Homeಕರೋನಾ ತಲ್ಲಣಸಾರ್ವಜನಿಕ ಆಕ್ರೋಶ, ಅಸಮಾಧಾನದ ಪರಿಣಾಮ: ‘ಮನೆಯಿಂದ ಹೊರಬಂದು ಜನರಿಗೆ ನೆರವಾಗಿ’ ಎಂದ ಬಿಜೆಪಿ ಅಧ್ಯಕ್ಷ ನಡ್ಡಾ

ಸಾರ್ವಜನಿಕ ಆಕ್ರೋಶ, ಅಸಮಾಧಾನದ ಪರಿಣಾಮ: ‘ಮನೆಯಿಂದ ಹೊರಬಂದು ಜನರಿಗೆ ನೆರವಾಗಿ’ ಎಂದ ಬಿಜೆಪಿ ಅಧ್ಯಕ್ಷ ನಡ್ಡಾ

- Advertisement -
- Advertisement -

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಬಿಜೆಪಿಯ ಸ್ಪಷ್ಟ ಅನುಪಸ್ಥಿತಿಯ ಕಾರಣಕ್ಕೆ ಸಾರ್ವಜನಿಕರಲ್ಲಿ ಪಕ್ಷದ ಬಗ್ಗೆ ಆಕ್ರೋಶ ಮತ್ತು ಅಸಮಾಧಾನ ಶುರುವಾಗಿದೆ ಎಂಬುದನ್ನು ಮನಗಂಡಿರುವ ಬಿಜೆಪಿ ಪಕ್ಷ ತನ್ನ ಎಲ್ಲ ಹಂತದ ನಾಯಕರಿಗೂ ಜನರಿಗೆ ನೆರವಾಗಲು ಸೂಚಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಷ್ಟದಲ್ಲಿರುವ ಜನರೊಂದಿಗೆ “ಅನುಭೂತಿ ಮತ್ತು ಸಹಾನುಭೂತಿ”ಯಿಂದ ವರ್ತಿಸಲು ಹೇಳಿದೆ.
ಈ ಕುರಿತು ಎಲ್ಲ ಹಂತಗಳ ನಾಯಕರೊಂದಿಗೆ ವರ್ಚುವಲ್ ಸಭೆಗಳನ್ನು ನಡೆಸುತ್ತಿರುವ ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ, ಪಕ್ಷದ ಮುಖಂಡರಿಗೆ ಔಷಧಿಗಳ ವಿತರಣೆ, ಆಸ್ಪತ್ರೆ ಹಾಸಿಗೆಗಳ ಲಭ್ಯತೆ ಮತ್ತು ಆರೋಗ್ಯ ಮೂಲಸೌಕರ್ಯಗಳ ಹೆಚ್ಚಳ, ಆಮ್ಲಜನಕ ಲಭ್ಯತೆಗಳನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡಲು ತಿಳಿಸಿದ್ದಾರೆ. ‘ಮನೆಯಿಂದ ಹೊರಬನ್ನಿ ಜನರಿಗೆ ನೆರವಾಗಿ’ ಎಂದು ನೇರವಾಗಿ ತಿಳಿಸಿದ್ದಾರೆ.

ಎರಡನೇ ಅಲೆಯು ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವಾಗ ಕೇಂದ್ರ ಸರ್ಕಾರದ ಮೇಲೆ ಆರೋಪಿಸಿ, ನಮ್ಮ ಇಮೇಜ್ ಹಾಳು ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಟೂಲ್‌ಕಿಟ್ ಹೆಸರಲ್ಲಿ ಬಿಜೆಪಿ ಟ್ವೀಟ್‌ಗಳನ್ನು ಮಾಡಲಾಗಿತ್ತು. ಕಾಂಗ್ರೆಸ್‌ನ ನಕಲಿ ಲೆಟರ್‌ಹೆಡ್ ಬಳಸಿ ಇದನ್ನು ರಚಿಸಲಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದ ಟ್ವೀಟರ್ ಈ ಟ್ವೀಟ್‌ಗಳನ್ನು ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಕರೆದಿತ್ತು. ಇದು ಬಿಜೆಪಿಗೆ ಮುಜುಗರ ತಂದಿತ್ತು
“ಪಕ್ಷ ಮತ್ತು ಸರ್ಕಾರದ ವಿರುದ್ಧ ನಕಾರಾತ್ಮಕ ನಿರೂಪಣೆ ಸೃಷ್ಟಿಯಾಗಿದೆ ಎಂಬುದು ನಿಜ” ಎಂದು ಬಿಜೆಪಿಯ ಹಿರಿಯ ಮುಖಂಡರು ಇಂಡಿಯನ್ ಎಕ್ಸ್‌ಪ್ರೆಸ್‌ ಎದುರು ಒಪ್ಪಿಕೊಂಡರು.

“ವಿಷಯಗಳನ್ನು ಸಾಮಾನ್ಯ ಸ್ಥಿತಿಗೆ ತಂದ ನಂತರವೇ ನಾವು ಅದರ ವಿರುದ್ಧ ಕೆಲಸ ಮಾಡಬಹುದು. ಅನೇಕರು ತಮ್ಮ ಕುಟುಂಬ ಸದಸ್ಯರನ್ನು ಮತ್ತು ಹತ್ತಿರದವರನ್ನು ಕಳೆದುಕೊಂಡಿರುವ ಸಮಯ ಇದು. ನಾವು ಅವರ ನೋವನ್ನು ಶಮನಗೊಳಿಸುವ, ಅವರ ತೊಂದರೆಗಳನ್ನು ಸರಾಗಗೊಳಿಸುವ ಮತ್ತು ಅವರೊಂದಿಗೆ ನಿಲ್ಲುವ ಸಮಯ. ಪಕ್ಷದ ಮುಖಂಡರು ಮತ್ತು ರಾಜ್ಯದಾದ್ಯಂತದ ಕಾರ್ಯಕರ್ತರು ಜನರ ಬಗ್ಗೆ ಸಹಾನುಭೂತಿ ಹೊಂದಲು ಕೇಳಿಕೊಳ್ಳಲಾಗಿದೆ’ ಎಂದರು.

ಕೋವಿಡ್ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಕಾರ್ಯತಂತ್ರದ ಭಾಗವಾಗಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕದಿಂದ ಅನಾಥವಾಗಿರುವ ಮಕ್ಕಳ ಕಲ್ಯಾಣಕ್ಕಾಗಿ ಕಾರ್ಯಕ್ರಮವನ್ನು ಸಿದ್ಧಪಡಿಸುವಂತೆ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಶನಿವಾರ ಪಕ್ಷದ ಆಡಳಿತದ ರಾಜ್ಯಗಳನ್ನು ಕೇಳಿದರು. ಮೋದಿ ಸರ್ಕಾರ ಏಳು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದಾಗ ಅದನ್ನು ಮೇ 30 ರಂದು ಪ್ರಾರಂಭಿಸಬೇಕು ಎಂದು ಹೇಳಿದರು.

ಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳಿಗೆ ಬರೆದ ಪತ್ರದಲ್ಲಿ, ಎನ್‌ಡಿಎ ಸರ್ಕಾರದ ವಾರ್ಷಿಕೋತ್ಸವದಂದು ಯಾವುದೇ ಕಾರ್ಯಕ್ರಮ ನಡೆಯುವುದಿಲ್ಲ ಎಂದು ನಡ್ಡಾ ಒತ್ತಿ ಹೇಳಿದ್ದಾರೆ. ಬದಲಾಗಿ, ಜನರಿಗೆ ಪಕ್ಷದ ಕೃತಜ್ಞತೆಯನ್ನು ವ್ಯಕ್ತಪಡಿಸಲು ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು ಎಂದಿದ್ದಾರೆ.

“ಸಂಸದರು ಮತ್ತು ಶಾಸಕರು ಆಯಾ ಪ್ರದೇಶಗಳಲ್ಲಿನ ಆಸ್ಪತ್ರೆಗಳಲ್ಲಿ ಆಮ್ಲಜನಕ ಸ್ಥಾವರ ಅಳವಡಿಸಲಾಗಿದೆಯೇ ಎಂದು ನೋಡಬೇಕು, ಹಾಸಿಗೆಗಳ ಲಭ್ಯತೆಗಾಗಿ ಖಾಸಗಿ ಆಸ್ಪತ್ರೆಗಳ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಬೇಕು, ಔಷಧಿಗಳನ್ನು ವಿತರಿಸಬೇಕು ಮತ್ತು ಕಷ್ಟದ ಸಮಯದಲ್ಲಿ ಸಂತ್ರಸ್ತರಿಗೆ ನೈತಿಕ ಬೆಂಬಲವಾಗಿರಬೇಕು” ಎಂದು ಬಿಜೆಪಿ ನಾಯಕ ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...