Homeಕರೋನಾ ತಲ್ಲಣಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

ಒಂದೇ ಕುಟುಂಬದ 16 ಜನರಿಗೆ ಕೊರೊನಾ: ಮನೆಯಲ್ಲಿದ್ದುಕೊಂಡೇ ಎಲ್ಲರೂ ಗುಣಮುಖ

ಈ ಕುಟುಂಬದಲ್ಲಿ ಹತ್ತು ತಿಂಗಳ ಶಿಶು, ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಮತ್ತು 45 ವರ್ಷ ಮೇಲ್ಪಟ್ಟವರು ಸಹ ಗುಣಮುಖರಾಗಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ವೇಳೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಒಂದೇ ಕುಟುಂಬದ 16 ಜನಕ್ಕೆ ಕೊರೊನಾ ಪಾಸಿಟಿವ್ ಆಗಿದ್ದು, ಹೋಮ್ ಐಸೋಲೇಷನ್‌ಗೆ ಒಳಪಟ್ಟು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರು ಸೂಚಿಸಿದ ಔಷಧಿ ಸೇವಿಸಿ, ಅವರು ಹೇಳಿದ ಗೈಡ್‌ಲೈನ್ಸ್ ಪಾಲಿಸಿ ಕೊರೊನಾದಿಂದ ವಿಮುಕ್ತರಾಗಿದ್ದಾರೆ. ಒಂದನೇ ಅಲೆಯಲ್ಲಿ ಹೀಗೇ ಹಲವು ಕುಟುಂಬಗಳು ಮನೆಯಲ್ಲೇ ಇದ್ದು ಕೊರೊನಾ ಹಿಮ್ಮೆಟ್ಟಿಸಿದ್ದವು.

ಇಲ್ಲಿ ಒಟ್ಟು ಸಾರಾಂಶವೆಂದರೆ, ಈ ಕುಟುಂಬದ ಪಾಸಿಟಿವ್ ಪೀಡಿತ ಸದಸ್ಯರಾರು ಕೋವಿಡ್ ಕೇಂದ್ರಗಳಲ್ಲಿ ದಾಖಲಾಗಲಿಲ್ಲ. ವೈದ್ಯರು ಮತ್ತು ಆಶಾ ಕಾರ್ಯಕರ್ತರ ಸಕಹೆಗಳನ್ನು ಕಟ್ಟಾ ಪಾಲಿಸಿದರು. ಅವರು ಸೂಚಿಸಿದ ಮಾತ್ರೆ ಪಡೆದುಕೊಂಡರು.

ಆದರೆ ಇಲ್ಲಿ ಹತ್ತು ತಿಂಗಳ ಮಗು, 3 ವರ್ಷಕ್ಕಿಂತ ಕಡಿಮೆಯ ಮೂವರು ಮಕ್ಕಳು ಮತ್ತು 45 ದಾಟಿದ ಆದರೆ ಎರಡೂ ಲಸಿಕೆ ಪಡೆದ ಹಿರಿಯರೊಬ್ಬರಿಗೂ ಪಾಸಿಟಿವ್ ಆಗಿತ್ತು. ಈಗ ಎಲ್ಲರೂ ಆರೋಗ್ಯವಾಗಿದ್ದಾರೆ. ಆದರೆ ನಮ್ಮ ವೈದ್ಯರಿಗೆ ಇದು ಒಂದು ಕೇಸ್ ಸ್ಟಡಿಗೆ ಅವಕಾಶ ಒದಗಿಸಿದೆ.
ಏಕೆಂದರೆ, ಕೋವಿಡ್ ಕುರಿತಂತೆ ಇನ್ನೂ ನೂರಾರು ಗೊಂದಲ ಇರುವಾಗ ಈ ಪ್ರಕರಣ ಇಟ್ಟುಕೊಂಡು ಹುಬ್ಬಳ್ಳಿಯ ಕೆಎಂಸಿ (ಕಿಮ್ಸ್) ಕೂಡ ಒಂದು ಕೇಸ್ ಸ್ಟಡಿ ಮಾಡಬಹುದು ಅಲ್ಲವೇ?

ಒಂದಿಷ್ಟು ಪೂರ್ವ ವಿವರ

ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಶಿವಳ್ಳಿ ಮಠ ಕುಟುಂಬದ 16 ಸದಸ್ಯರಿಗೆ ಈ ತಿಂಗಳು ಮೊದಲ ವಾರದ ಹೊತ್ತಿಗೆ ಪಾಸಿಟಿವ್ ದೃಢಪಟ್ಟಿತ್ತು. ಕಿಮ್ಸ್‌ನ ಒಬ್ಬ ವೈದ್ಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಲಹೆ ಮೇರೆಗೆ ಇವರೆಲ್ಲ ಹೋಮ್ ಐಸೋಲೇಷನ್‌ನಲ್ಲಿ ಇದ್ದುಕೊಂಡು ಚೇತರಿಸಿಕೊಂಡಿದ್ದಾರೆ.

ಸುಳ್ಳದ ಈ ಕುಟುಂಬದ ಸದಸ್ಯರಲ್ಲಿ ಒಬ್ಬರಾದ, ಪಾಸಿಟಿವ್‌ಗೆ ಒಳಗಾಗಿ ಈಗ ಗುಣಮುಖರಾದ, ಕಾಲೇಜೊಂದರ ಜರ್ನಲಿಸಂ ವಿಭಾಗದ ಅಧ್ಯಾಪಕರೂ ಆಗಿರುವ ಮಲ್ಲಿಕಾರ್ಜುನ್ ಅವರೊಂದಿಗೆ ನಾನುಗೌರಿ.ಕಾಂ ಮಾತನಾಡಿತು.

‘ವಿಜ್ಞಾನ, ವೈದ್ಯಕೀಯಗಳ ಆಚೆ ನಾವೆಂದೂ ನೋಡಲಿಲ್ಲ. ಎಲ್ಲರಿಗೂ ಮನೆಯಲ್ಲಿ ಧೈರ್ಯ ತುಂಬಿದೆವು. ಯಾವುದೇ ಮೂಢ ವಿಚಾರಗಳನ್ನು ಫಾಲೋ ಮಾಡಲಿಲ್ಲ. ಕಿಮ್ಸ್‌ನ ಹಿರಿಯ ವೈದ್ಯರು, ಇಲ್ಲೇ ಪಕ್ಕದ ಊರಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಮನೆಗೇ ಬಂದು ಉಪಚಾರ ಮಾಡುವ ಆಶಾ ಕಾರ್ಯಕರ್ತೆಯರ ಸಲಹೆ ಪಾಲಿಸಿದೆವು. ಇಲ್ಲಿ ಆತ್ಮಸ್ಥೈರ್ಯವೇ ಮುಖ್ಯ ಅಷ್ಟೇ. ಒಂದು ಜ್ವರವನ್ನು ವಿಭಿನ್ನವಾಗಿ ಎದುರಿಸಲು ನಮಗೆ ಈಗ ವಿಜ್ಞಾನ ಮತ್ತು ವೈದ್ಯಕೀಯವಷ್ಟೇ ಮಾರ್ಗದರ್ಶಕ ಆಗಬೇಕು’ ಎಂದು ಗುಣಮುಖರಾದ ಮಲ್ಲಿಕಾರ್ಜುನ ನಮಗೆ ತಿಳಿಸಿದರು.

ಈ ಕುಟುಂಬದಲ್ಲಿ ಹತ್ತು ತಿಂಗಳ ಶಿಶು, ಮೂರು ವರ್ಷದ ಒಳಗಿನ ನಾಲ್ಕು ಮಕ್ಕಳು ಸಹ ಗುಣಮುಖರಾಗಿದ್ದಾರೆ. ಇದರಲ್ಲಿ 45 ವರ್ಷ ಮೇಲ್ಪಟ್ಟ 4 ಜನರು ಈ ಮೊದಲೇ ಎರಡನೆ ಡೋಸ್ ಲಸಿಕೆ ಪಡೆದಿದ್ದರು, ಅದರಲ್ಲಿ ಮೂವರಿಗೆ ನೆಗೆಟಿವ್ ರಿಪೋರ್ಟ್ ಬಂದಿತ್ತು. ಆದರೆ, ಎರಡು ಡೋಸ್‌ಗಳ ನಂತರವೂ ಪಾಸಿಟಿವ್ ರಿಪೋರ್ಟ್ ಪಡೆದಿದ್ದ 60 ವರ್ಷದ ಮಹಿಳೆಯಲ್ಲಿ ಯಾವ ಲಕ್ಷಣವೂ ಇರಲಿಲ್ಲ. ಅವರೂ ಈಗ ಗುಣಮುಖರಾಗಿದ್ದಾರೆ.

ಪ್ರಶ್ನೆ ಏನು ಅಂದರೆ ಮಕ್ಕಳಿಗೂ ಕೋವಿಡ್ ಕಾಟ ಶುರುವಾಗಿದೆಯಾ? ಇದು ಮೂರನೇ ಅಲೆಯ ಆರಂಭವೇ? ಎರಡು ಲಸಿಕೆ ಪಡೆದವರು ಇದನ್ನು ಎದುರಿಸಬಲ್ಲರು ಎಂದಾದರೆ, ಯಾಕೆ ತುರ್ತಾಗಿ ಮನೆಮನೆಗೆ ತೆರಳಿ ಲಸಿಕೆ ನೀಡುತ್ತಿಲ್ಲ? ನಮ್ಮ ಪಾಲಿಸಿಯೇ ತಪ್ಪಾಗಿದೆಯೇ?
ಈ ಕುರಿತು ಮಾತನಾಡಿದ ಧಾರವಾಡದ ಸರ್ಕಾರಿ ವೈದ್ಯ ಡಾ. ಸಂತೋಷ್, ‘ರೋಗ ನಿರೋಧಕ ಶಕ್ತಿ ಚೆನ್ನಾಗಿ ಇರುವವರಿಗೆ ಕೊರೊನಾ ತಟ್ಟುವುದು ಅಪರೂಪ. ದಿನವೂ ಹಲವು ರೋಗಿಗಳನ್ನು ನಾನು ಪರೀಕ್ಷೆ ಮಾಡುತ್ತೇನೆ. ಬಹುತೇಕರು ಶ್ರೀಮಂತ ಅಥವಾ ಮಧ್ಯಮ ವರ್ಗದವರೇ. ಇವರು ತುಂಬ ನಾಜೂಕಾದ ಜೀವನಶೈಲಿ ಅಳವಡಿಸಿಕೊಂಡ ಜನರು. ಇವರ ಜೀವನಶೈಲಿಯೇ ಅವರ ಪ್ರತಿರೋಧಕ ಶಕ್ತಿಯನ್ನು ಕಡಿಮೆ ಮಾಡಿದೆ. ಹುಬ್ಬಳ್ಳಿ-ಧಾರವಾಡದಲ್ಲಿ ಎಲ್ಲೋ ಮಲಗಿ ಜೀವನ ಸಾಗಿಸುವ ಭಿಕ್ಷುಕರು ನಮ್ಮ ಆಸ್ಪತ್ರೆಗಳತ್ತ ಬಂದೇ ಇಲ್ಲ. ಅವರು ಕೊರೊನಾಗೆ ಎಕ್ಸ್‌ಪೋಸ್‌ ಆಗಿದ್ದಾರೆ, ಅವರಿಗೆ ಈಗ ಕೊರೊನಾ ತಟ್ಟುವ ಸಂಭವವೂ ಕಡಿಮೆ’ ಎಂದರು.

‘ಈ ವಿಷಯದಲ್ಲಿ ಯಾವುದು ಅಂತಿಮವಲ್ಲವಾದರೂ, ಗಾಬರಿ ಬಿದ್ದು ಆಸ್ಪತ್ರೆ ಸೇರದೇ ಇರುವುದು, ವೈದ್ಯರ ಸಲಹೆ ಪಡೆದು ಮನೆಯಲ್ಲೇ ಐಸೋಲೇಷನ್ ಆಗುವುದು ಮುಖ್ಯ. ಎರಡನೇ ಅಲೆಯಲ್ಲಿ ಆಕ್ಸಿಜನ್ ಮಟ್ಟದ ಸಮಸ್ಯೆ ಬಂದಾಗ ಆಸ್ಪತ್ರೆಯ ಅಗತ್ಯ ಇದೆ. ಆದರೆ, ಯಾವುದಕ್ಕೂ ವೈದ್ಯರ ಸಲಹೆ ಪಡೆದೇ ಎಲ್ಲವನ್ನೂ ನಿಭಾಯಿಸಬೇಕು. ಸುಳ್ಳ ಗ್ರಾಮದ ಕುಟುಂಬ ಅದನ್ನು ಅನುಸರಿಸಿದ ಕಾರಣಕ್ಕೇ ಮನೆಯಲ್ಲೇ ಗುಣಮುಖ ಆಗಿರಬಹುದು’ ಎಂದು ಗದಗಿನ ವೈದ್ಯ ಡಾ. ಎಂ.ಡಿ ಸಾಮುದ್ರಿ ಹೇಳಿದರು.

‘ಕಳೆದ ತಿಂಗಳು 29ರಂದು ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಾಗ ಕೊರೊನಾ ಟೆಸ್ಟ್ ಮಾಡಿಸಿಕೊಂಡು ಮನೆಯಲ್ಲಿಯೇ ಹೋಮ್ ಐಸೋಲೇಷನ್ ಆಗಿದ್ದೆವು ಹಾಗೂ ಪಾಸಿಟಿವ್ ರಿಪೋರ್ಟ್ ಬಂದಾಗ ಯಾವುದೇ ರೀತಿಯಲ್ಲೂ ಭಯಪಡದೆ ಆತ್ಮಸ್ಥೈರ್ಯದಿಂದ ಇದ್ದೆವು ಹಾಗೂ ಮನೆಯಲ್ಲಿನ ಸದಸ್ಯರಿಗೂ ಧೈರ್ಯ ತುಂಬಿ ವೈದ್ಯರ ಸಲಹೆ ಸೂಚನೆಗಳನ್ನು ತಪ್ಪದೆ ಪಾಲಿಸಿದೆವು’ ಎಂದು ಮನೆಯ ಹಿರಿಯ ಮಲ್ಲಯ್ಯ ಶಿವಳ್ಳಿಮಠ ಹೇಳಿದರು.

ಎಂಬಿಬಿಎಸ್ ವಿದ್ಯಾರ್ಥಿಗಳು ಈ ಬಗ್ಗೆ ಒಂದು ಕೇಸ್ ಸ್ಟಡಿ ಮಾಡಬಹುದು ಅನಿಸುತ್ತೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...