Homeಕರ್ನಾಟಕ“ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

“ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

- Advertisement -
- Advertisement -

ಜನರ ಜೀವ ಮತ್ತು ಜೀವನೋಪಾಯ ಉಳಿಸಲು ಸರ್ಕಾರ ಕೈಗೊಳ್ಳಬೇಕಾದ ಪಂಚ ತುರ್ತು ಕ್ರಮಗಳ ಬಗ್ಗೆ ತಿಂಗಳಿನಿಂದ ಹೋರಾಟ ಮಾಡುತ್ತಿರುವ ಜನಾಗ್ರಹ ಆಂದೋಲನವು ಸೋಮವಾರ [ಮೇ 24 ರಂದು] ರಾಜ್ಯವ್ಯಾಪಿ ಜನಾಗ್ರಹಕ್ಕೆ ಕರೆ ನೀಡಿದೆ. ಈ ಆಂದೋಲನಕ್ಕೆ ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲ ವ್ಯಕ್ತಪಡಿಸಿವೆ.

ಉಚಿತ ಚಿಕಿತ್ಸೆ, ಸರ್ವರಿಗೂ ವ್ಯಾಕ್ಸಿನ್, ಬಿಪಿಎಲ್ ಜನರಿಗೆ ಸಮಗ್ರ ದಿನಸಿ – ಮಾಸಿಕ 5000 ನೆರವು ಧನ, ಅನಾಥವಾದ ಕುಟುಂಬಗಳಿಗೆ 5 ಲಕ್ಷ ಪರಿಹಾರ ಮತ್ತು ಕೃಷಿ ಬೀಜ, ಗೊಬ್ಬರಕ್ಕೆ ವಿಶೇಷ ಸಬ್ಸಿಡಿ ಈ ಐದು ಪಂಚ ಕ್ರಮಗಳನ್ನು ಜಾರಿಗೆ ತರಬೇಕೆಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ. ಜನಪರ ಸಂಘಟನೆಗಳು ಹಾಗೂ ಪಕ್ಷಗಳು ಕರೆ ನೀಡಿವೆ.

ಜನರ ಜೀವ ಉಳಿಸುವ ಕ್ರಮಗಳಿಗಾಗಿ ಹಾಗೂ ಸಂಕಷ್ಟದಲ್ಲಿರುವ ಜನರ ಜೀವನೋಪಾಯಕ್ಕೆ ಆಸರೆಯಾಗಬಲ್ಲ ಪ್ಯಾಕೇಜಿಗಾಗಿ ತಮ್ಮ ತಮ್ಮ ಮನೆ ಮುಂದೆಯೇ ತಟ್ಟೆ ಲೋಟ ಬಡಿದು, ಖಾಲಿ ಚೀಲ ಪ್ರದರ್ಶಿಸುವ ಮೂಲಕ ಸರ್ಕಾರದ ಕಣ್ತೆರೆಸಲು ಮುಂದಾಗಿದೆ.

ಇದನ್ನೂ ಓದಿ: “ನಾವೂ ಬದುಕಬೇಕು”: ನಾಳೆ ರಾಜ್ಯಾದ್ಯಂತ ಜನಾಗ್ರಹ ಆಂದೋಲನ

ಜನಾಗ್ರಹ ಆಂದೋಲನದ ಪೋಸ್ಟರ್‌ಗಳನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿರೋಧ ಪಕ್ಷಗಳು ಈ ಆಂದೋಲನಕ್ಕೆ ಬೆಂಬಲ ನೀಡಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಕಾಂಗ್ರೆಸ್ ಪಕ್ಷವು ಈ ಜನಾಗ್ರಹ ಆಂದೋಲನವನ್ನು ಹಾಗೂ ಅದರ ಹಕ್ಕೊತ್ತಾಯಗಳನ್ನು ಬೆಂಬಲಿಸುತ್ತದೆ” ಎಂದಿದ್ದಾರೆ.

’ಸರ್ಕಾರ ತೆಗೆದುಕೊಳ್ಳಲೇಬೇಕಾದ ಕ್ರಮಗಳಿಗಾಗಿ 24 ರಂದು ಜನಾಗ್ರಹ ಆಂದೋಲನ ನಡಿಯುತ್ತಿದೆ.
ಉಚಿತ ಚಿಕಿತ್ಸೆ – ಸರ್ವರಿಗೂ ವ್ಯಾಕ್ಸಿನ್ – ಬಡವರಿಗೆ ಸಮಗ್ರ ದಿನಸಿ – ಕೆಲಸ ಇಲ್ಲದವರಿಗೆ ಆರ್ಥಿಕ ನೆರವು – ಅನಾಥರಿಗೆ ಪರಿಹಾರ. ಕಾಂಗ್ರೆಸ್ ಈ ಹಕ್ಕೊತ್ತಾಯಗಳನ್ನು ಬೆಂಬಲಿಸುತ್ತದೆ ಹಾಗೂ 24 ರಂದು ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿದೆ” ಎಂದು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

ರಾಜ್ಯದ ಪ್ರಾದೇಶಿಕ ಪಕ್ಷ ಜಾತ್ಯಾತೀತ ಜನತಾದಳ ಕೂಡ ಈ ಆಂದೋಲನಕ್ಕೆ ಬೆಂಬಲ ನೀಡಿದೆ. ಜೆಡಿಎಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್ “ಈ ಆಂದೋಲನ ಮುಂದಿಟ್ಟಿರುವ ಹಕ್ಕೊತ್ತಾಯಗಳು ಬಹಳ ಸಮಂಜಸವಾಗಿವೆ. ಸರ್ಕಾರ ಇವನ್ನು ಪರಿಗಣಿಸಲೇಬೇಕು ಎಂದು ಜನತಾ ದಳ ಪಕ್ಷದ ಪರವಾಗಿ ನಾನು ಒತ್ತಾಯಿಸುತ್ತೇನೆ. ಜೆಡಿಎಸ್ 24 ರ ಪ್ರತಿಭಟನೆಯನ್ನು ಬೆಂಬಲಿಸಿ ಭಾಗವಹಿಸಲಿದೆ” ಎಂದು ಹೇಳಿಕೆ ನೀಡಿದ್ದಾರೆ‌‌.

ಸರ್ಕಾರದ ವಿರುದ್ಧ ಜ‌ನರ ಆಕ್ರೋಶ ಹೆಚ್ಚಾಗುತ್ತಿದೆ. ಜನರ ಈ ಆಗ್ರಹಕ್ಕೆ ಸರ್ಕಾರ ಸ್ಪಂದಿಸುವುದೇ ಎಂಬುದನ್ನು ಕಾದು ನೋಡಬೇಕಿದೆ‌ ಎಂದು ಜನಾಗ್ರಹ ಆಂದೋಲನದ ಪರವಾಗಿ ಕೆ.ಎಲ್. ಅಶೋಕ್ ಮತ್ತು ಮಾಮಾವಳ್ಳಿ ಶಂಕರ್ ಆಶಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಬಾಯಿಮಾತಿನಲ್ಲಿ ಕೊರೊನಾ ವಾರಿಯರ್ಸ್ ಎನ್ನದೆ, ದುಡಿದವರಿಗೆ ಗೌರವಧನ ನೀಡಿ- ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...