Homeಮುಖಪುಟಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

ಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

- Advertisement -
- Advertisement -

ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ 700 ಗಂಭೀರವಾಗಿವೆ……

ಇಲ್ಲಿ ನೋಡಿದರೆ, ಮಾಜಿ ಸಿಎಂ ಕುಮಾರಸ್ವಾಮಿಯವರು, “ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ” ಎಂದು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಕೋವಿಶೀಲ್ಡ್ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ ಮತ್ತು ಆದ್ದರಿಂದ ಎರಡನೇ ಡೋಸ್ ನೀಡುವ ಸಮಯವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಇತ್ತೀಚೆಗೆ ಒಪ್ಪಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ವಿರುದ್ಧ ತಮ್ಮ ವ್ಯಾಕ್ಸಿನೇಷನ್‌ಗಾಗಿ ಕಾಯುತ್ತಿರುವ ಜನರು ಸೀರಮ್ ಕಂಪನಿಯ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ನಡುವೆ ಯಾವ ಲಸಿಕೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಗಲಿಬಿಲಿಗೆ ಬಿದ್ದಿದ್ದಾರೆ.

ಅವೆರಡನ್ನು ವೈಜ್ಞಾನಿಕವಾಗಿ ಪರಸ್ಪರ ಹೋಲಿಸಲಾಗುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿದೆ. “ಲಭ್ಯವಿರುವ ಎರಡು ಲಸಿಕೆಗಳ ನಡುವೆ ನೇರ ವೈಜ್ಞಾನಿಕ ಹೋಲಿಕೆ ಇಲ್ಲ. ಆದ್ದರಿಂದ ಒಂದನ್ನು ಇನ್ನೊಂದರ ಮೇಲೆ ಆಯ್ಕೆ ಮಾಡಲು ಸಾಧ್ಯವಿಲ್ಲ. ಎರಡೂ ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಮತ್ತು ತೀವ್ರ ಅನಾರೋಗ್ಯವನ್ನು ತಡೆಗಟ್ಟುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಇವುಗಳಲ್ಲಿ ಯಾವುದನ್ನಾದರೂ ನೀವು ಆಯ್ಕೆ ಮಾಡಬಹುದು, ನಿಮ್ಮ ಲಸಿಕೆ ಕೇಂದ್ರದಲ್ಲಿ ಯಾವುದು ಲಭ್ಯವಿದೆಯೋ ಅದನ್ನು ಪಡೆಯಿರಿ’ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಎರಡೂ ಲಸಿಕೆಗಳು ಪ್ರಸ್ತುತ ದೇಶದಲ್ಲಿ ಲಭ್ಯವಿದ್ದರೂ ಒಂದೇ ಕೇಂದ್ರದಲ್ಲಿ ಲಭ್ಯವಿಲ್ಲ. ಕೋ-ವಿನ್ ಅಪ್ಲಿಕೇಶನ್‌ನಲ್ಲಿ ಜನರು ತಮ್ಮ ಲಸಿಕೆ ಆದ್ಯತೆಗೆ ಅನುಗುಣವಾಗಿ ಕೇಂದ್ರಗಳನ್ನು ಆಯ್ಕೆ ಮಾಡಬಹುದು. ಏಕೆಂದರೆ ಕೇಂದ್ರಗಳು ತಮ್ಮ ಸೈಟ್‌ನಲ್ಲಿರುವ ಲಸಿಕೆಯ ಹೆಸರನ್ನು ಪ್ರದರ್ಶಿಸುತ್ತಿವೆ.

ಕೋವಿಶೀಲ್ಡ್ ಲಸಿಕೆಯ ಪ್ರಯೋಗದ ನಂತರ ರಕ್ತಸ್ರಾವ ಮತ್ತು ಹೆಪ್ಪುಗಟ್ಟುವಿಕೆಯ 26 ಸಂಭಾವ್ಯ ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಇತ್ತೀಚೆಗೆ ಹೇಳಿದೆ. ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಮತ್ತು 700 ಗಂಭೀರವಾಗಿವೆ ಎಂದು ವರದಿಯಾಗಿದೆ.

ಪ್ರತಿ ಡೋಸ್‌ನ್ ಬೆಲೆಗೆ ಸಂಬಂಧಿಸಿದಂತೆ, ಕೋವಿಶೀಲ್ಡ್ ಕೋವ್ಯಾಕ್ಸಿನ್‌ಗಿಂತ ಅಗ್ಗವಾಗಿ ಬರುತ್ತದೆ. ರಷ್ಯಾ ನಿರ್ಮಿತ ಸ್ಪುಟ್ನಿಕ್-ವಿ ಅನ್ನು ಶೀಘ್ರದಲ್ಲೇ ಪಟ್ಟಿಗೆ ಸೇರಿಸಲು ಕೇಂದ್ರವು ಆಶಿಸುತ್ತಿದೆ.

‘ಕೋವಿಶೀಲ್ಡ್‌ನ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ, ಅದಕ್ಕಾಗಿಯೇ ಎರಡನೇ ಡೋಸ್ ಸಮಯವು 12 ರಿಂದ 6 ವಾರಗಳವರೆಗೆ ವಿಳಂಬವಾಗಿದೆ’ ಎಂದು ಕಂಡುಹಿಡಿದಿದ್ದನ್ನು ಸರ್ಕಾರ ಇತ್ತೀಚೆಗೆ ಒಪ್ಪಿಕೊಂಡಿದೆ. ಆದರೆ ಕೋವ್ಯಾಕ್ಸಿನ್ ಎರಡನೆ ಡೋಸ್ ಅನ್ನು ಈಗಿರುವ 28 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕಾಗಿದೆ.

ಎರಡೂ ಲಸಿಕೆಗಳ ಸಂಯೋಜನೆಯು ವಿಭಿನ್ನವಾಗಿದೆ. ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಯಾದ ಕೋವಿಶೀಲ್ಡ್ ಅನ್ನು ಚಿಂಪಾಂಜಿಗಳಿಗೆ ಸೋಂಕು ತಗುಲಿಸುವ ಸಾಮಾನ್ಯ ಶೀತ ವೈರಸ್‌ನ ದುರ್ಬಲಗೊಂಡ ಆವೃತ್ತಿಯಿಂದ ತಯಾರಿಸಲಾಗುತ್ತದೆ. ಇದು SARS-CoV-2 ವೈರಸ್ ಪ್ರೋಟೀನ್‌ನ ಆನುವಂಶಿಕ ವಸ್ತುಗಳನ್ನು ಸಹ ಒಳಗೊಂಡಿದೆ. ಮತ್ತೊಂದೆಡೆ, ಕೋವಾಕ್ಸಿನ್ ಅನ್ನು ನಿಷ್ಕ್ರಿಯ ಕೊರೊನಾ ವೈರಸ್‌ನಿಂದ ಅಭಿವೃದ್ಧಿಪಡಿಸಲಾಗಿದೆ.

ಯಾವ ಆಸ್ಪತ್ರೆ ಅಥವಾ ಲಸಿಕಾ ಕೇಂದ್ರಗಳಲ್ಲಿ ಯಾವುದು ಲಭ್ಯ ಎಂದು ಇಂಟರನೆಟ್ ತಿಳಿಯದವರಿಗೆ ಹೇಗೆ ಗೊತ್ತಾಗುತ್ತದೆ? ಸರ್ಕಾರಕ್ಕೇ ಸರಿಯಾದ ವಿವರಣೆ ಗೊತ್ತಿಲ್ಲ.
ಈಗ ಮೊದಲ ಸುತ್ತಿನಲ್ಲಿ ಹಳ್ಳಿಗಳಿಗೆ ಹೋಗಿ ಲಸಿಕೆ ಹಾಕಲಾಗಿತು. ಅವರು ಕೋವಿಶೀಲ್ಡ್ ಹಾಕಿದರೋ, ಕೋವ್ಯಾಕ್ಸಿನ್ ಹಾಕಿದರೋ ಅದು ಜನರಿಗೆ ಗೊತ್ತಿರುತ್ತದೆಯೇ? ಆದರೆ, ಎರಡನೇ ಲಸಿಕೆ ಹಾಕಲು ಅವರು ಹಳ್ಳಿಗಳಿಗೆ ಬರುತ್ತಿಲ್ಲ.

ಇಂತಹ ಸಂದರ್ಭದಲ್ಲಿ ಜನರೇ ಸ್ವಯಂ ನಿರ್ಧಾರದಿಂದ ಲಸಿಕಾ ಕೇಂದ್ರವೊಂದಕ್ಕೆ ಹೋದರೆ, ಅವರಿಗೆ ಬೇರೆ ಲಸಿಕೆ ನೀಡಿದರೆ ಏನಾಗುತ್ತದೆ? ಇದು ಅಡ್ಡ ಪರಿಣಾಮ ಬೀರಬಹುದು ಎಂದು ಸಮೀಕ್ಷೆಗಳು ಹೇಳಿವೆ.

ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಸ್ಪಷ್ಟ ನಿಲುವಿಲ್ಲ ಮತ್ತು ಲಸಿಕೆಗಳ ಕೊರತೆಯಿದೆ ಎಂಬುದನ್ನು ನಾವು ನೆನಪಿಡಬೇಕು. ಎರಡನೇ ಲಸಿಕೆ ಸಿಗದೇ ಒದ್ದಾಡುವವರ ಬಗ್ಗೆ, ಮೊದಲ ಲಸಿಕೆಗಾಗಿ ಪರದಾಡುತ್ತಿರುವ 18-44 ವಯೋಮಾನದವರ ಬಗ್ಗೆ ಯಾರೂ ಯೋಚಿಸುತ್ತಿಲ್ಲ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...