಿಕದ ಹೊಸ ಕೇಂದ್ರಬಿಂದುವಾಗಿದ್ದು, ಮೇ 2021 ರ ಹೊತ್ತಿಗೆ ದಿನಕ್ಕೆ ಸುಮಾರು 4 ಲಕ್ಷ ಹೊಸ ಪ್ರಕರಣಗಳನ್ನು ದಾಖಲಿಸಿದೆ. ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳು ಸಾಯುತ್ತಿದ್ದಾರೆ, ಏಕೆಂದರೆ ಆಮ್ಲಜನಕವಿಲ್ಲ ಮತ್ತು ಚಿಕಿತ್ಸೆಗೆ ಅಗತ್ಯವಾದ ಔಷಧಿಗಳಿಲ್ಲ ಮತ್ತು ವೆಂಟಿಲೇಟರ್‌ಗಳೂ ಇಲ್ಲ. ಜೊತೆಗೆ ಉಚಿತ ಹಾಸಿಗೆಗಳೇ ಲಭ್ಯವಿಲ್ಲ.

ದೇಶದ ದುರಂತಕ್ಕೆ ಅನೇಕ ಭಾರತೀಯರು ಒಬ್ಬ ವ್ಯಕ್ತಿಯನ್ನು ದೂಷಿಸುತ್ತಾರೆ: ಪ್ರಧಾನಿ ನರೇಂದ್ರ ಮೋದಿ!

ಜನವರಿ 2021ರಲ್ಲಿ, ಮೋದಿ ಜಾಗತಿಕ ವೇದಿಕೆಯಲ್ಲಿ ಭಾರತವು “ಕೊರೊನಾವನ್ನು ಪರಿಣಾಮಕಾರಿಯಾಗಿ ಎದುರಿಸಿ ಗೆದ್ದಿದೆ” ಎಂದು ಘೋಷಿಸಿದರು. ಮಾರ್ಚ್‌ನಲ್ಲಿ ಅವರ ಆರೋಗ್ಯ ಸಚಿವರು ಸಾಂಕ್ರಾಮಿಕ ರೋಗವು “ಎಂಡ್ ಗೇಮ್” ತಲುಪುತ್ತಿದೆ ಎಂದು ಘೋಷಿಸಿದರು. ವಾಸ್ತವವಾಗಿ ಭಾರತದಲ್ಲಿ ಮತ್ತು ವಿಶ್ವಾದ್ಯಂತ ಕೊರೊನಾ ಶಕ್ತಿಯನ್ನು ಪಡೆಯುತ್ತಿತ್ತು. ಆದರೆ ಮೋದಿ ಸರ್ಕಾರವು ಸಂಭವನೀಯ ಆಕಸ್ಮಿಕಗಳಿಗೆ ಯಾವುದೇ ಸಿದ್ಧತೆಗಳನ್ನು ಮಾಡಲಿಲ್ಲ.

ದೇಶದಲ್ಲಿ ಕೋವಿಡ್ ಎರಡನೆ ಅಲೆ ತೀವ್ರವಾಗುವ ಸಂದರ್ಭದಲ್ಲಿ ಮೋದಿ ಮತ್ತು ಅವರ ಪಕ್ಷದ ಇತರ ಸದಸ್ಯರು ಏಪ್ರಿಲ್ ಚುನಾವಣೆಗೆ ಮುಂಚಿತವಾಗಿ ಹೊರಾಂಗಣ ಪ್ರಚಾರ ರ‍್ಯಾಲಿಗಳನ್ನು ನಡೆಸಿದರು. ಆ ರ‍್ಯಾಲಿಗಳಲ್ಲಿ ಮಾಸ್ಕ್ ಇರಲಿಲ್ಲ, ದೈಹಿಕ ಅಂತರ ಇರಲು ಸಾಧ್ಯವೇ? ಜನವರಿಯಿಂದ ಮಾರ್ಚ್‌ವರೆಗೆ ಲಕ್ಷಾಂತರ ಜನರನ್ನು ಸೆಳೆಯುವ ಕುಂಭಮೇಳ ಉತ್ಸವಕ್ಕೂ ಮೋದಿ ಅವಕಾಶ ನೀಡಿದರು. ಸಾರ್ವಜನಿಕ ಆರೋಗ್ಯ ಅಧಿಕಾರಿಗಳು, ತಜ್ಞರು ಈಗ ಉತ್ಸವವು ಒಂದು ಸೂಪರ್-ಸ್ಪ್ರೆ ಡರ್ ಆಗಿದೆ ಎನ್ನುತ್ತಿದ್ದಾರೆ.

ಕಳೆದ ವರ್ಷ ಮೋದಿಯವರು ತಮ್ಮ ಯಶಸ್ಸನ್ನು ತಿಳಿಸಿದಂತೆ, ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ಭಾರತವು 10 ದಶಲಕ್ಷಕ್ಕೂ ಹೆಚ್ಚಿನ ಲಸಿಕೆ ಪ್ರಮಾಣವನ್ನು ನೆರೆಯ ದೇಶಗಳಿಗೆ ಕಳುಹಿಸಿತು. ಭಾರತದ 139 ಕೋಟಿ ಜನರಲ್ಲಿ ಕೇವಲ 1.9% ರಷ್ಟು ಜನರು ಮೇ ಆರಂಭದಲ್ಲಿ ಸಂಪೂರ್ಣ ಲಸಿಕೆ ಪಡೆದಿದ್ದಾರೆ.

ಬ್ರೆಜಿಲ್‌ನ ಜೈರ್ ಬೋಲ್ಸನಾರೊ

ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ ಅವರು ಕೋವಿಡ್ ಬಗ್ಗೆ ತೀವ್ರ ನಿರ್ಲಕ್ಷ್ಯ ಮಾಡಿದರು. ಕೊರೊನಾ ‘ಬರೀ ಜ್ವರ ಬಿಡಿ’ ಎಂದು ಪರಿಸ್ಥಿತಿಯನ್ನ ಹದಗೆಡಿಸಿದರು.

ಆರೋಗ್ಯ ಸಚಿವಾಲಯದ ಆಡಳಿತಾತ್ಮಕ ವಿಷಯಗಳಾದ ಕ್ಲಿನಿಕಲ್ ಪ್ರೋಟೋಕಾಲ್‌ಗಳು, ಡೇಟಾ ಬಹಿರಂಗಪಡಿಸುವಿಕೆ ಮತ್ತು ಲಸಿಕೆ ಸಂಗ್ರಹಣೆಗಳಲ್ಲಿ ಬೋಲ್ಸೊನಾರೊ ಹಸ್ತಕ್ಷೇಪ ಮಾಡಿ, ಅವೈಜ್ಞಾನಿಕ ನಿರ್ಧಾರಗಳನ್ನು ತೆಗೆದುಕೊಂಡರು. ಧಾರ್ಮಿಕ ಸ್ಥಳಗಳಲ್ಲಿ ಮಾಸ್ಕ್ ಬಳಸುವುದನ್ನು ಕಡ್ಡಾಯಗೊಳಿಸುವ ಮತ್ತು ಸಾಂಕ್ರಾಮಿಕ ರೋಗದಿಂದ ಶಾಶ್ವತವಾಗಿ ಹಾನಿಗೊಳಗಾದ ಆರೋಗ್ಯ ವೃತ್ತಿಪರರಿಗೆ ಪರಿಹಾರ ನೀಡುವ ಶಾಸನವನ್ನು ಅವರು ರದ್ದು ಮಾಡಿದರು. ಸಾಮಾಜಿಕ ದೂರವನ್ನು ಉತ್ತೇಜಿಸುವ ಆಡಳಿತದ ಪ್ರಯತ್ನಗಳಿಗೆ ಅವರು ಅಡ್ಡಿಯುಂಟು ಮಾಡಿದರು. ಸ್ಪಾಗಳು ಮತ್ತು ಜಿಮ್‌ಗಳು ಸೇರಿದಂತೆ ಅನೇಕ ವ್ಯವಹಾರಗಳನ್ನು “ಅಗತ್ಯ” ಎಂದು ತೆರೆಯಲು ಅನುಮತಿ ನೀಡಿದರು. ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಬೋಲ್ಸೊನಾರೊ ಸಾಬೀತಾಗದ ಔಷಧಿಗಳನ್ನು, ಮುಖ್ಯವಾಗಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಆಕ್ರಮಣಕಾರಿಯಾಗಿ ಉತ್ತೇಜಿಸಿದರು.

ಬೆಲಾರಸ್‌ನ ಅಲೆಕ್ಸಾಂಡರ್ ಲುಕಾಶೆಂಕೊ

ಬೆಲಾರಸ್‌ನ ದೀರ್ಘಕಾಲದ ಸರ್ವಾಧಿಕಾರಿ ನಾಯಕ ಅಲೆಕ್ಸಾಂಡರ್ ಲುಕಾಶೆಂಕೊ ಕೋವಿಡ್ ದುರಂತದ ಬೆದರಿಕೆಯನ್ನು ಎಂದಿಗೂ ಒಪ್ಪಿಕೊಂಡಿಲ್ಲ. ಸಾಂಕ್ರಾಮಿಕ ರೋಗದ ಆರಂಭದಲ್ಲಿ, ಇತರ ದೇಶಗಳು ಲಾಕ್‌ಡೌನ್‌ಗಳನ್ನು ಜಾರಿಗೊಳಿಸುತ್ತಿದ್ದಂತೆ, ಲುಕಾಶೆಂಕೊ ಕೋವಿಡ್ ಹರಡುವುದನ್ನು ತಡೆಯಲು ಯಾವುದೇ ನಿರ್ಬಂಧಿತ ಕ್ರಮಗಳನ್ನು ಜಾರಿಗೊಳಿಸದಿರಲು ನಿರ್ಧರಿಸಿದರು. ಬದಲಾಗಿ, ವೋಡ್ಕಾ ಕುಡಿಯುವುದರಿಂದ, ಸೌನಾಕ್ಕೆ ಭೇಟಿ ನೀಡುವುದರಿಂದ ಮತ್ತು ಹೊಲಗಳಲ್ಲಿ ಕೆಲಸ ಮಾಡುವುದರಿಂದ ವೈರಸ್ ತಡೆಗಟ್ಟಬಹುದು ಎಂದು ಅವರು ಹೇಳಿದ್ದಾರೆ.

ಅಮೆರಿಕದ ಡೊನಾಲ್ಡ್ ಟ್ರಂಪ್

ಟ್ರಂಪ್ ಅಧಿಕಾರದಿಂದ ಹೊರಗುಳಿದಿದ್ದಾರೆ. ಆದರೆ ಸಾಂಕ್ರಾಮಿಕ ರೋಗವನ್ನು ಅವರು ತಪ್ಪಾಗಿ ನಿರ್ವಹಿಸಿದ್ದು ಅಮೆರಿಕಾದ ಮೇಲೆ- ವಿಶೇಷವಾಗಿ ಕಪ್ಪು ವರ್ಣದ ಸಮುದಾಯಗಳ ಮೇಲೆ- ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತಿದೆ.

ಸಾಂಕ್ರಾಮಿಕ ರೋಗದ ಆರಂಭಿಕ ನಿರಾಕರಣೆ, ಮಾಸ್ಕ್ ಮತ್ತು ಚಿಕಿತ್ಸೆಗಳ ಬಗ್ಗೆ ತಪ್ಪು ಸಂದೇಶಗಳನ್ನು ಅವರು ನೀಡುತ್ತ ಬಂದರು. ಮೋದಿಯವರಂತೆ ಅವರಿಗೂ ಚುನಾವಣೆ ಗೆಲ್ಲುವುದಷ್ಟೇ ಮುಖ್ಯವಾಗಿತ್ತು.

ಆಫ್ರಿಕನ್ ಅಮೆರಿಕನ್ನರು ಮತ್ತು ಲ್ಯಾಟಿನೋಗಳು ಯುಎಸ್ ಜನಸಂಖ್ಯೆಯ ಕೇವಲ 31%ರಷ್ಟಿದ್ದಾರೆ. ಅವರು ಕೋವಿಡ್ ಪ್ರಕರಣಗಳಲ್ಲಿ 55% ಕ್ಕಿಂತ ಹೆಚ್ಚು ಇದ್ದಾರೆ. ಬಿಳಿಯರ ಮರಣ ಪ್ರಮಾಣಕ್ಕಿಂತ ಕಪ್ಪು ವರ್ಣದವರ ಮರಣ ಪ್ರಮಾಣ ಎರಡೂವರೆ ಪಟ್ಟು ಹೆಚ್ಚಿತ್ತು.
ನಿರುದ್ಯೋಗ ಏರಿಕೆಯಲ್ಲೂ ಟ್ರಂಪ್ ಕಾರಣವಾದರು. ಇದು ಹೆಚ್ಚಾಗಿ ತಟ್ಟಿದ್ದು ಬಿಳಿಯರಲ್ಲದ ಅಮೆರಿಕನ್ ಪ್ರಜೆಗಳಿಗೆ.

ಮೆಕ್ಸಿಕೊದ ಆಂಡ್ರೆಸ್

ಮೆಕ್ಸಿಕೊವು ವಿಶ್ವದಲ್ಲೇ ಅತಿ ಹೆಚ್ಚು ಕೋವಿಡ್ ಸಾವಿನ ಪ್ರಮಾಣವನ್ನು ಹೊಂದಿದೆ. ಇತ್ತೀಚಿನ ಅಂದಾಜಿನ ಪ್ರಕಾರ ಇದು 6,17,000 ಸಾವುಗಳನ್ನು ಅನುಭವಿಸಿದೆ. ಭಾರತ ಮತ್ತು ಅಮೆರಿಕ ಕೂಡ ಸಾವಿನ ಸಂಖ್ಯೆಯಲ್ಲಿ ಮುಂದಿವೆ.

ಮೆಕ್ಸಿಕೊದ ದೀರ್ಘಕಾಲದ, ವಿಪರೀತ ಕೋವಿಡ್ ಏಕಾಏಕಿಗಳಿಗೆ ಅಸಮರ್ಪಕ ರಾಷ್ಟ್ರೀಯ ನಾಯಕತ್ವ ಕಾರಣವಾಗಿದೆ.

ಸಾಂಕ್ರಾಮಿಕ ರೋಗದುದ್ದಕ್ಕೂ, ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಮೆಕ್ಸಿಕೊದ ಪರಿಸ್ಥಿತಿಯ ಸಂಕಷ್ಟವನ್ನು ಮುಚ್ಚಿ ಇಡಲು ನೋಡಿದರು. ಆರಂಭದಲ್ಲಿ, ಅವರು ರಾಷ್ಟ್ರವ್ಯಾಪಿ ಲಾಕ್ ಡೌನ್ ಜಾರಿಗೆ ವಿರೋಧಿಸಿದರು ಮತ್ತು ಅಂತಿಮವಾಗಿ ಮಾರ್ಚ್ 23, 2020 ರಂದು ಮೆಕ್ಸಿಕೊ ಎರಡು ತಿಂಗಳ ಕಾಲ ಸ್ಥಗಿತಗೊಳ್ಳುವಂತೆ ಮಾಡಿದರು. ಅವರು ಆಗಾಗ್ಗೆ ಮಾಸ್ಕ್ ಧರಿಸಲು ನಿರಾಕರಿಸಿದರು.

ಸಾಂಕ್ರಾಮಿಕ ರೋಗವು ಸ್ಫೋಟಗೊಳ್ಳುವ ಮೊದಲೇ, ಲೋಪೆಜ್ ಒಬ್ರಡಾರ್ ಜಾರಿಗೆ ತಂದ ಹಣಕಾಸು ನೀತಿ ಆರೋಗ್ಯ ಬಿಕ್ಕಟ್ಟನ್ನು ಇನ್ನಷ್ಟು ದುಸ್ತರವಾಗಿಸಿದೆ. ನಮ್ಮಲ್ಲಿ ಮೋದಿಯವರ ನೋಟ್‌ಬ್ಯಾನ್, ಅವೈಜ್ಞಾನಿಕ ಜಿಎಸ್‌ಟಿ ನೀತಿಗಳು ಕೂಡ ಭಾರತಕ್ಕೆ ಈಗ ಕಾಡುತ್ತಿವೆ.

(ಕೃಪೆ: ದಿ ವೈರ್)


ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...