Homeಕರೋನಾ ತಲ್ಲಣ6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು...

6 ಅಡಿ ಅಥವಾ 10 ಮೀಟರ್?: ಕೋವಿಡ್ ತಡೆಗೆ ಸುರಕ್ಷಿತ ಅಂತರದ ಬಗ್ಗೆ ತಜ್ಞರು ಏನು ಹೇಳುತ್ತಾರೆ?

ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ನಕ್ಕರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕನ್ನು ಹೊತ್ತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು ಮತ್ತು 10 ಮೀಟರ್‌ವರೆಗೆ ಚಲಿಸಬಹುರು ಎಂದು ಡಾ. ವೇದ್ ಚತುರ್ವೇದಿ ಹೇಳುತ್ತಾರೆ.

- Advertisement -
- Advertisement -

ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಇತ್ತೀಚೆಗೆ ಬಿಡುಗಡೆ ಮಾಡಿದ ಕೋವಿಡ್ -19 ಮಾರ್ಗಸೂಚಿ ಪ್ರಕಾರ, ಕೋವಿಡ್ ಸೋಂಕಿತ ವ್ಯಕ್ತಿಯಿಂದ ಏರೋಸಾಲ್‌ಗಳು (ಉಸಿರಾಟದ ಹನಿಗಳು) 10 ಮೀಟರ್‌ವರೆಗೆ ಗಾಳಿಯಲ್ಲಿ ಜೀವಂತವಾಗಿ ಸಂಚರಿಸಬಹುದು. 10 ಮೀಟರ್ ಅಂದರೆ ಸುಮಾರು 32 ಅಡಿಗಳು. ಆದರೆ ಇಲ್ಲಿವರೆಗೆ ಕೇಂದ್ರ ಆರೋಗ್ಯ ಇಲಾಖೆಯು ತನ್ನ ಮಾರ್ಗಸೂಚಿಗಳಲ್ಲಿ ‘ಎರಡು ಗಜ ದೂರ’ ಅಂದರೆ ಆರು ಅಡಿ ದೂರದ ಸುರಕ್ಷಿತ ಅಂತರವಿರಲಿ ಎಂದು ಹೇಳುತ್ತ ಬಂದಿದೆ.

ಈಗ ಜನರು ಆರು ಅಡಿ ಅಂತರ ಕಾಪಾಡಿಕೊಳ್ಳಬೇಕೆ ಅಥವಾ 10 ಮೀಟರ್ (32 ಅಡಿ) ಅಂತರ ಕಾಪಾಡಿಕೊಳ್ಳಬೇಕೆ ಎಂಬ ಗೊಂದಲ ಎದ್ದಿದೆ.

ದೆಹಲಿಯ ಗಂಗಾರಾಂ ಆಸ್ಪತ್ರೆಯ ಡಾ.ವೇದ್ ಚತುರ್ವೇದಿ (ಲೆಫ್ಟಿನೆಂಟ್ ಜನರಲ್) ಅಭಿಪ್ರಾಯವೆಂದರೆ, 10 ಮೀಟರ್ ದೂರವು ಸೂಕ್ತವಾಗಿದೆ. ಆದರೆ ಹೆಚ್ಚಿನ ಕೋವಿಡ್ ಸೋಂಕುಗಳು ವಾತಾವರಣದಲ್ಲಿರುವ ಹನಿಗಳ ಮೂಲಕ ಹರಡುತ್ತವೆ. ಆದರೆ 10 ಮೀಟರ್‌ವರೆಗೆ ಚಲಿಸುವ ವ್ಯಕ್ತಿಗತ ಏರೋಸಾಲ್‌ಗಳ ಮೂಲಕ ಸೋಂಕು ಹರಡುವುದು ಕಡಿಮೆ ಸಂಭವ ಎನ್ನುತ್ತಾರೆ.

ವೈರಸ್ 10 ಮೀಟರ್‌ವರೆಗೆ ಚಲಿಸಬಲ್ಲದು ಎಂದು ವೈದ್ಯಕೀಯ ಮ್ಯಾಗಝೀನ್ ದಿ ಲ್ಯಾನ್ಸೆಟ್ ಕೂಡ ಹೇಳಿದೆ. ಆದರೆ 6 ಅಡಿ ಅಂತರ ಕಾಪಾಡಿಕೊಳ್ಳುವುದು ಬಹಳ ಮುಖ್ಯ, ಏಕೆಂದರೆ ಹೆಚ್ಚಿನ ಪ್ರಕರಣಗಳು ಸೋಂಕಿತ ವ್ಯಕ್ತಿಯ ಸಮೀಪದಲ್ಲಿ ಹನಿಗಳ ಮೂಲಕ ಕಂಡುಬರುತ್ತವೆ. ಅದು ಆ ವ್ಯಕ್ತಿಯು ಮಾತನಾಡುವಾಗ ಹರಡುತ್ತದೆ.

“ಆದರೆ ಅನೇಕ ಜನರು ತಾವು ಹೊರಗೆ ಹೋಗಿಲ್ಲ ಮತ್ತು ಯಾರೊಂದಿಗೂ ನಿಕಟ ಸಂಪರ್ಕಕ್ಕೆ ಬಂದಿಲ್ಲವಾದರೂ ಸೋಂಕು ಬಂದಿದೆ ಎಂದು ತಿಳಿಸಿದ ಪ್ರಕರಣಗಳೂ ಇವೆ. ಆದ್ದರಿಂದ, ವೈರಸ್ ಗಾಳಿಯಲ್ಲಿ ಉಳಿದುಕೊಂಡು ಇನ್ನೊಬ್ಬರಿಗೆ ಸೋಂಕು ತಗುಲಿಸಬಹುದು. ಸೋಂಕಿತ ವ್ಯಕ್ತಿಯು ಕೆಮ್ಮಿದರೆ, ಹಾಡುತ್ತಿದ್ದರೆ, ನಗುತ್ತಿದ್ದರೆ, ಜೋರಾಗಿ ಮಾತನಾಡುತ್ತಿದ್ದರೆ, ಸೋಂಕಿತ ಏರೋಸಾಲ್‌ಗಳು ಗಾಳಿಯ ದಿಕ್ಕಿನಲ್ಲಿ ಚಲಿಸಬಹುದು” ಎಂದು ಡಾ.ಚತುರ್ವೇದಿ ಆಲ್ ಇಂಡಿಯಾ ರೇಡಿಯೊಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಆದರೆ 10 ಮೀಟರ್ ದೂರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದ ಕಾರಣ, ಉತ್ತಮ ಗಾಳಿ (ವೆಂಟಿಲೇಷನ್) ಸಹಾಯ ಮಾಡಬಹುದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಹೇಳಿದ್ದಾರೆ. “ಮೊದಲಿಗೆ, ವೈರಸ್ ಹನಿಗಳ ಮೂಲಕ ಹರಡುತ್ತದೆ ಎಂದು ತಿಳಿದುಬಂದಿದೆ. ಮೈಕ್ರೊ ಡ್ರಾಪ್ಲೆಟ್‌ಗಳು (ಉಸಿರಿನ ಸೂಕ್ಷ್ಮ ಹನಿಗಳು) ಗಾಳಿಯಲ್ಲಿ ಕನಿಷ್ಠ 2-3 ಗಂಟೆಗಳ ಕಾಲ ಸಜೀವವಾಗಿರಬಹುದು ಎಂದು ಈಗ ಕಂಡುಬಂದಿದೆ. ಕೆಲವು ಅಧ್ಯಯನಗಳು ಮೈಕ್ರೊ ಡ್ರಾಪ್ಲೆಟ್‌ಗಳು ಗಾಳಿಯಲ್ಲಿ 3 ಗಂಟೆ ಉಳಿಯಬಹುದು ಎಂದು ಸೂಚಿಸಿವೆ. ನಾವು ಆರು ಅಡಿಗಳಷ್ಟು ದೂರವನ್ನು ಶಿಫಾರಸು ಮಾಡುತ್ತೇವೆ. ಉತ್ತಮ ಗಾಳಿ ಬೀಸುವ ವ್ಯವಸ್ಥೆ ಇದ್ದರೆ ಸೂಕ್ಷ್ಮ ಹನಿಗಳನ್ನು ಚದುರಿಸಬಹುದು” ಎಂದು ಡಾ ಭಾರ್ಗವ ಇತ್ತೀಚೆಗೆ ಹೇಳಿದ್ದಾರೆ.


ಇದನ್ನೂ ಓದಿ: ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....