Homeಅಂತರಾಷ್ಟ್ರೀಯ‘ಗಾಝಾದಲ್ಲಿ ಈದ್‌ ಪ್ರಾರಂಭ!’ - ಕದನ ವಿರಾಮ ಘೋಷಿಸಿದ ಇಸ್ರೇಲ್‌

‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

- Advertisement -
- Advertisement -

ಫ್ಯಾಲೆಸ್ತೀನ್‌‌ನ ಗಾಝಾದಲ್ಲಿ ನಡೆಯುತ್ತಿರುವ 11 ದಿನಗಳ ಸಂಘರ್ಷವನ್ನು ನಿಲ್ಲಿಸುವ ಒಪ್ಪಂದಕ್ಕೆ, ಇಸ್ರೇಲ್ ಮತ್ತು ಹಮಾಸ್ ನಡುವೆ ಈಜಿಫ್ಟ್‌‌ ಮದ್ಯವರ್ತಿಯಾದ ನಂತರ ಶುಕ್ರವಾರ ಮುಂಜಾನೆ ಗಾಜಾ ಪ್ರದೇಶದಲ್ಲಿ ಕದನ ವಿರಾಮ ಜಾರಿಗೆ ಬಂದಿದೆ.

ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು, “ಭದ್ರತಾ ಕ್ಯಾಬಿನೆಟ್‌ ಬೇಷರತ್ತಾದ… ಕದನ ವಿರಾಮಕ್ಕಾಗಿ ಈಜಿಪ್ಟಿನ ಉಪಕ್ರಮವನ್ನು ಸ್ವೀಕರಿಸುವ ಶಿಫಾರಸುಗಳನ್ನು ಸರ್ವಾನುಮತದಿಂದ ಸ್ವೀಕರಿಸಿದೆ” ಎಂದು ಹೇಳಿದೆ.

ಪ್ಯಾಲೇಸ್ಟಿನಿಯನ್ ಗುಂಪುಗಳಾದ ಹಮಾಸ್ ಮತ್ತು ಇಸ್ಲಾಮಿಕ್ ಜಿಹಾದ್‌ ಮೂವ್ಮೆಂಟ್‌‌ ಕೂಡಾ ಕದನ ವಿರಾಮವನ್ನು ಶುಕ್ರವಾರ ಮುಂಜಾನೆ 2:00 ಗಂಟೆಗೆ (ಗುರುವಾರ 23:00 GMT) ಜಾರಿಗೆ ತರಲಿದೆ ಎಂದು ಹೇಳಿಕೆಯಲ್ಲಿ ದೃಡಪಡಿಸಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಕೊರೊನಾ ನಿರ್ವಹಣೆ ಬಗ್ಗೆ ಸಿಎಂ ಆದಿತ್ಯನಾಥ್‌ಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ

“ಇಸ್ರೇಲ್‌ನ ಈ ಘೋಷಣೆ ಪ್ರಧಾನಿ ನೆತನ್ಯಾಹು ಅವರ ಸೋಲು ಮತ್ತು ಪ್ಯಾಲೇಸ್ತೀನಿ ಜನರ ಜಯ” ಎಂದು ಹಮಾಸ್‌‌‌ನ ಅರಬ್ ಮತ್ತು ಇಸ್ಲಾಮಿಕ್ ಸಂಬಂಧಗಳ ಬ್ಯೂರೋದ ಸದಸ್ಯ ಅಲಿ ಬರಾಕೆಹ್ ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಮೇ 10 ರಂದು ಹಿಂಸಾಚಾರ ಭುಗಿಲೆದ್ದ ನಂತರ 65 ಮಕ್ಕಳು ಮತ್ತು 39 ಮಹಿಳೆಯರು ಸೇರಿದಂತೆ 232 ಪ್ಯಾಲೆಸ್ತೀನಿ ಜನರು ಸಾವನ್ನಪ್ಪಿದ್ದಾರೆ. 1,900 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕನಿಷ್ಠ 160 ಇಸ್ರೇಲ್‌ನ ಯೋಧರನ್ನು ಗಾಝಾದಲ್ಲಿ ಕೊಲ್ಲಾಗಿದೆ ಎಂದು ಇಸ್ರೇಲ್ ಹೇಳಿದ್ದು, ಆದರೆ ಅದು ಯಾವುದೆ ಸಾಕ್ಷ್ಯಾಧಾರಗಳನ್ನು ನೀಡಿಲ್ಲ. ಹಮಾಸ್ ಮತ್ತು ಇಸ್ಲಾಮಿಕ್ ಜಿಹಾದ್ ಮೂವ್ಮೆಂಟ್‌ ಕೂಡಾ ತಮ್ಮ ಕನಿಷ್ಠ 20 ಯೋಧರನ್ನು ಕೊಲ್ಲಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಈ ಒಪ್ಪಂದವು 2014 ರಿಂದೀಚೆಗೆ ನಡೆಯುತ್ತಿರುವ ಕೆಲವು ಭೀಕರ ಹೋರಾಟಗಳನ್ನು ಕೊನೆಗೊಳಿಸುತ್ತದೆ. ಇದು ಗಾಝಾದಲ್ಲಿ ವ್ಯಾಪಕ ವಿನಾಶಕ್ಕೆ ಕಾರಣವಾಗಿದ್ದು, ಇಸ್ರೇಲ್‌ನಲ್ಲಿ ದೈನಂದಿನ ಜನ ಜೀವನದ ಬಹುಭಾಗವನ್ನು ನಿಲ್ಲಿಸಿತ್ತು.

ಕದನ ವಿರಾಮವನ್ನು ‘ಗಾಝಾದಲ್ಲಿ ಇಸ್ರೇಲ್‌ನ ಸೋಲು’ ಎಂದು ಹಮಾಸ್‌ ಬಣ್ಣಿಸಿದ್ದು ಸಾವಿರಾರು ಪ್ಯಾಲೆಸ್ತೀನಿಯರು ಗಾಝಾ ನಗರದ ಬೀದಿಗಳಲ್ಲಿ ಜಮಾಯಿಸಿ ಫ್ಯಾಲೆಸ್ತೀನ್‌ ಧ್ವಜಗಳನ್ನು ಬೀಸಿ ಸಂಭ್ರಮ ಆಚರಿಸಿದರು.

ಪ್ಯಾಲೆಸ್ತೀನಿ ಹೋರಾಟಗಾರ, ಪತ್ರಕರ್ತ ಮಹ್ಮೋದ್ ಅವರು, ಇದನ್ನು ಫ್ಯಾಲೆಸ್ತೀನಿಗಳ ಜಯ ಎಂದು ಬಣ್ಣಸಿದ್ದಾರೆ. “ಗಾಝಾ ಪಟ್ಟಿಯ ಹೋರಾಟಕ್ಕೆ ಜಯ ಸಿಕ್ಕಿದೆ. ಗಾಝಾದಲ್ಲಿ ‘ಈದ್‌’ ಈಗ ಪ್ರಾರಂಭವಾಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...