Homeಮುಖಪುಟ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ - #CrocodileTears ಟ್ರೆಂಡ್‌!

‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

- Advertisement -
- Advertisement -

ಪ್ರಧಾನಿ ಮೋದಿ ಶುಕ್ರವಾರದಂದು ತಾವು ಲೋಕಸಭೆಯಲ್ಲಿ ಪ್ರತಿನಿಧಿಸುವ ವಾರಣಾಸಿಯ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರೊಂದಿಗೆ ವಿಡಿಯೊ ಕಾನ್ಪರೆನ್ಸ್‌ ಮೂಲಕ ಮಾತನಾಡಿದ್ದಾರೆ. ಈ ವೇಳೆ ಸಾಂಕ್ರಮಿಕದಿಂದ ಮೃತಪಟ್ಟವರನ್ನು ನೆನೆದು ಭಾವುಕರಾಗಿದ್ದು, ನೆಟ್ಟಿಗರು ಇದನ್ನು ಮೊಸಲೆ ಕಣ್ಣೀರು ಎಂದು ಬಣ್ಣಿಸಿದ್ದು ಟ್ವಿಟರ್‌ನಲ್ಲಿ #CrocodileTears ಹ್ಯಾಶ್‌‌ಟ್ಯಾಗ್‌ ಟ್ರೆಂಡ್ ಆಗಿದೆ.

ಇಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಮೋದಿ, ‘ಕೊರೊನಾ ನಮ್ಮಿಂದ ಹಲವು ಪ್ರೀತಿಪಾತ್ರರನ್ನು ಕಸಿದುಕೊಂಡಿದೆ. ಕೊರೊನಾದಿಂದ ನಿಧನರಾದವರಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬದವರಿಗೆ ನನ್ನ ಸಂತಾಪಗಳನ್ನೂ ಸೂಚಿಸುತ್ತೇನೆ’ ಎಂದು ಹೇಳಿದ್ದಾರೆ. ಈ ಮಾತಿನ ವೇಳೆ ಭಾವುಕರಾದ ಮೋದಿ, ಅಳುತಡೆಯಲು ಪ್ರಯತ್ನಿಸಿದಂತೆ ಕಂಡು ಬಂದರು.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಆದರೆ ನೆಟ್ಟಿಗರು ಪ್ರಧಾನಿಯನ್ನು ಟೀಕಿಸಿದ್ದು, ಇದನ್ನು ಮೊಸಲೆ ಕಣ್ಣೀರು ಎಂದಿದ್ದಾರೆ. ದೇಶದಲ್ಲಿ ಕೊರೊನಾ ಹೆಚ್ಚಿರುವಾಗ ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರಕ್ಕೆ ತೆರಳಿ, ‘ದೀದಿ ಓ ದೀದಿ’ ಎಂದವರು, ಕೊರೊನಾ ಹೆಚ್ಚಿದ್ದರೂ ಸಮಾವೇಶದಲ್ಲಿ ನೆರೆದ ಲಕ್ಷಾಂತರ ಜನರನ್ನು ನೋಡಿ ಖುಷಿ ಪಟ್ಟವರು ಇದೀಗ ಕೊರೊನಾ ಪ್ರಕರಣ ಇಳಿಮುಖವಾಗುತ್ತಿದ್ದಂತೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಚುನಾವಣಾ ಸಮೀಕ್ಷಾ ಸಂಸ್ಥೆ ಸಿವೊಟರ್ ಮೋದಿಯ ಜನಪ್ರಿಯತೆ ಒಂದು ವರ್ಷದಿಂದ ಸುಮಾರು 65% ರಿಂದ 37% ಕ್ಕೆ ಇಳಿದಿದೆ ಎಂದು ಕಂಡುಹಿಡಿದಿದೆ. ಈ ಮೊಸಳೆ ಕಣ್ಣೀರಿನಿಂದ ಅದನ್ನು ಹೆಚ್ಚಿಸಲು ಮೋದಿ ಬಯಸುತ್ತಿದ್ದಾರೆ ಎಂದು ಟ್ವಿಟರ್‌ ಬಳಕೆದಾದರಾದ @sk_traza98 ಅವರು ಹೇಳಿದ್ದಾರೆ.

ರಾಷ್ಟ್ರೀಯ ಟಿವಿಯಲ್ಲಿ ಭಾವುಕರಾವುದು 20 ದಿನಗಳ ಹಿಂದೆಯೆ ತಪ್ಪಿ ಹೋಗಿದೆಯೆ? ಎಂದು ನೀರಜ್ ಭಾಟಿಯ ಅವರು ಟ್ವೀಟ್ ಮಾಡಿದ್ದು, ದಿ ಟೆಲೆಗ್ರಾಫ್ ಪತ್ರಿಕೆಯ ಪೇಪರ್‌ ಕಟ್ಟಿಂಗ್‌ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಮೋದಿ ತನಗೆ ನೋವಾಗಿದೆ ಎಂದು ಹೇಳಿಕೊಂಡಿರುವ ಹೇಳಿಕೆಗೆ, ಟೆಲಿಗ್ರಾಫ್‌ ಪತ್ರಿಕೆಯು, ಇದನ್ನು ನೋವು ಎನ್ನುವುದಾದರೆ, ಸೋಂಕಿನಿಂದಾಗಿ ತಮ್ಮವರ ಕಳೆದುಕೊಂಡು ಅಳುತ್ತಿರುವ ಚಿತ್ರವನ್ನು ಹಾಕಿ ಈ ನೋವಿಗೆ ಏನನ್ನನ್ನುತ್ತೀರಿ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ

ಕೊಳದಲ್ಲಿ ಚೆಂಡನ್ನು ತೆಗೆದುಕೊಳ್ಳಲು ಹೋದಾಗ ಆ ಮೊಸಳೆಯಿಂದ ಮಗು ನರೇಂದ್ರ ಅಳುವುದನ್ನು ಕಲಿತನು. ಮೊಸಳೆ ಕಣ್ಣೀರು, ನಾಟಕ ಎಂದು ಮೊಹಮ್ಮದ್‌ ಅಝರ್‌ ಅವರು ಟ್ವೀಟ್ ಮಾಡಿದ್ದಾರೆ. ನದಿಯಲ್ಲಿ ಶವ ತೇಲುತ್ತಿರುವಾಗ ಮೊಸಳೆಯೊಂದು ಅಳುತ್ತಿರುವುದನ್ನು ಫೋಟೋಗ್ರಾಫರುಗಳು ಕ್ಲಿಕ್ ಮಾಡುತ್ತಿರುವಂತೆ ಇರುವ ವ್ಯಂಗ್ಯ ಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ.

‘ಮುಗ್ಧ ಜನರ ರಕ್ತವನ್ನು ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ ಎಂದು ಜಾವೀದ್‌ ಟ್ವೀಟ್ ಮಾಡಿದ್ದಾರೆ.

ಜನರು ಸಾಯುತ್ತಿರುವಾಗ “ದೀದಿ ಒ ದೀದಿ” ಎಂದು ಜಪಿಸುವುದರಲ್ಲಿ ನಿರತರಾಗಿದ್ದ ಅದೇ ವ್ಯಕ್ತಿ ಈಗ ನಮ್ಮ ಸಹಾನುಭೂತಿಯನ್ನು ಪಡೆಯುತ್ತಿದ್ದಾನೆ? ಪಶ್ಚಾತ್ತಾಪ ಪಡುತ್ತಿರವುದು ತುಂಬಾ ತಡವಾಗಿದೆ ಎಂದು ಆನಂದ್ ಟ್ವೀಟ್ ಮಾಡಿದ್ದಾರೆ.

ಕೆಲವರು, ಮೋದಿಗೆ ನೌಟಂಕಿ ಮತ್ತು ನಾಟಕ ಮಾಡಿದ್ದಕ್ಕೆ ಆಸ್ಕರ್‌ ಕೊಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ 19 ವರ್ಷದವರಾಗಿದ್ದಾಗ ತಂದೆಯ ಮನೆ ಬಿಟ್ಟು ಓಡಿ ಗುಜರಾತಿ ನಾಟಕ ಕಂಪನಿ ಸೇರಿ ತಬಲಾ ವಾದಕ ಮತ್ತು ಜೂನಿಯರ್ ನಟರಾಗಿ 15 ವರ್ಷ ಕೆಲಸ ಮಾಡಿದ್ದಾರೆ. ಆ ನಾಟಕ ಕಂಪನಿಯ ದೀರ್ಘ ನಟನೆಯ ಅನುಭವ ಈಗ ಪ್ರಧಾನಿಯಾದ ಮೇಲೆ ಮೋದಿಗೆ ತುಂಬಾ ಉಪಯೋಗಕ್ಕೆ ಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...