Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

ಫ್ಯಾಕ್ಟ್‌ಚೆಕ್‌: ‘ಅನುಕಂಪಕ್ಕಾಗಿ ಗಾಝಾ ನಾಟಕವಾಡುತ್ತಿದೆ’ ಎಂದು ಎಡಿಟೆಡ್‌‌ ವಿಡಿಯೊ ಶೇರ್‌ ಮಾಡುತ್ತಿರುವ ಬಲಪಂಥೀಯರು!

- Advertisement -
- Advertisement -

ಪೂರ್ವ ಜೆರುಸಲೆಮ್‌ನ ಶೇಕ್ ಜರ್‍ರಾಹ್‌‌ ಪ್ರದೇಶದಲ್ಲಿ ಹಲವಾರು ಪ್ಯಾಲೇಸ್ತೀನಿ ಕುಟುಂಬಗಳನ್ನು ಗಡಿಪಾರು ಮಾಡಲು ಜೆರುಸಲೆಮ್ ಜಿಲ್ಲಾ ನ್ಯಾಯಾಲಯ ತೀರ್ಪಿತ್ತ ನಂತರ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌ ನಡುವೆ ಉದ್ವಿಗ್ನತೆ ಹೆಚ್ಚಾಗಿತ್ತು. ಇದೀಗ ಅಲ್ಲಿ ಇಸ್ರೇಲ್‌ ಸೇನೆಗೆ ಹಿನ್ನಡೆಯಾಗಿದೆ ಎಂದು ವರದಿಯಾಗಿದ್ದು, ಕದನ ವಿರಾಮಕ್ಕೆ ಇಸ್ರೇಲ್‌ ಒಪ್ಪಿಕೊಂಡಿದೆ. “ಸೋಮವಾರ (ಮೇ 10) ಗಾಝಾದಲ್ಲಿ ಕನಿಷ್ಠ 136 ಜನರು ಸಾವನ್ನಪ್ಪಿದ್ದಾರೆ. 34 ಮಕ್ಕಳು ಮತ್ತು 21 ಮಹಿಳೆಯರು ಸೇರಿದಂತೆ 950 ಜನರು ಗಾಯಗೊಂಡಿದ್ದಾರೆ ಎಂದು ಪ್ಯಾಲೇಸ್ತೀನಿ ವೈದ್ಯರು ಹೇಳಿದ್ದಾರೆ” ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಭಾರತದಲ್ಲಿ ಇಸ್ರೇಲ್‌ನ ಕೃತ್ಯವನ್ನು ಬೆಂಬಲಿಸುವ ಕೆಲ ಬಲಪಂಥೀಯರು, ಮಕ್ಕಳ ಮುಖಕ್ಕೆ ಕೆಂಪು ಬಣ್ಣವನ್ನು ಹಚ್ಚುವ ವಿಡಿಯೊವೊಂದನ್ನು ವೈರಲ್‌ ಮಾಡಿದ್ದಾರೆ. ಅದರಲ್ಲಿ, “ಜಾಗತಿಕ ಸಹಾನುಭೂತಿ ಪಡೆಯಲು ಮತ್ತು ಇಸ್ರೇಲನ್ನು ಕೆಟ್ಟದಾಗಿ ಬಿಂಬಿಸಲು, ಗಾಝಾದ ಪ್ಯಾಲೆಸ್ತೀನಿಯರು ಮಕ್ಕಳ ಮುಖದ ಮೇಲೆ ನಕಲಿ ರಕ್ತವನ್ನು ಮತ್ತು ನಕಲಿ ಗಾಯಗಳನ್ನು ಮಾಡಿ ಚಿತ್ರಿಸುತ್ತಿದ್ದಾರೆ” ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುತ್ತಿದ್ದಾರೆ.

ಇದನ್ನೂ ಓದಿ: ಸುಳ್ಳು ಸುದ್ದಿ ಪ್ರಸಾರ: ಬಲಪಂಥೀಯ ಮಹಿಳೆ ಮೇಲೆ ಕ್ರಮಕ್ಕೆ ಮುಂದಾದ ಕೋಲ್ಕತ್ತ ಪೊಲೀಸ್!

ಬಿಜೆಪಿ ಒಬಿಸಿ ಮೋರ್ಚಾ ಹರಿಯಾಣ ರಾಜ್ಯ ಉಪಾಧ್ಯಕ್ಷೆ ಎಂದು ಗುರುತಿಸಿಕೊಂಡಿರುವ ಮಾಯಾ ಯಾದವ್ ಕೂಡ ವಿಡಿಯೋ ಹಂಚಿಕೊಂಡಿದ್ದಾರೆ.

PM झालावाडी (@ PMPATEl1969) ಮತ್ತು ಜನ್ಮಜಿತ್ ಸಿನ್ಹಾ (@ Impregnable007) ಸೇರಿದಂತೆ ಹಲವಾರು ಜನರು ಇದನ್ನು ಟ್ವಿಟರ್‌ನಲ್ಲಿ ಹಂಚಿದ್ದಾರೆ.

ಈ ವಿಡಿಯೋವನ್ನು ಬಲಪಂಥೀಯರು ಫೇಸ್‌‌ಬುಕ್‌ನಲ್ಲಿ ಕೂಡಾ ವೈರಲ್‌ ಮಾಡಿದ್ದಾರೆ. ದೀಕ್ಷಿತ್‌ ಶೆಟ್ಟಿಗಾರ್‌ ಕೊಣಾಜೆ ಎಂಬವರು ಹಾಕಿರುವ ಈ ವಿಡಿಯೊ ಇದುವರೆಗೂ 193 ಶೇರ್‌ ಆಗಿದೆ. ಅದರ ಆರ್ಕೈವ್ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌

ವಾಸ್ತವದಲ್ಲಿ ಇದು ಹಳೆಯ ವೀಡಿಯೊವಾಗಿದ್ದು, ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಈ ವಿಡಿಯೊವನ್ನು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್‌ ಆಲ್ಟ್‌‌ ನ್ಯೂಸ್‌ ಹುಡುಕಾಡಿದೆ. ಗೂಗಲ್‌ನಲ್ಲಿ ಈ ವಿಡಿಯೊ ಬಗ್ಗೆ 2018 ರಲ್ಲಿ ಫ್ರಾನ್ಸ್ 24 ಮತ್ತು ಸ್ನೋಪ್ಸ್ ಪ್ರಕಟಿಸಿದ ಫ್ಯಾಕ್ಟ್-ಚೆಕ್ ವರದಿಗಳು ಕಂಡುಬಂದಿದೆ. ದೀರ್ಘ ವೀಡಿಯೊವನ್ನು ಕ್ಲಿಪ್‌ ಅನ್ನು ಕಟ್‌ ಮಾಡಿ ಇಸ್ರೇಲಿ ಮತ್ತು ಸಿರಿಯನ್ ಪಡೆಗಳ ದೌರ್ಜನ್ಯ ಎಂದು ಹಂಚಿಕೊಳ್ಳಲಾಗಿತ್ತು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ಮೋದಿ ಯೋಗ ಮಾಡುತ್ತಿರುವ ವಿಡಿಯೋ! ಬಿಜೆಪಿಗರು ಹೇಳುತ್ತಿರುವುದು ನಿಜವೆ?

ಪ್ಯಾಲೇಸ್ಟಿನಿಯನ್ ವೆಬ್‌ಸೈಟ್ ‘ದಿ ಗಾಝಾ ಪೋಸ್ಟ್‌’ನ ಸುದ್ದಿ ವರದಿಯಿಂದ ಈ ವೀಡಿಯೊ ಕ್ಲಿಪ್ ಪಡೆಯಲಾಗಿದೆ. “ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಪ್ಯಾಲೇಸ್ತೀನಿಯನ್ ಸಿನೆಮಾ ಸ್ಪೆಷಲ್ ಎಫೆಕ್ಟ್ಸ್ ಉದ್ಯಮದಲ್ಲಿ ಮಾಡಿದ ಕೆಲಸಗಳ ಬಗ್ಗೆ” ಈ ವಿಡಿಯೊ ವರದಿಯನ್ನು ಮಾಡಲಾಗಿದೆ ಎಂದು ಸ್ನೋಪ್ಸ್ ವರದಿ ಮಾಡಿದೆ.

ಆದರೆ  ವೈರಲ್ ಆಗುತ್ತಿರುವ ಈ ವಿಡಿಯೊವನ್ನು ಎಡಿಟ್ ಮಾಡಿ, ಮುಖಕ್ಕೆ ಗಾಯದ ಮೇಕಪ್‌ ಮಾಡುವುದನ್ನು ಮಾತ್ರ ತೋರಿಸಲಾಗಿದೆ. ಜೊತೆಗೆ ಇತರ ವಿವರಗಳ ದೃಶ್ಯಗಳನ್ನು ಕೂಡಾ ಕತ್ತರಿಸಲಾಗಿದೆ. ಆ ವಿಡಿಯೊ ಏನೆಂದು ತಿಳಿಸುವ ಅರೇಬಿಕ್ ವಿಶ್ಲೇಷಣೆಯನ್ನು ಕೂಡಾ ಮ್ಯೂಟ್ ಮಾಡಿ, ಅದರಲ್ಲಿ ತಪ್ಪಾಗಿ ಅರ್ಥೈಸುವಂತೆ ಇಂಗ್ಲಿಷ್‌ ಸಬ್‌ಟೈಟಲ್‌ ನೀಡಲಾಗಿದೆ.

ಈ ವಿಡಿಯೊವನ್ನು ವೀಕ್ಷಿಸುವಾಗ ಸುಮಾರು 20 ಸೆಕೆಂಡುಗಳಲ್ಲಿ, ಒಬ್ಬ ವ್ಯಕ್ತಿಯ ಬೆನ್ನ ಹಿಂದೆ ಶರ್ಟಿನಲ್ಲಿ ‘ಸ್ಪೆಷಲ್ ಎಫೆಕ್ಟ್ ಮೇಕಪ್’ ಎಂದು ಬರೆದ ಬರಹವನ್ನು ಕೂಡಾ ಗುರುತಿಸಬಹುದು.

ಸಾಂಪ್ರದಾಯಿಕವಾಗಿ ಪುರುಷರು ನಡೆಸುತ್ತಿರುವ ಪ್ಯಾಲೇಸ್ತೀನಿಯನ್ ಚಲನಚಿತ್ರೋದ್ಯಮಕ್ಕೆ ಮರಿಯಮ್ ಸಲಾಹ್ ಪ್ರವೇಶಿಸುವ ಬಗ್ಗೆ ‘ಟಿಆರ್‌ಟಿ ವರ್ಲ್ಡ್’ ಚಾನೆಲ್‌ ಕೂಡಾ ವೀಡಿಯೊ ವರದಿಯನ್ನು ಪ್ರಸಾರ ಮಾಡಿದೆ. ಈ ವರದಿಯಲ್ಲಿ ಕೂಡಾ ವೈರಲ್‌ ಆಗಿರುವ ಅದೇ ತುಣುಕುಗಳನ್ನು ಕಾಣಬಹುದು.

ಇದನ್ನೂ ಓದಿ: ಪ್ರಧಾನಿ ಬಿಜೆಪಿ ಕಾರ್ಯಕರ್ತರ ಭೇಟಿ ಮಾಡಿದ್ದನ್ನು, ರೈತರೊಂದಿಗಿನ ಭೇಟಿಯೆಂದ ಮಾಧ್ಯಮಗಳು!

“ಗಾಜಾ ಪಟ್ಟಿಯ ಫಿಲ್ಮ್‌ಸೆಟ್‌ನಲ್ಲಿ, ಮೇಕಪ್ ಕಲಾವಿದೆ ಮರಿಯಮ್ ಸಲಾಹ್ ಅವರು ಫ್ರೆಂಚ್ ಚಾರಿಟಿ ಡಾಕ್ಟರ್ಸ್ ಆಫ್ ದಿ ವರ್ಲ್ಡ್ ಯೋಜನೆಯ ಅಡಿಯಲ್ಲಿ ಪಾಲ್ಗೊಳ್ಳುವ ನಟರ ಮೇಲೆ ಭೀಕರವಾಗಿ ಕಾಣುವ ಗಾಯಗಳನ್ನು ಸೃಷ್ಟಿಸುತ್ತಿದ್ದಾರೆ. ಗಾಜಾ ನಿವಾಸಿಗಳು ಎದುರಿಸುತ್ತಿರುವ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲು ಅವರು ಆಶಿಸಿದ್ದಾರೆ” ಎಂದು ಟಿಆರ್‌ಟಿ ವಲ್ಡ್‌‌ ನಿರೂಪಕಿ ಹೇಳುತ್ತಾರೆ.

ಚಲನಚಿತ್ರ ಯೋಜನೆಗಾಗಿ ನಟರ ಮೇಲೆ ಗಾಯಗಳನ್ನು ಕೃತಕವಾಗಿ ಮೇಕಪ್‌ ಮೂಲಕ ಮಾಡಿರುವ ಫ್ಯಾಲೆಸ್ತೀನಿ ಮೇಕಪ್ ಕಲಾವಿದೆಯ ಮೂರು ವರ್ಷಗಳ ಹಿಂದಿನ ವೀಡಿಯೊವನ್ನು, “ಗಾಜಾ ನಿವಾಸಿಗಳು ಜಗತ್ತಿನ ಅನುಕಂಪ ಗಿಟ್ಟಿಸಲು ಬೇಕಾಗಿ ಮತ್ತು ಇಸ್ರೇಲ್ ಅನ್ನು ಕೆಟ್ಟದಾಗಿ ಬಿಂಬಿಸಲು ಬೇಕಾಗಿ ನಕಲಿ ಗಾಯಗಳನ್ನು ಮಾಡುತ್ತಿದ್ದಾರೆ” ಎಂಬ ಸುಳ್ಳು ಹೇಳಿಕೆಯನ್ನು ಮತ್ತೆ ಹರಿಯಬಿಡಲಾಗಿದೆ.

ಗಾಜಾ ನಿವಾಸಿಗಳು ಸಹಾನುಭೂತಿ ಪಡೆಯಲು “ನಕಲಿ ಅಂತ್ಯಕ್ರಿಯೆ” ನಡೆಸುತ್ತಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದರ ಸತ್ಯಾಸತ್ಯತೆಯನ್ನು ಆಲ್ಟ್‌ನ್ಯೂಸ್ ಈ ಹಿಂದೆ ಬಿಡುಗಡೆ ಮಾಡಿತ್ತು.

ಕೃಪೆ: ಆಲ್ಟ್‌ನ್ಯೂಸ್‌

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ’ಬಾಲಾಕೋಟ್ ದಾಳಿಯಲ್ಲಿ 300 ಜನರ ಸಾವನ್ನು ಪಾಕಿಸ್ತಾನ ಒಪ್ಪಿಕೊಂಡಿದೆ’ ಎಂದು ಸುಳ್ಳು ಸುದ್ದಿಯನ್ನು ಹಂಚಿದ ಮಾಧ್ಯಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...