Homeಮುಖಪುಟಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆ ದಿನಗಳು: ಬಿರುಬಿಸಿಲಿನ ನೆಲದಲ್ಲಿ ಪ್ರಭುತ್ವಕ್ಕೆ ಸವಾಲಾಗಿದ್ದ ಬಾಬಾಗೌಡ ಪಾಟೀಲರು

ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

- Advertisement -
- Advertisement -

ಬಾಬಾಗೌಡ ಪಾಟೀಲರು 1998ರ ಸುಮಾರಿಗೆ ಬಿಜೆಪಿ ಸೇರಿದರು, ಸಚಿವರಾದರು ಮತ್ತು ಈ ನಂತರದಲ್ಲಿ ಮತ್ತೆ ರೈತ ಹೋರಾಟಕ್ಕೆ ಬೆಂಬಲವಾಗಿ ಓಡಾಡಿದರು ಎಂಬುದನ್ನು ಬದಿಗಿಟ್ಟು, ಅವರ ಆರಂಭಿಕ ಹೋರಾಟಗಳ ಬಗ್ಗೆ ನೋಡೋಣ.

ಕರ್ನಾಟಕದಲ್ಲಿ ಚಳುವಳಿ ಕಟ್ಟುತ್ತಿರುವ ಎಲ್ಲ ಸಂಘಟನೆಗಳಿಗೂ ಇದರಲ್ಲಿ ಒಂದಿಷ್ಟು ವಿಷಯ ಇವೆ ಅನಿಸುತ್ತದೆ.

‘ಅಲ್ರೀ, ಟೊಮಾಟೋ ಸಾಸ್‌ಗೆ ಅವರೇ ರೇಟ್ ಫಿಕ್ಸ್ ಮಾಡ್ತಾರ. ಅದಕ್ಕ ಜನ ಮಾತಿಲ್ಲದ ರೊಕ್ಕ ಕೊಟ್ ತಗೋತಾರ. ಇನ್ಮ್ಯಾಲ ಟೊಮೆಟೊಕ್ಕೆ ನಾವಾ ರೇಟು ಫಿಕ್ಸ್ ಮಾಡೋ ಹಂಗಾಗಬೇಕು’ ಹೀಗೆ ಉತ್ತರ ಕರ್ನಾಟಕದ ಅದರಲ್ಲೂ ಮುಖ್ಯವಾಗಿ ಮುಂಬೈ ಕರ್ನಾಟಕದಲ್ಲಿ ಬಾಬಾಗೌಡರು ಅಂದು ಕೆಂಡದುಂಡೆಯಂತೆ ಗುಡುಗುತ್ತಿದ್ದರು. ಶಾಲಾ ಬಾಲಕರಾಗಿದ್ದಾಗ ಮತ್ತು ‘ವಕ್ಕಲ್ತನ’ ಹಿನ್ನೆಲೆಯ ನಮಗೆಲ್ಲ ಇದು ರೋಮಾಂಚನ ಸೃಷ್ಟಿಸಿದ್ದಲ್ಲದೇ, ಕ್ರಮೇಣ ಗ್ರಾಮೀಣ ಭಾರತಕ್ಕೆ ಆಗುತ್ತಿದ್ದ ಅನ್ಯಾಯದ ಬಗ್ಗೆ ಯೋಚನೆ ಮಾಡುವಂತೆ ಮಾಡುತ್ತಿತ್ತು.

ನೀವು ಗಮನಿಸಿ ನೋಡಿ, ಈಗೆಲ್ಲಾದರೂ ರಾಕೇಶ್ ಟಿಕಾಯತ್‌ರು ಚುನಾವಣೆಗೆ ನಿಂತರೆ ಗೆಲ್ಲಬಹುದಾ ಎಂಬ ಪ್ರಶ್ನೆಯನ್ನು ಊಹಿಸಿಕೊಳ್ಳಿ. ಉತ್ತರ ಕನ್ನಡದ ಸಂಸತ್ ಚುನಾವಣೆಗೆ ನಿಂತಾಗ ಶಿವರಾಮ ಕಾರಂತರ ಪರ ಎಲ್ಲ ಪ್ರಗತಿಪರ ಸಂಘಟನೆಗಳ ಬೆಂಬಲವಿತ್ತು. ಆದರೆ, ಫಲಿತಾಂಶ ಬಂದಾಗ ಕಾರಂತರು ಮೂರನೇ ಸ್ಥಾನದಲ್ಲಿದ್ದರು.

ಮತ್ತೆ ಸಂಘಟನೆಗಳ ವಿಷಯಕ್ಕೆ ಬರೋಣ, ಈ ಸಲ ಆಮ್ ಆದ್ಮಿ, ಎಸ್‌ಡಿಪಿಐ, ಕರ್ಮಾಟಕ ರಾಷ್ಟ್ರೀಯ ಸಮಿತಿ ಮುಂತಾದ ಸಂಘಟನೆಗಳು ಇತ್ತೀಚಿನ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಭಾರಿ ಅಲ್ಲದಿದ್ದರೂ ಗಮನಾರ್ಹ ಸಾಧನೆ ಮಾಡಿವೆ.

ಆದರೆ, ಆಗಿನ್ನೂ ಬೆಳೆಯುತ್ತಿದ್ದ ಸಂಘಟನೆಯ ಎರಡನೇ ಹಂತದ ನಾಯಕರಾಗಿದ್ದ ಬಾಬಾಗೌಡ ಪಾಟೀಲರು ಒಂದೇ ಸಲಕ್ಕೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲ್ಲುತ್ತಾರೆ.

ಬೆಳಗಾವಿಯ ಬೈಲಹೊಂಗಲದ ಚಿಕ್ಕ ಬಾಗೇವಾಡಿಯ ಪಾಟೀಲರು ಬೆಳಗಾವಿ ಜಿಲ್ಲೆಯ ಕಿತ್ತೂರು ಮತ್ತು ಅದಕ್ಕೆ ಅಂಟಿಕೊಂಡ ಧಾರವಾಡ ಗ್ರಾಮೀಣ ಕ್ಷೇತ್ರ ಎರಡರಲ್ಲೂ ಗೆಲ್ಲುತ್ತಾರೆ! ನಂತರ ಧಾರವಾಡ ಗ್ರಾಮೀಣದಲ್ಲಿ ಪ್ರೊಫೆಸರ್ ನಂಜುಂಡಸ್ವಾಮಿ ಗೆಲ್ಲುಲು ಸಹಕರಿಸುತ್ತಾರೆ.

ತಾತ್ವಿಕ ರೂಪು ಮತ್ತು ತಳಮಟ್ಟದ ಸಂಘಟನೆ

ಪ್ರೊಫೆಸರ್ ನಂಜುಂಡಸ್ವಾಮಿ ರಾಜ್ಯದಲ್ಲಿ ರೈತ ರೈತ ಸಂಘಟನೆ ಕಟ್ಟಿದ ಪಿತಾಮಹ ಎಂಬುದರಲ್ಲಿ ಎರಡು ಮಾತಿಲ್ಲ ಮತ್ತು ಇರಲೇಬಾರದು. ಆದರೆ ಸಂಘಟನೆ ಮಾಡುವ ಹೊಣೆ ಕೆಳಮಟ್ಟದ ಕಾರ್ಯಕರ್ತರ ಮೇಲಿರುತ್ತದೆ. ‘ಬೈಲಹೊಂಗಲದ ಚಿಕ್ಕ ಬಾಗೆವಾಡಿಯ ಭೂ ಮಾಲೀಕ ಕುಟುಂಬದ ಹಿನ್ನೆಲೆಯ ಬಾಬಾಗೌಡ ಬೆಳಗಾವಿ, ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಬಹುಭಾಗಗಳಲ್ಲಿ ಅದ್ಭುತವಾಗಿ ರೈತರನ್ನು ಸಂಘಟಿಸಿದರು’ ಎನ್ನುತ್ತಾರೆ ಪತ್ರಕರ್ತ ರುಷಿಕೇಶ್ ದೇಸಾಯಿ.

‘ತಾಲೂಕು ಕಚೇರಿಗಳಿಗೇ ಜನ ಹೋಗಲು ಹೆದರುತ್ತಿದ್ದ ಕಾಲವದು. ಬಾಬಾಗೌಡರ ಗುಡುಗು ಹೇಗಿತ್ತೆಂದರೆ ಜನ ಸೀದಾ ತಹಸೀಲ್ದಾರ್ ಎದುರು ನಿಂತು ಪ್ರಶ್ನೆ ಕೇಳಲು ಆರಂಭಿಸಿದರು. ಊರೂರಲ್ಲಿ ‘ಗ್ರಾಮದ ಜನರ ಅನುಮತಿ ಇಲ್ಲದೇ ಭ್ರಷ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪ್ರವೇಶವಿಲ್ಲ’ ಎಂಬ ಬೋರ್ಡುಗಳು ಕಾಣಿಸಿಕೊಂಡವು ಎನ್ನುತ್ತಾರೆ ಬೆಳಗಾವಿ- ಧಾರವಾಡಗಳಲ್ಲಿ ಹಿಂದೆಲ್ಲ ಅನೇಕ ಚಳುವಳಿಗಳನ್ನು ನಡೆಸಿದ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ. ವೆಂಕನಗೌಡ ಪಾಟೀಲರು.

“ಒಂದು ನೋಟು, ಒಂದು ರೊಟ್ಟಿ, ಒಂದು ವೋಟು” ಎಂದು ಚುನಾವಣೆ ಮಾಡಿ ಅವರು ಎರಡು ಕ್ಷೇತ್ರದಲ್ಲಿ ಗೆದ್ದಿದ್ದರು ಎಂಬುದು ಈಗಿನ ಚಳವಳಿಗಳಿಗೆ ಸ್ಫೂರ್ತಿ ಆಗುತ್ತದೆ ಎನ್ನುತ್ತಾರೆ ಚಳುವಳಿ ಹಿನ್ನೆಲೆಯ ಡಾ. ಪಾಟೀಲ್…

ರೈತ ಸಂಘಟನೆಯಲ್ಲಿ ಉಂಟಾದ ಭಿನ್ನಮತಗಳು, ಮುಂದೆ ಬಾಬಾಗೌಡರು ಬಿಜೆಪಿ ಸೇರಿದ ಸ್ಥಿತಿ ಈ ಬಗ್ಗೆ ಬೇಕೆಂತಲೇ ಇಲ್ಲಿ ಚರ್ಚೆ ಮಾಡಿಲ್ಲ. ಅದು ಈಗಿನ ಅಗತ್ಯವೂ ಅಲ್ಲ. ಬಾಬಾಗೌಡ ಪಾಲೀಲರಿಗೆ ಶ್ರಧ್ದಾಂಜಲಿ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಮಾಜಿ ಕೇಂದ್ರ ಸಚಿವ, ರೈತ ಹೋರಾಟಗಾರ ಬಾಬಾಗೌಡ ಪಾಟೀಲ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...