Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

- Advertisement -
- Advertisement -

ಪೂರ್ವ ಜೆರುಸಲೆಮ್‌ನ ಶೇಕ್ ಜರ್‍ರಾಹ್‌‌ ಪ್ರದೇಶದಲ್ಲಿ ಹಲವಾರು ಪ್ಯಾಲೇಸ್ತೀನಿ ಕುಟುಂಬಗಳನ್ನು ಗಡಿಪಾರು ಮಾಡಲು ಜೆರುಸಲೆಮ್ ಜಿಲ್ಲಾ ನ್ಯಾಯಾಲಯ ತೀರ್ಪಿತ್ತ ನಂತರ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು. ಇದೀಗ ಅಲ್ಲಿ ಇಸ್ರೇಲ್‌ ಸೇನೆಗೆ ಹಿನ್ನಡೆಯಾಗಿದೆ ಎಂದು ವರದಿಯಾಗಿದ್ದು, ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿಕೊಂಡಿದೆ. “ಸೋಮವಾರ (ಮೇ 10) ಗಾಝಾದಲ್ಲಿ ಕನಿಷ್ಠ 136 ಜನರು ಸಾವನ್ನಪ್ಪಿದ್ದಾರೆ. 34 ಮಕ್ಕಳು ಮತ್ತು 21 ಮಹಿಳೆಯರು ಸೇರಿದಂತೆ 950 ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿ ವೈದ್ಯರು ಹೇಳಿದ್ದಾರೆ” ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಭಾರತದಲ್ಲಿ ಇಸ್ರೇಲ್‌ನ ಕೃತ್ಯವನ್ನು ಬೆಂಬಲಿಸುವ ಕೆಲ ಬಲಪಂಥೀಯರು, ಮಕ್ಕಳ ಮುಖಕ್ಕೆ ಕೆಂಪು ಬಣ್ಣವನ್ನು ಹಚ್ಚುವ ವಿಡಿಯೊವೊಂದನ್ನು ವೈರಲ್‌ ಮಾಡಿದ್ದಾರೆ. ಅದರಲ್ಲಿ, “ಜಾಗತಿಕ ಸಹಾನುಭೂತಿ ಪಡೆಯಲು ಮತ್ತು ಇಸ್ರೇಲನ್ನು ಕೆಟ್ಟದಾಗಿ ಬಿಂಬಿಸಲು, ಗಾಝಾದ ಪ್ಯಾಲೆಸ್ತೀನಿಯರು ಮಕ್ಕಳ ಮುಖದ ಮೇಲೆ ನಕಲಿ ರಕ್ತವನ್ನು ಮತ್ತು ನಕಲಿ ಗಾಯಗಳನ್ನು ಮಾಡಿ ಚಿತ್ರಿಸುತ್ತಿದ್ದಾರೆ” ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಬಿಜೆಪಿ ಒಬಿಸಿ ಮೋರ್ಚಾ ಹರಿಯಾಣ ರಾಜ್ಯ ಉಪಾಧ್ಯಕ್ಷೆ ಎಂದು ಗುರುತಿಸಿಕೊಂಡಿರುವ ಮಾಯಾ ಯಾದವ್ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ.

PM झालावाडी (@ PMPATEl1969) ಮತ್ತು ಜನ್ಮಜಿತ್ ಸಿನ್ಹಾ (@ Impregnable007) ಸೇರಿದಂತೆ ಹಲವಾರು ಜನರು ಇದನ್ನು ಟ್ವಿಟರ್‌ನಲ್ಲಿ ಹಂಚಿದ್ದಾರೆ.

ಈ ವಿಡಿಯೋವನ್ನು ಬಲಪಂಥೀಯರು ಫೇಸ್‌‌ಬುಕ್‌ನಲ್ಲಿ ಕೂಡಾ ವೈರಲ್‌ ಮಾಡಿದ್ದಾರೆ. ದೀಕ್ಷಿತ್‌ ಶೆಟ್ಟಿಗಾರ್‌ ಕೊಣಾಜೆ ಎಂಬವರು ಹಾಕಿರುವ ಈ ವಿಡಿಯೊ ಇದುವರೆಗೂ 193 ಶೇರ್‌ ಆಗಿದೆ. ಅದರ ಆರ್ಕೈವ್ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಇದು ಹಳೆಯ ವೀಡಿಯೊವಾಗಿದ್ದು, ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಿಡಿಯೊವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಲ್ಟ್‌‌ ನ್ಯೂಸ್‌ ಹುಡುಕಾಡಿದೆ. ಗೂಗಲ್‌ನಲ್ಲಿ ಈ ವಿಡಿಯೊ ಬಗ್ಗೆ 2018 ರಲ್ಲಿ ಫ್ರಾನ್ಸ್ 24 ಮತ್ತು ಸ್ನೋಪ್ಸ್ ಪ್ರಕಟಿಸಿದ ಫ್ಯಾಕ್ಟ್-ಚೆಕ್ ವರದಿಗಳು ಕಂಡುಬಂದಿದೆ. ದೀರ್ಘ ವೀಡಿಯೊವನ್ನು ಕ್ಲಿಪ್‌ ಅನ್ನು ಕಟ್‌ ಮಾಡಿ ಇಸ್ರೇಲಿ ಮತ್ತು ಸಿರಿಯನ್ ಪಡೆಗಳ ದೌರ್ಜನ್ಯ ಎಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಪ್ಯಾಲೇಸ್ಟಿನಿಯನ್ ವೆಬ್‌ಸೈಟ್ ‘ದಿ ಗಾಝಾ ಪೋಸ್ಟ್‌’ನ ಸುದ್ದಿ ವರದಿಯಿಂದ ಈ ವೀಡಿಯೊ ಕ್ಲಿಪ್ ಪಡೆಯಲಾಗಿದೆ. “ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಪ್ಯಾಲೇಸ್ತೀನಿಯನ್ ಸಿನೆಮಾ ಸ್ಪೆಷಲ್ ಎಫೆಕ್ಟ್ಸ್ ಉದ್ಯಮದಲ್ಲಿ ಮಾಡಿದ ಕೆಲಸಗಳ ಬಗ್ಗೆ” ಈ ವಿಡಿಯೊ ವರದಿಯನ್ನು ಮಾಡಲಾಗಿದೆ ಎಂದು ಸ್ನೋಪ್ಸ್ ವರದಿ ಮಾಡಿದೆ.

ಆದರೆ  ವೈರಲ್ ಆಗುತ್ತಿರುವ ಈ ವಿಡಿಯೊವನ್ನು ಎಡಿಟ್ ಮಾಡಿ, ಮುಖಕ್ಕೆ ಗಾಯದ ಮೇಕಪ್‌ ಮಾಡುವುದನ್ನು ಮಾತ್ರ ತೋರಿಸಲಾಗಿದೆ. ಜೊತೆಗೆ ಇತರ ವಿವರಗಳ ದೃಶ್ಯಗಳನ್ನು ಕೂಡಾ ಕತ್ತರಿಸಲಾಗಿದೆ. ಆ ವಿಡಿಯೊ ಏನೆಂದು ತಿಳಿಸುವ ಅರೇಬಿಕ್ ವಿಶ್ಲೇಷಣೆಯನ್ನು ಕೂಡಾ ಮ್ಯೂಟ್ ಮಾಡಿ, ಅದರಲ್ಲಿ ತಪ್ಪಾಗಿ ಅರ್ಥೈಸುವಂತೆ ಇಂಗ್ಲಿಷ್‌ ಸಬ್‌ಟೈಟಲ್‌ ನೀಡಲಾಗಿದೆ.

ಈ ವಿಡಿಯೊವನ್ನು ವೀಕ್ಷಿಸುವಾಗ ಸುಮಾರು 20 ಸೆಕೆಂಡುಗಳಲ್ಲಿ, ಒಬ್ಬ ವ್ಯಕ್ತಿಯ ಬೆನ್ನ ಹಿಂದೆ ಶರ್ಟಿನಲ್ಲಿ ‘ಸ್ಪೆಷಲ್ ಎಫೆಕ್ಟ್ ಮೇಕಪ್’ ಎಂದು ಬರೆದ ಬರಹವನ್ನು ಕೂಡಾ ಗುರುತಿಸಬಹುದು.

ಸಾಂಪ್ರದಾಯಿಕವಾಗಿ ಪುರುಷರು ನಡೆಸುತ್ತಿರುವ ಪ್ಯಾಲೇಸ್ತೀನಿಯನ್ ಚಲನಚಿತ್ರೋದ್ಯಮಕ್ಕೆ ಮರಿಯಮ್ ಸಲಾಹ್ ಪ್ರವೇಶಿಸುವ ಬಗ್ಗೆ ‘ಟಿಆರ್‌ಟಿ ವರ್ಲ್ಡ್’ ಚಾನೆಲ್‌ ಕೂಡಾ ವೀಡಿಯೊ ವರದಿಯನ್ನು ಪ್ರಸಾರ ಮಾಡಿದೆ. ಈ ವರದಿಯಲ್ಲಿ ಕೂಡಾ ವೈರಲ್‌ ಆಗಿರುವ ಅದೇ ತುಣುಕುಗಳನ್ನು ಕಾಣಬಹುದು.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

“ಗಾಜಾ ಪಟ್ಟಿಯ ಫಿಲ್ಮ್‌ಸೆಟ್‌ನಲ್ಲಿ, ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಫ್ರೆಂಚ್ ಚಾರಿಟಿ ಡಾಕ್ಟರ್ಸ್ ಆಫ್ ದಿ ವರ್ಲ್ಡ್ ಯೋಜನೆಯ ಅಡಿಯಲ್ಲಿ ಪಾಲ್ಗೊಳ್ಳುವ ನಟರ ಮೇಲೆ ಭೀಕರವಾಗಿ ಕಾಣುವ ಗಾಯಗಳನ್ನು ಸೃಷ್ಟಿಸುತ್ತಿದ್ದಾರೆ. ಗಾಜಾ ನಿವಾಸಿಗಳು ಎದುರಿಸುತ್ತಿರುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಆಶಿಸಿದ್ದಾರೆ” ಎಂದು ಟಿಆರ್‌ಟಿ ವಲ್ಡ್‌‌ ನಿರೂಪಕಿ ಹೇಳುತ್ತಾರೆ.

ಚಲನಚಿತ್ರ ಯೋಜನೆಗಾಗಿ ನಟರ ಮೇಲೆ ಗಾಯಗಳನ್ನು ಕೃತಕವಾಗಿ ಮೇಕಪ್‌ ಮೂಲಕ ಮಾಡಿರುವ ಫ್ಯಾಲೆಸ್ತೀನಿ ಮೇಕಪ್ ಕಲಾವಿದೆಯ ಮೂರು ವರ್ಷಗಳ ಹಿಂದಿನ ವೀಡಿಯೊವನ್ನು, “ಗಾಜಾ ನಿವಾಸಿಗಳು ಜಗತ್ತಿನ ಅನುಕಂಪ ಗಿಟ್ಟಿಸಲು ಬೇಕಾಗಿ ಮತ್ತು ಇಸ್ರೇಲ್ ಅನ್ನು ಕೆಟ್ಟದಾಗಿ ಬಿಂಬಿಸಲು ಬೇಕಾಗಿ ನಕಲಿ ಗಾಯಗಳನ್ನು ಮಾಡುತ್ತಿದ್ದಾರೆ” ಎಂಬ ಸುಳ್ಳು ಹೇಳಿಕೆಯನ್ನು ಮತ್ತೆ ಹರಿಯಬಿಡಲಾಗಿದೆ.

ಗಾಜಾ ನಿವಾಸಿಗಳು ಸಹಾನುಭೂತಿ ಪಡೆಯಲು “ನಕಲಿ ಅಂತ್ಯಕ್ರಿಯೆ” ನಡೆಸುತ್ತಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದರ ಸತ್ಯಾಸತ್ಯತೆಯನ್ನು ಆಲ್ಟ್‌ನ್ಯೂಸ್ ಈ ಹಿಂದೆ ಬಿಡುಗಡೆ ಮಾಡಿತ್ತು.

ಕೃಪೆ: ಆಲ್ಟ್‌ನ್ಯೂಸ್‌

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿಯನ್ನು ಹಂಚಿದ ಮಾಧ್ಯಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...