Homeಕರೋನಾ ತಲ್ಲಣಸಾರ್ವಜನಿಕ ಆಕ್ರೋಶ, ಅಸಮಾಧಾನದ ಪರಿಣಾಮ: ‘ಮನೆಯಿಂದ ಹೊರಬಂದು ಜನರಿಗೆ ನೆರವಾಗಿ’ ಎಂದ ಬಿಜೆಪಿ ಅಧ್ಯಕ್ಷ ನಡ್ಡಾ

ಸಾರ್ವಜನಿಕ ಆಕ್ರೋಶ, ಅಸಮಾಧಾನದ ಪರಿಣಾಮ: ‘ಮನೆಯಿಂದ ಹೊರಬಂದು ಜನರಿಗೆ ನೆರವಾಗಿ’ ಎಂದ ಬಿಜೆಪಿ ಅಧ್ಯಕ್ಷ ನಡ್ಡಾ

- Advertisement -
- Advertisement -

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಬಿಜೆಪಿಯ ಸ್ಪಷ್ಟ ಅನುಪಸ್ಥಿತಿಯ ಕಾರಣಕ್ಕೆ ಸಾರ್ವಜನಿಕರಲ್ಲಿ ಪಕ್ಷದ ಬಗ್ಗೆ ಆಕ್ರೋಶ ಮತ್ತು ಅಸಮಾಧಾನ ಶುರುವಾಗಿದೆ ಎಂಬುದನ್ನು ಮನಗಂಡಿರುವ ಬಿಜೆಪಿ ಪಕ್ಷ ತನ್ನ ಎಲ್ಲ ಹಂತದ ನಾಯಕರಿಗೂ ಜನರಿಗೆ ನೆರವಾಗಲು ಸೂಚಿಸಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಕಷ್ಟದಲ್ಲಿರುವ ಜನರೊಂದಿಗೆ “ಅನುಭೂತಿ ಮತ್ತು ಸಹಾನುಭೂತಿ”ಯಿಂದ ವರ್ತಿಸಲು ಹೇಳಿದೆ.
ಈ ಕುರಿತು ಎಲ್ಲ ಹಂತಗಳ ನಾಯಕರೊಂದಿಗೆ ವರ್ಚುವಲ್ ಸಭೆಗಳನ್ನು ನಡೆಸುತ್ತಿರುವ ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ, ಪಕ್ಷದ ಮುಖಂಡರಿಗೆ ಔಷಧಿಗಳ ವಿತರಣೆ, ಆಸ್ಪತ್ರೆ ಹಾಸಿಗೆಗಳ ಲಭ್ಯತೆ ಮತ್ತು ಆರೋಗ್ಯ ಮೂಲಸೌಕರ್ಯಗಳ ಹೆಚ್ಚಳ, ಆಮ್ಲಜನಕ ಲಭ್ಯತೆಗಳನ್ನು ಸಕ್ರಿಯವಾಗಿ ಮೇಲ್ವಿಚಾರಣೆ ಮಾಡಲು ತಿಳಿಸಿದ್ದಾರೆ. ‘ಮನೆಯಿಂದ ಹೊರಬನ್ನಿ ಜನರಿಗೆ ನೆರವಾಗಿ’ ಎಂದು ನೇರವಾಗಿ ತಿಳಿಸಿದ್ದಾರೆ.

ಎರಡನೇ ಅಲೆಯು ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವಾಗ ಕೇಂದ್ರ ಸರ್ಕಾರದ ಮೇಲೆ ಆರೋಪಿಸಿ, ನಮ್ಮ ಇಮೇಜ್ ಹಾಳು ಮಾಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಟೂಲ್‌ಕಿಟ್ ಹೆಸರಲ್ಲಿ ಬಿಜೆಪಿ ಟ್ವೀಟ್‌ಗಳನ್ನು ಮಾಡಲಾಗಿತ್ತು. ಕಾಂಗ್ರೆಸ್‌ನ ನಕಲಿ ಲೆಟರ್‌ಹೆಡ್ ಬಳಸಿ ಇದನ್ನು ರಚಿಸಲಾಗಿದೆ ಎಂಬುದನ್ನು ಒಪ್ಪಿಕೊಂಡಿದ್ದ ಟ್ವೀಟರ್ ಈ ಟ್ವೀಟ್‌ಗಳನ್ನು ಮ್ಯಾನಿಪುಲೆಟೆಡ್ ಮೀಡಿಯಾ ಎಂದು ಕರೆದಿತ್ತು. ಇದು ಬಿಜೆಪಿಗೆ ಮುಜುಗರ ತಂದಿತ್ತು
“ಪಕ್ಷ ಮತ್ತು ಸರ್ಕಾರದ ವಿರುದ್ಧ ನಕಾರಾತ್ಮಕ ನಿರೂಪಣೆ ಸೃಷ್ಟಿಯಾಗಿದೆ ಎಂಬುದು ನಿಜ” ಎಂದು ಬಿಜೆಪಿಯ ಹಿರಿಯ ಮುಖಂಡರು ಇಂಡಿಯನ್ ಎಕ್ಸ್‌ಪ್ರೆಸ್‌ ಎದುರು ಒಪ್ಪಿಕೊಂಡರು.

“ವಿಷಯಗಳನ್ನು ಸಾಮಾನ್ಯ ಸ್ಥಿತಿಗೆ ತಂದ ನಂತರವೇ ನಾವು ಅದರ ವಿರುದ್ಧ ಕೆಲಸ ಮಾಡಬಹುದು. ಅನೇಕರು ತಮ್ಮ ಕುಟುಂಬ ಸದಸ್ಯರನ್ನು ಮತ್ತು ಹತ್ತಿರದವರನ್ನು ಕಳೆದುಕೊಂಡಿರುವ ಸಮಯ ಇದು. ನಾವು ಅವರ ನೋವನ್ನು ಶಮನಗೊಳಿಸುವ, ಅವರ ತೊಂದರೆಗಳನ್ನು ಸರಾಗಗೊಳಿಸುವ ಮತ್ತು ಅವರೊಂದಿಗೆ ನಿಲ್ಲುವ ಸಮಯ. ಪಕ್ಷದ ಮುಖಂಡರು ಮತ್ತು ರಾಜ್ಯದಾದ್ಯಂತದ ಕಾರ್ಯಕರ್ತರು ಜನರ ಬಗ್ಗೆ ಸಹಾನುಭೂತಿ ಹೊಂದಲು ಕೇಳಿಕೊಳ್ಳಲಾಗಿದೆ’ ಎಂದರು.

ಕೋವಿಡ್ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಕಾರ್ಯತಂತ್ರದ ಭಾಗವಾಗಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕದಿಂದ ಅನಾಥವಾಗಿರುವ ಮಕ್ಕಳ ಕಲ್ಯಾಣಕ್ಕಾಗಿ ಕಾರ್ಯಕ್ರಮವನ್ನು ಸಿದ್ಧಪಡಿಸುವಂತೆ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಶನಿವಾರ ಪಕ್ಷದ ಆಡಳಿತದ ರಾಜ್ಯಗಳನ್ನು ಕೇಳಿದರು. ಮೋದಿ ಸರ್ಕಾರ ಏಳು ವರ್ಷಗಳ ಅಧಿಕಾರವನ್ನು ಪೂರ್ಣಗೊಳಿಸಿದಾಗ ಅದನ್ನು ಮೇ 30 ರಂದು ಪ್ರಾರಂಭಿಸಬೇಕು ಎಂದು ಹೇಳಿದರು.

ಬಿಜೆಪಿ ಆಡಳಿತದ ರಾಜ್ಯಗಳ ಸಿಎಂಗಳಿಗೆ ಬರೆದ ಪತ್ರದಲ್ಲಿ, ಎನ್‌ಡಿಎ ಸರ್ಕಾರದ ವಾರ್ಷಿಕೋತ್ಸವದಂದು ಯಾವುದೇ ಕಾರ್ಯಕ್ರಮ ನಡೆಯುವುದಿಲ್ಲ ಎಂದು ನಡ್ಡಾ ಒತ್ತಿ ಹೇಳಿದ್ದಾರೆ. ಬದಲಾಗಿ, ಜನರಿಗೆ ಪಕ್ಷದ ಕೃತಜ್ಞತೆಯನ್ನು ವ್ಯಕ್ತಪಡಿಸಲು ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು ಎಂದಿದ್ದಾರೆ.

“ಸಂಸದರು ಮತ್ತು ಶಾಸಕರು ಆಯಾ ಪ್ರದೇಶಗಳಲ್ಲಿನ ಆಸ್ಪತ್ರೆಗಳಲ್ಲಿ ಆಮ್ಲಜನಕ ಸ್ಥಾವರ ಅಳವಡಿಸಲಾಗಿದೆಯೇ ಎಂದು ನೋಡಬೇಕು, ಹಾಸಿಗೆಗಳ ಲಭ್ಯತೆಗಾಗಿ ಖಾಸಗಿ ಆಸ್ಪತ್ರೆಗಳ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಬೇಕು, ಔಷಧಿಗಳನ್ನು ವಿತರಿಸಬೇಕು ಮತ್ತು ಕಷ್ಟದ ಸಮಯದಲ್ಲಿ ಸಂತ್ರಸ್ತರಿಗೆ ನೈತಿಕ ಬೆಂಬಲವಾಗಿರಬೇಕು” ಎಂದು ಬಿಜೆಪಿ ನಾಯಕ ಸೂಚಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಮಿಲಿಟರಿ ಕೇಂದ್ರಕ್ಕೆೆ ಸೋನು ಸೂದ್ ಸಹಾಯ ಕೋರಿದ ಕಮಾಂಡರ್‌, ಕೋಪಗೊಂಡ ಹಿರಿಯ ಸೇನಾ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...