Homeಮುಖಪುಟಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

ಪ್ರಗ್ಯಾಸಿಂಗ್ ಸರಿ, ತೇಜ್‍ಬಹಾದ್ದೂರ್ ತಪ್ಪು: ಹುಟ್ಟು ಹಾಕಿರುವ ಪ್ರಶ್ನೆಗಳು?

- Advertisement -
- Advertisement -
ಭಯೋತ್ಪಾದನೆ ಆರೋಪಿ ಪ್ರಗ್ಯಾಸಿಂಗ್ ನಾಮಪತ್ರ ಸಿಂಧು; ಸೇನೆಯಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿದ ಯೋಧ ತೇಜ್ ಬಹಾದ್ದೂರ್ ಯಾದವ್ ನಾಮಪತ್ರ ಅಸಿಂಧು

2008 ರ ಮಾಲೆಗಾಂವ್ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ಆರೋಪಿ ಆಗಿರುವ ಪ್ರಜ್ಞಾಸಿಂಗ್ ಠಾಕುರ್ ಯುಎಪಿಎ ಅಡಿಯಲ್ಲಿಯೂ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕೋಮುದ್ವೇಶವನ್ನು ಹರಡುವಲ್ಲಿ ಕುಖ್ಯಾತಿಯನ್ನು ಹೊಂದಿರುವ ಈಕೆ, “ನಾನೂ ಸಹ ಬಾಬ್ರಿ ಮಸೀದಿ ಧ್ವಂಸದಲ್ಲಿ ಪಾಲ್ಗೊಂಡಿದ್ದೆ” ಎಂದು ಬಹಿರಂಗವಾಗಿ ಹೇಳಿಕೊಳ್ಳುತ್ತಾಳೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದೇನೆಂದು ಹೇಳಿಕೊಂಡು ಜಾಮೀನು ಪಡೆದಿದ್ದಾರೆ. ಅಲ್ಲದೆ ಆಕೆಯ ಮೇಲೆ ಪೊಲೀಸರಿಂದ ದೌರ್ಜನ್ಯ ನಡೆದಿದೆ ಎನ್ನುವ ಆರೋಪವನ್ನು ಸುಪ್ರೀಮ್ ಕೋರ್ಟ್ 2011ರಲ್ಲಿ ತಿರಸ್ಕರಿಸಿತ್ತು. ಸದ್ಯ ಜಾಮೀನಿನ ಮೇಲೆ ಹೊರಗಿರುವ ಪ್ರಜ್ಞಾ ಭೂಪಾಲ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಭಯೋತ್ಪಾದನಾ ಕೃತ್ಯಗಳಲ್ಲಿ ಭಾಗಿ ಆಗಿರುವ ಆರೋಪ ಹೊಂದಿರುವ ಈಕೆಗೆ ಬಿಜೆಪಿ ಪಕ್ಷ ಟಿಕೆಟ್ ನೀಡಿದ್ದಾರೆ. ಅಲ್ಲದೆ ಚುನಾವಣಾ ಆಯೋಗವೂ ಸ್ಪರ್ಧೆಯನ್ನು ಸಿಂಧು ಮಾಡಿದೆ!

2016ರಲ್ಲಿ ದೇಶದ ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ತನಗೆ ನೀಡಿದ ಆಹಾರದ ಜೊತೆಗೆ ವಿಡಿಯೋ ಚಿತ್ರೀಕರಣ ಮಾಡಿ ದೇಶದಾದ್ಯಂತ ವೈರಲ್ ಆದ ವಿಡಿಯೋವನ್ನು ಮಾಡಿದ್ದು ಭಾರತದ ಬಿಎಸ್‍ಎಫ್ ಸೈನಿಕ ತೇಜ್ ಬಹದ್ದೂರ್ ಯಾದವ್ ಅವರು. ಪ್ರಧಾನಿ ಮೋದಿಯವರ ಪರಮ ಅಭಿಮಾನಿಯಾಗಿದ್ದ ಇವರು, ಈ ಮೂಲಕ ಸೇನೆಯಲ್ಲಿ ಆಹಾರ ಪೂರೈಕೆಯಲ್ಲಿದ್ದ ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡಬಹುದೆಂದು ತಿಳಿದಿದ್ದರು. ಇದಾದ ನಂತರದಲ್ಲಿ ಬಹದ್ದೂರ್ ಅವರನ್ನು ಬಿಎಸ್‍ಎಫ್ ಕೆಲಸದಿಂದ ವಜಾ ಮಾಡಲಾಯಿತು. 2019ರ ಲೋಕಸಭಾ ಚುನಾವಣೆಯ ಹೊತ್ತಿಗೆ ಸ್ವತಃ ಮೋದಿಯ ಅಭಿಮಾನಿ ಆಗಿದ್ದ ಯೋಧ ತೇಜ್ ಬಹದ್ದೂರ್ ಅವರು ಮೋದಿಯ ವಿರುದ್ಧವೇ ವಾರಣಾಸಿಯಲ್ಲಿ ಚುನಾವಣೆ ಕಣಕ್ಕಿಳಿದು ಸ್ಪರ್ಧಿಸಲು ನಿರ್ಧರಿಸಿದರು. ಆದರೆ ಮೇ 1 ರಂದು ಚುನಾವಣಾ ಆಯೋಗವು ತೇಜ್ ಬಹದ್ದೂರ್ ಅವರ ಸ್ಫರ್ಧೆಯನ್ನು ಅಸಿಂಧುಗೊಳಿಸಿ ಸ್ಫರ್ಧೆಯನ್ನು ನಿರಾಕರಿಸಿದೆ. ಬಹದ್ದೂರ್ ಅವರ ಪ್ರಕಾರ ಆಯೋಗವು ಮೊದಮೊದಲಿಗೆ ಯಾವುದೇ ತಕರಾರು ಹೇಳದೆ ಇದೀಗ ಕೊನೆ ಕ್ಷಣದಲ್ಲಿ ಸ್ಫರ್ಧೆ ಅಸಾಧ್ಯವೆಂಬ ನೋಟೀಸ್ ನೀಡಲಾಗಿದೆ. ಬಹದ್ದೂರ್ ಅವರು ಯಾವುದೇ ಭ್ರಷ್ಟಾಚಾರ ಅಥವಾ ವಿಶ್ವಾಸದ್ರೋಹ ಮಾಡಿಲ್ಲವೆಂಬ ಎನ್.ಓ.ಸಿ ಪತ್ರವನ್ನು ನೀಡಲು ವಿಫಲವಾಗಿದ್ದಾರೆ ಎನ್ನುವ ಕಾರಣ ನೀಡಿ ಆಯೋಗವು ಸ್ಫರ್ಧೆಯನ್ನು ಅಸಿಂಧುಗೊಳಸಿದ್ದಾರೆ. ವಾಸ್ತವದಲ್ಲಿ ದೇಶದ್ರೋಹ ಅಥವಾ ಭ್ರಷ್ಟಾಚಾರದಲ್ಲಿ ತೊಡಗಿರುವ ಸೈನಿಕರು ಮಾತ್ರ ವಜಾಗೊಂಡ 5 ವರ್ಷಗಳ ತನಕ ಸ್ಪರ್ಧಿಸಬಾರದು.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿನ ಬಹಳ ಮುಖ್ಯವಾದ ಈ ಎರಡು ಪ್ರಕರಣಗಳು ದೇಶದ ಚುನಾವಣಾ ಆಯೋಗ ಹಾಗೂ ಆಡಳಿತಾರೂಢ ಪಕ್ಷದ ಮೇಲೆ ಹಲವಾರು ಅನುಮಾನಗಳನ್ನು ಹುಟ್ಟುಹಾಕಿದೆ. ಕರ್ನಾಟಕದ ಯು.ಪಿ. ಶಿವಾನಂದ್ ಎನ್ನುವ ವ್ಯಕ್ತಿ ರಾಹುಲ್ ಗಾಂಧಿ ಹಾಗೂ ಮೋದಿ ಇಬ್ಬರ ವಿರುದ್ಧವೂ ಸ್ಫರ್ಧಿಸುತ್ತಿದ್ದು ರಾಹುಲ್ ಗಾಂಧಿ ಕ್ಷೇತ್ರವಾದ ಆಮೇಥಿಯಲ್ಲಿ ಶಿವಾನಂದ್ ಅವರ ನಾಮಪತ್ರ ಅಂಗೀಕಾರವಾಗಿದ್ದು ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಅಸಿಂಧುವಾಗಿರುವುದು ಗೊಂದಲಕ್ಕೆ ಎಡೆಮಾಡಿದೆ. ಈಗಿನ ಆಯೋಗದ ಮುಖ್ಯಸ್ಥರಾಗಿರುವ ಸುನೀಲ್ ಅರೋರ ಅವರು ಈ ಹಿಂದೆ ಬಿಜೆಪಿ ಪಕ್ಷದ ಪರವಾದ ತೀರ್ಮಾನಗಳನ್ನು ತೆಗೆದುಕೊಂಡ ಆರೋಪಕ್ಕೆ ಗುರಿಯಾಗಿ ತನಿಖೆಗೂ ಗುರಿಯಾಗಿದ್ದರು. ನೀತಿ ಸಂಹಿತೆ ಜಾರಿಯಾದ ನಂತರದಿಂದ ಹಲವಾರು ಘಟನೆಗಳನ್ನು ಗಮನಿಸಿದರೆ ಬಿಜೆಪಿಯ ಪರವಾದ ಧೋರಣೆಗಳನ್ನು ಚುನಾವಣ ಆಯೋಗವು ತೋರುತ್ತಿದೆ ಎನ್ನುವ ಅಸಮಾಧಾನ ಹಲವು ವಲಯಗಳಲ್ಲಿ ಮನೆಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...