Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದರೆ?

ಫ್ಯಾಕ್ಟ್‌ಚೆಕ್: ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದರೆ?

- Advertisement -
- Advertisement -

ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ಉದ್ಯಮಿ ರತನ್ ಟಾಟಾ ಹೇಳಿದ್ದಾರೆ ಎಂಬ ಪೋಸ್ಟ್‌ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ನಿಜವೇ ಪರಿಶೀಲಿಸೋಣ ಬನ್ನಿ.

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯಲ್ಲಿ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್

ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಹೇಳಿದ್ದಾರೆಯೇ ಎಂದು ಇತ್ತೀಚಿನ ಎಲ್ಲಾ ಮಾಧ್ಯಮಗಳ ಹೇಳಿಕೆಯನ್ನು ಪರೀಶಿಲಿಸಲಾಯಿತು. ಅಲ್ಲದೆ ಉದ್ಯಮಿ ರತನ್‌ ಟಾಟಾರವರು ಭಾರತದ ಕೋವಿಡ್‌ ಬಿಕ್ಕಟ್ಟಿನ ಕುರಿತು ಯಾವುದಾದರೂ ಹೇಳಿಕೆ ನೀಡಿದ್ದಾರೆಯೇ ಎಂದು ಹುಡುಕಿದಾಗ ಅವರ ಸಾಮಾಜಿಕ ಮಾಧ್ಯಮಗಳಲ್ಲಿ ಅಂತಹ ಯಾವುದೇ ಹೇಳಿಕೆಗಳು ದೊರೆತಿಲ್ಲ. ಒಂದು ವೇಳೆ ಅವರು ಯಾವುದೇ ಹೇಳಿಕೆ ನೀಡಿದರೆ ಮುಖ್ಯವಾಹಿನಿ ಮಾಧ್ಯಮಗಳು ಅದನ್ನು ಪ್ರಕಟಿಸಬೇಕಿತ್ತು. ಆದರೆ ಈ ಮೇಲಿನ ಪ್ರತಿಪಾದನೆಯ ಕುರಿತು ಒಂದೇ ಒಂದು ಮಾಧ್ಯಮವು ಸಹ ಯಾವುದೆ ಸುದ್ದಿ, ವರದಿ ಮಾಡಿಲ್ಲ.

ಟಾಟಾ ಟ್ರಸ್ಟ್ ವತಿಯಿಂದ ಕೋವಿಡ್ 19 ವೈರಸ್ ವಿರುದ್ಧ ಹೋರಾಡಲು ಭಾರತ ಸರ್ಕಾರಕ್ಕೆ 1500 ಕೋಟಿ ರೂಗಳ ದೇಣಿಗೆ ನೀಡುವುದಾಗಿ 2020ರ ಮಾರ್ಚ್‌ನಲ್ಲಿ ರತನ್ ಟಾಟಾ ಘೋಷಿಸಿದ್ದರು. ಇತ್ತೀಚೆಗೆ, ಟಾಟಾ ಗ್ರೂಪ್ ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ ಮತ್ತು ಪೂರೈಕೆಯನ್ನು ಹೆಚ್ಚಿಸುವ ಸರ್ಕಾರದ ಪ್ರಯತ್ನಗಳಿಗೆ ಸಹಾಯ ಮಾಡುವುದಾಗಿ ಘೋಷಿಸಿತ್ತು. ಆದರೆ, ರತನ್ ಟಾಟಾ ಅಥವಾ ದಿ ಟಾಟಾ ಗ್ರೂಪ್ ಮೇಲಿನ ಪೋಸ್ಟ್‌ನಲ್ಲಿನ ಹೇಳೀಕೆಯಲ್ಲಿ ಎಲ್ಲಿಯೂ ಹಂಚಿಕೊಂಡಿಲ್ಲ.

ಈ ಹಿಂದೆಯೇ ಇದೇ ರೀತಿಯ ಬೇರೆ ಬೇರೆ ಹೇಳಿಕೆಗಳನ್ನು ರತನ್ ಟಾಟಾರವರ ಹೆಸರಿನಲ್ಲಿ ಹರಿಯಬಿಡಲಾಗಿತ್ತು. ಅವುಗಳೆಲ್ಲ ಸುಳ್ಳು ಎಂದು ಸ್ವತಃ ರತನ್‌ ಟಾಟಾರವರು ಸ್ಪಷ್ಟನೆ ನೀಡಿದ್ದರು. ರತನ್ ಟಾಟಾರವರ ಕುರಿತಾದ ಸುಳ್ಳುಗಳನ್ನು ಫ್ಯಾಕ್ಟ್ಲಿ ಬಯಲುಗೊಳಿಸಿತ್ತು. ಅವುಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು.

ಒಟ್ಟಿನಲ್ಲಿ ಕೊರೊನಾ ಮುಕ್ತ ಭಾರತಕ್ಕಾಗಿ ನನ್ನ ಎಲ್ಲಾ ಸಂಪತ್ತನ್ನು ವ್ಯಯಿಸುತ್ತೇನೆ ಎಂದು ರತನ್ ಟಾಟಾ ಯಾವುದೇ ಹೇಳಿಕೆ ನೀಡಿಲ್ಲ.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ‘ನಾವು ಮರೆತಿಲ್ಲ..’; ಎಂದ ಜಾಮಿಯಾ ವಿದ್ಯಾರ್ಥಿಗಳು

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದರು....

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...