Homeಮುಖಪುಟಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

ಕೋವಿಶೀಲ್ಡ್ V/s ಕೋವ್ಯಾಕ್ಸಿನ್: ಎರಡು ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಗೊಂದಲವಿದೆ, ಕುಮಾರಸ್ವಾಮಿಯವರು ಗಮನಿಸಲಿ!

- Advertisement -
- Advertisement -

ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಅವುಗಳಲ್ಲಿ 700 ಗಂಭೀರವಾಗಿವೆ……

ಇಲ್ಲಿ ನೋಡಿದರೆ, ಮಾಜಿ ಸಿಎಂ ಕುಮಾರಸ್ವಾಮಿಯವರು, “ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್‌ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ” ಎಂದು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಕೋವಿಶೀಲ್ಡ್ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ ಮತ್ತು ಆದ್ದರಿಂದ ಎರಡನೇ ಡೋಸ್ ನೀಡುವ ಸಮಯವನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರವು ಇತ್ತೀಚೆಗೆ ಒಪ್ಪಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕೋವಿಡ್ ವಿರುದ್ಧ ತಮ್ಮ ವ್ಯಾಕ್ಸಿನೇಷನ್‌ಗಾಗಿ ಕಾಯುತ್ತಿರುವ ಜನರು ಸೀರಮ್ ಕಂಪನಿಯ ಕೋವಿಶೀಲ್ಡ್ ಮತ್ತು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ನಡುವೆ ಯಾವ ಲಸಿಕೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಗಲಿಬಿಲಿಗೆ ಬಿದ್ದಿದ್ದಾರೆ.

ಅವೆರಡನ್ನು ವೈಜ್ಞಾನಿಕವಾಗಿ ಪರಸ್ಪರ ಹೋಲಿಸಲಾಗುವುದಿಲ್ಲ ಎಂದು ಕೇಂದ್ರವು ಸ್ಪಷ್ಟಪಡಿಸಿದೆ. “ಲಭ್ಯವಿರುವ ಎರಡು ಲಸಿಕೆಗಳ ನಡುವೆ ನೇರ ವೈಜ್ಞಾನಿಕ ಹೋಲಿಕೆ ಇಲ್ಲ. ಆದ್ದರಿಂದ ಒಂದನ್ನು ಇನ್ನೊಂದರ ಮೇಲೆ ಆಯ್ಕೆ ಮಾಡಲು ಸಾಧ್ಯವಿಲ್ಲ. ಎರಡೂ ಲಸಿಕೆಗಳು ಸೋಂಕನ್ನು ತಡೆಗಟ್ಟುವಲ್ಲಿ ಮತ್ತು ತೀವ್ರ ಅನಾರೋಗ್ಯವನ್ನು ತಡೆಗಟ್ಟುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಇವುಗಳಲ್ಲಿ ಯಾವುದನ್ನಾದರೂ ನೀವು ಆಯ್ಕೆ ಮಾಡಬಹುದು, ನಿಮ್ಮ ಲಸಿಕೆ ಕೇಂದ್ರದಲ್ಲಿ ಯಾವುದು ಲಭ್ಯವಿದೆಯೋ ಅದನ್ನು ಪಡೆಯಿರಿ’ ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ಎರಡೂ ಲಸಿಕೆಗಳು ಪ್ರಸ್ತುತ ದೇಶದಲ್ಲಿ ಲಭ್ಯವಿದ್ದರೂ ಒಂದೇ ಕೇಂದ್ರದಲ್ಲಿ ಲಭ್ಯವಿಲ್ಲ. ಕೋ-ವಿನ್ ಅಪ್ಲಿಕೇಶನ್‌ನಲ್ಲಿ ಜನರು ತಮ್ಮ ಲಸಿಕೆ ಆದ್ಯತೆಗೆ ಅನುಗುಣವಾಗಿ ಕೇಂದ್ರಗಳನ್ನು ಆಯ್ಕೆ ಮಾಡಬಹುದು. ಏಕೆಂದರೆ ಕೇಂದ್ರಗಳು ತಮ್ಮ ಸೈಟ್‌ನಲ್ಲಿರುವ ಲಸಿಕೆಯ ಹೆಸರನ್ನು ಪ್ರದರ್ಶಿಸುತ್ತಿವೆ.

ಕೋವಿಶೀಲ್ಡ್ ಲಸಿಕೆಯ ಪ್ರಯೋಗದ ನಂತರ ರಕ್ತಸ್ರಾವ ಮತ್ತು ಹೆಪ್ಪುಗಟ್ಟುವಿಕೆಯ 26 ಸಂಭಾವ್ಯ ಪ್ರಕರಣಗಳು ವರದಿಯಾಗಿವೆ ಎಂದು ಸರ್ಕಾರ ಇತ್ತೀಚೆಗೆ ಹೇಳಿದೆ. ಜನವರಿಯಲ್ಲಿ ಲಸಿಕಾ ಅಭಿಯಾನ ಪ್ರಾರಂಭವಾದಾಗಿನಿಂದ, ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡನ್ನೂ ಒಳಗೊಂಡ 23,000 ಪ್ರತಿಕೂಲ ಘಟನೆಗಳು ವರದಿಯಾಗಿವೆ. ಮತ್ತು 700 ಗಂಭೀರವಾಗಿವೆ ಎಂದು ವರದಿಯಾಗಿದೆ.

ಪ್ರತಿ ಡೋಸ್‌ನ್ ಬೆಲೆಗೆ ಸಂಬಂಧಿಸಿದಂತೆ, ಕೋವಿಶೀಲ್ಡ್ ಕೋವ್ಯಾಕ್ಸಿನ್‌ಗಿಂತ ಅಗ್ಗವಾಗಿ ಬರುತ್ತದೆ. ರಷ್ಯಾ ನಿರ್ಮಿತ ಸ್ಪುಟ್ನಿಕ್-ವಿ ಅನ್ನು ಶೀಘ್ರದಲ್ಲೇ ಪಟ್ಟಿಗೆ ಸೇರಿಸಲು ಕೇಂದ್ರವು ಆಶಿಸುತ್ತಿದೆ.

‘ಕೋವಿಶೀಲ್ಡ್‌ನ ಮೊದಲ ಡೋಸ್ ನೀಡುವ ರಕ್ಷಣೆಯು ದೀರ್ಘಕಾಲ ಉಳಿಯುತ್ತದೆ, ಅದಕ್ಕಾಗಿಯೇ ಎರಡನೇ ಡೋಸ್ ಸಮಯವು 12 ರಿಂದ 6 ವಾರಗಳವರೆಗೆ ವಿಳಂಬವಾಗಿದೆ’ ಎಂದು ಕಂಡುಹಿಡಿದಿದ್ದನ್ನು ಸರ್ಕಾರ ಇತ್ತೀಚೆಗೆ ಒಪ್ಪಿಕೊಂಡಿದೆ. ಆದರೆ ಕೋವ್ಯಾಕ್ಸಿನ್ ಎರಡನೆ ಡೋಸ್ ಅನ್ನು ಈಗಿರುವ 28 ದಿನಗಳ ಅಂತರದಲ್ಲಿ ತೆಗೆದುಕೊಳ್ಳಬೇಕಾಗಿದೆ.

ಎರಡೂ ಲಸಿಕೆಗಳ ಸಂಯೋಜನೆಯು ವಿಭಿನ್ನವಾಗಿದೆ. ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆಯಾದ ಕೋವಿಶೀಲ್ಡ್ ಅನ್ನು ಚಿಂಪಾಂಜಿಗಳಿಗೆ ಸೋಂಕು ತಗುಲಿಸುವ ಸಾಮಾನ್ಯ ಶೀತ ವೈರಸ್‌ನ ದುರ್ಬಲಗೊಂಡ ಆವೃತ್ತಿಯಿಂದ ತಯಾರಿಸಲಾಗುತ್ತದೆ. ಇದು SARS-CoV-2 ವೈರಸ್ ಪ್ರೋಟೀನ್‌ನ ಆನುವಂಶಿಕ ವಸ್ತುಗಳನ್ನು ಸಹ ಒಳಗೊಂಡಿದೆ. ಮತ್ತೊಂದೆಡೆ, ಕೋವಾಕ್ಸಿನ್ ಅನ್ನು ನಿಷ್ಕ್ರಿಯ ಕೊರೊನಾ ವೈರಸ್‌ನಿಂದ ಅಭಿವೃದ್ಧಿಪಡಿಸಲಾಗಿದೆ.

ಯಾವ ಆಸ್ಪತ್ರೆ ಅಥವಾ ಲಸಿಕಾ ಕೇಂದ್ರಗಳಲ್ಲಿ ಯಾವುದು ಲಭ್ಯ ಎಂದು ಇಂಟರನೆಟ್ ತಿಳಿಯದವರಿಗೆ ಹೇಗೆ ಗೊತ್ತಾಗುತ್ತದೆ? ಸರ್ಕಾರಕ್ಕೇ ಸರಿಯಾದ ವಿವರಣೆ ಗೊತ್ತಿಲ್ಲ.
ಈಗ ಮೊದಲ ಸುತ್ತಿನಲ್ಲಿ ಹಳ್ಳಿಗಳಿಗೆ ಹೋಗಿ ಲಸಿಕೆ ಹಾಕಲಾಗಿತು. ಅವರು ಕೋವಿಶೀಲ್ಡ್ ಹಾಕಿದರೋ, ಕೋವ್ಯಾಕ್ಸಿನ್ ಹಾಕಿದರೋ ಅದು ಜನರಿಗೆ ಗೊತ್ತಿರುತ್ತದೆಯೇ? ಆದರೆ, ಎರಡನೇ ಲಸಿಕೆ ಹಾಕಲು ಅವರು ಹಳ್ಳಿಗಳಿಗೆ ಬರುತ್ತಿಲ್ಲ.

ಇಂತಹ ಸಂದರ್ಭದಲ್ಲಿ ಜನರೇ ಸ್ವಯಂ ನಿರ್ಧಾರದಿಂದ ಲಸಿಕಾ ಕೇಂದ್ರವೊಂದಕ್ಕೆ ಹೋದರೆ, ಅವರಿಗೆ ಬೇರೆ ಲಸಿಕೆ ನೀಡಿದರೆ ಏನಾಗುತ್ತದೆ? ಇದು ಅಡ್ಡ ಪರಿಣಾಮ ಬೀರಬಹುದು ಎಂದು ಸಮೀಕ್ಷೆಗಳು ಹೇಳಿವೆ.

ಲಸಿಕೆಗಳ ಬಗ್ಗೆ ಸರ್ಕಾರಕ್ಕೇ ಸ್ಪಷ್ಟ ನಿಲುವಿಲ್ಲ ಮತ್ತು ಲಸಿಕೆಗಳ ಕೊರತೆಯಿದೆ ಎಂಬುದನ್ನು ನಾವು ನೆನಪಿಡಬೇಕು. ಎರಡನೇ ಲಸಿಕೆ ಸಿಗದೇ ಒದ್ದಾಡುವವರ ಬಗ್ಗೆ, ಮೊದಲ ಲಸಿಕೆಗಾಗಿ ಪರದಾಡುತ್ತಿರುವ 18-44 ವಯೋಮಾನದವರ ಬಗ್ಗೆ ಯಾರೂ ಯೋಚಿಸುತ್ತಿಲ್ಲ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮೋದಿಯವರೇ ನಮ್ಮ ಮಕ್ಕಳ ಲಸಿಕೆಯನ್ನು ವಿದೇಶಕ್ಕೆ ಏಕೆ ಕಳಿಸಿದಿರಿ? – ಕಾಂಗ್ರೆಸ್ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...