Homeಕರೋನಾ ತಲ್ಲಣಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು ಎನ್ನುತ್ತಾರೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು.

- Advertisement -
- Advertisement -

ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis ) ಕುರಿತ ಹಲವು ಪ್ರಶ್ನೆಗಳಿಗೆ ಬೆಂಗಳೂರಿನ ಅತ್ಯುತ್ತಮ‌ ಕಣ್ಣು ತಜ್ಞರಲ್ಲೊಬ್ಬರಾದ ಡಾ. ಕೃಷ್ಣ ಆರ್‌ ಮೂರ್ತಿರವರು ಸರಳವಾಗಿ ವಿವರಿಸಿದ್ದಾರೆ..

ಮ್ಯೂಕರ್‌ಮೈಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಯಾರಿಗೆ ಮತ್ತು ಹೇಗೆ ಹರಡುತ್ತೆ?

ಬ್ಲ್ಯಾಕ್ ಫಂಗಸ್ ಇದು ಮೂಗಿನಿಂದ ಶುರುವಾಗಿ ಕಣ್ಣು ಮತ್ತು ಮೆದುಳಿಗೆ ಹರಡುತ್ತೆ. ಸಕ್ಕರೆ ಕಾಯಿಲೆಗಳಿದ್ದವರಲ್ಲಿ ಸಕ್ಕರೆಯ ಅಂಶ ಅಧಿಕವಾದಾಗ, ನಿಯಂತ್ರಣ ತಪ್ಪಿದಾಗ ಇದು ಕಾಣಿಸಿಕೊಳ್ಳಬಹುದು. ಜೊತೆಗೆ ಸಕ್ಕರೆ ಕಾಯಿಲೆಯ ಜೊತೆಗೆ ಕಿಡ್ನಿ ವೈಫಲ್ಯವಿದ್ದವರಿಗೆ ಇದು ಕಾಣಿಸಿಕೊಳ್ಳುವ ಸಂಭವವಿದೆ. ಇದು ಹೊಸ ಕಾಯಿಲೆಯೇನಲ್ಲ, ಮುಂಚಿನಿಂದಲೂ ನೋಡುತ್ತಾ ಬಂದಿದ್ದೇವೆ.

ಕೋವಿಡ್‌ಗೂ ಬ್ಲ್ಯಾಕ್ ಫಂಗಸ್‌ಗೂ ಸಂಬಂಧವಿದೆಯೇ?

ಕೋವಿಡ್‌ ಸಂದರ್ಭದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಏಕೆಂದರೆ ಕೋವಿಡ್‌ ಬಂದವರಲ್ಲಿ ಸಕ್ಕರೆ ಕಾಯಿಲೆ ಇದ್ದವರಿಗೆ ಸಕ್ಕರೆಯ ಪ್ರಮಾಣ ನಿಯಂತ್ರಿಸಲಾಗದ ಮಟ್ಟಿಗೆ ಹೆಚ್ಚಾಗುವ ಸಾಧ್ಯತೆಯಿದೆ. ಕೋವಿಡ್‌ಗೆ ನೀಡುವ ಔಷಧಗಳಿಂದಲೂ ರಕ್ತದ ಸಕ್ಕರೆಯ ಅಂಶ ಏರು-ಪೇರಾಗಬಹುದು. ಹಾಗಾಗಿ ಸಕ್ಕರೆ ಕಾಯಿಲೆ ಇರುವವರು ಸಕ್ಕರೆಯ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದು ಬಹಳ ಮುಖ್ಯ. ಕೋವಿಡ್‌ ಬಂದವರಿಗೆ ಆಮ್ಲಜನಕ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಅದಕ್ಕೆ ಬಳಸುವ ಆಮ್ಲಜನಕ ನಾಳಗಳು ಸ್ವಚ್ಛವಾಗಿಲ್ಲದಿದ್ದಲ್ಲಿ ಆಗಲೂ ಸಹ ಮೂಗಿನ ಮೂಲಕ ಈ ಬ್ಲಾಕ್ ಫಂಗಸ್ ಹರಡಿಕೊಳ್ಳಬಹುದು. ಹಾಗಾಗಿ ಮನೆಯಲ್ಲಿಯೇ ಆಕ್ಸಿಜನ್ ಕೊಡುವ ಸಂದರ್ಭ ಬಂದಲ್ಲಿ ಈ ಆಕ್ಸಿಜನ್ ನೇಷಲ್ ಟ್ಯೂಬ್ ಸ್ವಚ್ಛತೆಗೆ ಗಮನ ಕೊಡಬೇಕು. ಮೂರನೇಯದಾಗಿ ಕೋವಿಡ್ ಕಾಯಿಲೆ ಕಾಣಿಸಿಕೊಂಡ ಸಂದರ್ಭದಲ್ಲಿ ನಮ್ಮ ಇಮ್ಯುನಿಟಿ (ರೋಗ ನಿರೋಧಕತೆ) ಸ್ವಲ್ಪ ತಗ್ಗಿರುತ್ತೆ. ಈ ಸಂದರ್ಭದಲ್ಲಿ ಬ್ಲಾಕ್ ಫಂಗಸ್ ಅಂಟಿಕೊಳ್ಳಬಹುದು. ಆದರೆ ಈ ರೋಗ ಒಬ್ಬರಿಂದ ಒಬ್ಬರಿಗೆ ಗಾಳಿಯಲ್ಲಿ ಹರಡುವುದಿಲ್ಲ.

ಬ್ಲ್ಯಾಕ್ ಫಂಗಸ್‌ನ ಲಕ್ಷಣಗಳೇನು?

ಮೂಗು ಕಟ್ಟಿಕೊಳ್ಳುವುದು, ಮೂಗಿನಿಂದ ರಕ್ತ ಅಥವಾ ಕಪ್ಪು ಬಣ್ಣದ ಗೊಣ್ಣೆ ಬರುವುದು, ಮುಖದ ಊತ, ಕಣ್ಣು ಮತ್ತು ಮೂಗಿನ ಸುತ್ತ ನೋವು ಬರುವುದು, ಮೂಗು ಅಥವಾ ಬಾಯಿಯೊಳಗೆ ಕಪ್ಪು ಬಣ್ಣದ ಗಾಯ ಕಾಣಿಸಿಕೊಳ್ಳುವುದು. ಕಣ್ಣಿನ ದೃಷ್ಟಿ ಕಡಿಮೆಯಾಗುವುದು, ಡಬಲ್ ವಿಷನ್ (ಎರಡೆರಡು ಕಾಣುವುದು), ಕಣ್ಣು ಉಬ್ಬಿ ಮುಂದೆ ಬರುವುದು ಮತ್ತು ತಲೆ ನೋವು.

ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆಯೇನು?

ಈ ರೋಗವನ್ನು ಎಷ್ಟು ಬೇಗ ಕಂಡು ಹಿಡಿಯಲಾಗುತ್ತದೆಯೇ ಅಷ್ಟು ಬೇಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು. ಈ ಮೇಲಿನ ಗುಣಲಕ್ಷಣಗಳು ಕಂಡಬಂದಲ್ಲಿ ತಕ್ಷಣ ಇಎನ್‌ಟಿ (ಕಣ್ಣು, ಮೂಗು, ಗಂಟಲು ತಜ್ಞರು) ವೈದ್ಯರನ್ನು ಕಾಣಬೇಕು.

ನಾವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆಗಳೇನು?

ಡಯಾಬಿಟೀಸ್ ಇದ್ದವರು ಅದನ್ನು ನಿಯಂತ್ರಣದಲ್ಲಿಡಬೇಕು. ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು‌- ಅಂದರೆ ಆರೋಗ್ಯಕರ ಜೀವನಶೈಲಿ, ನಿಯಮಿತ ವ್ಯಾಯಾಮ.
(ಅನಗತ್ಯವಾಗಿ, ಅನಗತ್ಯ ಸಂದರ್ಭದಲ್ಲಿ, ಅನಗತ್ಯ ಪ್ರಮಾಣದಲ್ಲಿ ಸ್ಟಿರಾಯ್ಡ್‌ಗಳನ್ನು ವೈದ್ಯರು ಕೊಡಬಾರದು).

ಮಣ್ಣಿನಿಂದ‌ ಈ ಬ್ಲ್ಯಾಕ್ ಫಂಗಸ್ ಇನ್ಫೆಕ್ಷನ್ ಆಗತ್ತೆ ಅಂತಾರೆ. ಇದು ನಿಜವೆ?

ಈ ಮ್ಯುಕೋರ್‌ನ ಬೀಜಗಳು (spores) ಎಲ್ಲೆಡೆ ಇರುತ್ತವೆ. ಮಣ್ಣಿನಲ್ಲೂ ಸಹಾ.. ಹಾಗಾಗಿ ಎಚ್ಚರಿಕೆಯಿಂದಿರಬೇಕು.

ಕೋವಿಡ್ ನಂತರ ಎಷ್ಟು ಸಮಯ ಈ ಬ್ಲಾಕ್‌ ಫಂಗಸ್ ಬರದಂತೆ ಎಚ್ಚರ ವಹಿಸಬೇಕು?

ಇಂತಿಷ್ಟು ಕಾಲ ಎಂದು ಈಗಲೇ ಹೇಳಲಾಗದು. ಒಂದು ಸದೃಢ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬೇಕೆಂದು ಕೆಲಸ ಮಾಡಬೇಕು.

ಈ ಕುರಿತು ನಿಮಗೆ ಸಂದೇಹಗಳಿದ್ದಲ್ಲಿ, ಸಲಹೆ ಮತ್ತು ಚಿಕಿತ್ಸೆಯ ಕುರಿತು ಹೆಚ್ಚಿನ ಮಾಹಿತಿ ಬೇಕಾಗಿದ್ದಲ್ಲಿ ಕೆಸಿವಿಟಿ ಹೆಲ್ಫ್‌ಲೈನ್‌ ಅನ್ನು (08047166115) ಸಂಪರ್ಕಿಸಬಹುದು.

ಈ ಕುರಿತು ವೈದ್ಯರು ಮಾತನಾಡಿರುವ ವಿಡಿಯೋ ನೋಡಿ:


ಇದನ್ನೂ ಓದಿ; ಬ್ಲಾಕ್ ಫಂಗಸ್: ಔಷಧಕ್ಕಾಗಿ ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರದ ಮೀನಾಮೇಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...