Homeಕರೋನಾ ತಲ್ಲಣಗಾಳಿಯಲ್ಲಿ 10 ಮೀಟರ್‌ ದೂರ ಸಾಗುತ್ತದೆ ಕೊರೊನಾ ವೈರಸ್ ಸಣ್ಣ ಕಣಗಳು- ಕೇಂದ್ರ ಸರ್ಕಾರ

ಗಾಳಿಯಲ್ಲಿ 10 ಮೀಟರ್‌ ದೂರ ಸಾಗುತ್ತದೆ ಕೊರೊನಾ ವೈರಸ್ ಸಣ್ಣ ಕಣಗಳು- ಕೇಂದ್ರ ಸರ್ಕಾರ

- Advertisement -
- Advertisement -

ಕೊರೊನಾ ಸೋಂಕಿತ ವ್ಯಕ್ತಿ ಸೀನಿದಾಗ, ಉಸಿರು ಬಿಟ್ಟಾಗ ಅಥವಾ ಕೆಮ್ಮಿದಾಗ ಬಾಯಿ ಮತ್ತು ಮೂಗಿನಿಂದ ಹೊರ ಹೊಮ್ಮುವ ಹನಿಗಳು ಎರಡು ಮೀಟರ್‌ ದೂರದವರೆಗೆ ಬೀಳುತ್ತವೆ. ಆ ಹನಿಗಳ ಸಣ್ಣ ಕಣಗಳು (ಏರೋಸಾಲ್) 10 ಮೀಟರ್ ದೂರದವರೆಗೆ ಗಾಳಿಯಲ್ಲಿ ಸಾಗಬಹುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.

ಮಾಹಿತಿಯೊಂದಿಗೆ ಕೋವಿಡ್ ವಿರುದ್ಧ ಹೋರಾಡುವ, ಅನುಸರಿಸಲು ಸುಲಭವಾದ ಮಾರ್ಗಸೂಚಿಗಳನ್ನು ಹಂಚಿಕೊಂಡಿದೆ. ಇದರಲ್ಲಿ ಡಬಲ್ ಮಾಸ್ಕ್ ಬಳಸುವುದು, ದೈಹಿಕ ಅಂತರ ಮತ್ತು ಉತ್ತಮ ಗಾಳಿ, ಸ್ವಚ್ಛತೆ ಇರುವ ಸ್ಥಳಗಳಲ್ಲಿ ಇರುವುದನ್ನು ಅನುಸರಿಸಲು ಹೇಳಿದೆ.

“ಸರಿಯಾದ ಗಾಳಿ, ಸ್ವಚ್ಛತೆ ಇರುವ ವಾತಾವರಣದಲ್ಲಿ ಕೊರೊನಾ ವೈರಸ್ ವ್ಯಕ್ತಿಯಿಂದ ವ್ಯಕ್ತಿಗೆ ಹರಡುವ ಅಪಾಯ ಕಡಿಮೆ ಇದೆ. ತೆರೆದಿರುವ ಕಿಟಕಿಗಳು ಮತ್ತು ಬಾಗಿಲುಗಳು, ಫ್ಯಾನ್ ಮೂಲಕ ಹೆಚ್ಚಿನ ಗಾಳಿ ಒಳ-ಹೊರಗೆ ಹೋಗುವುದರಿಂದ ವೈರಸ್ ಹರಡುವ ಸಾಧ್ಯತೆ ಕಡಿಮೆ ಇದೆ” ಎಂದು ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ ವಿಜಯರಾಘವನ್ ಅವರ ಕಚೇರಿ ಹೊಸ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮನೆಯಲ್ಲೇ ಕೊರೊನಾ ಟೆಸ್ಟ್ ಮಾಡಿಕೊಳ್ಳಲು ಅನುಮತಿ- ಯಾರು ಬಳಸಬಹುದು ಎಂಬ ಮಾಹಿತಿ ಇಲ್ಲಿದೆ

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಜನರನ್ನು ಒತ್ತಾಯಿಸಿರುವ ಸರ್ಕಾರ, ಸೋಂಕಿತ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಎರಡು ಮೀಟರ್ ಒಳಗೆ ಹನಿಗಳು ಬೀಳುತ್ತಿದ್ದರೆ, ಸಣ್ಣ ಏರೋಸಾಲ್ ಕಣಗಳು 10 ಮೀಟರ್‌ವರೆಗೆ ಗಾಳಿಯಲ್ಲಿ ಸಾಗುತ್ತವೆ ಎಂದು ಹೇಳಿದೆ.

 

ಸೋಂಕಿತ ವ್ಯಕ್ತಿಗೆ ರೋಗ ಲಕ್ಷಣಗಳು ಇಲ್ಲದಿದ್ದರೂ ಸೋಂಕು ಹರಡಬಹುದು. ಮುಖ್ಯವಾಗಿ ಬಾಯಿಯಿಂದ ಹೊರ ಹೊಮ್ಮುವ ಲಾಲಾರಸ ಮತ್ತು ಮೂಗಿನಿಂದ ಬೀಳುವ ಹನಿಗಳು ವೈರಸ್ ಹರಡುವಿಕೆಯ ಪ್ರಾಥಮಿಕ ವಿಧಾನವಾಗಿದೆ.

ಜನರು ಡಬಲ್ ಲೇಯರ್ ಮಾಸ್ಕ್ ಅಥವಾ ಎನ್ 95 ಮಾಸ್ಕ್ ಧರಿಸಬೇಕು, ಅದು ಗರಿಷ್ಠ ರಕ್ಷಣೆ ನೀಡುತ್ತದೆ ಎಂದು ಹೊಸ ಮಾರ್ಗಸೂಚಿಗಳು ತಿಳಿಸಿವೆ. ಡಬಲ್ ಮಾಸ್ಕ್‌ಗಾಗಿ, ಶಸ್ತ್ರಚಿಕಿತ್ಸೆಯ ಮಾಸ್ಕ್‌ ಧರಿಸಿ, ನಂತರ ಅದರ ಮೇಲೆ ಮತ್ತೊಂದು ಬಿಗಿಯಾದ ಬಟ್ಟೆಯ ಮಾಸ್ಕ್‌ ಧರಿಸಿ.  ಶಸ್ತ್ರಚಿಕಿತ್ಸೆಯ ಮಾಸ್ಕ್‌ ಇಲ್ಲದವರು ಎರಡು ಹತ್ತಿಯ ಮಾಸ್ಕ್‌ಗಳನ್ನು ಒಟ್ಟಿಗೆ ಧರಿಸಬಹುದು ಎಂದು ಸಲಹೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಿಗೆ ಪ್ರವೇಶಿಸುವ ಜನರು ಮೊದಲು ರ್‍ಯಾಪಿಡ್ ಆಂಟಿಜೆನ್ ಪರೀಕ್ಷೆಯನ್ನು ಕೈಗೊಳ್ಳಬೇಕು. ಆಶಾ/ ಅಂಗನವಾಡಿ / ಆರೋಗ್ಯ ಕಾರ್ಯಕರ್ತರಿಗೆ ರ್‍ಯಾಪಿಡ್ ಆಂಟಿಜೆನ್ ಪರೀಕ್ಷೆ ನಡೆಸಲು ತರಬೇತಿ ನೀಡಬೇಕು.

ಈ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಿದ್ದರೂ ಸಹ ಪ್ರಮಾಣೀಕೃತ ಎನ್ 95 ಮಾಸ್ಕ್‌ಗಳನ್ನು ನೀಡಬೇಕು. ಕಾರ್ಯಕರ್ತರಿಗೂ ಸೋಂಕಿತ ವ್ಯಕ್ತಿಯನ್ನು ಮೇಲ್ವಿಚಾರಣೆ ಮಾಡಲು ಆಕ್ಸಿಮೀಟರ್‌ಗಳನ್ನು ಒದಗಿಸಬೇಕು ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಯುಪಿ: ಸೋಂಕಿತ ರೋಗಿಯ ನಿರ್ಲಕ್ಷ್ಯದ ಬಗ್ಗೆ ಪತ್ರಕರ್ತರಿಗೆ ಮಾಹಿತಿ; ಗ್ರಾಮಸ್ಥನ ಮೇಲೆ ಪ್ರಕರಣ ದಾಖಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...