Homeಚಳವಳಿಮೇ 26 ಕ್ಕೆ ಪ್ರತಿಭಟನಾ ಗಡಿಗಳಲ್ಲಿ ಕರಾಳ ದಿನ: ದೆಹಲಿಗೆ ಹೊರಟ ಅನ್ನದಾತರು

ಮೇ 26 ಕ್ಕೆ ಪ್ರತಿಭಟನಾ ಗಡಿಗಳಲ್ಲಿ ಕರಾಳ ದಿನ: ದೆಹಲಿಗೆ ಹೊರಟ ಅನ್ನದಾತರು

- Advertisement -
- Advertisement -

ಹರಿಯಾಣ ರಾಜ್ಯವ್ಯಾಪಿ ಕೊರೊನಾ ಲಾಕ್‌ಡೌನ್ ವಿಧಿಸಿರುವ ಮಧ್ಯೆ, ಭಾನುವಾರ ಸಾವಿರಾರು ರೈತರು, ಮೇ 26 ರಂದು ದೆಹಲಿಯ ಗಡಿಗಳಲ್ಲಿ ನಡೆಯಲಿರುವ ಕರಾಳ ದಿನ ಆಚರಣೆಗೆ ಹರಿಯಾಣದ ಕರ್ನಾಲ್‌ನಿಂದ ಹೊರಟಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕೇಂದ್ರ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ, ಕಳೆದ ಆರು ತಿಂಗಳಿಂದ ದೆಹಲಿಯ ಸಿಂಘು, ಟಿಕ್ರಿ, ಶಹಜನ್‌ಪುರ ಮತ್ತು ಗಾಝಿಪುರ್‌ ಗಡಿಗಳಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು ಚಾರುನಿ) ನಾಯಕ ಗುರ್ನಮ್ ಸಿಂಗ್ ಚಾರುನಿ ನೇತೃತ್ವದಲ್ಲಿ, ಸಾವಿರಾರು ರೈತರು ಹರಿಯಾಣದ ಕರ್ನಾಲ್‌ನ ಬಸ್ತಡಾ ಟೋಲ್ ಪ್ಲಾಜಾದಿಂದ ದೆಹಲಿಯ ಸಿಂಘು ಗಡಿಗೆ ನೂರಾರು ವಾಹನಗಳಲ್ಲಿ ಸಾಗಿದ್ದಾರೆ.

ಇದನ್ನೂ ಓದಿ: ಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

ಸಿಂಘು ಗಡಿಯನ್ನು ತಲುಪಿದ ನಂತರ ಅಲ್ಲಿಯೇ ಒಂದು ವಾರ ಲಂಗರ್ ಸೇವೆಯನ್ನು ಮಾಡುತೇವೆ ಎಂದು ರೈತ ಮುಖಂಡರು ಹೇಳಿದ್ದಾರೆ. ಸಾವಿರಾರು ರೈತರು ಕರ್ನಾಲ್ ಟೋಲ್‌ ಪ್ಲಾಜಾದಿಂದ ಹೊರಟು, ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳನ್ನು ಗುರ್ನಾಮ್ ಸಿಂಗ್ ಚಾರುನಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹರಿಯಾಣ ರಾಜ್ಯದಲ್ಲಿ ಇತ್ತೀಚೆಗೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಹರಿಯಾಣದಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಹರಿಯಾಣದ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಂದ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಉಲ್ಬಣಗೊಂಡಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದೆ. ಗ್ರಾಮೀಣ ಪಂಜಾಬ್‌ನಲ್ಲಿ ಸೋಂಕಿನ ಹರಡುವಿಕೆಗೂ ರೈತ ಪ್ರತಿಭಟನೆಯೇ ಕಾರಣ ಎಂದು ಕೇಂದ್ರ ಸರ್ಕಾರ ಕುಡ ಆರೋಪಿಸಿದೆ.

ದೆಹಲಿ ಬಳಿಯ ಟಿಕ್ರಿ ಬಾರ್ಡರ್ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರಿಗೆ ಬೆಂಬಲ ನೀಡಲು ಪಂಜಾಬ್‌ನ ಸಾಗ್ರೂರ್‌ನಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಿಂದ ಸಾವಿರಾರು ಜನರು ಹೊರಟಿದ್ದಾರೆ ಎಂದು ಬಿಕೆಯು ಹೇಳಿದೆ.

ಮೇ 26 ರಂದು ತಮ್ಮ ಮನೆ, ವಾಹನಗಳು ಮತ್ತು ಅಂಗಡಿಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸುವ ಮೂಲಕ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಲು ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ಮನವಿ ಮಾಡಿದ್ದಾರೆ.

“ಮೇ 26 ರಂದು ರೈತ ಪ್ರತಿಭಟನೆಗೆ ಆರು ತಿಂಗಳು ತುಂಬುತ್ತದೆ. ಅದೇ ದಿನ ಪ್ರಧಾನಿ ಮೋದಿ ಸರ್ಕಾರ ರಚಿಸಿ ಏಳು ವರ್ಷಗಳಾಗುತ್ತವೆ. ಆ ದಿನವನ್ನು ನಾವು ಕರಾಳ ದಿನವೆಂದು ಆಚರಿಸುತ್ತೇವೆ. ಅಂದು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ಪ್ರತಿಭಟನೆಯ ರೂಪದಲ್ಲಿ ಸುಡುತ್ತೇವೆ” ಎಂದು ರಾಜೇವಾಲ್ ಹೇಳಿದ್ದಾರೆ.

ಇತ್ತ, ಸುರಿಯುತ್ತಿರುವ ಮಳೆಯ ಮಧ್ಯೆಯೇ ದೆಹಲಿ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, “ನಮ್ಮ ತಾಳ್ಮೆ ಪರೀಕ್ಷಿಸಬೇಡಿ, ನಮ್ಮೊಂದಿಗೆ ಮಾತುಕತೆ ಪ್ರಾರಂಭಿಸಿ ಮತ್ತು ಬೇಡಿಕೆಗಳನ್ನು ಈಡೇರಿಸಿ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು: ಮೇ 26 ರಂದು ಕಪ್ಪು ದಿನ ಆಚರಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...