Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

- Advertisement -
- Advertisement -

ಪೂರ್ವ ಜೆರುಸಲೆಮ್‌ನ ಶೇಕ್ ಜರ್‍ರಾಹ್‌‌ ಪ್ರದೇಶದಲ್ಲಿ ಹಲವಾರು ಪ್ಯಾಲೇಸ್ತೀನಿ ಕುಟುಂಬಗಳನ್ನು ಗಡಿಪಾರು ಮಾಡಲು ಜೆರುಸಲೆಮ್ ಜಿಲ್ಲಾ ನ್ಯಾಯಾಲಯ ತೀರ್ಪಿತ್ತ ನಂತರ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು. ಇದೀಗ ಅಲ್ಲಿ ಇಸ್ರೇಲ್‌ ಸೇನೆಗೆ ಹಿನ್ನಡೆಯಾಗಿದೆ ಎಂದು ವರದಿಯಾಗಿದ್ದು, ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿಕೊಂಡಿದೆ. “ಸೋಮವಾರ (ಮೇ 10) ಗಾಝಾದಲ್ಲಿ ಕನಿಷ್ಠ 136 ಜನರು ಸಾವನ್ನಪ್ಪಿದ್ದಾರೆ. 34 ಮಕ್ಕಳು ಮತ್ತು 21 ಮಹಿಳೆಯರು ಸೇರಿದಂತೆ 950 ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿ ವೈದ್ಯರು ಹೇಳಿದ್ದಾರೆ” ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಭಾರತದಲ್ಲಿ ಇಸ್ರೇಲ್‌ನ ಕೃತ್ಯವನ್ನು ಬೆಂಬಲಿಸುವ ಕೆಲ ಬಲಪಂಥೀಯರು, ಮಕ್ಕಳ ಮುಖಕ್ಕೆ ಕೆಂಪು ಬಣ್ಣವನ್ನು ಹಚ್ಚುವ ವಿಡಿಯೊವೊಂದನ್ನು ವೈರಲ್‌ ಮಾಡಿದ್ದಾರೆ. ಅದರಲ್ಲಿ, “ಜಾಗತಿಕ ಸಹಾನುಭೂತಿ ಪಡೆಯಲು ಮತ್ತು ಇಸ್ರೇಲನ್ನು ಕೆಟ್ಟದಾಗಿ ಬಿಂಬಿಸಲು, ಗಾಝಾದ ಪ್ಯಾಲೆಸ್ತೀನಿಯರು ಮಕ್ಕಳ ಮುಖದ ಮೇಲೆ ನಕಲಿ ರಕ್ತವನ್ನು ಮತ್ತು ನಕಲಿ ಗಾಯಗಳನ್ನು ಮಾಡಿ ಚಿತ್ರಿಸುತ್ತಿದ್ದಾರೆ” ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಬಿಜೆಪಿ ಒಬಿಸಿ ಮೋರ್ಚಾ ಹರಿಯಾಣ ರಾಜ್ಯ ಉಪಾಧ್ಯಕ್ಷೆ ಎಂದು ಗುರುತಿಸಿಕೊಂಡಿರುವ ಮಾಯಾ ಯಾದವ್ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ.

PM झालावाडी (@ PMPATEl1969) ಮತ್ತು ಜನ್ಮಜಿತ್ ಸಿನ್ಹಾ (@ Impregnable007) ಸೇರಿದಂತೆ ಹಲವಾರು ಜನರು ಇದನ್ನು ಟ್ವಿಟರ್‌ನಲ್ಲಿ ಹಂಚಿದ್ದಾರೆ.

ಈ ವಿಡಿಯೋವನ್ನು ಬಲಪಂಥೀಯರು ಫೇಸ್‌‌ಬುಕ್‌ನಲ್ಲಿ ಕೂಡಾ ವೈರಲ್‌ ಮಾಡಿದ್ದಾರೆ. ದೀಕ್ಷಿತ್‌ ಶೆಟ್ಟಿಗಾರ್‌ ಕೊಣಾಜೆ ಎಂಬವರು ಹಾಕಿರುವ ಈ ವಿಡಿಯೊ ಇದುವರೆಗೂ 193 ಶೇರ್‌ ಆಗಿದೆ. ಅದರ ಆರ್ಕೈವ್ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಇದು ಹಳೆಯ ವೀಡಿಯೊವಾಗಿದ್ದು, ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಿಡಿಯೊವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಲ್ಟ್‌‌ ನ್ಯೂಸ್‌ ಹುಡುಕಾಡಿದೆ. ಗೂಗಲ್‌ನಲ್ಲಿ ಈ ವಿಡಿಯೊ ಬಗ್ಗೆ 2018 ರಲ್ಲಿ ಫ್ರಾನ್ಸ್ 24 ಮತ್ತು ಸ್ನೋಪ್ಸ್ ಪ್ರಕಟಿಸಿದ ಫ್ಯಾಕ್ಟ್-ಚೆಕ್ ವರದಿಗಳು ಕಂಡುಬಂದಿದೆ. ದೀರ್ಘ ವೀಡಿಯೊವನ್ನು ಕ್ಲಿಪ್‌ ಅನ್ನು ಕಟ್‌ ಮಾಡಿ ಇಸ್ರೇಲಿ ಮತ್ತು ಸಿರಿಯನ್ ಪಡೆಗಳ ದೌರ್ಜನ್ಯ ಎಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಪ್ಯಾಲೇಸ್ಟಿನಿಯನ್ ವೆಬ್‌ಸೈಟ್ ‘ದಿ ಗಾಝಾ ಪೋಸ್ಟ್‌’ನ ಸುದ್ದಿ ವರದಿಯಿಂದ ಈ ವೀಡಿಯೊ ಕ್ಲಿಪ್ ಪಡೆಯಲಾಗಿದೆ. “ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಪ್ಯಾಲೇಸ್ತೀನಿಯನ್ ಸಿನೆಮಾ ಸ್ಪೆಷಲ್ ಎಫೆಕ್ಟ್ಸ್ ಉದ್ಯಮದಲ್ಲಿ ಮಾಡಿದ ಕೆಲಸಗಳ ಬಗ್ಗೆ” ಈ ವಿಡಿಯೊ ವರದಿಯನ್ನು ಮಾಡಲಾಗಿದೆ ಎಂದು ಸ್ನೋಪ್ಸ್ ವರದಿ ಮಾಡಿದೆ.

ಆದರೆ  ವೈರಲ್ ಆಗುತ್ತಿರುವ ಈ ವಿಡಿಯೊವನ್ನು ಎಡಿಟ್ ಮಾಡಿ, ಮುಖಕ್ಕೆ ಗಾಯದ ಮೇಕಪ್‌ ಮಾಡುವುದನ್ನು ಮಾತ್ರ ತೋರಿಸಲಾಗಿದೆ. ಜೊತೆಗೆ ಇತರ ವಿವರಗಳ ದೃಶ್ಯಗಳನ್ನು ಕೂಡಾ ಕತ್ತರಿಸಲಾಗಿದೆ. ಆ ವಿಡಿಯೊ ಏನೆಂದು ತಿಳಿಸುವ ಅರೇಬಿಕ್ ವಿಶ್ಲೇಷಣೆಯನ್ನು ಕೂಡಾ ಮ್ಯೂಟ್ ಮಾಡಿ, ಅದರಲ್ಲಿ ತಪ್ಪಾಗಿ ಅರ್ಥೈಸುವಂತೆ ಇಂಗ್ಲಿಷ್‌ ಸಬ್‌ಟೈಟಲ್‌ ನೀಡಲಾಗಿದೆ.

ಈ ವಿಡಿಯೊವನ್ನು ವೀಕ್ಷಿಸುವಾಗ ಸುಮಾರು 20 ಸೆಕೆಂಡುಗಳಲ್ಲಿ, ಒಬ್ಬ ವ್ಯಕ್ತಿಯ ಬೆನ್ನ ಹಿಂದೆ ಶರ್ಟಿನಲ್ಲಿ ‘ಸ್ಪೆಷಲ್ ಎಫೆಕ್ಟ್ ಮೇಕಪ್’ ಎಂದು ಬರೆದ ಬರಹವನ್ನು ಕೂಡಾ ಗುರುತಿಸಬಹುದು.

ಸಾಂಪ್ರದಾಯಿಕವಾಗಿ ಪುರುಷರು ನಡೆಸುತ್ತಿರುವ ಪ್ಯಾಲೇಸ್ತೀನಿಯನ್ ಚಲನಚಿತ್ರೋದ್ಯಮಕ್ಕೆ ಮರಿಯಮ್ ಸಲಾಹ್ ಪ್ರವೇಶಿಸುವ ಬಗ್ಗೆ ‘ಟಿಆರ್‌ಟಿ ವರ್ಲ್ಡ್’ ಚಾನೆಲ್‌ ಕೂಡಾ ವೀಡಿಯೊ ವರದಿಯನ್ನು ಪ್ರಸಾರ ಮಾಡಿದೆ. ಈ ವರದಿಯಲ್ಲಿ ಕೂಡಾ ವೈರಲ್‌ ಆಗಿರುವ ಅದೇ ತುಣುಕುಗಳನ್ನು ಕಾಣಬಹುದು.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

“ಗಾಜಾ ಪಟ್ಟಿಯ ಫಿಲ್ಮ್‌ಸೆಟ್‌ನಲ್ಲಿ, ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಫ್ರೆಂಚ್ ಚಾರಿಟಿ ಡಾಕ್ಟರ್ಸ್ ಆಫ್ ದಿ ವರ್ಲ್ಡ್ ಯೋಜನೆಯ ಅಡಿಯಲ್ಲಿ ಪಾಲ್ಗೊಳ್ಳುವ ನಟರ ಮೇಲೆ ಭೀಕರವಾಗಿ ಕಾಣುವ ಗಾಯಗಳನ್ನು ಸೃಷ್ಟಿಸುತ್ತಿದ್ದಾರೆ. ಗಾಜಾ ನಿವಾಸಿಗಳು ಎದುರಿಸುತ್ತಿರುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಆಶಿಸಿದ್ದಾರೆ” ಎಂದು ಟಿಆರ್‌ಟಿ ವಲ್ಡ್‌‌ ನಿರೂಪಕಿ ಹೇಳುತ್ತಾರೆ.

ಚಲನಚಿತ್ರ ಯೋಜನೆಗಾಗಿ ನಟರ ಮೇಲೆ ಗಾಯಗಳನ್ನು ಕೃತಕವಾಗಿ ಮೇಕಪ್‌ ಮೂಲಕ ಮಾಡಿರುವ ಫ್ಯಾಲೆಸ್ತೀನಿ ಮೇಕಪ್ ಕಲಾವಿದೆಯ ಮೂರು ವರ್ಷಗಳ ಹಿಂದಿನ ವೀಡಿಯೊವನ್ನು, “ಗಾಜಾ ನಿವಾಸಿಗಳು ಜಗತ್ತಿನ ಅನುಕಂಪ ಗಿಟ್ಟಿಸಲು ಬೇಕಾಗಿ ಮತ್ತು ಇಸ್ರೇಲ್ ಅನ್ನು ಕೆಟ್ಟದಾಗಿ ಬಿಂಬಿಸಲು ಬೇಕಾಗಿ ನಕಲಿ ಗಾಯಗಳನ್ನು ಮಾಡುತ್ತಿದ್ದಾರೆ” ಎಂಬ ಸುಳ್ಳು ಹೇಳಿಕೆಯನ್ನು ಮತ್ತೆ ಹರಿಯಬಿಡಲಾಗಿದೆ.

ಗಾಜಾ ನಿವಾಸಿಗಳು ಸಹಾನುಭೂತಿ ಪಡೆಯಲು “ನಕಲಿ ಅಂತ್ಯಕ್ರಿಯೆ” ನಡೆಸುತ್ತಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದರ ಸತ್ಯಾಸತ್ಯತೆಯನ್ನು ಆಲ್ಟ್‌ನ್ಯೂಸ್ ಈ ಹಿಂದೆ ಬಿಡುಗಡೆ ಮಾಡಿತ್ತು.

ಕೃಪೆ: ಆಲ್ಟ್‌ನ್ಯೂಸ್‌

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿಯನ್ನು ಹಂಚಿದ ಮಾಧ್ಯಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...