Homeಕರ್ನಾಟಕಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಊಟಕ್ಕೆ ಮೊಬೈಲ್ ಆ್ಯಪ್! ನಿರ್ಗತಿಕರು ಆಹಾರ ವಂಚಿತರಾಗಬೇಕೆ ಎಂದು ಕಾಂಗ್ರೆಸ್ ಆಕ್ರೋಶ

ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಹಲವು ಸಿಬ್ಬಂದಿ ಬಳಿ ಆ್ಯಪ್ ಹಾಕಿಕೊಳ್ಳುವ ಮೊಬೈಲ್ ಇಲ್ಲ.ಇರುವ ಮೊಬೈಲ್‌ಗೆ ಆ್ಯಪ್ ಹೊಂದುವುದಿಲ್ಲ ಎನ್ನಲಾಗಿದೆ

- Advertisement -
- Advertisement -

ಕೊರೊನಾ ಲಾಕ್‌ಡೌನ್‌ನಲ್ಲಿ ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತ ಆಹಾರವನ್ನು ಪಡೆಯುವವರಿಂದ ಆಧಾರ್ ಮತ್ತು ಇತರ ವಿವರಗಳನ್ನು ಸಂಗ್ರಹಿಸಲಾಗುತ್ತಿತ್ತು. ಈ ಕ್ರಮದ ವಿರುದ್ಧವೇ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಊಟ ಮಾಡುವವರ ಡೇಟಾ ಪಡೆಯಲು ಮೊಬೈಲ್ ಆ್ಯಪ್ ಬಿಡುಗಡೆ ಮಾಡಿದೆ.

ಕ್ಯಾಂಟೀನ್ ಸಿಬ್ಬಂದಿಗಳು ಮೊಬೈಲ್‌ಗಳಲ್ಲಿ ಊಟ ಪಡೆಯುವರ ಮೊಬೈಲ್ ಸಂಖ್ಯೆ, ಮತ್ತು ಆಹಾರದ ಪೊಟ್ಟಣ ಹಿಡಿದುಕೊಂಡಿರುವ ಛಾಯಾಚಿತ್ರಗಳನ್ನು ಸೆರೆ ಹಿಡಿದು ಅಪ್‌ಲೋಡ್ ಮಾಡುವಂತೆ ಹೇಳಲಾಗಿದೆ. ಜೊತೆಗೆ ಮೂರಕ್ಕಿಂತ ಹೆಚ್ಚು ಆಹಾರ ಪೊಟ್ಟಣಗಳನ್ನು ವಿತರಿಸಿದರೆ, ಆಹಾರ ಪ್ಯಾಕೆಟ್‌ಗಳನ್ನು ಹಸ್ತಾಂತರಿಸುವ ಮೊದಲು ಸಿಬ್ಬಂದಿ ಒನ್ ಟೈಮ್ ಪಾಸ್‌ವರ್ಡ್ (ಒಟಿಪಿ) ಮತ್ತು ಕುಟುಂಬದ ಪಡಿತರ ಚೀಟಿಯನ್ನು ಈ ಆ್ಯಪ್ ಒಳಗೆ ನಮೂದಿಸಬೇಕು.

“ಇಂದಿರಾ ಕ್ಯಾಂಟೀನ್ ಪಾರ್ಸೆಲ್ ವಿತರಣೆ” (Indira Canteen Parcel Distribution) ಅಪ್ಲಿಕೇಶನ್ ಅನ್ನು ಬುಧವಾರ ಬೆಳಿಗ್ಗೆ ಬಿಡುಗಡೆ ಮಾಡಲಾಗಿದೆ. ಆದರೆ, ಕ್ಯಾಂಟೀನ್‌ಗಳಲ್ಲಿ ಕೆಲಸ ಮಾಡುವ ಹಲವು ಸಿಬ್ಬಂದಿ ಬಳಿ ಆ್ಯಪ್ ಹಾಕಿಕೊಳ್ಳುವ ಮೊಬೈಲ್ ಇಲ್ಲ. ಇರುವ ಮೊಬೈಲ್‌ಗೆ ಆ್ಯಪ್ ಹೊಂದುವುದಿಲ್ಲ ಎನ್ನಲಾಗಿದೆ.

ಕೆಲವರಿಗೆ  ಫೋಟೋಗಳನ್ನು ಅಪ್‌ಲೋಡ್ ಮಾಡುವಲ್ಲಿ ಆ್ಯಪ್‌ನಲ್ಲಿ ತೊಂದರೆ, ಆ್ಯಪ್ ಬಳಸಲು ತಾಂತ್ರಿಕ ಜ್ಞಾನದ ಕೊರತೆ ಸೇರಿದಂತೆ ಹಲವು ಕಾರಣದಿಂದಾಗಿ ಸಿಬ್ಬಂದಿಗೆ ತೊಂದರೆಯಾಗಿದ್ದು, ಕ್ಯಾಂಟೀನ್‌ನಲ್ಲಿ ಆಹಾರ ವಿತರಣೆ ಮಾಡುವಲ್ಲಿ ವಿಳಂಬವಾಗಿದೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಸರ್ಕಾರದ ಹೊಸ ನಿಯಮಗಳಿಗೆ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. “ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ಪಡೆಯಬೇಕೆಂದರೆ ದಾಖಲೆ ತೋರಿಸುವಂತಹ ಕೆಟ್ಟ ಸಂಪ್ರದಾಯ ಹಾಕಿದ ಬೆನ್ನಲ್ಲೇ ಈಗ ಮೊಬೈಲ್ ಅಪ್ಲಿಕೇಶನ್ ರಿಜಿಸ್ಟರ್ ಎಂಬ ಅಸಂಬದ್ಧಕ್ಕೆ ಮುಂದಾಗಿದೆ ಸರ್ಕಾರ. ಇಂತಹ ಅತಾರ್ಕಿಕ, ಅಪ್ರಬುದ್ದ ನಿರ್ಣಯ ಕೈಗೊಳ್ಳುವ ಬಿಬಿಎಂಪಿ ಅಧಿಕಾರಿಗಳಿಗೆ ಕೊಂಚವೂ ವಾಸ್ತವದ ಸವಾಲುಗಳ ಜ್ಞಾನ ಇಲ್ಲವೇ…?” ಎಂದು ಪ್ರಶ್ನಿಸಿದೆ.

ಗುರುವಾರ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ “ಅಪ್ಲಿಕೇಶನ್ ಮೂಲಕ ಯಾವ ಸಾಧನೆ ಮಾಡಲು ಹೊರಟಿದೆ ಸರ್ಕಾರ..? ಯಾವ ಉದ್ದೇಶಕ್ಕಾಗಿ ಈ ಡಾಟಾ ಸಂಗ್ರಹಿಸಲಾಗುತ್ತಿದೆ..? ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳಲ್ಲಿ ಸ್ಮಾರ್ಟ್ ಫೋನ್ ಇರುವುದೇ ವಿರಳ, ಅವರಿಗೆ ತಂತ್ರಜ್ಞಾನದ ಅರಿವೂ ಇಲ್ಲ. ಜನರ ಡಾಟಾ ಬಗ್ಗೆ ಸರ್ಕಾರಕ್ಕೆ ಏಕಿಷ್ಟು ಕುತೂಹಲ..? ಇಂತಹ ಅಸಂಬದ್ಧ ನಿಲ್ಲಿಸಿ, ಹಸಿದ ಎಲ್ಲಾ ಬಡವರಿಗೂ ಆಹಾರ ನೀಡಿ” ಎಂದಿದೆ.

’ಆಹಾರ ಪಡೆಯಲು ಬರುವ ಬಡಜನರಲ್ಲಿ ಮೊಬೈಲ್ ಫೋನ್ ಎಲ್ಲರ ಬಳಿ ಇರುತ್ತದೆಯೇ..? ಪಡಿತರ ಚೀಟಿ ಹೊಂದಿರದೇ ಇರುವ ಎಷ್ಟೋ ಮಂದಿ ಇದ್ದಾರೆ, ನಿರ್ಗತಿಕರಿದ್ದಾರೆ, ಭಿಕ್ಷುಕರಿದ್ದಾರೆ, ಇವರೆಲ್ಲರು ಆಹಾರ ವಂಚಿತರಗಬೇಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೇ? ನಿಮ್ಮ ಸರ್ಕಾರ ಯಾಕಿಷ್ಟು ಅಸಂಬದ್ಧ ಅವೈಜ್ಞಾನಿಕ ನಿರ್ಧಾರ ತೆಗೆದುಕೊಳ್ಳುತ್ತದೆ..?’ ಎಂದು ಪ್ರಶ್ನಿಸಿದ್ದಾರೆ.

ಇತ್ತ, ಕ್ಯಾಂಟೀನ್‌ಗಳಲ್ಲಿ ದುಷ್ಕೃತ್ಯದ ಅನುಮಾನ ಇರುವುದರಿಂದ, ದತ್ತಾಂಶಗಳ ಗೊಂದಲ ಹೋಗಲಾಡಿಸಲು ಮತ್ತು ಗುತ್ತಿಗೆದಾರರ ಮೇಲೆ ಕಣ್ಣಿಡಲು ಬಿಬಿಎಂಪಿಗೆ ಆ್ಯಪ್ ಪರಿಚಯಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎಂದು ಇಂದಿರಾ ಕ್ಯಾಂಟೀನ್‌ಗಳ ಮೂಲಕ ಉಚಿತವಾಗಿ ಆಹಾರ ವಿತರಣೆಯ ಉಸ್ತುವಾರಿ ವಹಿಸಿರುವ ವಿಶೇಷ ಆಯುಕ್ತರಾದ (ಹಣಕಾಸು) ತುಳಸಿ ಮದ್ದಿನೇನಿ ಹೇಳಿದ್ದಾರೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...