Homeಚಳವಳಿಮೇ 26 ಕ್ಕೆ ಪ್ರತಿಭಟನಾ ಗಡಿಗಳಲ್ಲಿ ಕರಾಳ ದಿನ: ದೆಹಲಿಗೆ ಹೊರಟ ಅನ್ನದಾತರು

ಮೇ 26 ಕ್ಕೆ ಪ್ರತಿಭಟನಾ ಗಡಿಗಳಲ್ಲಿ ಕರಾಳ ದಿನ: ದೆಹಲಿಗೆ ಹೊರಟ ಅನ್ನದಾತರು

- Advertisement -
- Advertisement -

ಹರಿಯಾಣ ರಾಜ್ಯವ್ಯಾಪಿ ಕೊರೊನಾ ಲಾಕ್‌ಡೌನ್ ವಿಧಿಸಿರುವ ಮಧ್ಯೆ, ಭಾನುವಾರ ಸಾವಿರಾರು ರೈತರು, ಮೇ 26 ರಂದು ದೆಹಲಿಯ ಗಡಿಗಳಲ್ಲಿ ನಡೆಯಲಿರುವ ಕರಾಳ ದಿನ ಆಚರಣೆಗೆ ಹರಿಯಾಣದ ಕರ್ನಾಲ್‌ನಿಂದ ಹೊರಟಿದ್ದಾರೆ.

ಒಕ್ಕೂಟ ಸರ್ಕಾರ ಜಾರಿಗೊಳಿಸಿರುವ ವಿವಾದಿತ ಮೂರು ಕೇಂದ್ರ ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ, ಕಳೆದ ಆರು ತಿಂಗಳಿಂದ ದೆಹಲಿಯ ಸಿಂಘು, ಟಿಕ್ರಿ, ಶಹಜನ್‌ಪುರ ಮತ್ತು ಗಾಝಿಪುರ್‌ ಗಡಿಗಳಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು ಚಾರುನಿ) ನಾಯಕ ಗುರ್ನಮ್ ಸಿಂಗ್ ಚಾರುನಿ ನೇತೃತ್ವದಲ್ಲಿ, ಸಾವಿರಾರು ರೈತರು ಹರಿಯಾಣದ ಕರ್ನಾಲ್‌ನ ಬಸ್ತಡಾ ಟೋಲ್ ಪ್ಲಾಜಾದಿಂದ ದೆಹಲಿಯ ಸಿಂಘು ಗಡಿಗೆ ನೂರಾರು ವಾಹನಗಳಲ್ಲಿ ಸಾಗಿದ್ದಾರೆ.

ಇದನ್ನೂ ಓದಿ: ಕೊರೊನಾ ಪರಿಹಾರಕ್ಕೆ ಆಗ್ರಹಿಸಿ ಕಟ್ಟಡ ಕಾರ್ಮಿಕರ ಹೋರಾಟ; ಮೆ 21 ರಂದು ರಾಜ್ಯವ್ಯಾಪಿ ಪ್ರತಿಭಟನೆ

ಸಿಂಘು ಗಡಿಯನ್ನು ತಲುಪಿದ ನಂತರ ಅಲ್ಲಿಯೇ ಒಂದು ವಾರ ಲಂಗರ್ ಸೇವೆಯನ್ನು ಮಾಡುತೇವೆ ಎಂದು ರೈತ ಮುಖಂಡರು ಹೇಳಿದ್ದಾರೆ. ಸಾವಿರಾರು ರೈತರು ಕರ್ನಾಲ್ ಟೋಲ್‌ ಪ್ಲಾಜಾದಿಂದ ಹೊರಟು, ರೈತ ವಿರೋಧಿ ಕೃಷಿ ಕಾನೂನುಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ದೃಶ್ಯಗಳನ್ನು ಗುರ್ನಾಮ್ ಸಿಂಗ್ ಚಾರುನಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಹರಿಯಾಣ ರಾಜ್ಯದಲ್ಲಿ ಇತ್ತೀಚೆಗೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಹರಿಯಾಣದಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಹರಿಯಾಣದ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಂದ ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಉಲ್ಬಣಗೊಂಡಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದೆ. ಗ್ರಾಮೀಣ ಪಂಜಾಬ್‌ನಲ್ಲಿ ಸೋಂಕಿನ ಹರಡುವಿಕೆಗೂ ರೈತ ಪ್ರತಿಭಟನೆಯೇ ಕಾರಣ ಎಂದು ಕೇಂದ್ರ ಸರ್ಕಾರ ಕುಡ ಆರೋಪಿಸಿದೆ.

ದೆಹಲಿ ಬಳಿಯ ಟಿಕ್ರಿ ಬಾರ್ಡರ್ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರಿಗೆ ಬೆಂಬಲ ನೀಡಲು ಪಂಜಾಬ್‌ನ ಸಾಗ್ರೂರ್‌ನಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಿಂದ ಸಾವಿರಾರು ಜನರು ಹೊರಟಿದ್ದಾರೆ ಎಂದು ಬಿಕೆಯು ಹೇಳಿದೆ.

ಮೇ 26 ರಂದು ತಮ್ಮ ಮನೆ, ವಾಹನಗಳು ಮತ್ತು ಅಂಗಡಿಗಳಲ್ಲಿ ಕಪ್ಪು ಧ್ವಜಗಳನ್ನು ಹಾರಿಸುವ ಮೂಲಕ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಲು ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ್ ಮನವಿ ಮಾಡಿದ್ದಾರೆ.

“ಮೇ 26 ರಂದು ರೈತ ಪ್ರತಿಭಟನೆಗೆ ಆರು ತಿಂಗಳು ತುಂಬುತ್ತದೆ. ಅದೇ ದಿನ ಪ್ರಧಾನಿ ಮೋದಿ ಸರ್ಕಾರ ರಚಿಸಿ ಏಳು ವರ್ಷಗಳಾಗುತ್ತವೆ. ಆ ದಿನವನ್ನು ನಾವು ಕರಾಳ ದಿನವೆಂದು ಆಚರಿಸುತ್ತೇವೆ. ಅಂದು ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ಪ್ರತಿಭಟನೆಯ ರೂಪದಲ್ಲಿ ಸುಡುತ್ತೇವೆ” ಎಂದು ರಾಜೇವಾಲ್ ಹೇಳಿದ್ದಾರೆ.

ಇತ್ತ, ಸುರಿಯುತ್ತಿರುವ ಮಳೆಯ ಮಧ್ಯೆಯೇ ದೆಹಲಿ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, “ನಮ್ಮ ತಾಳ್ಮೆ ಪರೀಕ್ಷಿಸಬೇಡಿ, ನಮ್ಮೊಂದಿಗೆ ಮಾತುಕತೆ ಪ್ರಾರಂಭಿಸಿ ಮತ್ತು ಬೇಡಿಕೆಗಳನ್ನು ಈಡೇರಿಸಿ” ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.


ಇದನ್ನೂ ಓದಿ: ರೈತ ಹೋರಾಟಕ್ಕೆ 6 ತಿಂಗಳು: ಮೇ 26 ರಂದು ಕಪ್ಪು ದಿನ ಆಚರಿಸಲು ರೈತರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...