Homeಕರೋನಾ ತಲ್ಲಣ6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು...

6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು ಹೇಳುತ್ತಾರೆ?

ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ನಕ್ಕರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕನ್ನು ಹೊತ್ತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು ಮತ್ತು 10 ಮೀಟರ್‌ವರೆಗೆ ಚಲಿಸಬಹುರು ಎಂದು ಡಾ. ವೇದ್ ಚತುರ್ವೇದಿ ಹೇಳುತ್ತಾರೆ.

- Advertisement -
- Advertisement -

ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಇತ್ತೀಚೆಗೆ ಬಿಡುಗಡೆ ಮಾಡಿದ ಕೋವಿಡ್ -19 ಮಾರ್ಗಸೂಚಿ ಪ್ರಕಾರ, ಕೋವಿಡ್ ಸೋಂಕಿತ ವ್ಯಕ್ತಿಯಿಂದ ಏರೋಸಾಲ್‌ಗಳು (ಉಸಿರಾಟದ ಹನಿಗಳು) 10 ಮೀಟರ್‌ವರೆಗೆ ಗಾಳಿಯಲ್ಲಿ ಜೀವಂತವಾಗಿ ಸಂಚರಿಸಬಹುದು. 10 ಮೀಟರ್ ಅಂದರೆ ಸುಮಾರು 32 ಅಡಿಗಳು. ಆದರೆ ಇಲ್ಲಿವರೆಗೆ ಕೇಂದ್ರ ಆರೋಗ್ಯ ಇಲಾಖೆಯು ತನ್ನ ಮಾರ್ಗಸೂಚಿಗಳಲ್ಲಿ ‘ಎರಡು ಗಜ ದೂರ’ ಅಂದರೆ ಆರು ಅಡಿ ದೂರದ ಸುರಕ್ಷಿತ ಅಂತರವಿರಲಿ ಎಂದು ಹೇಳುತ್ತ ಬಂದಿದೆ.

ಈಗ ಜನರು ಆರು ಅಡಿ ಅಂತರ ಕಾಪಾಡಿಕೊಳ್ಳಬೇಕೆ ಅಥವಾ 10 ಮೀಟರ್ (32 ಅಡಿ) ಅಂತರ ಕಾಪಾಡಿಕೊಳ್ಳಬೇಕೆ ಎಂಬ ಗೊಂದಲ ಎದ್ದಿದೆ.

ದೆಹಲಿಯ ಗಂಗಾರಾಂ ಆಸ್ಪತ್ರೆಯ ಡಾ.ವೇದ್ ಚತುರ್ವೇದಿ (ಲೆಫ್ಟಿನೆಂಟ್ ಜನರಲ್) ಅಭಿಪ್ರಾಯವೆಂದರೆ, 10 ಮೀಟರ್ ದೂರವು ಸೂಕ್ತವಾಗಿದೆ. ಆದರೆ ಹೆಚ್ಚಿನ ಕೋವಿಡ್ ಸೋಂಕುಗಳು ವಾತಾವರಣದಲ್ಲಿರುವ ಹನಿಗಳ ಮೂಲಕ ಹರಡುತ್ತವೆ. ಆದರೆ 10 ಮೀಟರ್‌ವರೆಗೆ ಚಲಿಸುವ ವ್ಯಕ್ತಿಗತ ಏರೋಸಾಲ್‌ಗಳ ಮೂಲಕ ಸೋಂಕು ಹರಡುವುದು ಕಡಿಮೆ ಸಂಭವ ಎನ್ನುತ್ತಾರೆ.

ವೈರಸ್ 10 ಮೀಟರ್‌ವರೆಗೆ ಚಲಿಸಬಲ್ಲದು ಎಂದು ವೈದ್ಯಕೀಯ ಮ್ಯಾಗಝೀನ್ ದಿ ಲ್ಯಾನ್ಸೆಟ್ ಕೂಡ ಹೇಳಿದೆ. ಆದರೆ 6 ಅಡಿ ಅಂತರ ಕಾಪಾಡಿಕೊಳ್ಳುವುದು ಬಹಳ ಮುಖ್ಯ, ಏಕೆಂದರೆ ಹೆಚ್ಚಿನ ಪ್ರಕರಣಗಳು ಸೋಂಕಿತ ವ್ಯಕ್ತಿಯ ಸಮೀಪದಲ್ಲಿ ಹನಿಗಳ ಮೂಲಕ ಕಂಡುಬರುತ್ತವೆ. ಅದು ಆ ವ್ಯಕ್ತಿಯು ಮಾತನಾಡುವಾಗ ಹರಡುತ್ತದೆ.

“ಆದರೆ ಅನೇಕ ಜನರು ತಾವು ಹೊರಗೆ ಹೋಗಿಲ್ಲ ಮತ್ತು ಯಾರೊಂದಿಗೂ ನಿಕಟ ಸಂಪರ್ಕಕ್ಕೆ ಬಂದಿಲ್ಲವಾದರೂ ಸೋಂಕು ಬಂದಿದೆ ಎಂದು ತಿಳಿಸಿದ ಪ್ರಕರಣಗಳೂ ಇವೆ. ಆದ್ದರಿಂದ, ವೈರಸ್ ಗಾಳಿಯಲ್ಲಿ ಉಳಿದುಕೊಂಡು ಇನ್ನೊಬ್ಬರಿಗೆ ಸೋಂಕು ತಗುಲಿಸಬಹುದು. ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ಹಾಡುತ್ತಿದ್ದರೆ, ನಗುತ್ತಿದ್ದರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕಿತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು” ಎಂದು ಡಾ.ಚತುರ್ವೇದಿ ಆಲ್ ಇಂಡಿಯಾ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಆದರೆ 10 ಮೀಟರ್ ದೂರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದ ಕಾರಣ, ಉತ್ತಮ ಗಾಳಿ (ವೆಂಟಿಲೇಷನ್) ಸಹಾಯ ಮಾಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಹೇಳಿದ್ದಾರೆ. “ಮೊದಲಿಗೆ, ವೈರಸ್ ಹನಿಗಳ ಮೂಲಕ ಹರಡುತ್ತದೆ ಎಂದು ತಿಳಿದುಬಂದಿದೆ. ಮೈಕ್ರೊ ಡ್ರಾಪ್ಲೆಟ್‌ಗಳು (ಉಸಿರಿನ ಸೂಕ್ಷ್ಮ ಹನಿಗಳು) ಗಾಳಿಯಲ್ಲಿ ಕನಿಷ್ಠ 2-3 ಗಂಟೆಗಳ ಕಾಲ ಸಜೀವವಾಗಿರಬಹುದು ಎಂದು ಈಗ ಕಂಡುಬಂದಿದೆ. ಕೆಲವು ಅಧ್ಯಯನಗಳು ಮೈಕ್ರೊ ಡ್ರಾಪ್ಲೆಟ್‌ಗಳು ಗಾಳಿಯಲ್ಲಿ 3 ಗಂಟೆ ಉಳಿಯಬಹುದು ಎಂದು ಸೂಚಿಸಿವೆ. ನಾವು ಆರು ಅಡಿಗಳಷ್ಟು ದೂರವನ್ನು ಶಿಫಾರಸು ಮಾಡುತ್ತೇವೆ. ಉತ್ತಮ ಗಾಳಿ ಬೀಸುವ ವ್ಯವಸ್ಥೆ ಇದ್ದರೆ ಸೂಕ್ಷ್ಮ ಹನಿಗಳನ್ನು ಚದುರಿಸಬಹುದು” ಎಂದು ಡಾ ಭಾರ್ಗವ ಇತ್ತೀಚೆಗೆ ಹೇಳಿದ್ದಾರೆ.


ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...