Homeಮುಖಪುಟ'ದೀದಿ ಇಲ್ಲದೆ ಬದುಕಲಾರೆ': ಮತ್ತೆ ಟಿಎಂಸಿ ಸೇರಲು ಬಯಸಿದ ಬಿಜೆಪಿಯ ಸೋನಾಲಿ ಗುಹಾ

‘ದೀದಿ ಇಲ್ಲದೆ ಬದುಕಲಾರೆ’: ಮತ್ತೆ ಟಿಎಂಸಿ ಸೇರಲು ಬಯಸಿದ ಬಿಜೆಪಿಯ ಸೋನಾಲಿ ಗುಹಾ

ಬಿಜೆಪಿಯವರು ನನ್ನನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು. ನಾನು ಮಮತಾ ಬ್ಯಾನರ್ಜಿಯ ವಿರುದ್ಧ ಮಾತನಾಡುವಂತೆ ಒತ್ತಾಯಿಸಿದರು. ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ...

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದ ಮಾಜಿ ಟಿಎಂಸಿ ಶಾಸಕಿ ಸೋನಾಲಿ ಗುಹಾ, ಶನಿವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪತ್ರ ಬರೆದು, ಪಕ್ಷ ತೊರೆದಿದ್ದಕ್ಕಾಗಿ ಕ್ಷಮೆಯಾಚಿಸಿದ್ದಲ್ಲದೆ ಮತ್ತೆ ಟಿಎಂಸಿಗೆ ಸೇರಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಆ ಸಂದರ್ಭದಲ್ಲಿ ನಾನು ಭಾವಾವೇಷಕ್ಕೆ ಒಳಗಾಗಿದ್ದ ಕಾರಣ ಪಕ್ಷ ತ್ಯಜಿಸಿದ್ದೆ. ಆದರೆ ನನಗೆ ಈಗ ಅದು ತಪ್ಪು ಎಂದು ಅರಿವಾಗಿದೆ ಎಂದು ಅವರು ಪತ್ರಲ್ಲಿ ಉಲ್ಲೇಖಿಸಿದ್ದಾರೆ. ಆ ಪತ್ರವನ್ನು ಸೋನಾಲಿ ಗುಹಾ ಅವರು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

“ನಾನು ಇದನ್ನು ಭಾರವಾದ ಹೃದಯದಿಂದ ಬರೆಯುತ್ತಿದ್ದೇನೆ, ಭಾವಾವೇಷಕ್ಕೆ ಒಳಗಾಗಿದ್ದ ಕಾರಣ ನಾನು ಬೇರೆ ಪಕ್ಷಕ್ಕೆ ಸೇರುವ ತಪ್ಪು ನಿರ್ಧಾರವನ್ನು ತೆಗೆದುಕೊಂಡಿದ್ದೆ. ಆದರೆ ಅಲ್ಲಿ ನನಗೆ ಒಗ್ಗಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದಾರೆ.

“ಮೀನೊಂದು ನೀರಿನಿಂದ ಹೊರಗುಳಿಯಲು ಸಾಧ್ಯವಿಲ್ಲ, ದೀದಿ, ನೀವು ಇಲ್ಲದೆ ಬದುಕಲು ನನಗೆ ಸಾಧ್ಯವಾಗುವುದಿಲ್ಲ. ನಾನು ನಿಮ್ಮಲ್ಲಿ ಕ್ಷಮೆ ಕೋರುತ್ತೇನೆ ಮತ್ತು ನೀವು ನನ್ನನ್ನು ಕ್ಷಮಿಸದಿದ್ದರೆ, ನಾನು ಬದುಕಲು ಸಾಧ್ಯವಾಗುವುದಿಲ್ಲ. ದಯವಿಟ್ಟು ನಾನು ಪಕ್ಷಕ್ಕೆ ಮತ್ತೆ ಸೇರಲು ಅನುಮತಿಸಿ. ನನ್ನ ಜೀವನದ ಉಳಿದ ಭಾಗವನ್ನು ನಿಮ್ಮ ವಾತ್ಸಲ್ಯದಲ್ಲಿ ಕಳೆಯಲು ಅವಕಾಶ ನೀಡಿ” ಎಂದು ಅವರು ಬಂಗಾಳಿ ಭಾಷೆಯಲ್ಲಿ ಬರೆದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನಾಲ್ಕು ಬಾರಿ ಶಾಸಕರಾಗಿದ್ದ ಸೋನಾಲಿ ಗುಹಾ ಅವರು ಮಮತಾ ಬ್ಯಾನರ್ಜಿಯವರ ಆಪ್ತರಾಗಿದ್ದರು. ಆದರೆ ಈ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ಸೇರಿದ್ದರು. ಈ ಬಾರಿ ಅವರನ್ನು ಟಿಎಂಸಿಯ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಡಲಾಯಿತು, ಅದರ ನಂತರ ಅವರು ಟಿವಿ ಚಾನೆಲ್‌ಗಳಲ್ಲಿ ಭಾವನಾತ್ಮಕ ಮಾತುಗಳನ್ನಾಡಿದ ನಂತರ ಪಕ್ಷವನ್ನು ತೊರೆದು ಬಿಜೆಪಿಗೆ ಸೇರಿದ್ದರು. ಆದರೆ ಅವರು ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಬದಲಿಗೆ ಬಿಜೆಪಿಯ ಸಂಘಟನೆಯನ್ನು ಬಲಪಡಿಸಲು ಕೆಲಸ ಮಾಡುವುದಾಗಿ ಹೇಳಿದ್ದರು.

“ಬಿಜೆಪಿಗೆ ಸೇರ್ಪಡೆಗೊಳ್ಳುವ ನನ್ನ ನಿರ್ಧಾರ ತಪ್ಪಾಗಿದ್ದು, ಅದರ ಫಲವನ್ನು ನಾನಿಂದು ಅನುಭವಿಸುತ್ತಿದ್ದೇನೆ. ಬಿಜೆಪಿ ತ್ಯಜಿಸುತ್ತಿದ್ದೇನೆ ಎಂದು ಹೇಳಲು ನನಗೆ ಯಾವುದೇ ಅಂಜಿಕೆಯಿಲ್ಲ. ಏಕೆಂದರೆ ಅಲ್ಲಿ ನಾನು ಅನಗತ್ಯ ಎಂಬ ಭಾವನೆ ಇದೆ. ಅವರು ನನ್ನನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು. ಮತ್ತು ನಾನು ಮಮತಾ ಬ್ಯಾನರ್ಜಿಯ ವಿರುದ್ಧ ಮಾತನಾಡುವಂತೆ ಒತ್ತಾಯಿಸಿದರು. ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ” ಎಂದು ಅವರು ಹೇಳಿದ್ದಾರೆ.

ಟಿಎಂಸಿಗೆ ಮತ್ತೆ ಸೇರ್ಪಡೆಗೊಳ್ಳಲು ಮುಖ್ಯಮಂತ್ರಿಯನ್ನು ಭೇಟಿಯಾಗಲು ಸಿದ್ಧರಿರುವುದಾಗಿ ಅವರು ಹೇಳಿದ್ದಾರೆ. ಮುಂದಿನ ವಾರ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಿ ಮಾತನಾಡುತ್ತೇನೆ ಎಂದು ಸೋನಾಲಿ ಗುಹಾ ಹೇಳಿದ್ದಾರೆ.


ಇದನ್ನೂ ಓದಿ: ತಮ್ಮ ಮೊದಲಿನ ಕ್ಷೇತ್ರ ಭವಾನಿಪೋರ್‌ನಿಂದ ಕಣಕ್ಕಿಳಿಯಲಿರುವ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...