Homeಕರೋನಾ ತಲ್ಲಣ‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

‘ಇಂಡಿಯನ್ ವೇರಿಯೆಂಟ್’ ಪದವಿರುವ ಪೋಸ್ಟ್‌ಗಳನ್ನು ಕಿತ್ತು ಹಾಕಿ: ಸಾಮಾಜಿಕ ಮಾಧ್ಯಮಗಳಿಗೆ ಕೇಂದ್ರ ನೋಟಿಸ್

ಜನರು ಸಾಂಕ್ರಮಿಕದಿಂದ ಸಾಯುತ್ತಿರಬೇಕಾದರೆ ಕೇಂದ್ರ ಸರ್ಕಾರವು ತನ್ನ ‘ಇಮೇಜ್‌’ ಸರಿಪಡಿಸುವ ಕೆಲಸದಲ್ಲಿ ನಿರತವಾಗಿದೆ.

- Advertisement -
- Advertisement -

ಕೊರೊನಾ ವೈರಸ್‌‌ನ “ಭಾರತೀಯ ರೂಪಾಂತರ”( ಇಂಡಿಯನ್ ವೇರಿಯಂಟ್) ವನ್ನು ಸೂಚಿಸುವ ಅಥವಾ ಬಳಸಿರುವ ಯಾವುದೇ ವಿಷಯವನ್ನು ತೆಗೆದುಹಾಕುವಂತೆ ಕೇಂದ್ರದ ಮಾಹಿತಿ ತಂತ್ರಜ್ಞಾನ (ಐಟಿ) ಸಚಿವಾಲಯವು ಎಲ್ಲಾ ಸಾಮಾಜಿಕ ಮಾಧ್ಯಮ ಕಂಪನಿಗಳಿಗೆ ಪತ್ರ ಬರೆದಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಕಳೆದ ವರ್ಷ ಭಾರತದಲ್ಲಿ ಮೊದಲು ಗುರುತಿಸಲ್ಪಟ್ಟ ರೂಪಾಂತರ ಕೊರೊನಾ ವೈರಸ್ ಅನ್ನು ಮೇ 11 ರಂದು ವಿಶ್ವ ಆರೋಗ್ಯ ಸಂಸ್ಥೆಯು ‘ಬಿ .1.617’ ಎಂದು ವರ್ಗೀಕರಿಸಿತ್ತು. ಇದರ ಮರುದಿನ “ಇಂಡಿಯನ್ ವೇರಿಯಂಟ್” ಎಂಬ ಪದವನ್ನು ಮಾಧ್ಯಮಗಳು ಯಾವುದೇ ಆಧಾರವಿಲ್ಲದೆ ಬಳಸುತ್ತಿದೆ ಎಂದು ಕೇಂದ್ರ ಸರ್ಕಾರವು ಆರೋಪಿಸಿತ್ತು.

ಈ ಬಗ್ಗೆ ಶುಕ್ರವಾರ ಕೇಂದ್ರ ಸರ್ಕಾರವು ಸಾಮಾಜಿಕ ಜಾಲತಾಣ ಕಂಪೆನಿಗಳಿಗೆ ಪತ್ರ ಬರೆದಿದ್ದು, “ಕೊರೊನಾ ವೈರಸ್‌ ‘ಇಂಡಿಯನ್ ವೇರಿಯಂಟ್’ ಎಂದು ಹೆಸರಿಸುವ ಅಥವಾ ಸೂಚಿಸುವ ಎಲ್ಲಾ ವಿಷಯವನ್ನು ತೆಗೆದುಹಾಕಿ” ಎಂದು ತಿಳಿಸಿದೆ.

ಇದನ್ನೂ ಓದಿ: ಸುಳ್ಳನ್ನು ಎತ್ತಿ ತೋರಿಸಿದ್ದಕ್ಕೆ ಟ್ವಿಟರ್‌ ಅನ್ನು ಬೆದರಿಸುತ್ತಿರುವ ಕೇಂದ್ರ ಸರ್ಕಾರ!

“ಇಂಡಿಯನ್ ವೇರಿಯೆಂಟ್‌ ಎಂಬ ಹೆಸರು ಸಂಪೂರ್ಣವಾಗಿ ತಪ್ಪಾಗಿದೆ. ಈ ಮಾದರಿಯ ಯಾವುದೆ ಕೊರೊನಾ ವೈರಸ್‌ ‘ರೂಪಾಂತರ’ವನ್ನು ವಿಶ್ವ ಆರೋಗ್ಯ ಸಂಸ್ಥೆ ಉಲ್ಲೇಖಿಸಿಲ್ಲ. ಆರೋಗ್ಯ ಸಂಸ್ಥೆಯ ಯಾವುದೆ ವರದಿಗಳೂ ಕೊರೊನಾ ವೈರಸ್‌ನ ಬಿ .1.617 ರೂಪಾಂತರವನ್ನು ಇಂಡಿಯನ್ ವೇರಿಯೆಂಟ್‌ ಎಂದು ಹೇಳಿಲ್ಲ” ಎಂದು ಪತ್ರವು ಹೇಳಿದೆ.

‘ಇಂಡಿಯನ್ ವೇರಿಯೆಂಟ್‌’ ಉಲ್ಲೇಖವು ದೇಶದ ಚಿತ್ರಣವನ್ನು ಹಾಳುಗೆಡವುತ್ತದೆ ಮತ್ತು ತಪ್ಪು ಸಂದೇಶವನ್ನು ಹರಡುತ್ತದೆ ಎಂಬ ಬಗ್ಗೆ ‘ಗಟ್ಟಿಯಾದ ಮತ್ತು ಸ್ಪಷ್ಟವಾದ’ ಸಂದೇಶ ರವಾನಿಸಲು ಈ ನೋಟಿಸ್ ನೀಡಲಾಗಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯೆಗೆ ಐಟಿ ಸಚಿವಾಲಯವು ಸಂಪರ್ಕಕ್ಕೆ ಸಿಗಲಿಲ್ಲ ಎಂದು ಅದು ಹೇಳಿದೆ.

ಪ್ರಪಂಚದಾದ್ಯಂತ ವೈದ್ಯರು ಮತ್ತು ಆರೋಗ್ಯ ತಜ್ಞರು ಸಾಮಾನ್ಯವಾಗಿ ಕೊರೊನಾ ವೈರಸ್ ರೂಪಾಂತರಗಳು ಎಲ್ಲಿ ಪತ್ತೆಯಾಗಿದೆಯೊ ಅದರ ಆಧಾರದ ಮೇಲೆಯೆ ಹೆಸರನ್ನು ಉಲ್ಲೇಖಿಸುತ್ತಾರೆ. ದಕ್ಷಿಣ ಆಫ್ರಿಕಾ ಮತ್ತು ಬ್ರೆಜಿಲ್ ರೂಪಾಂತರಗಳನ್ನು ಹಾಗೆಯೆ ಉಲ್ಲೇಖಿಸುತ್ತಾರೆ.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ದೇಶ ಚಿತ್ರಣದ ಹಾಳಾಗುತ್ತಿದೆ ಎಂಬ ಹೆಸರಲ್ಲಿ ಕೇಂದ್ರ ಸರ್ಕಾರವು ತನ್ನ ವೈಫಲ್ಯವನ್ನು ಮುಚ್ಚಿಡಲು ಪ್ರಯತ್ನಿಸುತ್ತಿದೆ. ಕನಿಷ್ಠ ಆರೋಗ್ಯ ಸೌಲಭ್ಯಗಳಿಲ್ಲದೆ ಸಾಂಕ್ರಮಿಕದಿಂದಾಗಿ ಜನರು ಸಾಯುತ್ತಿರುವ ಸಮಯದಲ್ಲಿ ಕೇಂದ್ರ ಸರ್ಕಾರವು ತನ್ನ ಇಮೇಜ್‌ ಸರಿಪಡಿಸಲು ಹೋಗಿ ಅಂತರಾಷ್ಟ್ರೀಯವಾಗಿ ದೇಶದ ಮಾನವನ್ನು ಹರಾಜಾಕುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನರ ಜೀವಕ್ಕಿಂತಲೂ ತನ್ನ ‘ಇಮೇಜ್‌’ ರಕ್ಷಿಸುವುದು ಮುಖ್ಯವಾಗಿದೆ. ಅದಕ್ಕೆ ಈ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ ಎಂದು ಹಲವಾರು ಜನರು ಕಿಡಿ ಕಾರಿದ್ದಾರೆ.

ಭಾರತವು ಕೊರೊನಾ ಪ್ರಕರಣಗಳಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ. ದೇಶದಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಸೋಂಕುಗಳು ಮತ್ತು 4,000 ಸಾವುಗಳನ್ನು ವರದಿಯಾಗುತ್ತಿದೆ.

ಕೊರೊನಾ ವೈರಸ್ ಸಾಂಕ್ರಾಮಿಕವನ್ನು ನಿಭಾಯಿಸಲು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ವಿಫಲವಾದ ಹಿನ್ನಲೆಯಲ್ಲಿ ಭಾರಿ ಟೀಕೆಗಳನ್ನು ಎದುರಿಸುತ್ತಿದೆ. ಕೊರೊನಾ ಎರಡನೆ ಅಲೆ ಬರಲಿದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದರೂ ಮೋದಿ ಸರ್ಕಾರವು ಅದನ್ನು ಸಮರ್ಪಕವಾಗಿ ನಿಭಾಯಿಸಲು ಯೋಜನೆ ರೂಪಿಸದ ಕಾರಣಕ್ಕಾಗಿ ದೇಶದಾದ್ಯಂತ ಅಸಮಾಧಾನಗಳು ಎದ್ದಿದೆ.

ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...