Homeಮುಖಪುಟಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

ಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

- Advertisement -
- Advertisement -

ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ 700 ಗಂಭೀರವಾಗಿವೆ……

ಇಲ್ಲಿ ನೋಡಿದರೆ, ಮಾಜಿ ಸಿಎಂ ಕುಮಾರಸ್ವಾಮಿಯವರು, “ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ” ಎಂದು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಕೋವಿಶೀಲ್ಡ್ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ ಮತ್ತು ಆದ್ದರಿಂದ ಎರಡನೇ ಡೋಸ್ ನೀಡುವ ಸಮಯವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಇತ್ತೀಚೆಗೆ ಒಪ್ಪಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ವಿರುದ್ಧ ತಮ್ಮ ವ್ಯಾಕ್ಸಿನೇಷನ್‌ಗಾಗಿ ಕಾಯುತ್ತಿರುವ ಜನರು ಸೀರಮ್ ಕಂಪನಿಯ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ನಡುವೆ ಯಾವ ಲಸಿಕೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಗಲಿಬಿಲಿಗೆ ಬಿದ್ದಿದ್ದಾರೆ.

ಅವೆರಡನ್ನು ವೈಜ್ಞಾನಿಕವಾಗಿ ಪರಸ್ಪರ ಹೋಲಿಸಲಾಗುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿದೆ. “ಲಭ್ಯವಿರುವ ಎರಡು ಲಸಿಕೆಗಳ ನಡುವೆ ನೇರ ವೈಜ್ಞಾನಿಕ ಹೋಲಿಕೆ ಇಲ್ಲ. ಆದ್ದರಿಂದ ಒಂದನ್ನು ಇನ್ನೊಂದರ ಮೇಲೆ ಆಯ್ಕೆ ಮಾಡಲು ಸಾಧ್ಯವಿಲ್ಲ. ಎರಡೂ ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಮತ್ತು ತೀವ್ರ ಅನಾರೋಗ್ಯವನ್ನು ತಡೆಗಟ್ಟುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಇವುಗಳಲ್ಲಿ ಯಾವುದನ್ನಾದರೂ ನೀವು ಆಯ್ಕೆ ಮಾಡಬಹುದು, ನಿಮ್ಮ ಲಸಿಕೆ ಕೇಂದ್ರದಲ್ಲಿ ಯಾವುದು ಲಭ್ಯವಿದೆಯೋ ಅದನ್ನು ಪಡೆಯಿರಿ’ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಎರಡೂ ಲಸಿಕೆಗಳು ಪ್ರಸ್ತುತ ದೇಶದಲ್ಲಿ ಲಭ್ಯವಿದ್ದರೂ ಒಂದೇ ಕೇಂದ್ರದಲ್ಲಿ ಲಭ್ಯವಿಲ್ಲ. ಕೋ-ವಿನ್ ಅಪ್ಲಿಕೇಶನ್‌ನಲ್ಲಿ ಜನರು ತಮ್ಮ ಲಸಿಕೆ ಆದ್ಯತೆಗೆ ಅನುಗುಣವಾಗಿ ಕೇಂದ್ರಗಳನ್ನು ಆಯ್ಕೆ ಮಾಡಬಹುದು. ಏಕೆಂದರೆ ಕೇಂದ್ರಗಳು ತಮ್ಮ ಸೈಟ್‌ನಲ್ಲಿರುವ ಲಸಿಕೆಯ ಹೆಸರನ್ನು ಪ್ರದರ್ಶಿಸುತ್ತಿವೆ.

ಕೋವಿಶೀಲ್ಡ್ ಲಸಿಕೆಯ ಪ್ರಯೋಗದ ನಂತರ ರಕ್ತಸ್ರಾವ ಮತ್ತು ಹೆಪ್ಪುಗಟ್ಟುವಿಕೆಯ 26 ಸಂಭಾವ್ಯ ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಇತ್ತೀಚೆಗೆ ಹೇಳಿದೆ. ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಮತ್ತು 700 ಗಂಭೀರವಾಗಿವೆ ಎಂದು ವರದಿಯಾಗಿದೆ.

ಪ್ರತಿ ಡೋಸ್‌ನ್ ಬೆಲೆಗೆ ಸಂಬಂಧಿಸಿದಂತೆ, ಕೋವಿಶೀಲ್ಡ್ ಕೋವ್ಯಾಕ್ಸಿನ್‌ಗಿಂತ ಅಗ್ಗವಾಗಿ ಬರುತ್ತದೆ. ರಷ್ಯಾ ನಿರ್ಮಿತ ಸ್ಪುಟ್ನಿಕ್-ವಿ ಅನ್ನು ಶೀಘ್ರದಲ್ಲೇ ಪಟ್ಟಿಗೆ ಸೇರಿಸಲು ಕೇಂದ್ರವು ಆಶಿಸುತ್ತಿದೆ.

‘ಕೋವಿಶೀಲ್ಡ್‌ನ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ, ಅದಕ್ಕಾಗಿಯೇ ಎರಡನೇ ಡೋಸ್ ಸಮಯವು 12 ರಿಂದ 6 ವಾರಗಳವರೆಗೆ ವಿಳಂಬವಾಗಿದೆ’ ಎಂದು ಕಂಡುಹಿಡಿದಿದ್ದನ್ನು ಸರ್ಕಾರ ಇತ್ತೀಚೆಗೆ ಒಪ್ಪಿಕೊಂಡಿದೆ. ಆದರೆ ಕೋವ್ಯಾಕ್ಸಿನ್ ಎರಡನೆ ಡೋಸ್ ಅನ್ನು ಈಗಿರುವ 28 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕಾಗಿದೆ.

ಎರಡೂ ಲಸಿಕೆಗಳ ಸಂಯೋಜನೆಯು ವಿಭಿನ್ನವಾಗಿದೆ. ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಯಾದ ಕೋವಿಶೀಲ್ಡ್ ಅನ್ನು ಚಿಂಪಾಂಜಿಗಳಿಗೆ ಸೋಂಕು ತಗುಲಿಸುವ ಸಾಮಾನ್ಯ ಶೀತ ವೈರಸ್‌ನ ದುರ್ಬಲಗೊಂಡ ಆವೃತ್ತಿಯಿಂದ ತಯಾರಿಸಲಾಗುತ್ತದೆ. ಇದು SARS-CoV-2 ವೈರಸ್ ಪ್ರೋಟೀನ್‌ನ ಆನುವಂಶಿಕ ವಸ್ತುಗಳನ್ನು ಸಹ ಒಳಗೊಂಡಿದೆ. ಮತ್ತೊಂದೆಡೆ, ಕೋವಾಕ್ಸಿನ್ ಅನ್ನು ನಿಷ್ಕ್ರಿಯ ಕೊರೊನಾ ವೈರಸ್‌ನಿಂದ ಅಭಿವೃದ್ಧಿಪಡಿಸಲಾಗಿದೆ.

ಯಾವ ಆಸ್ಪತ್ರೆ ಅಥವಾ ಲಸಿಕಾ ಕೇಂದ್ರಗಳಲ್ಲಿ ಯಾವುದು ಲಭ್ಯ ಎಂದು ಇಂಟರನೆಟ್ ತಿಳಿಯದವರಿಗೆ ಹೇಗೆ ಗೊತ್ತಾಗುತ್ತದೆ? ಸರ್ಕಾರಕ್ಕೇ ಸರಿಯಾದ ವಿವರಣೆ ಗೊತ್ತಿಲ್ಲ.
ಈಗ ಮೊದಲ ಸುತ್ತಿನಲ್ಲಿ ಹಳ್ಳಿಗಳಿಗೆ ಹೋಗಿ ಲಸಿಕೆ ಹಾಕಲಾಗಿತು. ಅವರು ಕೋವಿಶೀಲ್ಡ್ ಹಾಕಿದರೋ, ಕೋವ್ಯಾಕ್ಸಿನ್ ಹಾಕಿದರೋ ಅದು ಜನರಿಗೆ ಗೊತ್ತಿರುತ್ತದೆಯೇ? ಆದರೆ, ಎರಡನೇ ಲಸಿಕೆ ಹಾಕಲು ಅವರು ಹಳ್ಳಿಗಳಿಗೆ ಬರುತ್ತಿಲ್ಲ.

ಇಂತಹ ಸಂದರ್ಭದಲ್ಲಿ ಜನರೇ ಸ್ವಯಂ ನಿರ್ಧಾರದಿಂದ ಲಸಿಕಾ ಕೇಂದ್ರವೊಂದಕ್ಕೆ ಹೋದರೆ, ಅವರಿಗೆ ಬೇರೆ ಲಸಿಕೆ ನೀಡಿದರೆ ಏನಾಗುತ್ತದೆ? ಇದು ಅಡ್ಡ ಪರಿಣಾಮ ಬೀರಬಹುದು ಎಂದು ಸಮೀಕ್ಷೆಗಳು ಹೇಳಿವೆ.

ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಸ್ಪಷ್ಟ ನಿಲುವಿಲ್ಲ ಮತ್ತು ಲಸಿಕೆಗಳ ಕೊರತೆಯಿದೆ ಎಂಬುದನ್ನು ನಾವು ನೆನಪಿಡಬೇಕು. ಎರಡನೇ ಲಸಿಕೆ ಸಿಗದೇ ಒದ್ದಾಡುವವರ ಬಗ್ಗೆ, ಮೊದಲ ಲಸಿಕೆಗಾಗಿ ಪರದಾಡುತ್ತಿರುವ 18-44 ವಯೋಮಾನದವರ ಬಗ್ಗೆ ಯಾರೂ ಯೋಚಿಸುತ್ತಿಲ್ಲ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...