Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

- Advertisement -
- Advertisement -

ಪೂರ್ವ ಜೆರುಸಲೆಮ್‌ನ ಶೇಕ್ ಜರ್‍ರಾಹ್‌‌ ಪ್ರದೇಶದಲ್ಲಿ ಹಲವಾರು ಪ್ಯಾಲೇಸ್ತೀನಿ ಕುಟುಂಬಗಳನ್ನು ಗಡಿಪಾರು ಮಾಡಲು ಜೆರುಸಲೆಮ್ ಜಿಲ್ಲಾ ನ್ಯಾಯಾಲಯ ತೀರ್ಪಿತ್ತ ನಂತರ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು. ಇದೀಗ ಅಲ್ಲಿ ಇಸ್ರೇಲ್‌ ಸೇನೆಗೆ ಹಿನ್ನಡೆಯಾಗಿದೆ ಎಂದು ವರದಿಯಾಗಿದ್ದು, ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿಕೊಂಡಿದೆ. “ಸೋಮವಾರ (ಮೇ 10) ಗಾಝಾದಲ್ಲಿ ಕನಿಷ್ಠ 136 ಜನರು ಸಾವನ್ನಪ್ಪಿದ್ದಾರೆ. 34 ಮಕ್ಕಳು ಮತ್ತು 21 ಮಹಿಳೆಯರು ಸೇರಿದಂತೆ 950 ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿ ವೈದ್ಯರು ಹೇಳಿದ್ದಾರೆ” ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಭಾರತದಲ್ಲಿ ಇಸ್ರೇಲ್‌ನ ಕೃತ್ಯವನ್ನು ಬೆಂಬಲಿಸುವ ಕೆಲ ಬಲಪಂಥೀಯರು, ಮಕ್ಕಳ ಮುಖಕ್ಕೆ ಕೆಂಪು ಬಣ್ಣವನ್ನು ಹಚ್ಚುವ ವಿಡಿಯೊವೊಂದನ್ನು ವೈರಲ್‌ ಮಾಡಿದ್ದಾರೆ. ಅದರಲ್ಲಿ, “ಜಾಗತಿಕ ಸಹಾನುಭೂತಿ ಪಡೆಯಲು ಮತ್ತು ಇಸ್ರೇಲನ್ನು ಕೆಟ್ಟದಾಗಿ ಬಿಂಬಿಸಲು, ಗಾಝಾದ ಪ್ಯಾಲೆಸ್ತೀನಿಯರು ಮಕ್ಕಳ ಮುಖದ ಮೇಲೆ ನಕಲಿ ರಕ್ತವನ್ನು ಮತ್ತು ನಕಲಿ ಗಾಯಗಳನ್ನು ಮಾಡಿ ಚಿತ್ರಿಸುತ್ತಿದ್ದಾರೆ” ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಬಿಜೆಪಿ ಒಬಿಸಿ ಮೋರ್ಚಾ ಹರಿಯಾಣ ರಾಜ್ಯ ಉಪಾಧ್ಯಕ್ಷೆ ಎಂದು ಗುರುತಿಸಿಕೊಂಡಿರುವ ಮಾಯಾ ಯಾದವ್ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ.

PM झालावाडी (@ PMPATEl1969) ಮತ್ತು ಜನ್ಮಜಿತ್ ಸಿನ್ಹಾ (@ Impregnable007) ಸೇರಿದಂತೆ ಹಲವಾರು ಜನರು ಇದನ್ನು ಟ್ವಿಟರ್‌ನಲ್ಲಿ ಹಂಚಿದ್ದಾರೆ.

ಈ ವಿಡಿಯೋವನ್ನು ಬಲಪಂಥೀಯರು ಫೇಸ್‌‌ಬುಕ್‌ನಲ್ಲಿ ಕೂಡಾ ವೈರಲ್‌ ಮಾಡಿದ್ದಾರೆ. ದೀಕ್ಷಿತ್‌ ಶೆಟ್ಟಿಗಾರ್‌ ಕೊಣಾಜೆ ಎಂಬವರು ಹಾಕಿರುವ ಈ ವಿಡಿಯೊ ಇದುವರೆಗೂ 193 ಶೇರ್‌ ಆಗಿದೆ. ಅದರ ಆರ್ಕೈವ್ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಇದು ಹಳೆಯ ವೀಡಿಯೊವಾಗಿದ್ದು, ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಿಡಿಯೊವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಲ್ಟ್‌‌ ನ್ಯೂಸ್‌ ಹುಡುಕಾಡಿದೆ. ಗೂಗಲ್‌ನಲ್ಲಿ ಈ ವಿಡಿಯೊ ಬಗ್ಗೆ 2018 ರಲ್ಲಿ ಫ್ರಾನ್ಸ್ 24 ಮತ್ತು ಸ್ನೋಪ್ಸ್ ಪ್ರಕಟಿಸಿದ ಫ್ಯಾಕ್ಟ್-ಚೆಕ್ ವರದಿಗಳು ಕಂಡುಬಂದಿದೆ. ದೀರ್ಘ ವೀಡಿಯೊವನ್ನು ಕ್ಲಿಪ್‌ ಅನ್ನು ಕಟ್‌ ಮಾಡಿ ಇಸ್ರೇಲಿ ಮತ್ತು ಸಿರಿಯನ್ ಪಡೆಗಳ ದೌರ್ಜನ್ಯ ಎಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಪ್ಯಾಲೇಸ್ಟಿನಿಯನ್ ವೆಬ್‌ಸೈಟ್ ‘ದಿ ಗಾಝಾ ಪೋಸ್ಟ್‌’ನ ಸುದ್ದಿ ವರದಿಯಿಂದ ಈ ವೀಡಿಯೊ ಕ್ಲಿಪ್ ಪಡೆಯಲಾಗಿದೆ. “ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಪ್ಯಾಲೇಸ್ತೀನಿಯನ್ ಸಿನೆಮಾ ಸ್ಪೆಷಲ್ ಎಫೆಕ್ಟ್ಸ್ ಉದ್ಯಮದಲ್ಲಿ ಮಾಡಿದ ಕೆಲಸಗಳ ಬಗ್ಗೆ” ಈ ವಿಡಿಯೊ ವರದಿಯನ್ನು ಮಾಡಲಾಗಿದೆ ಎಂದು ಸ್ನೋಪ್ಸ್ ವರದಿ ಮಾಡಿದೆ.

ಆದರೆ  ವೈರಲ್ ಆಗುತ್ತಿರುವ ಈ ವಿಡಿಯೊವನ್ನು ಎಡಿಟ್ ಮಾಡಿ, ಮುಖಕ್ಕೆ ಗಾಯದ ಮೇಕಪ್‌ ಮಾಡುವುದನ್ನು ಮಾತ್ರ ತೋರಿಸಲಾಗಿದೆ. ಜೊತೆಗೆ ಇತರ ವಿವರಗಳ ದೃಶ್ಯಗಳನ್ನು ಕೂಡಾ ಕತ್ತರಿಸಲಾಗಿದೆ. ಆ ವಿಡಿಯೊ ಏನೆಂದು ತಿಳಿಸುವ ಅರೇಬಿಕ್ ವಿಶ್ಲೇಷಣೆಯನ್ನು ಕೂಡಾ ಮ್ಯೂಟ್ ಮಾಡಿ, ಅದರಲ್ಲಿ ತಪ್ಪಾಗಿ ಅರ್ಥೈಸುವಂತೆ ಇಂಗ್ಲಿಷ್‌ ಸಬ್‌ಟೈಟಲ್‌ ನೀಡಲಾಗಿದೆ.

ಈ ವಿಡಿಯೊವನ್ನು ವೀಕ್ಷಿಸುವಾಗ ಸುಮಾರು 20 ಸೆಕೆಂಡುಗಳಲ್ಲಿ, ಒಬ್ಬ ವ್ಯಕ್ತಿಯ ಬೆನ್ನ ಹಿಂದೆ ಶರ್ಟಿನಲ್ಲಿ ‘ಸ್ಪೆಷಲ್ ಎಫೆಕ್ಟ್ ಮೇಕಪ್’ ಎಂದು ಬರೆದ ಬರಹವನ್ನು ಕೂಡಾ ಗುರುತಿಸಬಹುದು.

ಸಾಂಪ್ರದಾಯಿಕವಾಗಿ ಪುರುಷರು ನಡೆಸುತ್ತಿರುವ ಪ್ಯಾಲೇಸ್ತೀನಿಯನ್ ಚಲನಚಿತ್ರೋದ್ಯಮಕ್ಕೆ ಮರಿಯಮ್ ಸಲಾಹ್ ಪ್ರವೇಶಿಸುವ ಬಗ್ಗೆ ‘ಟಿಆರ್‌ಟಿ ವರ್ಲ್ಡ್’ ಚಾನೆಲ್‌ ಕೂಡಾ ವೀಡಿಯೊ ವರದಿಯನ್ನು ಪ್ರಸಾರ ಮಾಡಿದೆ. ಈ ವರದಿಯಲ್ಲಿ ಕೂಡಾ ವೈರಲ್‌ ಆಗಿರುವ ಅದೇ ತುಣುಕುಗಳನ್ನು ಕಾಣಬಹುದು.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

“ಗಾಜಾ ಪಟ್ಟಿಯ ಫಿಲ್ಮ್‌ಸೆಟ್‌ನಲ್ಲಿ, ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಫ್ರೆಂಚ್ ಚಾರಿಟಿ ಡಾಕ್ಟರ್ಸ್ ಆಫ್ ದಿ ವರ್ಲ್ಡ್ ಯೋಜನೆಯ ಅಡಿಯಲ್ಲಿ ಪಾಲ್ಗೊಳ್ಳುವ ನಟರ ಮೇಲೆ ಭೀಕರವಾಗಿ ಕಾಣುವ ಗಾಯಗಳನ್ನು ಸೃಷ್ಟಿಸುತ್ತಿದ್ದಾರೆ. ಗಾಜಾ ನಿವಾಸಿಗಳು ಎದುರಿಸುತ್ತಿರುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಆಶಿಸಿದ್ದಾರೆ” ಎಂದು ಟಿಆರ್‌ಟಿ ವಲ್ಡ್‌‌ ನಿರೂಪಕಿ ಹೇಳುತ್ತಾರೆ.

ಚಲನಚಿತ್ರ ಯೋಜನೆಗಾಗಿ ನಟರ ಮೇಲೆ ಗಾಯಗಳನ್ನು ಕೃತಕವಾಗಿ ಮೇಕಪ್‌ ಮೂಲಕ ಮಾಡಿರುವ ಫ್ಯಾಲೆಸ್ತೀನಿ ಮೇಕಪ್ ಕಲಾವಿದೆಯ ಮೂರು ವರ್ಷಗಳ ಹಿಂದಿನ ವೀಡಿಯೊವನ್ನು, “ಗಾಜಾ ನಿವಾಸಿಗಳು ಜಗತ್ತಿನ ಅನುಕಂಪ ಗಿಟ್ಟಿಸಲು ಬೇಕಾಗಿ ಮತ್ತು ಇಸ್ರೇಲ್ ಅನ್ನು ಕೆಟ್ಟದಾಗಿ ಬಿಂಬಿಸಲು ಬೇಕಾಗಿ ನಕಲಿ ಗಾಯಗಳನ್ನು ಮಾಡುತ್ತಿದ್ದಾರೆ” ಎಂಬ ಸುಳ್ಳು ಹೇಳಿಕೆಯನ್ನು ಮತ್ತೆ ಹರಿಯಬಿಡಲಾಗಿದೆ.

ಗಾಜಾ ನಿವಾಸಿಗಳು ಸಹಾನುಭೂತಿ ಪಡೆಯಲು “ನಕಲಿ ಅಂತ್ಯಕ್ರಿಯೆ” ನಡೆಸುತ್ತಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದರ ಸತ್ಯಾಸತ್ಯತೆಯನ್ನು ಆಲ್ಟ್‌ನ್ಯೂಸ್ ಈ ಹಿಂದೆ ಬಿಡುಗಡೆ ಮಾಡಿತ್ತು.

ಕೃಪೆ: ಆಲ್ಟ್‌ನ್ಯೂಸ್‌

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿಯನ್ನು ಹಂಚಿದ ಮಾಧ್ಯಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...