Homeಮುಖಪುಟಅತ್ಯಾಚಾರ ಪ್ರಕರಣದ ಎಲ್ಲಾ ಆರೋಪಗಳಿಂದ ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ಖುಲಾಸೆ

ಅತ್ಯಾಚಾರ ಪ್ರಕರಣದ ಎಲ್ಲಾ ಆರೋಪಗಳಿಂದ ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ಖುಲಾಸೆ

- Advertisement -
- Advertisement -

ತೆಹಲ್ಕಾ ನಿಯತಕಾಲಿಕದ ಸಂಸ್ಥಾಪಕ ಸಂಪಾದಕ ತರುಣ್ ತೇಜ್‌ಪಾಲ್ ಅವರನ್ನು ಗೋವಾ ನ್ಯಾಯಾಲಯವು ಅತ್ಯಾಚಾರ ಆರೋಪದಿಂದ ಖುಲಾಸೆಗೊಳಿಸಿದೆ. ಗೋವಾದ ರೆಸಾರ್ಟ್ ಒಂದರಲ್ಲಿ 2013ರಲ್ಲಿ ನಡೆದ ಸಮಾವೇಶದ ಸಂದರ್ಭದಲ್ಲಿ ಕಿರಿಯ ಸಹೋದ್ಯೋಗಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವಿತ್ತು.

ಅತ್ಯಾಚಾರ ಪ್ರಕರಣ ಎದುರಿಸುತ್ತಿದ್ದ ತರುಣ್ ತೇಜ್‌ಪಾಲ್, 2014 ರಿಂದ ಜಾಮೀನಿನ ಮೇಲೆ ಹೊರಗಿದ್ದರು. 8 ವರ್ಷಗಳ ಬಳಿಕ ತೀರ್ಪು ಹೊರಬಿದ್ದಿದೆ.

2017 ರಲ್ಲಿ ವಿಚಾರಣಾ ನ್ಯಾಯಾಲಯ ತರುಣ್ ತೇಜ್‌ಪಾಲ್ ವಿರುದ್ಧ ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕಾನೂನುಬಾಹಿರ ಬಂಧನ ಆರೋಪಗಳನ್ನು ದಾಖಲಿಸಿತ್ತು. ಈ ಆರೋಪಗಳ ವಿರುದ್ಧ ತರುಣ್ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಗೋವಾ ನ್ಯಾಯಾಲಯದಲ್ಲಿಯೇ ವಿಚಾರಣೆ ಮುಂದುವರಿಯಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿತ್ತು.

ಇದನ್ನೂ ಓದಿ: ವಾಟ್ಸಪ್‌‌ ಹೊಸ ಗೌಪ್ಯತಾ ನೀತಿ ವಿವಾದ – ಹಿಂತೆಗೆದುಕೊಳ್ಳುವಂತೆ ತಾಕೀತು ಮಾಡಿದ ಸರ್ಕಾರ

ತರುಣ್ ತೇಜ್‌ಪಾಲ್ ಅವರ ಪರವಾಗಿ ನ್ಯಾಯಾಲಯದ ತೀರ್ಪನ್ನು ವಿವರಿಸಿರುವ ಪುತ್ರಿ ಕ್ಯಾರಾ ತೇಜ್‌ಪಾಲ್, ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ ನ್ಯಾಯಾಲಯಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

’ಈ ನ್ಯಾಯಾಲಯವು ಕಠಿಣ, ನಿಷ್ಪಕ್ಷಪಾತ ಮತ್ತು ನ್ಯಾಯಯುತ ವಿಚಾರಣೆಗೆ ಮತ್ತು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಇತರ ಪ್ರಾಯೋಗಿಕ ವಸ್ತುಗಳನ್ನು ದಾಖಲೆಯಲ್ಲಿ ಪರಿಶೀಲಿಸಿದ್ದಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ” ಎಂದು ತರುಣ್ ತೇಜ್‌ಪಾಲ್ ಹೇಳಿದ್ದಾರೆ. ಜೊತೆಗೆ ಕೋವಿಡ್‌ನಿಂದ ನಿಧನರಾದ ತಮ್ಮ ವಕೀಲ ರಾಜೀವ್ ಗೋಮ್ಸ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಕಳೆದ ಏಳೂವರೆ ವರ್ಷಗಳಿಂದ ಈ ಸುಳ್ಳು ಆರೋಪದ ಪರಿಣಾಮವನ್ನು ನಮ್ಮ ವೈಯಕ್ತಿಕ, ವೃತ್ತಿಪರ ಮತ್ತು ಸಾರ್ವಜನಿಕ ಜೀವನದ ಪ್ರತಿಯೊಂದು ಹಂತಗಳಲ್ಲೂ ಅನುಭವಿಸಿದ್ದೇವೆ. ಈ ದಿನಗಳು ನಮ್ಮ ಕುಟುಂಬಕ್ಕೆ ಅಘಾತಕಾರಿ ದಿನಗಳು ಎಂದಿದ್ದಾರೆ.

ಇದನ್ನೂ ಓದಿ: ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

ಗೋವಾದಲ್ಲಿನ ಸೆಷನ್ಸ್ ನ್ಯಾಯಾಲಯವು ಬುಧವಾರ ತನ್ನ ತೀರ್ಪನ್ನು ಘೋಷಿಸಬೇಕಾಗಿತ್ತು ಆದರೆ ತೌತೆ ಚಂಡಮಾರುತದಿಂದಾಗಿ ವಿದ್ಯುತ್ ವೈಫಲ್ಯವನ್ನು ಉಲ್ಲೇಖಿಸಿ ತೀರ್ಪನ್ನು ಮುಂದೂಡಲಾಗಿತ್ತು. ಈ ಹಿಂದೆಯೂ ಕೊರೊನಾ ವೈರಸ್ ಬಿಕ್ಕಟ್ಟು ಸೇರಿದಂತೆ ವಿವಿಧ ಕಾರಣಗಳಿಗಾಗಿ ತೀರ್ಪು ವಿಳಂಬವಾಗಿತ್ತು.

ಅತ್ಯಾಚಾರ ಆರೋಪ ದಾಖಲಾದ ಕೂಡಲೇ ತೆಹಲ್ಕಾ ಸಂಪಾದಕ ಸ್ಥಾನದಿಂದ ತೇಜ್‌ಪಾಲ್ ಹೊರಬಂದಿದ್ದರು. ಆರು ತಿಂಗಳಲ್ಲಿಯೇ ಮತ್ತೆ ಆ ಸ್ಥಾನಕ್ಕೆ ಮರಳಿದ್ದರು. 2013ರ ನವೆಂಬರ್‌ನಲ್ಲಿ ಬಂಧನಕ್ಕೆ ಒಳಗಾಗಿದ್ದ ಅವರು, 2014ರ ಮೇ ತಿಂಗಳಿನಿಂದ ಜಾಮೀನಿನ ಮೇಲೆ ತರುಣ್ ಹೊರ ಬಂದಿದ್ದರು.

ಗೋವಾ ತ್ವರಿತ ವಿಚಾರಣಾ ನ್ಯಾಯಾಲಯದಲ್ಲಿ 2,684 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದ ಪೊಲೀಸರು, ಅವರ ವಿರುದ್ಧ ಸಾಕಷ್ಟು ಪುರಾವೆಗಳಿವೆ ಎಂದು ತಿಳಿಸಿದ್ದರು. 2017 ರಲ್ಲಿ ಬಾಂಬೆ ಹೈಕೋರ್ಟ್ ಈ ಪ್ರಕರಣವನ್ನು ರದ್ದುಗೊಳಿಸುವ ಮನವಿಯನ್ನು ತಳ್ಳಿಹಾಕಿತ್ತು.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...