Homeಮುಖಪುಟಅಲೋಪತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಾಬಾ ರಾಮದೇವ್‌ಗೆ ಲೀಗಲ್ ನೋಟಿಸ್ - ಬಂಧನಕ್ಕೆ ಒತ್ತಾಯ

ಅಲೋಪತಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಾಬಾ ರಾಮದೇವ್‌ಗೆ ಲೀಗಲ್ ನೋಟಿಸ್ – ಬಂಧನಕ್ಕೆ ಒತ್ತಾಯ

- Advertisement -
- Advertisement -

ಅಲೋಪತಿ ಮತ್ತು ಆಧುನಿಕ ವೈದ್ಯಕೀಯ ಪದ್ಧತಿಗೆ “ಮಾನಹಾನಿ” ಮಾಡುವ ಆರೋಪಗಳ ಕುರಿತಂತೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಶನಿವಾರ ಯೋಗ ಗುರು ರಾಮದೇವ್‌ಗೆ ಲೀಗಲ್ ನೋಟಿಸ್ ಕಳುಹಿಸಿದೆ.

ವೀಡಿಯೊವೊಂದರಲ್ಲಿ ರಾಮದೇವ್, ಅಲೋಪತಿ ಒಂದು “ಅವಿವೇಕಿ ವಿಜ್ಞಾನ” ಮತ್ತು ‘ಔಷಧಿಗಳು ನಿಷ್ಪ್ರಯೋಜಕ’ ಎಂದು ಹೇಳಿದ್ದರು. ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಅನುಮೋದಿಸಿದ ರೆಮ್ಡೆಸಿವಿರ್, ಫೆವಿಫ್ಲೂ ಮತ್ತು ಇತರ ಔಷಧಿಗಳು ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡಲು ವಿಫಲವಾಗಿವೆ ಎಂದಿದ್ದರು. ಅಲ್ಲದೆ ಆಧುನಿಕ ವೈದ್ಯಕೀಯ ವೈದ್ಯರನ್ನು “ಕೊಲೆಗಾರರು” ಎಂದು ಅವರು ಆರೋಪಿಸಿದ್ದರು.

ಐಎಂಎ ಜೊತೆಗೆ, ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಏಮ್ಸ್) ನಿವಾಸಿ ವೈದ್ಯರ ಸಂಘಗಳು, ಸಫ್ದರ್ಜಂಗ್ ಆಸ್ಪತ್ರೆಯ ಆರ್‌ಡಿಎ ಮತ್ತು ಇತರ ವೈದ್ಯಕೀಯ ಸಂಸ್ಥೆಗಳು ರಾಮ್‌ದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್‌ರವರಿಗೆ ಒತ್ತಾಯಿಸಿವೆ.

ಲೀಗಲ್ ನೋಟಿಸ್ ನೀಡುತ್ತಿದ್ದಂತೆ ಸಮಜಾಯಿಷಿ ನೀಡಿರುವ ಪತಂಜಲಿ ಸಂಸ್ಥೆ, “ರಾಮದೇವ್ ಅವರು ಅಲೋಫಥಿ ಬಗ್ಗೆ ವಾಟ್ಸಾಪ್‌ನಲ್ಲಿ ಫಾರ್ವಾಡ್‌ ಆಗಿದ್ದ ಸಂದೇಶವನ್ನು ಓದುತ್ತಿದ್ದರಷ್ಟೇ. ಅವರಿಗೆ ಅಲೋಪಥಿ ಮತ್ತು ಆಧುನಿಕ ಔಷಧಗಳ ಬಗ್ಗೆ ಕೆಟ್ಟ ಅಭಿಪ್ರಾಯವಿಲ್ಲ. ಅಲೋಪಥಿ ಬಗ್ಗೆ ಅವರಿಗೆ ಗೌರವ ಇದೆ” ಎಂದು ಹೇಳಿದೆ.

ರಾಮದೇವ್ ಅವರು ಅಲೋಪತಿ ಮತ್ತು ವಿಜ್ಞಾನದ ಕುರಿತಂತೆ “ಅಶಿಕ್ಷಿತ” ಹೇಳಿಕೆಗಳನ್ನು ನೀಡುವ ಮೂಲಕ ಜನರನ್ನು ದಾರಿ ತಪ್ಪಿಸಿರುವುದರಿಂದ ಕೇಂದ್ರ ಆರೋಗ್ಯ ಸಚಿವಾಲಯವು ಕ್ರಮ ಕೈಗೊಳ್ಳಬೇಕು ಎಂದು ಈ ಹಿಂದೆ ಐಎಂಎ ತಿಳಿಸಿತ್ತು. ಸರ್ಕಾರದ ಯಾವುದೇ ಕ್ರಮ ಜರುಗಿಸದ ಕಾರಣ ಈಗ ಲೀಗಲ್ ಸಂಸ್ಥೆಯೊಂದರ ಮೂಲಕ ಲೀಗಲ್ ನೋಟಿಸ್ ನೀಡಿದೆ.

“ಅಲೋಪತಿ ಔಷಧಿಗಳನ್ನು ತೆಗೆದುಕೊಂಡ ನಂತರ ಲಕ್ಷಾಂತರ ರೋಗಿಗಳು ಸಾವನ್ನಪ್ಪಿದ್ದಾರೆ” ಎಂದು ಯೋಗ ಗುರು ಕೊರೊನಾ ನಿರ್ವಹಣೆಗೆ ಸೆಣಸುತ್ತಿರುವ ವೈದ್ಯ ಸಮೂಹವನ್ನು ಅವಮಾನಿಸಿದ್ದಾರೆ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ರಾಮದೇವ್ ಅವರನ್ನು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ವಿಚಾರಣೆ ನಡೆಸಬೇಕು, ರಾಮದೇವರ ಆಧಾರರಹಿತ ಹೇಳಿಕೆಗಳು ರೋಗಿಗಳಲ್ಲಿ ಗೊಂದಲ ಮತ್ತು ಆತಂಕಗಳನ್ನು ಮೂಡಿಸುತ್ತವೆ ಎಂದು ಐಎಂಎ ತಿಳಿಸಿದೆ.

ಅಲೋಪತಿ ಔಷಧಗಳ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಮೂಲಕ ರಾಮದೇವ್ ತಮ್ಮ ಅನುಮೋದಿಸದ, ಯಾವುದೇ ಅಧಿಕೃತತೆ ಇಲ್ಲದ ಔಷಧಿಗಳನ್ನು ಮಾರಾಟ ಮಾಡುವ ವ್ಯಾಪಾರಿ ಬುದ್ಧಿ ಹೊಂದಿದ್ದಾರೆ. ಈ ಅನುಮೋದಿಸದ ಔಷಧಗಳು ಜನರನ್ನು ದಾರಿ ತಪ್ಪಿಸುತ್ತವೆ. ಹೀಗಾಗಿ ಸಾಂಕ್ರಾಮಿಕ ಕಾಯ್ದೆ ಅಡ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎನ್ನಲಾಗಿದೆ.

“ರಾಮದೇವ್ ಬಾಬಾ ಅವರ ಹೇಳಿಕೆಯನ್ನು ದ್ವೇಷದ ಭಾಷಣವೆಂದು ಪರಿಗಣಿಸಬೇಕು ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆ, 1987 ರ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಅಧಿಕಾರಿಗಳನ್ನು ನಾವು ವಿನಂತಿಸುತ್ತೇವೆ ಎಂದು ಐಎಂಎ ಹೇಳಿದೆ.

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಬಾಬಾ ರಾಮ್‌ದೇವ್‌ ಈ ಹಿಂದೆಯೂ ಇದೇ ರೀತಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ದಲಿತ ಯುವಕನಿಗೆ ಮೂತ್ರ ಕುಡಿಸಿದ ಗೋಣಿಬೀಡು PSI ಅರ್ಜುನ್ ವಿರುದ್ಧ FIR: ಅಮಾನತ್ತಿಗೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...