Homeಮುಖಪುಟತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

ತಲಾ ಆದಾಯದಲ್ಲಿ ಬಾಂಗ್ಲಾ ಭಾರತಕ್ಕಿಂತ ಮುಂದೆ, ಅದಾನಿ ಏಷ್ಯಾದ 2ನೆ ಶ್ರೀಮಂತ: ಇದು ಮೋದಿ ಮಾಡೆಲ್!

- Advertisement -
- Advertisement -

ಈ ಮೂರು ದಿನದಲ್ಲಿ ಏಷ್ಯಾ ಕುರಿತಂತೆ ಬಂದ ಈ ಎರಡು ಆರ್ಥಿಕ ವಿಷಯಗಳ ಬಗ್ಗೆ ನಮ್ಮ ಮಾಧ್ಯಮಗಳು ಹೆಚ್ಚಿನ ಗಮನವನ್ನು ಹರಿಸಲೇ ಇಲ್ಲ. ತಲಾವಾರು ಆದಾಯದಲ್ಲಿ ಪಕ್ಕದ ಬಾಂಗ್ಲಾದೇಶ ಭಾರತಕ್ಕಿಂತ ಮುಂದಿದೆ. ಇದೇ ಸಂದರ್ಭದಲ್ಲಿ ಗುಜರಾತಿನ ಉದ್ಯಮಿ, ಮೋದಿ ಮಿತ್ರ ಎಂದೇ ಗುರುತಿಸಲ್ಪಟ್ಟ ಗೌತಮ್ ಅದಾನಿ ಏಷ್ಯಾದ ಎರಡನೇ ಅತಿ ದೊಡ್ಡ ಶ್ರೀಮಂತರಾಗಿದ್ದಾರೆ. ಅಂದಂತೆ ಮುಖೇಶ್ ಅಂಬಾನಿ ಟಾಪ್‌ನಲ್ಲೇ ಇದ್ದಾರೆ!

ಒಬ್ಬ ವೈದ್ಯರು ಮಾಸ್ಕ್ ಹಾಕಿರಲಿಲ್ಲ ಎಂಬುದನ್ನು ದೊಡ್ಡ ಇಶ್ಯೂ ಮಾಡುವ ಮಾಧ್ಯಮಗಳಿಗೆ ಈ ಸುದ್ದಿಗಳು ಮುಖ್ಯವೇ ಅಲ್ಲ!

ನೆರೆಯ ಬಾಂಗ್ಲಾ ದೇಶದ ಸರಾಸರಿ ತಲಾ ಆದಾಯ 2,227 ಡಾಲರ್ ಆಗಿದ್ದರೆ, ಭಾರತದ ತಲಾ ಆದಾಯ 1,947 ಡಾಲರ್ ಇದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತಲಾ ಆದಾಯದ ದೃಷ್ಟಿಯಿಂದ ಭಾರತ ತಾಂತ್ರಿಕವಾಗಿ ಬಾಂಗ್ಲಾದೇಶಕ್ಕಿಂತ ಕೆಳಕ್ಕೆ ಇಳಿದಿದೆ, ಏಕೆಂದರೆ ನೆರೆಯ ದೇಶವು 2020-21ರ ಆರ್ಥಿಕ ವರ್ಷದಲ್ಲಿ ತನ್ನ ತಲಾ ಆದಾಯವನ್ನು 2,227 ಡಾಲರ್ ಎಂದು ವರದಿ ಮಾಡಿದೆ. ಇತ್ತೀಚಿನ ಅಧಿಕೃತ ದತ್ತಾಂಶವು ಭಾರತದ ತಲಾ ಆದಾಯವು 1,947.41 ಡಾಲರ್‌ಗೆ ತಲುಪಿದೆ ಎಂದು ತೋರಿಸುತ್ತದೆ. ಕೋವಿಡ್ ಸಾಂಕ್ರಾಮಿಕ ನಿರ್ವಹಣೆಯ ವಿಫಲತೆ ಮತ್ತು ದೇಶವ್ಯಾಪಿ ಹೇರಿದ ಅಸಂಬದ್ಧ, ಅವೈಜ್ಞಾನಿಕ ಕ್ರಮಗಳೇ ಇದಕ್ಕೆ ಕಾರಣ ಅಲ್ಲವೇ?

ಇದನ್ನೂ ಓದಿ: ಅತಿ ಕೆಟ್ಟ ಕೋವಿಡ್ ನಿರ್ವಹಣೆ: ಐದು ಜಾಗತಿಕ ನಾಯಕರಲ್ಲಿ ನರೇಂದ್ರ ಮೋದಿಗೆ ಮೊದಲ ಸ್ಥಾನ

ಈ ಹೊತ್ತಿನಲ್ಲಿ ಬಂದ ಇನ್ನೊಂದು ಸುದ್ದಿ ಗಮನಿಸಿ, ದೇಶದ 2ನೆ ದೊಡ್ಡ ಶ್ರೀಮಂತನಾಗಿದ್ದ ಅದಾನಿ ಈಗ ಏಷ್ಯಾ ಖಂಡದ 2ನೆ ದೊಡ್ಡ ಶ್ರೀಮಂತ!

ಇದು ಮೋದಿಯ ಅಥವಾ ಈ ದೇಶದ ಅಭಿವೃದ್ಧಿ ಮಾಡೆಲ್‌ಗೆ ಸಾಕ್ಷಿಯಂತಿದೆ.
ಬ್ಲೂಮ್‌ಬರ್ಗ್ ಬಿಲಿಯನರ್ಸ್‌ ಸೂಚ್ಯಂಕದ ಪ್ರಕಾರ, ಅದಾನಿ ಗ್ರೂಪ್‌ನ ಮುಖ್ಯಸ್ಥ ಗೌತಮ್ ಅದಾನಿ ಚೀನಾದ ಬಾಟಲ್ ವಾಟರ್ ಬಿಲಿಯನೇರ್ ಝೋಂಗ್ ಶನ್ಶಾನ್ ಅವರನ್ನು ಹಿಂದಿಕ್ಕಿ ಏಷ್ಯಾದ ಎರಡನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.

ಸೂಚ್ಯಂಕದಲ್ಲಿ ಲಭ್ಯವಿರುವ ಇತ್ತೀಚಿನ ವಿವರಗಳ ಪ್ರಕಾರ, ಅದಾನಿಯ ನಿವ್ವಳ ಮೌಲ್ಯವು 66.5 ಬಿಲಿಯನ್ ಡಾಲರ್ ಆಗಿದ್ದರೆ, ಶನ್ಶಾನ್ ಅವರ ಒಟ್ಟು ಮೌಲ್ಯವು. 63.6 ಬಿಲಿಯನ್ ಡಾಲರ್ ಆಗಿದೆ. ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ಮಾತ್ರ ಈಗ ಭಾರತದಲ್ಲಿ ಅದಾನಿಗಿಂತ ಶ್ರೀಮಂತರಾಗಿದ್ದಾರೆ. ಇದರರ್ಥ ಏಷ್ಯಾದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳು ಭಾರತೀಯರಿಂದ (ಇಬ್ಬರೂ ಗುಜರಾತಿಗಳು!) ‘ಆಕ್ರಮಿಸಲ್ಪಟ್ಟಿವೆ.’

ಒಟ್ಟಾರೆಯಾಗಿ, ಜಾಗತಿಕ ಬಿಲಿಯನೇರ್‌ಗಳ ಬ್ಲೂಮ್‌ಬರ್ಗ್‌ನ ಪಟ್ಟಿಯಲ್ಲಿ ಅಂಬಾನಿ ಮತ್ತು ಅದಾನಿ ಕ್ರಮವಾಗಿ 13 ಮತ್ತು 14 ನೇ ಸ್ಥಾನದಲ್ಲಿದ್ದಾರೆ. ಏಷ್ಯಾದಲ್ಲಿ ಇವರಿಬ್ಬರೂ 1 ಮತ್ತು 2ನೆ ಸ್ಥಾನದಲ್ಲಿ ಇದ್ದಾರೆ.

ಇವರಿಬ್ಬರೂ ಮೋದಿಗೆ ಆಪ್ತರು ಎಂಬುದಕ್ಕೆ ಹಲವಾರು ಸಾಕ್ಷಿಗಳಿವೆ. ಇಂತಹ ಉದ್ಯಮಿಗಳ ಆದಾಯ ಕೋವಿಡ್ ಮೊದಲ ಅಲೆಯಲ್ಲೂ ಸಿಕ್ಕಾಪಟ್ಟೆ ಹೆಚ್ಚಿತ್ತು, ಈಗಲೂ ಹೆಚ್ಚುತ್ತಿದೆ. ಆದರೆ ದೇಶದ ತಲಾ ಆದಾಯ ಮಾತ್ರ ಪಕ್ಕದ ಬಾಂಗ್ಲಾಕ್ಕಿಂತ ಕಡಿಮೆಯಾಗಿದೆ.
ಹೇಗಿದೆ ಈ ದೇಶದ ಅಭಿವೃದ್ಧಿ ಮಾಡೆಲ್? ವಾವ್ ಮೋದಿ ವಾವ್!

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಹೆಚ್ಚುತ್ತಿರುವ ಸಾಂಕ್ರಾಮಿಕ: ಕುಸಿಯುತ್ತಿರುವ ನರೇಂದ್ರ ಮೋದಿ ಜನಪ್ರಿಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...