Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

ಫ್ಯಾಕ್ಟ್‌ಚೆಕ್: ಇದು ಕೊರೊನಾ ಲಸಿಕೆ ಪಡೆದ ವ್ಯಕ್ತಿಯ ಶ್ವಾಸಕೋಶದ ಸಿಟಿ ಸ್ಕ್ಯಾನ್ ಚಿತ್ರವಲ್ಲ

- Advertisement -
- Advertisement -

ಸಾಮಾಜಿಕ ಜಾಲತಾಣಗಳಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಶ್ವಾಸಕೋಶ ಮತ್ತು ಲಸಿಕೆ ತೆಗೆದುಕೊಳ್ಳದ ಕೊರೊನಾ ಸೋಂಕಿತ  ರೋಗಿಯ CT ಸ್ಕ್ಯಾನ್ ವರದಿಗಳ ದೃಶ್ಯಗಳು ಎಂದು ಹೇಳಿಕೊಳ್ಳುವ ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ.

ಆರೋಗ್ಯಯುತ ಸ್ಪಷ್ಟ ಶ್ವಾಸಕೋಶವನ್ನು ಹೊಂದಿರುವ ಎಡಭಾಗದಲ್ಲಿರುವ ಚಿತ್ರವನ್ನು ಲಸಿಕೆ ತೆಗೆದುಕೊಂಡಿರುವ ವ್ಯಕ್ತಿಯ ಸಿಟಿ ಸ್ಕ್ಯಾನ್ ವರದಿ ಎಂದು ಹೇಳಲಾಗಿದೆ. ಈ ಚಿತ್ರವನ್ನು ಹಂಚಿಕೊಳ್ಳುವ ಮೂಲಕ, ಜನರು ಸಾಧ್ಯವಾದಷ್ಟು ಬೇಗ ಲಸಿಕೆ ಪಡೆಯಬೇಕು ಎಂದು ಹಲವು ಮಂದಿ ಪೋಸ್ಟ್ ಶೇರ್‌ ಮಾಡಿದ್ದಾರೆ. ಹಾಗಾದರೇ ಈ ಪೋಸ್ಟ್‌ನಲ್ಲಿ ಹೇಳಿರುವುದು ಸರಿಯೇ, ತಪ್ಪು ಮಾಹಿತಿಯೇ ಎಂಬುದನ್ನು  ಪರಿಶೀಲಿಸೋಣ.

ಕನ್ನಡ ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿದೆ.

ಪೋಸ್ಟ್‌ನಲ್ಲಿ ಹಂಚಲಾದ ಫೋಟೋವನ್ನು ಗೋಗಲ್ ರಿವರ್ಸ್ ಇಮೇಜ್ ಹುಡುಕಾಟದಲ್ಲಿ ನೋಡಿದಾಗ, ಏಪ್ರಿಲ್ 2020 ರಲ್ಲಿ ಪ್ರಕಟವಾದ ಲೇಖನದಲ್ಲಿ ಎರಡು ಸಿಟಿ ಸ್ಕ್ಯಾನ್ ವರದಿಗಳಲ್ಲಿ ಇದೇ ರೀತಿಯ ಫೋಟೋ ಇರುವುದು ಕಂಡುಬರುತ್ತದೆ. ಆದರೆ, ಏಪ್ರಿಲ್ 2020 ರಲ್ಲಿ, ಕೊರೊನಾ ವೈರಸ್‌ಗೆ ಲಸಿಕೆ ಲಭ್ಯವಿರಲಿಲ್ಲ.

ಈ ಲೇಖನದ ಪ್ರಕಾರ, ಈ ಸಿಟಿ ಸ್ಕ್ಯಾನ್ ವರದಿ ಹೋಲಿಕೆ ಚಿತ್ರವು ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿದೆ, ಇದು ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ಸೋಂಕಿನ ವ್ಯಾಪ್ತಿಯನ್ನು ಕಂಡುಹಿಡಿಯುವ ಗುರಿಯನ್ನು ಹೊಂದಿದೆ.

ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ವೈರಸ್ ವ್ಯಾಪ್ತಿಯನ್ನು ಕಂಡುಹಿಡಿಯಲು ವ್ಯಾಂಕೋವರ್ ಜನರಲ್ ಆಸ್ಪತ್ರೆ, ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯ ಮತ್ತು ವ್ಯಾಂಕೋವರ್ ಕೋಸ್ಟಲ್ ಆರೋಗ್ಯ ಸಂಶೋಧನಾ ಸಂಸ್ಥೆಯ ಸಂಶೋಧಕರು ಮತ್ತು ವಿಕಿರಣಶಾಸ್ತ್ರಜ್ಞರು ಈ ಸಂಶೋಧನಾ ಅಧ್ಯಯನವನ್ನು ನಡೆಸಿದ್ದಾರೆ.

ಈ ಸಂಶೋಧನೆಯ ಕುರಿತು ಇನ್ನೂ ಹೆಚ್ಚು ವಿವರಗಳನ್ನು ಹುಡುಕಿದಾಗ, ’ದಿ ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ’ ವೆಬ್‌ಸೈಟ್‌ನಲ್ಲಿ ಮತ್ತಷ್ಟು ಮಾಹಿತಿ ದೊರೆತಿದೆ. CT ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೋವಿಡ್ ವೈರಸ್ ಅನ್ನು ಕಂಡುಹಿಡಿಯುವ ಸಂಶೋಧನಾ ಅಧ್ಯಯನದಲ್ಲಿ ಇದೇ ರೀತಿಯ CT ಸ್ಕ್ಯಾನ್ ವರದಿಗಳ ಹೋಲಿಕೆ ಚಿತ್ರವನ್ನು ಪ್ರಕಟಿಸಲಾಗಿದೆ.

ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೋವಿಡ್ ವೈರಸ್ ಅನ್ನು ಪತ್ತೆಹಚ್ಚುವ ಬಗ್ಗೆ ತಮ್ಮ ಸಂಶೋಧನಾ ಅಧ್ಯಯನವನ್ನು ವಿವರಿಸುವಾಗ ವ್ಯಾಂಕೋವರ್ ಕೋಸ್ಟಲ್ ಹೆಲ್ತ್ ರಿಸರ್ಚ್ ಇನ್ಸ್ಟಿಟ್ಯೂಟ್ ಸಹ ತಮ್ಮ ವೆಬ್‌ಸೈಟ್‌ನಲ್ಲಿ ಇದೇ ಚಿತ್ರವನ್ನು ಪ್ರಕಟಿಸಿದೆ.

ಕೊರೊನಾ ಸೋಂಕಿಗೆ ಲಸಿಕೆ ಹಾಕಿಸಿಕೊಳ್ಳಲು ಜನರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪೋಸ್ಟ್ ಹಂಚಿಕೊಳ್ಳಲಾಗುತ್ತಿದ್ದು, ಇದು ಈ ಸಮಯದ ಅವಶ್ಯಕತೆಯಾಗಿದೆ, ಅಷ್ಟೇ. ಆದರೆ, ಈ ಚಿತ್ರವು ಕೊರೊನಾ ಲಸಿಕೆ ಹಾಕಿಸಿಕೊಂಡ ವ್ಯಕ್ತಿಯ ಶ್ವಾಸಕೋಶವನ್ನು ಪ್ರತಿನಿಧಿಸುವುದಿಲ್ಲ. ಈ ಪೋಸ್ಟ್ ಹಂಚಿಕೊಳ್ಳುವುದರಿಂದಾಗಿ ಕೊರೊನಾ ಸೋಂಕಿತ ವ್ಯಕ್ತಿಗಳು ಈ ಚಿತ್ರಗಳನ್ನು ನೋಡುವಾಗ ಆತಂಕಕ್ಕೆ ಒಳಗಾಗುವ ಸಂಭವವಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಈ ಸಿಟಿ ಸ್ಕ್ಯಾನ್ ವರದಿಗಳು ಸಿಟಿ ಸ್ಕ್ಯಾನ್‌ಗಳನ್ನು ಬಳಸಿಕೊಂಡು ಕೊರೊನಾ ವೈರಸ್ ಅನ್ನು ಪತ್ತೆಹಚ್ಚುವ ಸಂಶೋಧನಾ ಅಧ್ಯಯನಕ್ಕೆ ಸಂಬಂಧಿಸಿವೆ, ಕೊರೊನಾ ವ್ಯಾಕ್ಸಿನೇಷನ್‌ಗೆ ಸಂಬಂಧಿಸಿಲ್ಲ.


ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...